Author: UllalaVani

Kannada News From Coastal Karnataka

ಕುತ್ತಾರು: ಇಂದಿನ ಕಾಲಘಟ್ಟದಲ್ಲಿ ಸಂಸ್ಕಾರವನ್ನು ದೈವ ನರ್ತಕರಿಂದ ಕಲಿಯುವ ಅಗತ್ಯತೆ ಹೆಚ್ಚಾಗಿದೆ. ತುಳುನಾಡಿನ ಆಚಾರ-ವಿಚಾರಗಳಲ್ಲಿ ಕೊರಗಜ್ಜನಿಗೆ ವಿಶೇಷ ಸ್ಥಾನವಿದ್ದು, “ನಮ್ಮ ನಡೆ, ನಮ್ಮ ಅಂಬೋಣ” ಎಂಬ ಭಾವನೆ ಜನಮನಗಳಲ್ಲಿ ಗಾಢವಾಗಿದೆ. ಕೊರಗಜ್ಜನು ಎಲ್ಲರ ದೈವವಾಗಿದ್ದು, ಜಾತಿ-ಭೇದಗಳ ಗಡಿಯಲ್ಲಿ ಸೀಮಿತವಾಗದ ಆಧ್ಯಾತ್ಮಿಕ ಶಕ್ತಿಯ ಸಂಕೇತವಾಗಿದ್ದಾರೆ ಎಂದು ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್‌ ಉಳ್ಳಾಲ ಪ್ರಖಂಡದ ವತಿಯಿಂದ ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕದ್ರಿಯಿಂದ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ಹಮ್ಮಿಕೊಳ್ಳಲಾದ 6ನೇ ವರ್ಷದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಸಮಾರೋಪ ಸಮಾರಂಭದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜಾತಿ ಎಂಬುದು ಯಾರನ್ನೂ ಕಡಿಮೆ ಮಾಡುವುದಲ್ಲ, ಎಲ್ಲರೂ ಶ್ರೇಷ್ಠರು, 16 ವರ್ಗಗಳ ಜನರೂ ಸಮಾನರು.ಜಾತಿಯ ಗಡಿಯೊಳಗೆ ಸಮಾಜವನ್ನು ಕಟ್ಟಿಹಾಕಬಾರದು, ಎಲ್ಲರಿಗೂ ಸಮಾನ ಅವಕಾಶ ಮತ್ತು ಗೌರವ ದೊರಕಬೇಕು. ದೈವತ್ವವನ್ನು ಪಡೆಯುವುದು ಸುಲಭವಲ್ಲ, ಅದು ಜೀವನದಲ್ಲಿ ಮಾಡಿದ ಸಾಧನೆ,…

Read More

ಉಳ್ಳಾಲ:  ಕೃಷಿಕ ಸಮುದಾಯದ ಅಭಿವೃದ್ಧಿ, ಪ್ರವಾಸಿ ತಾಣ ರೂಪಿಸುವ ಉದ್ದೇಶ ಮತ್ತು ರೈತರ ಸಾಧನೆಯನ್ನು ಗುರುತಿಸುವ ದೃಷ್ಟಿಯಿಂದ ಮುಡಿಪು ಉತ್ಸವ ಆಯೋಜಿಸಲಾಗಿದ್ದು,  ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಕೃಷಿಕರಿಗೆ ಗೌರವಾಭಿವಂದನೆ, ಕೃಷಿ ಸಾಧನಾ ಪ್ರಶಸ್ತಿ ವಿತರಣೆ, ಹಾಗೂ ಸಾಧಕರನ್ನು ಸನ್ಮಾನಿಸುವ ಮೂಲಕ ಸಮಾಜದಲ್ಲಿ ಉತ್ತಮ ಅಭಿಪ್ರಾಯ ಮೂಡಿಸುವ ಕಾರ್ಯ ನಡೆಯಲಿದೆ ಎಂದು ಮುಡಿಪು ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ      ಲ| ದೇವದಾಸ್‌ ಭಂಡಾರಿ  ಅಭಿಪ್ರಾಯಪಟ್ಟರು.  ಮುಡಿಪು ಉತ್ಸವ ಸಮಿತಿ, ಯು.ಟಿ.ಫರೀದ್‌ ಚಾರಿಟೇಬಲ್‌ ಫೌಂಡೇಶನ್‌ ಟ್ರಸ್ಟ್‌ ಹಾಗೂ ಕೃಷಿಕ ಸಮಾಜ ಉಳ್ಳಾಲ ತಾಲೂಕು  ಇದರ ಜಂಟಿ ಆಶ್ರಯದಲ್ಲಿ ಎ.24,25,26 ಮೂರು ದಿನಗಳ  ಕಾಲ ಮುಡಿಪು ಶ್ರೀ ಕೃಷ್ಣ ಧ್ಯಾನ ಮಂದಿರದಲ್ಲಿ ಜರಗಲಿರುವ  ಮುಡಿಪು ಉತ್ಸವ 2026 ರ ಇದರ ಮುಡಿಪು ಆಡಿಟೋರಿಯಂನಲ್ಲಿ ಜರಗಿದ  ಎರಡನೇ ಸುತ್ತಿನ ಸಿದ್ಧತಾ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಕೃಷಿಕ ಸಮಾಜ ಉಳ್ಳಾಲ ಇವರ ಸಹಯೋಗದಲ್ಲಿ ಮೂರು ದಿನಗಳ ವಿಶೇಷ ಕಾರ್ಯಕ್ರಮದಲ್ಲಿ ಮುಡಿಪು ಧ್ಯಾನ ಮಂದಿರವನ್ನು ಸ್ಥಾಪಿಸಿದ ಹಿರಿಯ ಮದನ್‌ ಮೋಹನ್‌…

