ಮುದುಂಗಾರುಕಟ್ಟೆ; ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, , ಸ್ಥಳಕ್ಕೆ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡ ಮತ್ತು ಸದರಿ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತದೇಹವನ್ನು ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್ (28) ಎಂಬವರದ್ದಾಗಿದ್ದು, ಈತ ಅ.12 ರಂದು ಸಂಜೆ ಮನೆಯಿಂದ ನಾಪತ್ತೆಯಾಗಿದ್ದನು. ನಿಯಾಫ್ ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಿತ್ತು ನಾಪತ್ತೆಯಾದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದನು. ಇದೀಗ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: UllalaVani
ಯಕ್ಷರಂಗದಲ್ಲಿ ತನ್ನದೇ ಚಾಪನ್ನ ಮೂಡಿಸಿದ ರಸರಾಗ ಚಕ್ರವರ್ತಿ ಎಂದೇ ಪ್ರಸಿದ್ಧಿ ಪಡೆದಿರುವ ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನರಾಗಿದ್ದಾರೆ.ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾದ ಅವರು, ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ದಿನೇಶ್ ಅಮ್ಮಣ್ಣಾಯ ಯಕ್ಷಗಾನ ರಂಗದಲ್ಲಿ ತಮ್ಮ ಅಮೋಘ ಭಾಗವತಿಕೆಯ ಮೂಲಕ ಸಂಚಲನ ಮೂಡಿಸಿದ್ದಾರೆ. ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು, ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿದ್ದರು. ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಮುಖ ಮಾಡಿದ ಅವರು, ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರಮಾನ್ಯ ಸ್ಥಾನಕ್ಕೇರಿದ್ದರು. ಅಮ್ಮಣ್ಣಾಯರು ಕೇವಲ ಪೌರಾಣಿಕ…
ಮಂಗಳೂರು : ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ. ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ. ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಾಲಕಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸಾರ್ವಜನಿಕರು ನಾಯಿಗಳ ಬಾಯಿಯಿಂದ ಬಾಲಕಿಯನ್ನು ರಕ್ಷಿಸಿ ಸುರತ್ಕಲ್ ಸಮುದಾಯ…
ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಂಸ್ಕೃತಿಕ ಸಂಘಟಕ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ, ಅವರು ಕನ್ನಡದ ಪ್ರಮುಖ ನಾಟಕಕಾರರಿಂದ 35 ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. 1985 ರಲ್ಲಿ, ಪಯ್ಯಾರ್ ಮುಂಬೈನಲ್ಲಿ ಧ್ವನಿ ಪ್ರತಿಷ್ಠಾನವನ್ನು ಸ್ಥಾಪಿಸಿದರು, ಇದು ಮುಂದಿನ ಮೂರು ದಶಕಗಳಲ್ಲಿ ನೂರಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿತು. ಯುಎಇಯಲ್ಲಿ ಕನ್ನಡ ಮತ್ತು ತುಳು ಸಾಂಸ್ಕೃತಿಕ ಚಟುವಟಿಕೆಗಳ ಪ್ರಸಿದ್ಧ ರಾಯಭಾರಿಯಾಗಿ, ವಿಶೇಷವಾಗಿ 2000 ರಿಂದ, ಅವರು ಯುಎಇಯ ನೂರಾರು ಕಲಾವಿದರಿಗೆ ಉದ್ಯೋಗ ಮತ್ತು ಕಲಾತ್ಮಕ ಮಾನ್ಯತೆಗಾಗಿ ಅವಕಾಶಗಳನ್ನು ಒದಗಿಸಿದರು.…
