Author: UllalaVani

Kannada News From Coastal Karnataka

ಉಳ್ಳಾಲ: ತೊಕ್ಕೊಟ್ಟು ಗಾಂಧಿನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ನಡೆದು ಕ್ಷೇತ್ರವು ಸುಂದರವಾಗಿ ಕಂಗೊಳಿಸುತ್ತಿದೆ.ಧಾರ್ಮಿಕ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಎಲ್ಲರೂ ಒಗ್ಗೂಡಿ ಬಲಿಷ್ಠ ಕರ್ನಾಟಕ ಮತ್ತು ಭಾರತವನ್ನು ನಿರ್ಮಿಸಬೇಕು.ಇಂಜಿನಿಯರ್ ಮೂಲಕ ಪರಿಶೀಲನೆ ನಡೆಸಿ ಕ್ಷೇತ್ರದ ಜೀರ್ಣೋದ್ಧಾರ ಕಾಮಗಾರಿಗೆ ಗರಿಷ್ಠ ಮಟ್ಟದ ಸಹಕಾರವನ್ನ ನೀಡುವುದಾಗಿ ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು ಬಳಿಯ ಗಾಂಧಿನಗರದ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ‌ಲ್ಲಿ ಏ.29 ರಿಂದ ಮೇ.03 ರ ತನಕ ನಡೆಯಲಿರುವ ಪುನರ್ ಪ್ರತಿಷ್ಠಾಪನಾ ಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರದಲ್ಲಿ ಮಂಗಳವಾರದಂದು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕ್ಷೇತ್ರದ ತಂತ್ರಿಗಳಾದ ವೇದ ಮೂರ್ತಿ ಬ್ರಹ್ಮಶ್ರೀ ಪ್ರಕಾಶ್ ವಿ.ಹೊಳ್ಳ ಶಕ್ತಿನಗರ ಮಾತನಾಡಿ ಚಾಮುಂಡೇಶ್ವರಿ ಅಮ್ಮನವರು ಮತ್ತು ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಕಲಶೋತ್ಸವ ಕಾರ್ಯಕ್ರಮವು ಸುಸಾಂಗವಾಗಿ ನಡೆಯಲಿಯೆಂದು ಶುಭಾಶಂಸನೆಗೈದರು. ಇದೇ ಸಂದರ್ಭದಲ್ಲಿ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಣೆಗೈದು ಸಂಸ್ಮರಣೆ ನಡೆಸಲಾಯಿತು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಗಿರೀಶ್…

Read More

ವಿಶ್ವ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರಾದ ಕೆ.ಎಂ.ಕೆ. ಮಂಜನಾಡಿ ಅವರು, ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್ ತಮ್ಮ ಅಸಾಮಾನ್ಯ ವ್ಯಕ್ತಿತ್ವದಿಂದ ಜಗತ್ತನ್ನು ಬೆಳಗಿದ ಮಹನೀಯರು ಎಂದು ಹೇಳಿದರು. ಇಡೀ ಜಗತ್ತೇ ಸಮಾನತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಮಾಡಿದ ಅವರು, ಸಮಾಜದ ಆಶಾಕಿರಣವಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. “ಯಾವ ಧರ್ಮವು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲ್ಪಿಸುತ್ತದೆಯೋ ಅದೇ ನಿಜವಾದ ಧರ್ಮ. ಕಲ್ಪನೆಗಿಂತ ಜ್ಞಾನವೇ ಶಕ್ತಿಯುತ. ಸಮಾನತೆ ಮತ್ತು ಸಹೋದರತ್ವ ಶಾಂತಿಯುತ ಜೀವನಕ್ಕೆ ನಾಂದಿ” ಎಂದು ಅಂಬೇಡ್ಕರ್ ಜಗತ್ತಿಗೆ ಸಾರಿದ ಸಂದೇಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರಾದ ಸಪ್ನಾ, ಬಬಿತಾ ಸೆಲಿನ್ ಡಿಸೋಜಾ, ಹಸೀನ್ ತಾಜ್, ವೀಣಾ, ರಮ್ಲಾ ಬಾನು, ಶಕೀಲಾ, ಸುಮನ್, ಸೌಮ್ಯ, ಶಶಿಕಲಾ, ಕುಮಾರಿ ಅರ್ಪಿತ ರೈ, ವಿದ್ಯಾ ರಾವ್, ಕುಮಾರಿ ಮೋನಿಷಾ, ಸುಮಾ, ಅಸ್ಮ…