Read More

ಉಡುಪಿ, ಏ. 11 ; ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ. ಕುಂದಾಪುರ ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ಕಾರ್ತಿಕ್ ನಿಲಯದ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಪೊಲೀಸ್ ಅಧೀಕ್ಷಕರು ಎಪ್ರಿಲ್ 9ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.ಈತನ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ರೌಡಿಶೀಟ್‌ ತೆರೆಯಲಾಗಿದೆ. ಈತನನ್ನು ಬೆಂಗಳೂರು ಕಮೀಷನರೇಟ್ ನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

Read More

ಸಾಮಾಜಿಕ ಮುಖಂಡ, ರಾಜಕೀಯ ನಾಯಕ,ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಸ್ಥಾಪಕಾಧ್ಯಕ್ಷರಾದ ಉಳಿದೊಟ್ಟು ರವೀಂದ್ರ ಶೆಟ್ಟಿಯವರ ತಂದೆ ಉಳಿದೊಟ್ಟು ಕೊರಗಪ್ಪ ಶೆಟ್ಟಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ಸಂಸ್ಕಾರ ಇಂದು ಮಧ್ಯಾಹ್ನ 12ಗಂಟೆಗೆ ಸ್ವಗೃಹವಾದ ಉಳಿದೊಟ್ಟುವಿನಲ್ಲಿ ನೆರವೇರಲಿದೆ. ಮೃತರು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಆಗಲಿದ್ದಾರೆ.

Read More

ಉಳ್ಳಾಲ:ಎ-11 ಭರತನಾಟ್ಯವನ್ನು ಉಳಿಸಿ ಬೆಳೆಸಲು ಅಪಾರ ಸೇವೆ ಸಲ್ಲಿಸಿದ್ದ ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು ಉಳ್ಳಾಲ ಬಂಡಿಕೊಟ್ಯ ನಿವಾಸಿ ವಿದ್ವಾನ್ ಶ್ರಾವಣ್ ಉಳ್ಳಾಲ ಅವರು ಶುಕ್ರವಾರದಂದು ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಶ್ರಾವಣ್ ಅವರು ಕಳೆದ ಮೂರು ತಿಂಗಳುಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಅವರ ಆರೋಗ್ಯದಲ್ಲಿ ತೀವ್ರ ಏರು ಪೇರು ಕಂಡು ಬಂದ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಶಿಕ್ಷಣವನ್ನು ಕಲಿಸಿದ್ದರು. ನೃತ್ಯದ ಜೊತೆಗೆ ಶಾರೀರಿಕ, ಬೌದ್ಧಿಕ, ಮಾನಸಿಕ, ನೈತಿಕ ಹಾಗೂ ಶೈಕ್ಷಣಿಕ ಮೌಲ್ಯಗಳ ಅರಿವು ಮೂಡಿಸುವ ಕಾರ್ಯದಲ್ಲಿ ಗುರುಕುಲವನ್ನು ಮುಂಚೂಣಿಗೆ ತಂದಿದ್ದರು.ಪಂದನಲ್ಲೂರು…

