ಸುರತ್ಕಲ್, ಅ.24: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರು. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಸುರತ್ಕಲ್ ಠಾಣೆಯ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಿಝಮ್ ಮತ್ತು ಮುರ್ಷಿದ್ ಇತರ ಸ್ನೇಹಿತರೊಂದಿಗೆ ದೀಪಕ್ ಬಾರ್ಗೆ ಮದ್ಯ ಖರೀದಿಸಲು ಹೋಗಿದ್ದು ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರ ತಂಡ ಚೂರಿಯಿಂದ ಇರಿದಿದೆ. ನಿಝಾಮ್ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಸನ್…
Author: UllalaVani
ಪಾವೂರು: ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿ ಅಲ್ಲಿ ತಲುಪಿರುವುದಾಗಿ ಪತ್ನಿಗೆ ಫೋನಾಯಿಸಿದ್ದ ವ್ಯಕ್ತಿ ಈವರೆಗೂ ವಾಪಸ್ಸು ಬಾರದೇ ಇರುವುದರ ಕುರಿತು ಪತ್ನಿ ತಡವಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.ಪಾವೂರು ಗ್ರಾಮ ಅಕ್ಷರನಗರ ನಿವಾಸಿ ಅಮೀರ್ ಮಲಾರ್ (46) ನಾಪತ್ತೆಯಾದವರು. ಸುಮಾರು 4 ವರ್ಷಗಳ ಹಿಂದೆ 2022ರ ಜೂ.11 ರಂದು ಫೋನ್ ಮಾಡಿ ಬೆಂಗಳೂರಿಗೆ ತಲುಪಿರುವುದಾಗಿ ತಿಳಿಸಿದ್ದರು. ಬಳಿಕ ಫೋನ್ ಮಾಡದೇ ಇರುವಿಕೆಯ ಕುರಿತು ತಿಳಿಸದೇ ನಾಪತ್ತೆಯಾಗಿದ್ದಾರೆ. ಕುಟುಂಬದ ವಿಷಯ ಇನ್ನೊಬ್ಬರಿಗೆ ತಿಳಿಯುವುದು ಬೇಡ ಎಂಬ ಅಂಜಿಕೆಯಿಂದ ಹಾಗೂ ಪತಿ ಅಮೀರ್ ಇಂದಲ್ಲ ನಾಳೆ ಬರುವರೆಂಬ ವಿಶ್ವಾಸದಿಂದ ಕುಟುಂಬದವರಲ್ಲಿ ವಿಚಾರಿಸಿಕೊಂಡು ತಡವಾಗಿ ದೂರು ನೀಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು, ಅ.23 ಕೂಳೂರಿನ ನದಿಗೆ ಕಿಡಿಗೇಡಿಗಳು ಆಸ್ಪತ್ರೆ ತ್ಯಾಜ್ಯ ಎಸೆಯುತ್ತಿದ್ದು, ಸ್ಥಳೀಯ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಹಲವು ಸಮಯದಿಂದ ಲಾರಿಯಲ್ಲಿ ತಂದು ಡಂಪ್ ಮಾಡಲಾಗುತ್ತಿದೆ ಎನ್ನಲಾಗಿದೆ. ಅದೂ ಅಲ್ಲದೆ ಹಲವು ಬಾರಿ ಊರಿನ ನಾಗರಿಕರು ಲಾರಿ ತಡೆದರೂ ಕ್ಯಾರೇ ಎನ್ನುತ್ತಿಲ್ಲ ಎಂಬ ಆರೋಪ ಕೂಡ ವ್ಯಕ್ತವಾಗಿದೆ. ಆಸ್ಪತ್ರೆ ಸಿರಿಂಜ್, ಇನ್ನಿತರೆ ತ್ಯಾಜ್ಯ ನದಿಯ ಒಡಲು ಸೇರುತ್ತಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಕ್ರಮ ಜರುಗಿಸುವಂತೆ ಕೂಳೂರು ನಾಗರಿಕರು ಒತ್ತಾಯಿಸಿದ್ದಾರೆ.