Read More

ಇಸ್ಲಾಮಾಬಾದ್; ಬಲೂಚಿಸ್ತಾನದ ನೆಲದ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದ್ದ ಬಲೂಚ್ ಪ್ರತ್ಯೇಕತಾವಾದಿಗಳು ಈಗ ತಮ್ಮ ಕಾರ್ಯತಂತ್ರವನ್ನು ಬದಲಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಗಸ್ತು ದೋಣಿಯ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ, ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ.ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ದೋಣಿಯು ಎಂದಿನಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ದೋಣಿಯನ್ನು ಸುತ್ತುವರೆದ ದಂಗೆಕೋರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಅನಿರೀಕ್ಷಿತ ದಾಳಿಯಿಂದ ಕಂಗೆಟ್ಟ ಭದ್ರತಾ ಸಿಬ್ಬಂದಿಗಳಿಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಪರಿಣಾಮವಾಗಿ ಮೂವರು ಸೈನಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.‘ಬಿಎಲ್‌ಎ’ ಹೊಣೆ ಮತ್ತು ಹೊಸ ಕಾರ್ಯತಂತ್ರ ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಕೇವಲ ಹೊಣೆ ಹೊರುವುದು ಮಾತ್ರವಲ್ಲದೆ, ಪಾಕಿಸ್ತಾನಕ್ಕೆ ಅಪಾಯಕಾರಿ ಎಚ್ಚರಿಕೆಯನ್ನು ನೀಡಿದೆ.

Read More

ಮಂಗಳೂರು, ಏ. 13: ನಗರದ ಫಳ್ನೀರ್‌ನಲ್ಲಿರುವ ಕಾರು ಆಲ್ಟ್ರೇಷನ್ ಸೆಂಟರ್ ಒಂದರಲ್ಲಿ ಸೋಮವಾರ ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಆಲ್ಟ್ರೇಷನ್ ಕೆಲಸಕ್ಕಾಗಿ ಅಂಗಡಿಯ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಆಹುತಿಯಾಗಿವೆ. ಇದರೊಂದಿಗೆ ಅಂಗಡಿಯಲ್ಲಿದ್ದ ಬೆಲೆಬಾಳುವ ಉಪಕರಣಗಳು ಮತ್ತು ಬಿಡಿಭಾಗಗಳು ಕೂಡ ಸುಟ್ಟು ಭಸ್ಮವಾಗಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಂಗಡಿಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.ಘಟನೆ ನಡೆದ ಸಮಯದಲ್ಲಿ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಅವಘಡದಿಂದ ಉಂಟಾದ ನಷ್ಟದ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Read More

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು ಗೋ -ಕುಟೀರವನ್ನು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಭೂಮಿ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಸರಗೋಡು ಗೋ-ಕುಟೀರದ ನೆಲ ಅಂತಸ್ಥಿನಲ್ಲಿ ಗೋವುಗಳಿಗೆ ಕುಟೀರ ( ಗೋ -ಹಟ್ಟಿ) ನಿರ್ಮಾಣವಾಗಿದ್ದು, ಮೊದಲ ಅಂತಸ್ತಿನಲ್ಲಿ ಗೋ ಮೇವು ಸಂಗ್ರಹಾಲಯ ಹಾಗೂ ಮೇಲ್ಚಾವಣಿ ನಿರ್ಮಾಣ ಕಾಮಗಾರಿಯು 5 ತಿಂಗಳಲ್ಲಿ ಪೂರ್ಣಗೊಂಡಿದೆ.ಗೋ – ಕರುಗಳಿಗೆ ಕಾಮಧೇನು- ಕಲ್ಪವೃಕ್ಷ ಗೋ -…

