Author: UllalaVani

Kannada News From Coastal Karnataka

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ವಿಜಯ್ ಅವರ ಇದು ಮೊದಲ ಕರ್ನಾಟಕ ಪ್ರವಾಸವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಕೊಲ್ಲೂರಿಗೆ ಆಗಮಿಸುವ ನಿರೀಕ್ಷೆಯಿದೆ. ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅರ್ಚಕ ವೃಂದ ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಸರ್ಕಾರದ ಪ್ರೋಟೋಕಾಲ್ ಪ್ರಕಾರ ಸಿಎಂ ವಿಜಯ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಗೌರವಪೂರ್ವಕವಾಗಿ ದೇವಳದೊಳಗೆ ಕರೆದುಕೊಂಡು ಹೋಗಲಾಗುತ್ತದೆ ಎಂದು ದೇವಸ್ಥಾನದ ಅರ್ಚಕ ನಿತ್ಯಾನಂದ ಅಡಿಗ ತಿಳಿಸಿದ್ದಾರೆ.ತಮಿಳುನಾಡಿನಿಂದ ಅನೇಕ ಗಣ್ಯರು ಹಾಗೂ ಕಲಾವಿದರು ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡುವುದು ಸಾಮಾನ್ಯ. ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಸೇರಿದಂತೆ ಹಲವು ಗಣ್ಯರು ಈ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ಎಂ. ಕೆ. ಸ್ಟಾಲಿನ್ ಅವರ ಕುಟುಂಬ ಸದಸ್ಯರು ಸಹ ದೇವಿಯ ದರ್ಶನ…

Read More

ಬೆಳ್ತಂಗಡಿ, ಜೂ. 12; ಕಳೆದ 26 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಪವಾಡವೆಂಬಂತೆ ಮನೆಗೆ ವಾಪಸ್ ಬಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರದಲ್ಲಿ ನಡೆದಿದೆ. ಸತೀಶ್ ಎಂಬಾತ ತನ್ನ 19ನೇ ವಯಸ್ಸಿನಲ್ಲಿ (2000ನೇ ಇಸವಿ) ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದ ಜೊತೆಗೆ ಮಹಾರಾಷ್ಟ್ರಕ್ಕೆ ಹೋಗಿದ್ದ. ಅಂದಿನಿಂದ 26 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಈತ ತನ್ನ ಊರು ಮತ್ತು ಮನೆಯವರನ್ನೆಲ್ಲಾ ಮರೆತುಬಿಟ್ಟಿದ್ದ. ಬಹಳ ದಿನಗಳ ಬಳಿಕ ಮಹಾರಾಷ್ಟ್ರದ ತನ್ನ ಸ್ನೇಹಿತರೊಂದಿಗೆ ಧರ್ಮಸ್ಥಳದ ದೇವಸ್ಥಾನಕ್ಕೆ ಬಂದಾಗ ಈತನಿಗೆ ತನ್ನ ಬಾಲ್ಯದ ನೆನಪು ಮರುಕಳಿಸಿದೆ. ಈ ವೇಳೆ ಸರ್ಕಸ್ ನಡೆದಿದ್ದ ಜಾಗಕ್ಕೆ ಹೋದಾಗ ಇದೇ ತನ್ನ ಊರು ಎಂದು ಖಚಿತವಾಗಿದೆ.ಸತೀಶ್‌ಗೆ ತನ್ನ ತಮ್ಮಂದಿರ ಹೆಸರು ನೆನಪಿದ್ದ ಕಾರಣ ಸುತ್ತಮುತ್ತಲಿನ ಅಂಗಡಿ ಹಾಗೂ ಜನರ ಬಳಿ ಮನೆಯ ವಿಳಾಸ ಕೇಳಿಕೊಂಡು ಅಂತಿಮವಾಗಿ ಕುಟುಂಬಸ್ಥರನ್ನು ಸೇರಿಕೊಂಡಿದ್ದಾನೆ. ಸತೀಶ್ ತಾಯಿ ತನ್ನ ಮಗ ಮರಳಿ ಮನೆಗೆ ಬರಲೆಂದು ಧರ್ಮಸ್ಥಳ, ಕಟೀಲು, ಪಣೋಲಿಬೈಲ್‌ಗೆ ಹರಕೆ ಹೊತ್ತಿದ್ದರು.ಇತ್ತೀಚಿಗಷ್ಟೇ ಉಳಿದಿಬ್ಬರು…