ಕಾಸರಗೋಡು: ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕಾರು ಅಪಘಾತಕ್ಕೀಡಾಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಮೃತೆಯನ್ನು ಮಹಿಮಾ ಕೆ.ಸಿ (19) ಎಂದು ಗುರುತಿಸಲಾಗಿದ್ದು, ಅವರು ಕುತ್ತಿಕ್ಕೋಲ್ ಗ್ರಾಮ ಪಂಚಾಯತ್ನ ಬೆತೂರುಪರದ ನಿವಾಸಿ, ಅಂಗನವಾಡಿ ಸಹಾಯಕಿ ವನಜಾ ಕೆ.ಸಿ ಹಾಗೂ ನಿಧನರಾದ ಕೆ. ಬಾಬು ಅವರ ಪುತ್ರಿ. ಮಹಿಮಾ ಕಾಸರಗೋಡು ಕೇರ್ವೆಲ್ ನರ್ಸಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದರು. ಬೆತೂರುಪರ ವಾರ್ಡ್ ನ ಮಾಜಿ ಸದಸ್ಯ ಮಣಿಕಂದನ್ .ಕೆ ಅವರ ಮಾಹಿತಿ ಪ್ರಕಾರ, ಮಹಿಮಾ ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಅಣ್ಣ ಮಹೇಶ್ ಕೆ.ಸಿ, ಪಿಕಪ್ ಚಾಲಕ ಅವರಿಗೆ ಕಂಡುಬಂದಿದ್ದಾರೆ. “ಅವರು ಜೀವಂತವಾಗಿದ್ದಾಗಲೇ ಮಹೇಶ್ ಆಕೆಯನ್ನು ಕೆಳಗಿಳಿಸಿದರು,” ಎಂದು ಅವರು ತಿಳಿಸಿದ್ದಾರೆ. ನಂತರ ಮಹೇಶ್ ತನ್ನ ಮಾವನ ಕಾರಿನಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಹೊರಟಾಗ, ಮನೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ಕಾರಿನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ರಸ್ತೆ…
ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತತಿಸಿ ಅವರಿಗೆ ವಿಶೇಷ ಪ್ರಾಥನೆ ಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪಾಧ್ಯಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋರವರು ಅವರಿಗೆ ಶಾಲೂ, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐ ವನ್ ಡಿಸೋಜಾ, ಮಾಜಿ ಶಾಸಕರಾದ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ರಚನಾ ಅಧ್ಯಕ್ಷ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು
ಮಂಗಳೂರು : ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ ಕೆಥೋಲಿಕರು…
ಮಂಗಳೂರು : ವಿಸ್ಡಮ್ ಇಸ್ಲಾಮಿಕ್ ಸ್ಟುಡೆಂಟ್ಸ್ ಆರ್ಗನೈಸೇಶನ್ ರಾಜ್ಯ ಸಮಿತಿ ಮಂಗಳೂರಿನಲ್ಲಿ ಆಯೋಜಿಸಿದ 29ನೇ ‘ಪ್ರೊಫ್ಕಾನ್’ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನವು ದೇಶದಾದ್ಯಂತದ ವೃತ್ತಿಪರ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೇರೂರುತ್ತಿರುವ ಅಪ್ರಜಾಸತ್ತಾತ್ಮಕ ಪ್ರವೃತ್ತಿಗಳು ಮತ್ತು ಹಿಂಸಾತ್ಮಕ ರಾಜಕೀಯವನ್ನು ತೀವ್ರವಾಗಿ ಖಂಡಿಸಿ, ಇಂತಹ ಪ್ರವೃತ್ತಿಗಳ ವಿರುದ್ಧ ವಿದ್ಯಾರ್ಥಿ ಸಮುದಾಯ ಒಗ್ಗೂಡಿ ಪ್ರತಿರೋಧಿಸಬೇಕೆಂದು ಮನವಿ ಮಾಡಿತು. ಶೈಕ್ಷಣಿಕ ಸಂಸ್ಥೆಗಳು ಜ್ಞಾನ ಮತ್ತು ಸಾಮಾಜಿಕ ಪ್ರಜ್ಞೆಯ ಕೇಂದ್ರಗಳಾಗಬೇಕಾದರೂ, ದುರದೃಷ್ಟವಶಾತ್ ಹಿಂಸೆ ಮತ್ತು ವಿಭಜನೆಯ ವೇದಿಕೆಗಳಾಗುತ್ತಿವೆ ಎಂದು ಸಮ್ಮೇಳನ ವ್ಯಕ್ತಪಡಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಮಾದರಿಗಳಾಗಬೇಕಾದ ಕ್ಯಾಂಪಸ್ಗಳಲ್ಲಿನ ಹಿಂಸಾತ್ಮಕ ರಾಜಕೀಯವನ್ನು ಸರ್ಕಾರಗಳು ಪ್ರೋತ್ಸಾಹಿಸಬಾರದು ಎಂದು ಒತ್ತಾಯಿಸಿತು. ಕ್ಯಾಂಪಸ್ಗಳಲ್ಲಿ ಶಾಂತಿ ಮತ್ತು ಸಹಕಾರದ ಮಾದರಿಗಳನ್ನು ಸ್ಥಾಪಿಸುವ ಅಗತ್ಯವನ್ನು ಸಭೆ ಒತ್ತಿ ಹೇಳಿತು. ಸಮ್ಮೇಳನದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಾದ ಡಾ. ಎಸ್.