Read More

ಕಾಸರಗೋಡು: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾಗಿರುವ ರಾಮದಾಸನಗರದ ಕೂಡ್ಲು ಶ್ರೀ ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ಇದೇ ಏಪ್ರಿಲ್ 19ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ತಂತ್ರಿವರ್ಯರಾದ ಬ್ರಹ್ಮಶ್ರೀ ವಿಷ್ಣು ಪ್ರಕಾಶ ಪಟ್ಟೇರಿ ಕಾವುಮಠ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಮಹೋತ್ಸವದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಭಕ್ತರು ಹಾಗೂ ಆಸ್ತಿಕ ಮಹಾಜನರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಧಾರ್ಮಿಕ ಹಾಗೂ ತಾಂತ್ರಿಕ ಸಂಪ್ರದಾಯದಂತೆ ನಡೆಯುವ ಕಾರ್ಯಕ್ರಮಗಳ ವಿವರ ಹೀಗಿದೆ:ಬೆಳಿಗ್ಗೆ 7.00ಕ್ಕೆ ಗಣಪತಿ ಹೋಮ, 9.30ಕ್ಕೆ ತಂತ್ರಿಗಳ ನೇತೃತ್ವದಲ್ಲಿ ಕಲಶ ಪೂಜೆ, ಮಧ್ಯಾಹ್ನ 12.00ಕ್ಕೆ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ಮತ್ತು ಮಹಾಪೂಜೆ, ಬಳಿಕ ಶ್ರೀದೇವಿಯ ದರ್ಶನ ಸೇವೆ ನಡೆಯಲಿದೆ. ಮಧ್ಯಾಹ್ನ 1.30ರಿಂದ ಅನ್ನಪ್ರಸಾದ ವಿತರಣೆ ನಡೆಯಲಿದ್ದು, ಸಂಜೆ 7.00ರಿಂದ ಕೂಡ್ಲು ಶ್ರೀ ಚಾಮುಂಡೇಶ್ವರಿ ಭಜನಾ ಸಂಘದ ವತಿಯಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಈ ಸಂದರ್ಭದಲ್ಲಿ ಹೂವಿನ ವಿಶೇಷ ಅಲಂಕಾರ…