ರಿಯಾದ್: ಸೌದಿ ಅರೇಬಿಯಾ ರಾಜಮನೆತನವು ಶೇಖ್ ಸಾಲಿಹ್ ಬಿನ್ ಫೌಝಾನ್ ಬಿನ್ ಅಬ್ದುಲ್ಲಾ ಅಲ್-ಫೌಝಾನ್ ಅವರನ್ನು ದೇಶದ ನೂತನ ಗ್ಯಾಂಡ್ ಮುಫ್ತಿಯಾಗಿ ಹಾಗೂ ಹಿರಿಯ ವಿದ್ವಾಂಸರ ಮಂಡಳಿಯ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ನೇಮಿಸಿದೆ ಎಂದು arabnews.com ವರದಿ ಮಾಡಿದೆ. ರಾಜಮನೆತನದ ಆದೇಶದಂತೆ, ಈ ನೇಮಕಾತಿ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ಶಿಫಾರಸಿನ ಆಧಾರದ ಮೇಲೆ ಜಾರಿಯಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ (SPA) ಬುಧವಾರ ವರದಿ ಮಾಡಿದೆ. ಶೇಖ್ ಅಲ್-ಫೌಝಾನ್ ಅವರು ಧಾರ್ಮಿಕ ವ್ಯಾಖ್ಯಾನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ಸ್ಕಾಲರ್ಲಿ ರಿಸರ್ಚ್ ಅಂಡ್ ಇಫ್ತಾ ಜನರಲ್ ಪ್ರೆಸಿಡೆನ್ಸಿಯ ಅಧ್ಯಕ್ಷರ ಹುದ್ದೆಯನ್ನೂ ವಹಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಸೆ. 23ರಂದು ನಿಧನರಾದ ಗ್ಯಾಂಡ್ ಮುಫಿ ಶೇಖ್ ಅಬ್ದುಲ್ ಅಝೀಝ್ ಅಲ್ ಶೇಖ್ ಅವರ ನಿಧನದ ಬಳಿಕ ಈ ನೇಮಕಾತಿ ನಡೆದಿದೆ. ಧಾರ್ಮಿಕ ವಿದ್ಯಾಭ್ಯಾಸ ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರದ ಕ್ಷೇತ್ರದಲ್ಲಿ ವಿಶಾಲ ಅನುಭವ ಹೊಂದಿರುವ ಶೇಖ್ ಅಲ್-ಫೌಝಾನ್ ಅವರನ್ನು ಸೌದಿ ಅರೇಬಿಯಾದ ಅತ್ಯಂತ…
ಅ.23, ಕೊಣಾಜೆ: ಗ್ರಾಮೀಣ ಭಾಗದ ಕೃಷಿ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ದೀಪಾವಳಿ ಎಂಬ ಬೆಳಕಿನ ಹಬ್ಬ ನಮ್ಮ ಮನೆ-ಮನವನ್ನು ಮಾತ್ರವಲ್ಲ ಇಡೀ ಸಮಾಜ ಹಾಗೂ ಜಗತ್ತನ್ನೇ ಬೆಳಗಲಿ. ಈ ಹಬ್ಬವು ಸಮುದಾಯ ಪ್ರಜ್ಞೆಗಿಂತ ಮಿಗಿಲಾಗಿ ವಿಶ್ವಪ್ರಜ್ಞೆಯನ್ನು ಮೂಡಿಸುವಂತಾಗಲಿ ಎಂದು ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅವರು ಅಭಿಪ್ರಾಯಪಟ್ಟರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಗ್ರಾಮಚಾವಡಿ ಕೊಣಾಜೆ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕೊಣಾಜೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ಘಟಕ ಹಾಗೂ ಮಹಿಳಾ ಘಟಕ ಇದರ ವತಿಯಿಂದ ಪರಂಡೆಯ ಯುಬಿಎಂಸಿ ಶಾಲೆಯಲ್ಲಿ ನಡೆದ ಗೂಡುದೀಪ ಸಂಗಮ, ದೀಪಾವಳಿ ಸಂಭ್ರಮ -2025 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಇಂದಿನ ಆಧುನಿಕತೆಯಲ್ಲಿ ದೀಪಾವಳಿಯಂತಹ ಹಬ್ಬಗಳನ್ನು ಪಾರಂಪರಿಕವಾಗಿ ಆಚರಿಸಿಕೊಂಡು ಬಂದ ರೀತಿಯನ್ನು ನಾವು ಮರೆಯದೆ ಅದರ ಮಹತ್ವವನ್ನು ಇಂದಿನ ಮಕ್ಕಳಿಗೂ ತಿಳಿಯಪಡಿಸುವ ಕಾರ್ಯ ಆಗಬೇಕಿದೆ ಎಂದರು.ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ ಅಧ್ಯಕ್ಷರಾದ ವಿಜೇತ್…