Read More

ಉಳ್ಳಾಲ: ಎ-11; ಮದುವೆಯಾಗಿ ಮೂವರು ಮಕ್ಕಳಾದರೂ ಸಹ ಆ ಫೈನಾನ್ಶಿಯರ್ಗೆ ಪಿಯು ಶಿಕ್ಷಣ ಸಂಪೂರ್ಣಗೊಳಿಸದ ಕೊರಗು ಕಾಡುತ್ತಿತ್ತು. ಮಗ ಪಿಯುಸಿ ಪರೀಕ್ಷೆ ಬರೆಯುವಾಗ ತಾನೂ ಪಿಯು ಶಿಕ್ಷಣ ಸಂಪೂರ್ಣಗೊಳಿಸಿದರೆ ಮಗನಿಗೂ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬರಬಹುದೆಂದು ನಿರ್ಧರಿಸಿದ ಅವರು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ ಕಲಾ ವಿಭಾಗದ ಆರು ವಿಷಯಗಳಲ್ಲಿ 324 ಅಂಕಗಳನ್ನ ಪಡೆದು ದ್ವಿತೀಯ ದರ್ಜೆ ಶ್ರೇಣಿಯಲ್ಲಿ ತೇರ್ಗಡೆಗೊಂಡು, ಮಗನ ಪಿಯುಸಿ ಫಲಿತಾಂಶದೊಂದಿಗೆ ತಾನೂ ಸಂಭ್ರಮಿಸಿದ್ದಾರೆ. ಉಳ್ಳಾಲ ತಾಲೂಕಿನ ಕೊಲ್ಯ ಕಣೀರುತೋಟದ ನಿವಾಸಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿರುವ ಮೋಹನ್ ರಾಜ್ ಅಮೀನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ಮಗನೊಂದಿಗೆ ಮೊದಲ ಪ್ರಯತ್ನದಲ್ಲೇ ತೇರ್ಗಡೆಗೊಂಡು ಸಂಭ್ರಮಿಸಿದ್ದಾರೆ.ಮೋಹನ್ ರಾಜ್ ಅವರು ಕೊಲ್ಯದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿ,1984 ರಲ್ಲಿ ಉಳ್ಳಾಲದ ಮದನಿ ಕಾಲೇಜಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆದಿದ್ದರು.ದ್ವಿತೀಯ ಪಿಯುಸಿ ಶಿಕ್ಷಣಗಳಿಸಲು ಅಂದಿನ ದಿನಗಳಲ್ಲಿ ಮೋಹನ್ ರಾಜ್ ಅವರಿಗೆ ಪೂರಕ ವಾತಾವರಣ ಲಭಿಸಿರಲಿಲ್ಲ.…

Read More

ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮ ಪಂಚಾಯಿತಿಯಲ್ಲಿ ಸೋಲಾರ್ ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತನಿಖೆಗೆ ಆದೇಶ ನೀಡಲಾಗಿದೆ. ಹೌದು, ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮ ಪಂಚಾಯಿತಿಯಲ್ಲಿ ಸೋಲಾರ್ ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಡೆನಿಲ್ ಫಾಸ್ಕಲ್ ಪಿಂಟೋ ಅವರು ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಭಾ.ಆ.ಸೇ., ಅವರು ತನಿಖೆಗೆ ಆದೇಶ ನೀಡಿದ್ದಾರೆ. ಏಪ್ರಿಲ್ 9ರಂದು ಮಧ್ಯಾಹ್ನ 11 ಗಂಟೆಗೆ ಉಳ್ಳಾಲ ತಾಲೂಕು ಪಂಚಾಯತ್ ಕಚೇರಿಯಲ್ಲಿ ದಾಖಲೆಗಳ ಸಮೇತ ತನಿಖೆ ನಡೆಯಿತು. ತನಿಖಾ ವೇಳೆ ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. “ಉಳ್ಳಾಲ ತಾಲೂಕಿನಾದ್ಯಂತ ಬೀದಿ ದೀಪ ಅಳವಡಿಕೆಯಲ್ಲಿ ಹಗರಣ ನಡೆಯುತ್ತಿದೆ. ಇದರ ಹಿಂದೆ ರಾಜಕೀಯ ಪ್ರಭಾವವೂ…