Read More

ಕೈರಂಗಳ; ತೆಂಕುತಿಟ್ಟು ಯಕ್ಷಗಾನ ಲೋಕದಲ್ಲಿ ಅಪೂರ್ವ ಮತ್ತು ವಿಶಿಷ್ಟ ಸನ್ನಿವೇಶಕ್ಕೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 19ರಂದು ಕೈರಂಗಳ ಪುಣ್ಯಕೋಟಿನಗರದಲ್ಲಿ ವಿಭಿನ್ನ ಶೈಲಿಯ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷಗಾನದಲ್ಲಿ ಜೋಡಾಟ ವೆಂಬುದು ಅತ್ಯಂತ ವಿಶೇಷವಾದ ಕಲಾಪ್ರಕಾರವಾಗಿದ್ದು, ಈ ಬಾರಿ ಅದನ್ನು ಶಾಲಾ ವಿದ್ಯಾರ್ಥಿಗಳೇ ನಿರ್ವಹಿಸುವುದು ವಿಶೇಷವಾಗಿರುತ್ತದೆ. 16 ಬಗೆಯ ಲಲಿತ ಕಲೆಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವಲ್ಲಿ ಖ್ಯಾತಿ ಪಡೆದ ಶಾರದಾಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು, ಎರಡು ತಂಡಗಳಾಗಿ ವಿಭಜನೆಗೊಂಡು ಶ್ರೀ ದೇವಿ ಮಹಾತ್ಮೆ ಪ್ರಸಂಗವನ್ನು ರಂಗದಲ್ಲಿ ಮೂಡಿಸಲಿದ್ದಾರೆ. ಖ್ಯಾತ ಯಕ್ಷಗಾನ ನಾಟ್ಯಗುರು ಕಟೀಲು ಮೇಳದ ಸಿಡಿಲ ಮರಿ ಎಂದೇ ಪ್ರಸಿದ್ಧರಾದ ಅಶ್ವಥ್ ಮಂಜನಾಡಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಪ್ರದರ್ಶನ ನೀಡಲಿದ್ದಾರೆ. ಜೊತೆಗೆ ಕಟೀಲಿನ ಅನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರ ಆಶೀರ್ವಾದವು ಕಾರ್ಯಕ್ರಮಕ್ಕೆ ಮತ್ತಷ್ಟು ಶೋಭೆ ತಂದಿದೆ. ಇಲ್ಲಿಯವರೆಗೆ ಯಕ್ಷಗಾನ ಲೋಕದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಜೋಡಾಟ ಪ್ರದರ್ಶನ ನಡೆದಿರುವ ಉದಾಹರಣೆ ಇಲ್ಲದ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮ ವಿಶೇಷ ಮಹತ್ವ ಪಡೆದಿದೆ. ಕಾರ್ಯಕ್ರಮಕ್ಕೆ…

Read More

ಹರೇಕಳ: ಹರೇಕಳದಲ್ಲಿ ಎ. 18ರಂದು ಜರುಗಬೇಕಿದ್ದ ಸೂರ್ಯ-ಚಂದ್ರ ಜೋಡುಕೆರೆ ಕಂಬಳವನ್ನು ಈ ವರ್ಷ ಕೈಬಿಟ್ಟು ಮುಂದಿನ ವರ್ಷ ಆಯೋಜಿಸಲಾಗುವುದು ಎಂದು ಹರೇಕಳ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹರೇಕಳದಲ್ಲಿ ಎ. 18ರಂದು ಸೂರ್ಯ-ಚಂದ್ರ ಕಂಬಳ ನಡೆಸಲು ಎಲ್ಲ ಸಿದ್ಧತೆ ನಡೆಸಲಾಗಿತ್ತು. ಆದಾಗಲೇ ೮೦೦ಮಂದಿ ಸದಸ್ಯರನ್ನೊಳಗೊಂಡ ಸಮಿತಿ, ಉಪಸಮಿತಿಯ ಮೂಲಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ತಲುಪಿಸುವ ಕಾರ್ಯ ಕೂಡಾ ನಡೆದಿತ್ತು. ಹಲವು ಲಕ್ಷ ರೂ. ಖರ್ಚು ಮಾಡಿ ಕಂಬಳ ಸಿದ್ಧತೆ ಕೈಗೊಂಡಿರುವ ಮಧ್ಯೆಯೇ ವಯೋಸಹಜವಾಗಿ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪಿತೃಶ್ರೀ ಪ್ರಗತಿಪರ ಕೃಷಿಕ ಉಳಿದೊಟ್ಟು ಕೊರಗಪ್ಪ ಶೆಟ್ಟಿ ಅವರ ಅಗಲುವಿಕೆಯ ಕಾರಣದಿಂದ ಧಾರ್ಮಿಕ ಹಿನ್ನೆಲೆಯಲ್ಲಿ ಸೂತಕದಲ್ಲಿ ಕಂಬಳ ನಡೆಸುವುದು ಸೂಕ್ತವಲ್ಲ ಎಂದು ಕಂಬಳ ಸಮಿತಿ ನಿರ್ಣಯದಂತೆ ಸೂರ್ಯ-ಚಂದ್ರ ಜೋಡುಕೆರೆ ಕಂಬಳ ಮುಂದಿನ ವರ್ಷ ನಡೆಸಲು ಯೋಜಿಸಲಾಗಿದೆ ಎಂದರು. ಪ್ರಾಕೃತಿಕವಾಗಿ ಹರೇಕಳ ಕಂಬಳಗದ್ದೆ ನೇತ್ರಾವತಿ…

