ನಾಟೆಕಲ್ : ಉತ್ತಮ ಗುಣಮಟ್ಟದ ಕಟ್ಟಡ ಸಾಮಗ್ರಿಗಳನ್ನು ಹೋಲ್ಸೇಲ್ ಮತ್ತು ರೀಟೇಲ್ ದರದಲ್ಲಿ ಒದಗಿಸುತ್ತಿರುವ ನಾಟೆಕಲ್ ಜಂಕ್ಷನ್ನಿನಲ್ಲಿರುವ ನ್ಯೂ ಕರ್ನಾಟಕ ಸ್ಟೀಲ್ಸ್ ಮತ್ತು ಸಿಮೆಂಟ್ಸ್ ದೇರಳಕಟ್ಟೆ ಸುತ್ತಮುತ್ತಲಿನ ಪ್ರದೇಶಗಳ ವಿಶ್ವಾಸಾರ್ಹ ಕೇಂದ್ರವಾಗಿದೆ. ಎಲ್ಲಾ ರೀತಿಯ ಕಟ್ಟಡ ಹಾಗೂ ಕೈಗಾರಿಕಾ ಅಗತ್ಯಗಳಿಗೆ ಅಗತ್ಯವಾದ ಸಿಆರ್ ರೌಂಡ್ ಪೈಪ್ಸ್, ಜಿಪಿ ಪೈಪ್ಸ್, ಹೆಚ್ಆರ್ ಪೈಪ್ಸ್, ಜಿಎಲ್ ರೌಂಡ್ ಪೈಪ್ಸ್, ಸೀಮ್ಲೆಸ್ ಪೈಪ್ಸ್, ಬಾಯ್ಲರ್ ಪೈಪ್ಸ್, ಆಂಗಲ್ಗಳು, ಬೀಮ್ಗಳು, ಸ್ಟೇನ್ಲೆಸ್ ಸ್ಟೀಲ್, ಚಾನಲ್ಗಳು, ಚೌಕ ರಾಡ್ಗಳು ಮತ್ತು ಬ್ರೈಟ್ ಬಾರ್ಸ್ ಸೇರಿದಂತೆ ಎಲ್ಲಾ ಉತ್ಪನ್ನಗಳು ಇಲ್ಲಿ ಲಭ್ಯವಿದೆ. ನೀವು ಕಾಂಟ್ರಾಕ್ಟರ್ ಆಗಿರಲಿ, ಬಿಲ್ಡರ್ ಆಗಿರಲಿ ಅಥವಾ ವೈಯಕ್ತಿಕ ಗ್ರಾಹಕರಾಗಿರಲಿ, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಸ್ಪರ್ಧಾತ್ಮಕ ಬೆಲೆ ನಮ್ಮಲ್ಲಿ ಸದಾ ಖಚಿತ. ಸಂಪರ್ಕಿಸಲು: 9108929355, 9108348025 ಅಥವಾ newkarnatakasteelandcements@gmail.com. ವಿಳಾಸ: ನಾಟೆಕಲ್ ಜಂಕ್ಷನ್ ಹತ್ತಿರ, ದೇರಳಕಟ್ಟೆ– 575018. ನ್ಯೂ ಕರ್ನಾಟಕ ಸ್ಟೀಲ್ಸ್ & ಸಿಮೆಂಟ್ಸ್ – ಬಲವಾದ ನಾಳೆಗೆ ಬಲವಾದ ಅಡಿಪಾಯ.