Read More

ಉಳ್ಳಾಲ; ಮಧ್ಯಪ್ರಾಚ್ಯ ಯುದ್ಧಗಳಿಂದ ಗ್ಯಾಸ್ ಕೊರತೆ ಕಾಡುತ್ತಿದ್ದು, ಎಲ್ಲೆಡೆ ಗೊಂದಲಗಳು ಸೃಷ್ಠಿಯಾಗಿವೆ. ಆದರೆ ಉಳ್ಳಾಲ ವಲಯದಲ್ಲಿ ಗ್ಯಾಸ್ ವಿತರಣೆಯ ಬಗ್ಗೆ ಕೇಳಿಬರುತ್ತಿರುವ ಆರೋಪಗಳು ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿವೆ. ಕಮರ್ಷಿಯಲ್ ಬಳಕೆಗೆ ಅಗತ್ಯವಿರುವ ಗ್ಯಾಸ್ ಸಿಲಿಂಡರ್‌ಗಳನ್ನು ಕಾನೂನುಬದ್ಧವಾಗಿ ಪಡೆಯಲು ಅರ್ಹರಾದವರಿಗೆ ಸಿಗದೇ, ಲೈಸನ್ಸ್ ಇಲ್ಲದವರಿಗೆ ಸುಲಭವಾಗಿ ದೊರೆಯುತ್ತಿದೆ ಎಂಬುದು ಸಾರ್ವಜನಿಕರ ಆರೋಪ. ಇದು ಕೇವಲ ನಿಯಮ ಉಲ್ಲಂಘನೆ ಮಾತ್ರವಲ್ಲ, ಅಕ್ರಮ ದಂಧೆಗೆ ದಾರಿ ಮಾಡಿಕೊಡುವ ವ್ಯವಸ್ಥೆಯ ವೈಫಲ್ಯವೂ ಆಗಿದೆ. ಮೂರುವರೆ ಸಾವಿರದಿಂದ ನಾಲ್ಕು ಸಾವಿರ ರೂ.ವರೆಗೆ ಕಪ್ಪುಬಜಾರಿನಲ್ಲಿ ಗ್ಯಾಸ್ ಮಾರಾಟವಾಗುತ್ತಿದೆ ಎಂಬ ಮಾಹಿತಿ ಮತ್ತಷ್ಟು ಆತಂಕಕಾರಿಯಾಗಿದೆ. ತಾಲೂಕು ಆಡಳಿತದ ಆಹಾರ ಇಲಾಖೆ ಇಂತಹ ಅಕ್ರಮಗಳನ್ನು ಗಮನಿಸುತ್ತಿದೆಯೇ? ಅಥವಾ ಕಣ್ಣುಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆಗಳು ಸಹಜವಾಗಿ ಎದುರಾಗುತ್ತಿವೆ. ಅಧಿಕಾರಿಗಳು ತಕ್ಷಣವೇ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಲೈಸನ್ಸ್ ಇಲ್ಲದೆ ಗ್ಯಾಸ್ ವಿತರಣೆ ಮಾಡುವವರನ್ನು ನಿಗ್ರಹಿಸಿ, ಅರ್ಹ ಗ್ರಾಹಕರಿಗೆ ನ್ಯಾಯ ಒದಗಿಸುವುದು ಆಡಳಿತದ ಜವಾಬ್ದಾರಿ. ಇಲ್ಲವಾದರೆ, ಜನರ ನಂಬಿಕೆ ಸಂಪೂರ್ಣ ಕುಸಿಯುವ…

Read More

ಉಳ್ಳಾಲ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ ಎಲ್ಲಾ 90 ವಿದ್ಯಾರ್ಥಿಗಳು ಯಶಸ್ವಿಯಾಗಿ ತೇರ್ಗಡೆಯಾಗಿ 100% ಫಲಿತಾಂಶ ಸಾಧಿಸಿದ್ದಾರೆ. ವಿದ್ಯಾರ್ಥಿನಿ ಹಂಡಾಫಿಬಿಯಾAಗ್ ಸುಚೆನ್ ಅವರು 580 (97%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸಾನಿಯಾ ತಾಜ್ ಹಾಗೂ ಆಸಿಯಾ ಶಮ್ನಾ ಅವರು ತಲಾ 555 (93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿ. ಫಾತಿಮಾ ಅಫ್ರ ಅವರು 549 (92%) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 66 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿದಾರ್ಥಿನಿ ಫಾತಿಮಾ ನಿಧಾ ಅವರು 542 (90%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ . ಖದೀಜಾ ಅನ್ಹಾರ್ ಅವರು 541 (90%) ಅಂಕಗಳನ್ನು ಪಡೆದು…

Read More

ಮಂಗಳೂರು: ಕರಾವಳಿಯಲ್ಲಿ ಹೆಸರಿನ ಮೂಲಕವೇ ಸಕತ್ತ್ ಸೌಂಡ್ ಮಾಡ್ತಾಯಿರುವ ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ ಮುಟ್ಟುವ ಕೆಲಸ ಮಾಡಲಿ. ಇಡೀ ಚಿತ್ರತಂಡಕ್ಕೆ ಶುಭವಾಗಲಿ” ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಸಿನಿಮಾದ ಟ್ರೈಲರ್ ನೋಡಿದೆ. ಮಲಯಾಳಂ ಚಿತ್ರದಂತೆ ಇದೆ. ಟೈಟಲ್ ಕೂಡ ಸಖತ್ತಾಗಿದೆ ಎಲ್ಲರಿಗೂ ಶುಭವಾಗಲಿ” ಎಂದರು. ಲಾಂಚುಲಾಲ್ ಕೆ.ಎಸ್. ಮಾತಾಡಿ, “90 ಎಂ ಎಲ್ ಸಿನಿಮಾ ಟೈಟಲ್ ಡಿಫರೆಂಟ್ ಆಗಿದೆ. ತುಳುವರು ಸಿನಿಮಾ ನೋಡಿದರೆ ಖಂಡಿತ ಸಿನಿಮಾ ಗೆಲ್ಲಲಿದೆ. ಸಿನಿಮಾಕ್ಕೆ…

Read More