Read More

ಶಿವಮೊಗ್ಗ, ಜೂ. 12: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರವನ್ನ ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಇದೇ ಜೂ.15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ. ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದಲ್ಲಿ ಅಲ್ಲಲ್ಲಿ ರಸ್ತೆಯ ಬದಿಯ ಭೂಕುಸಿತ ಆಗುವ, ಅಫಘಾತವಾಗುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ.ಆರೋಗ್ಯ ಸಮಸ್ಯೆಯ ಕುರಿತು ಮಣಿಪಾಲ್, ಉಡುಪಿ, ಮಂಗಳೂರಿಗೆ ಹೋಗುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಯ ನಾಗರಿಕರಿಗೆ ಇರುವ ಸಂಪರ್ಕ ಬಂದ್ ಆದರೆ,…

Read More

ಬೆಂಗಳೂರು,ಜೂ. 12 : ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಅವರನ್ನು ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ಅನಿತಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಪೊಲೀಸ್ ಮೂಲಗಳ ಪ್ರಕಾರ, ಅನಿತಾ ಕಾಸರಗೋಡು ಅವರನ್ನು ಬೆಂಗಳೂರಿನಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿ ಪತ್ತೆಹಚ್ಚಿ ಅವರನ್ನು ಬಂಧಿಸಲಾಗಿದೆ.

Read More

ದೆಹಲಿ;- ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕಾರ್ಪೊರೇಟ್ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಆದರೆ ಕೆಲವು ವ್ಯಕ್ತಿಗಳು ಮತ್ತು ಅಧಿಕಾರಿಗಳು ತಮ್ಮ ಹುದ್ದೆಯ ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಸಂಸ್ಥೆಗಳನ್ನು ವಂಚಿಸಲು ಮುಂದಾದಾಗ, ಅದು ಕೇವಲ ಒಂದು ಕಂಪನಿಯ ಸಮಸ್ಯೆಯಾಗಿ ಉಳಿಯುವುದಿಲ್ಲ; ದೇಶದ ಆರ್ಥಿಕ ವ್ಯವಸ್ಥೆಯ ಮೇಲಿನ ಜನರ ನಂಬಿಕೆಗೆ ಹೊಡೆತ ನೀಡುತ್ತದೆ. ರಿಲಯನ್ಸ್ ಪವರ್ ಸಂಸ್ಥೆಯ ಮಾಜಿ ಮುಖ್ಯ ಹಣಕಾಸು ಅಧಿಕಾರಿ (CFO) ವಿರುದ್ಧ ದಾಖಲಾಗಿರುವ ನಕಲಿ ಬ್ಯಾಂಕ್ ಗ್ಯಾರಂಟಿ ಮತ್ತು ಮನಿ ಲಾಂಡರಿಂಗ್ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ತನಿಖಾ ಸಂಸ್ಥೆಗಳು ಸಲ್ಲಿಸಿರುವ ದಾಖಲೆಗಳು, ಡಿಜಿಟಲ್ ಪುರಾವೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಯ ನೇರ ಪಾತ್ರದ ಬಗ್ಗೆ ಮೇಲ್ನೋಟಕ್ಕೆ ಗಂಭೀರ ಅನುಮಾನಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ಮೂಲದಲ್ಲಿ ಸರ್ಕಾರಿ ಟೆಂಡರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡು ನಕಲಿ ಬ್ಯಾಂಕ್ ಗ್ಯಾರಂಟಿಗಳನ್ನು ಸೃಷ್ಟಿಸಿದ ಆರೋಪಗಳಿವೆ. ಸರ್ಕಾರಿ ಯೋಜನೆಗಳು ಮತ್ತು ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಹಾಗೂ…