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ʻಕನಕ ಜಯಂತಿ ಪ್ರಯುಕ್ತʼ ಕನಕದಾಸರ ಕೀರ್ತನೆಗಳ ‘ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮವು 12 ನವೆಂಬರ್ 2025 ರಂದು ಬುಧವಾರ ಪೂರ್ವಾಹ್ನ 10.00 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಪ್ರೌಢಶಾಲಾ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿಗಳ ವಿದ್ಯಾರ್ಥಿಗಳು, ಅಧ್ಯಾಪಕ, ಅಧ್ಯಾಪಕೇತರ ಹಾಗೂ ಸಾರ್ವಜನಿಕ ಒಟ್ಟು ಏಳು ವಿಭಾಗಗಳಲ್ಲಿ ನಡೆಯುವ ʻಸಾಮುದಾಯಿಕ ಪಾಲ್ಗೊಳ್ಳುವಿಕೆʼಯ ಆಶಯದ ಈ ಕಾರ್ಯಕ್ರಮದಲ್ಲಿ ಉಳ್ಳಾಲ, ಮಂಗಳೂರು, ಬಂಟ್ವಾಳ, ಪುತ್ತೂರು, ಮೂಲ್ಕಿ, ಮೂಡಬಿದ್ರೆ ಹಾಗು ಗಡಿನಾಡು ಪ್ರದೇಶವಾದ ಮಂಜೇಶ್ವರ, ಕಾಸರಗೋಡು ತಾಲೂಕು ವ್ಯಾಪ್ತಿಯ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು, ದಕ್ಷಿಣ ಕನ್ನಡ ಉಡುಪಿ, ಕೊಡಗು ಜಿಲ್ಲೆಯ ವಿಶ್ವೇಶ್ವರಯ್ಯ ತಾಂತ್ರಿಕ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯ, ಕಣ್ಣೂರು ವಿಶ್ವವಿದ್ಯಾನಿಲಯ, ಕೇಂದ್ರೀಯ…
ಮಂಗಳೂರು, ಅ. 23: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವು ಜಿಎಸ್ಟಿ ದರ ಕಡಿತದ ಮೂಲಕ ಜನ ಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿ ಸುತ್ತಿದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಪುತ್ತೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿ ರುವ ಜಿಎಸ್ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಚೌಟ ಹೇಳಿದ್ದಾರೆ. 5,000 ಕೋಟಿ ರೂ. ಕರ್ನಾಟಕಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿಕೆಗೆ ಯಾವುದೇ ಆಧಾರ ವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ…
ಉಡುಪಿ, ಅ.23, : ಬೈಂದೂರು ತಾಲ್ಲೂಕಿನ ವಿವಿಧೆಡೆ ಮಂಗಗಳ ಹಾವಳಿ ವಿಪರೀತವಾಗುತ್ತಿದ್ದು, ಸಾರ್ವಜನಿಕರಿಗೆ, ಕೃಷಿಕರಿಗೆ ಸಂಕಷ್ಟ ಎದುರಾಗಿದೆ. ಮಂಗಗಳ ಹಿಂಡು ತೋಟಗಳಿಗೆ ಲಗ್ಗೆ ಇಡುತ್ತಿದ್ದು, ತೆಂಗಿನ ಮರಹತ್ತಿ ಸೀಯಾಳ ಕುಡಿದು ಕಿತ್ತೆಸೆಯುತ್ತಿವೆ. ಹಿಂಡು ಹಿಂಡಾಗಿ ದಾಳಿ ಮಾಡುವ ಮಂಗಗಳು ಎಗ್ಗಿಲ್ಲದೆ ತೆಂಗಿನ ಫಸಲನ್ನು ನಾಶ ಮಾಡುತ್ತಿವೆ. ತೆಂಗು ಮಾತ್ರವಲ್ಲದೇ ಅಡಕೆ ತೋಟಗಳಲ್ಲಿ ಅಡಕೆ ಕಿತ್ತು ಹಾಕುವ ಜೊತೆಗೆ ಹಿಂಗಾರವನ್ನು ಹಾಳು ಮಾಡುತ್ತಿವೆ. ಬಾಳೆಮರದ ಮೊಳಕೆ, ಪಪ್ಪಾಯ, ಪೇರಳೆ, ತರಕಾರಿ ಬೆಳೆಯೂ ಮಂಗಗಳ ಪಾಲಾಗುತ್ತಿದೆ. ತೆಂಗಿನ ಮರದಲ್ಲಿ ಶೇ 60ರಿಂದ ಶೇ 70ರಷ್ಟು ಫಸಲು ನಷ್ಟವಾಗುತ್ತದೆ. ಹೀಗಾಗಿ ಸೀಯಾಳ ಮತ್ತು ತೆಂಗಿನ ಇಳುವರಿ ಕಡಿಮೆಯಾಗಿದೆ ಎಂದು ಕೃಷಿಕರು ದೂರಿದ್ದಾರೆ.