ವೈ. ಖುರೈಶಿ ಅವರು, ಜಾಗತಿಕ ಮಟ್ಟದಲ್ಲಿ ಮತ್ತು ವಿಶೇಷವಾಗಿ ಭಾರತದಲ್ಲಿ ಪ್ರಜಾಸತ್ತೆ ನಿರ್ಣಾಯಕ ತಿರುವಿನಲ್ಲಿದೆ ಎಂದು ತಿಳಿಸಿದರು. “ಕಳೆದ ಮೂರು ದಶಕಗಳಿಗಿಂತ ಹೆಚ್ಚು ಜನರು…
ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು ಇತ್ತೀಚೆಗೆ ಪೇಸ್ ಜ್ಞಾನ ನಗರದಲ್ಲಿ ಅಧಿಕೃತ ಬ್ಯಾನರ್ ಅನಾವರಣದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ 25 ವರ್ಷದ ಯಶಸ್ವಿ ಪ್ರಯಾಣದ ಮಹತ್ವದ ಮೈಲುಗಲ್ಲುಗಳನ್ನು ಗುರುತಿಸಿತು. ಪೇಸ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಿಲ್ವಿಯೋರಾ 2025” ಬ್ಯಾನರ್ ಅನ್ನು ಅನಾವರಣಗೊಳಿಸಿ, ಮುಂದಿನ ಮೂರು ತಿಂಗಳುಗಳ ಕಾಲ ನಡೆಯುವ ವೈಭವಶಾಲಿ ಉತ್ಸವಗಳ ಸರಣಿಗೆ ಅಧಿಕೃತ ಚಾಲನೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಮ್ ಅವರು ಸಭಿಕರನ್ನು ಸ್ವಾಗತಿಸಿ, ರಜತ ಮಹೋತ್ಸವದ ಸಂಭ್ರಮದ ಕುರಿತು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಸ್ ಎಂ.ಕೆ. ಅವರು ಸಂಸ್ಥೆಯ 25 ವರ್ಷದ ಪ್ರಯಾಣದ ಕುರಿತು ಸ್ಮರಣೀಯ ಅನುಭವವನ್ನು ತಿಳಿಸಿ , ಭವಿಷ್ಯದ ಗುರಿಗಳನ್ನು ಹಂಚಿಕೊಂಡರು.ಕಾರ್ಯಕ್ರಮದಲ್ಲಿ ಪೇಸ್ ಗ್ರೂಪ್ನ…
ಮಂಗಳೂರು: ಮಂಗಳೂರಿನಲ್ಲಿ ಲಕ್ಕಿ ಕೂಪನ್ಗಳ ಹೆಸರಿನಲ್ಲಿ ನಡೆಯುತ್ತಿರುವ ದಂಧೆ ಮತ್ತೆ ಗುಡುಗಲು ಶುರುವಾಗಿದೆ. ಸಾರ್ವಜನಿಕರನ್ನು ಆಕರ್ಷಿಸುವ ಹೆಸರುಗಳಿಂದ ಅಪಾರ್ಟ್ಮೆಂಟ್ ಕೊಡುವ ರೀತಿ, ಬಹುಮಾನಗಳ ಲಾಲನೆ, ಮತ್ತು ಸುಖಭರಿತ ಭವಿಷ್ಯದ ಭರವಸೆ ನೀಡಿ ಹಣ ಸಂಗ್ರಹಿಸುವ ಈ ದಂಧೆ ಬಹಿರಂಗವಾಗಿ ನಡೆಯುತ್ತಿದೆ. ಇವುಗಳಲ್ಲಿ ವಿದ್ಯಾವಂತರೂ ಕೂಡ ಸೆರೆಸಿಕ್ಕಿರುವುದು ಇನ್ನು ಹೆಚ್ಚು ಆತಂಕಕಾರಿ ಸಂಗತಿ.ಪ್ರಶ್ನೆ ಏನೆಂದರೆ – ಈ ಎಲ್ಲದಕ್ಕೂ ಜಿಲ್ಲೆಯ ಇಂಟಲಿಜೆನ್ಸ್ ಮತ್ತು ಆಡಳಿತ ಯಂತ್ರ ಜವಾಬ್ದಾರಿಯಲ್ಲವೇ? ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಇಷ್ಟು ಸಮಯ ಇದನ್ನು ಗಮನಿಸದಿರುವುದು ಗಂಭೀರ ಪ್ರಶ್ನೆಗಳಿಗೆ ದಾರಿ ಮಾಡಿಕೊಡುತ್ತದೆ. ಪೊಲೀಸ್ ಕಮಿಷನರ್ ಮತ್ತು ಎಸ್.ಪಿ. ಇವುಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಷ್ಕ್ರಿಯರಾಗಿರುವುದು, ಜನರಲ್ಲಿ ಅನುಮಾನ ಹುಟ್ಟಿಸುತ್ತಿದೆ . ಈ ದಂಧೆಕೋರರಿಗೆ ‘ಮಾಮೂಲು’ ಎಂಬ ರಕ್ಷಾ ಕವಚವಿದೆಯೇ? ಸಾರ್ವಜನಿಕರಿಂದ ಹಣ ಸಂಗ್ರಹಿಸುವುದು, ಮತ್ತು ಅದನ್ನು ಕೇವಲ ಬಂಡವಾಳಶಾಹಿ ಗೇಮಾಗಿ ಬಳಸುವುದು ಭಾರತೀಯ ಶಿಕ್ಷಾ ಸಂಹಿತೆಯ ಅಡಿಯಲ್ಲಿ ಚಡಪಡಿಸುವ ಅಪರಾಧ. IPC ಸೆಕ್ಷನ್…