Read More

ಕುತ್ತಾರು, ಜೂ. 12: ಜನಸಂಘ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರಾದ ವಿಠಲ್ ಕೊಟ್ಟಾರಿ (68) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಸಂತೋಷನಗರ, ಮುನ್ನೂರು ನಿವಾಸಿಯಾಗಿದ್ದ ಅವರು ಜನಸಂಘದ ಕಾಲದಿಂದಲೇ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಬಳಿಕ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ ಅವರು ಮುನ್ನೂರಿನಲ್ಲಿ ಫರ್ನಿಚರ್ ಅಂಗಡಿಯನ್ನು ನಡೆಸುತ್ತಿದ್ದರು.ಮುನ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದ ಅವರು ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿತ್ಯಾನಂದ ಫ್ರೆಂಡ್ಸ್ ಕ್ಲಬ್‌ನಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಸರಳ, ಸಜ್ಜನ ಹಾಗೂ ಸಂಘಟನೆಯ ಬೆಳವಣಿಗೆಗಾಗಿ ಶ್ರಮಿಸಿದ ಕಾರ್ಯಕರ್ತರಾಗಿ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಜಗದೀಶ್ ಆಳ್ವ ಕುವೆಟ್ಟಬೈಲು, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಪೂಜಾರಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಮಡ್ಯಾರ್ ;ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ 11ನೇ ವಾರ್ಡಿನ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಇದೀಗ ಸಂಪೂರ್ಣಗೊoಡಿದ್ದು, ಈ ಮೂಲಕ ಹಲವು ದಿನಗಳಿಂದ ಚರ್ಚೆಗೆ ಕಾರಣವಾಗಿದ್ದ ಸಮಸ್ಯೆಗೆ ತೆರೆ ಬಿದ್ದಿದೆ. ಈ ರಸ್ತೆ ಕಾಮಗಾರಿ ಮಧ್ಯದಲ್ಲೇ ನಿಂತುಹೋಗಿದ್ದ ಕಾರಣ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ವಾರ್ಡಿನ ಕೌನ್ಸಿಲರ್ ಹರೀಶ್‌ರಾವ್ ಮಡ್ಯಾರ್ ಅವರು ನಿರಂತರ ಪ್ರಯತ್ನ ನಡೆಸಿ, ಸಚಿವರಾದ ಯು.ಟಿ. ಖಾದರ್ ಅವರ ಸಹಕಾರದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಹರೀಶ್‌ರಾವ್ ಮಡ್ಯಾರ್ ಅವರು ಇತ್ತೀಚೆಗೆ ನಡೆದ ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ ಸೆಳೆದಿದ್ದರು. ಇದೀಗ ಅವರ ಮುತುವರ್ಜಿಯಲ್ಲಿ ಅರ್ಧಕ್ಕೆ ನಿಂತಿದ್ದ ತನ್ನ ವಾರ್ಡಿನ ಜನರಿಗೆ ಅವಶ್ಯಕತೆಯಿದ್ದ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟಿಕರಣಗೊಳಿಸುವ ಮೂಲಕ ಜನಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಆ ಮೂಲಕ ಜನರ ಬಹುಕಾಲದ ಬೇಡಿಕೆ ಈಡೇರಿದೆ.

Read More

ಮಂಗಳೂರು ನಗರವು ಕರ್ನಾಟಕದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ನಗರಗಳಲ್ಲಿ ಒಂದಾಗಿದೆ. ನಗರ ವ್ಯಾಪ್ತಿಗೆ ಒಳಪಡುವ ಹಲವು ಗ್ರಾಮಗಳು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯಾಪ್ತಿಗೆ ಸೇರಿದ್ದು, ಭೂಮಿ ನೋಂದಣಿ, ಪಹಣಿ, ಇ-ಖಾತಾ ಹಾಗೂ ಆಸ್ತಿ ದಾಖಲೆಗಳ ನಿರ್ವಹಣೆಯಲ್ಲಿ ಸಾರ್ವಜನಿಕರು ಹಲವು ವರ್ಷಗಳಿಂದ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯ 37 ಗ್ರಾಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಭೂ ದಾಖಲೆಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿವೆ. ಈ ಕ್ರಮದಿಂದ ಕೃಷಿ ಭೂಮಿಗಳ ನೋಂದಣಿ ಪ್ರಕ್ರಿಯೆ ಮತ್ತಷ್ಟು ಸುಗಮಗೊಳ್ಳುವ ನಿರೀಕ್ಷೆ ಇದೆ. ಜೊತೆಗೆ ನಗರ ವ್ಯಾಪ್ತಿಯ ಗ್ರಾಮಗಳ ಭೂ ದಾಖಲೆಗಳ ನಿರ್ವಹಣೆಗೆ ಸ್ಪಷ್ಟತೆ ಮತ್ತು ಪಾರದರ್ಶಕತೆ ದೊರೆಯಲಿದೆ. ಪ್ರಸ್ತುತ ನಗರ ವ್ಯಾಪ್ತಿಯ ಅನೇಕ ಆಸ್ತಿಗಳಿಗೆ ಪಹಣಿ, ಇ-ಖಾತಾ, ಯುಪಿಒಆರ್ (UPOR) ಸೇರಿದಂತೆ ವಿವಿಧ ದಾಖಲೆಗಳು ಅಸ್ತಿತ್ವದಲ್ಲಿವೆ. ಆದರೆ ಈ ದಾಖಲೆಗಳ ನಡುವೆ ಸಮರ್ಪಕ ಸಮನ್ವಯದ ಕೊರತೆಯಿಂದ ಸಾರ್ವಜನಿಕರು ಕಂದಾಯ ಇಲಾಖೆ, ನೋಂದಣಿ…