Read More

ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದ್ದು, ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಇಂದು ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ 30% ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

Read More

ಕುತ್ತಾರು; ನಿಷ್ಠೆ ಹಾಗು ಪ್ರೀತಿ ತೋರುವಲ್ಲಿ ಶ್ವಾನ ಯಾವತ್ತಿಗೂ ಮುಂಚೂಣಿಯಲ್ಲಿರುತ್ತದೆ. ಇದಕ್ಕೆ ಸಾಕ್ಷಿಯೆಂಬAತೆ ನಾಗುರಿ ನಿವಾಸಿ ಕುಟುಂಬದ ಸಾಕು ನಾಯಿಯೊಂದು ಭಕ್ತಿಭಾವದಿಂದ ನಡೆದ ಪಾದಯಾತ್ರೆಯಲ್ಲಿ ವಿಶೇಷ ಗಮನ ಸೆಳೆಯಿತು. ಕದ್ರಿ ದೇವಸ್ಥಾನದಿಂದ ಆರಂಭವಾದ ಈ ಪಾದಯಾತ್ರೆಯಲ್ಲಿ, ದೆಕ್ಕಾಡು ಕೊರಗಜ್ಜನ ಆದಿಕ್ಷೇತ್ರದವರೆಗೂ ನಾಯಿ ತನ್ನ ಮನೆಯವರೊಂದಿಗೆ ಒಂದೇ ತರಹದ ಉತ್ಸಾಹ ಮತ್ತು ನಿಷ್ಠೆಯಿಂದ ಹೆಜ್ಜೆ ಹಾಕಿರುವುದು ಎಲ್ಲರಗಮನಸೆಳೆಯಿತು. ಪಾದಯಾತ್ರೆಯು ಹಲವು ಕಿಲೋಮೀಟರ್‌ಗಳ ದೂರವನ್ನು ಒಳಗೊಂಡಿದ್ದರೂ, ನಾಯಿ ಯಾವುದೇ ಆಯಾಸವಿಲ್ಲದೆ ತನ್ನ ಯಜಮಾನರ ಹಿಂದೆ ಹಿಂದೆ ನಡೆದು ಬಂದಿತು. ಕೆಲವೆಡೆ ಭಕ್ತರು ವಿಶ್ರಾಂತಿ ಪಡೆಯುವಾಗ ಅದು ಕೂಡ ಶಾಂತವಾಗಿ ಕುಳಿತುಕೊಂಡು, ಮತ್ತೆ ಪ್ರಯಾಣ ಆರಂಭವಾದಾಗ ತಕ್ಷಣವೇ ಎದ್ದು ಜೊತೆಯಾದುದು ವಿಶೇಷವಾಗಿತ್ತು. ಈ ದೃಶ್ಯವನ್ನು ಕಂಡ ಇತರ ಪಾದಯಾತ್ರಿಗಳು ನಾಯಿಯ ನಿಷ್ಠೆ ಮತ್ತು ಕುಟುಂಬದ ಮೇಲಿನ ಅದರ ಪ್ರೀತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಘಟನೆಗಳು ಮಾನವ-ಪ್ರಾಣಿಗಳ ನಡುವಿನ ಆಪ್ತ ಬಾಂಧವ್ಯವನ್ನು ತೋರಿಸುವುದರ ಜೊತೆಗೆ, ಭಕ್ತಿ ಮತ್ತು ನಿಷ್ಠೆ ಎಂಬ ಮೌಲ್ಯಗಳು ಜೀವಿಗಳಲ್ಲಿಯೂ ಒಂದೇ ರೀತಿಯಲ್ಲಿ…

Read More