ಈ ಬಾರಿ ತೆಂಗಿಗೆ ಉತ್ತಮ ಬೆಲೆ ಇದೆ. ಆದರೆ, ಬೆಳೆ ಮಂಗಗಳ ಪಾಲಾಗುತ್ತಿದ್ದು, ಕೃಷಿಕರು ಕಂಗಾಲಾಗಿದ್ದಾರೆ. ಮಂಗಗಳ ಹಾವಳಿಯಿಂದ ಬೇಸತ್ತ ಜನ ಅವುಗಳನ್ನು ಓಡಿಸುವ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಪಟಾಕಿ, ಹುಸಿ ಗುಂಡು ಸೇರಿದಂತೆ ಹಲವಾರು ಉಪಾಯಗಳನ್ನು ಮಾಡಿದ್ದಾರೆ. ಮೊದ ಮೊದಲು ಹೆದರುತ್ತಿದ್ದ ಮಂಗಗಳು…
ಉಳ್ಳಾಲ: ಅ-23; ತಾಯಿ ಸಮಾನಳಾದ ಗೋವಿನಲ್ಲಿ ಮುಕ್ಕೋಟಿ ದೇವತೆಗಳೇ ನೆಲೆಸಿದ್ದಾರೆಂಬ ನಂಬಿಕೆ ನಮ್ಮೆಲ್ಲರದ್ದಾಗಿದೆ. ದೇಶದ ಕೃಷಿ ಪ್ರಧಾನ ಸಂಸ್ಕೃತಿಯಲ್ಲೂ ಗೋವಿಗೆ ವಿಶೇಷ ಪ್ರಾತಿನಿಧ್ಯವಿದ್ದು,ನಮ್ಮ ಶ್ರೇಷ್ಟ ಸಂಸ್ಕೃತಿಯನ್ನ ಯುವ ಪೀಳಿಗೆಗೂ ಪರಿಚಯಿಸಲು ಕಾಂಗ್ರೆಸ್ ಪಕ್ಷದ ವತಿಯಿಂದ ವೇದಿಕೆ ಸಿಕ್ಕಿರುವುದು ಶ್ಲಾಘನೀಯವೆಂದು ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷರಾದ ಚಂದ್ರಿಕಾ ರೈ ಹೇಳಿದರು.ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕೊಲ್ಯದ ನಾರಾಯಣ ಸಫಲ್ಯ ಅವರ ಮನೆಯಲ್ಲಿ ಬುಧವಾರದಂದು ನಡೆದ ಸಾಮೂಹಿಕ “ಗೋ ಪೂಜೆ” ಕಾರ್ಯಕ್ರಮವನ್ನುದ್ಧೇಶಿಸಿ ಅವರು ಮಾತನಾಡಿದರು.ಕ್ಷೇತ್ರದ ಶಾಸಕರು ,ವಿದಾನಸಭೆಯ ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರು ಪ್ರತೀ ವರುಷವೂ ಗೋಪೂಜೆಯನ್ನ ನಡೆಸಲು ಸಲಹೆ ನೀಡುತ್ತಾ ಬಂದಿದ್ದಾರೆ.ಅವರ ಸದಾಶಯದಂತೆ ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜೆ ನಡೆಸಲಾಗಿದೆಯೆಂದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಮಾತನಾಡಿ ಕರ್ನಾಟಕ ಸರಕಾರವೇ ಮುಜರಾಯಿ ಇಲಾಖೆಗೊಳಪಟ್ಟ ಪ್ರತೀ ಧಾರ್ಮಿಕ ಕ್ಷೇತ್ರಗಳಲ್ಲೂ ಗೋಪೂಜೆಯನ್ನ ಆಯೋಜಿಸಿದೆ.ಆ ಮೂಲಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಗೋಪೂಜೆಗೆ ವಿಶೇಷ ಆದ್ಯತೆ ನೀಡಿದ್ದಾರೆ.ಗೋವು ಸಮೃದ್ಧಿ ಮತ್ತು ಸಂಪತ್ತಿನ ಸಂಕೇತವಾಗಿದೆಯೆಂದರು.ಜಿಲ್ಲಾ ಮಹಿಳಾ…
ಉಡುಪಿ,ಅ.23: ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ನಲ್ಲಿ ಚಿರತೆಯೊಂದು ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಿರತೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ನಂಚಾರ್ ಭಾಸ್ಕರ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದಾರೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ. ಗಾಯಾಳು ಬೈಕ್ ಸವಾರನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