Read More

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಲೇಖನ ಸಾಮಗ್ರಿಗಳನ್ನು ಕೊಡುಗೆ ನೀಡಲಾಯಿತು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಸುರೇಖಾ ಚಂದ್ರಹಾಸ್ ಮಾತನಾಡಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮುತುವರ್ಜಿ ವಹಿಸಿ ಆರು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸೊಸೈಟಿಯ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಯುವ ಸಾಮಗ್ರಿಗಳ ವಿತರಣೆ ಮಾಡಲಾಗಿದೆ. ಅಂಗ್ಲಮಾಧ್ಯಮ ಶಿಕ್ಷಣಕ್ಕೆ ಮಾರು ಹೋಗುತ್ತಿರುವ ಈಗಿನ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಸೇವೆ ಒದಗಿಸುತ್ತಿದೆ. ಹೆತ್ತವರು ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಆಶಯ ವ್ಯಕ್ತಪಡಿಸಿದರು. ಸಂಘದ ನಿರ್ದೇಶಕರಾದ ರಾಘವ ಆರ್ ಉಚ್ಚಿಲ್ ಮಾತನಾಡಿ,…

Read More

ಬಂಟ್ವಾಳ, ಜೂ. 11 : ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಫ್ಟ್ ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು, ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ನಡೆದಿದೆ. ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಲಿಫ್ಟ್ ನ್ನು ಸಾರ್ವಜನಿಕರು ಬಳಸುತ್ತಿದ್ದು, ಗುರುವಾರ ಮಧ್ಯಾಹ್ನ ಸುಮಾರು 12.45 ರಿಂದ 1.30 ರ ವರೆಗೆ ಕಚೇರಿಗೆ ಬಂದಿದ್ದ ಸಾರ್ವಜನಿಕರಿಬ್ಬರು ಲಿಫ್ಟ್ ನೊಳಗೆ ಸಿಲುಕಿಹಾಕಿಕೊಂಡಿದ್ದಾರೆ. ಬಳಿಕ ಅವರು ಸ್ನೇಹಿತರಿಗೆ ಪೋನ್ ಮೂಲಕ ವಿಚಾರ ತಿಳಿಸಿ, ಅವರು ತಹಶೀಲ್ದಾರ್ ಅವರನ್ನು ಸಂಪರ್ಕ ಮಾಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಲಿಪ್ಟ್ ನೊಳಗೆ ಉಸಿರು ಕಟ್ಟಿ ನಿಂತುಕೊಂಡ ಇವರನ್ನು ಕೊನೆಗೆ ಸಾರ್ವಜನಿಕರು ಸೇರಿ ಯಾವುದೋ ವಿಧಾನ ಬಳಸಿ ಲಿಫ್ಟ್ ನಿಂದ ಹೊರಬರುವಂತೆ ಮಾಡಿ ಜೀವ ಉಳಿಸಿದ್ದಾರೆ. ಇದೇನು ಮೊದಲ ಸಲ ಅಲ್ಲ ಎಂದು ಹೇಳುವ ಸಾರ್ವಜನಿಕರು ಇದರ ಮೊದಲು ಅನೇಕ ಬಾರಿ ಇಂತಹ ಸ್ಥಿತಿ ಉದ್ಭವಿಸಿದೆ ಎಂದಿದ್ದಾರೆ.ಲಿಫ್ಟ್ ಅಳವಡಿಸಿದ ಬಳಿಕ ಎರಡನೇ ದಿನದಲ್ಲಿ…

Read More