Author: UllalaVani
ಕೃಪೆ : ದ ಫೈಲ್ ಬೆಂಗಳೂರು : ನಿರಂತರವಾಗಿ ಹಣಕಾಸಿನ ಕ್ರೋಢೀಕೃತ ನಷ್ಟದಲ್ಲಿ ಮುಳುಗುತ್ತಲೇ ಇರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದೀಗ ನೌಕರರಲ್ಲಿ ಹಣಕಾಸಿನ ಅಭದ್ರತೆಯನ್ನು ಸೃಷ್ಟಿಸಿದೆ. ಶಕ್ತಿ ಯೋಜನೆಯಿಂದಲೂ ನಿಶ್ಯಕ್ತಿಯಾಗಿರುವ ಬಿಎಂಟಿಸಿ ಇದೀಗ ತೀವ್ರ ಪ್ರಮಾಣದಲ್ಲಿ ನಗದು ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ವಿಶೇಷ ಅನುದಾನವನ್ನು ಒದಗಿಸಬೇಕು ಎಂದು ಬಿಎಂಟಿಸಿಯು ಸರ್ಕಾರದ ಮುಂದೆ ಅಂಗಲಾಚಲು ಪ್ರಸ್ತಾವವೊಂದನ್ನು ಸಿದ್ಧಪಡಿಸಿದೆ. ಶಕ್ತಿ ಯೋಜನೆಯಿಂದ ಬಿಎಂಟಿಸಿಗೆ ಹಣಕಾಸಿನ ನಷ್ಟವುಂಟಾಗುತ್ತಿದೆ 2024ರ ಜೂನ್ 13ರಂದು ನಡೆದಿದ್ದ ಸಭೆಯಲ್ಲಿಯೇ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರೇ ಅಂಕಿ ಅಂಶಗಳನ್ನು ಮುಂದೊಡ್ಡಿದ್ದರು. ಈ ಸಭೆ ನಡೆದ ಒಂದು ವರ್ಷದ ನಂತರ ಇದೀಗ ಬಿಎಂಟಿಸಿಯ ಆರ್ಥಿಕ ಪರಿಸ್ಥಿತಿಯು ಮತ್ತಷ್ಟು ಅಧೋಗತಿಗಿಳಿದಿದೆ. ಬಿಎಂಟಿಸಿಯು ಪ್ರತಿನಿತ್ಯ 50 ಲಕ್ಷಕ್ಕೂ ಹೆಚ್ಚಿನ ಸಂಖ್ಯೆ ಪ್ರಯಾಣಿಕರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆಯಾದರೂ ಈ ಸಂಸ್ಥೆಯಲ್ಲಿ ದುಡಿಯುತ್ತಿರುವ 29 ಸಾವಿರ ಸಂಖ್ಯೆಯಲ್ಲಿರುವ ನೌಕರರಿಗೆ ಹಿಂದಿನ ಬಾಕಿಯನ್ನು ಪಾವತಿಸಲು ಏದುಸಿರು ಬಿಡುತ್ತಿದೆ. ಬಿಎಂಟಿಸಿ ನೌಕರರಿಗೆ ಅತ್ಯಗತ್ಯವಾಗಿ ಪಾವತಿಸಬೇಕಿರುವ ಮೊತ್ತವೇ ಅಂದಾಜು 2,000…
ಮಲ್ಪೆ : ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಕೊಲೆ ನಡೆದ ಕೊಡವೂರು ಸಾಲ್ಮರದಲ್ಲಿರುವ ಮನೆಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದರು. ಬೆಳಗ್ಗೆ 10ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ.ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದರು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಬಹಿರಂಗವಾಗಬೇಕಾಗಿದೆ. ಚಾಕು…
ಮಲ್ಪೆ : ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು (ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿಟಿ ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು : ಖಾಸಗಿ ಬಸ್ಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಓಡಾಡುವ ಬಸ್ಗಳಲ್ಲಿ ಬಾಗಿಲು ಕಡ್ಡಾಯವಾಗಿ ಇರುವುದನ್ನು ಖಾತರಿಪಡಿಸಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ ಮಲ್ಲಾಡ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದರು. ಮುಡಿಪುವಿನಲ್ಲಿ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ವೀಕ್ಷಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗಿಲುಗಳಿಲ್ಲದೇ ರಸ್ತೆಗೆ ಇಳಿಯುವ ಬಸ್ಗಳಿಗೆ ಎಫ್ಸಿ (ಫಿಟ್ನೆಸ್ ಸರ್ಟಿಫಿಕೆಟ್) ನೀಡಬೇಡಿ ಎಂದು ಹೇಳಿದರು. ‘ಇ ಬಸ್ಗಳಿಗೆ ಬೇಡಿಕೆ ಸಲ್ಲಿಸಿದ್ದು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲಿರುವ ಬಸ್ಗಳ ಖರೀದಿಗಾಗಿ ಟೆಂಡರ್ ಕರೆಯಬೇಕಾಗಿದೆ. ಇದಕ್ಕೆ ಕನಿಷ್ಟ ಆರು ತಿಂಗಳ ಸಮಯ ಬೇಕಾದೀತು. ಬಸ್ಗಳನ್ನು ಒದಗಿಸಿದರೆ ಮಂಗಳೂರಿಗೂ ಹಂಚಲಾಗುವುದು’ ಎಂದು ಅವರು ತಿಳಿಸಿದರು. ‘ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ನವರು ಹೆಚ್ಚುವರಿ ದರ ಪಡೆಯುವುದನ್ನು ತಡೆಯಲು 2300 ಕೆಎಸ್ಆರ್ಟಿಸಿ ಬಸ್ಗಳನ್ನು ರಸ್ತೆ ಇಳಿಸಲಾಗುವುದು. ಗಣೇಶ ಹಬ್ಬದ ಸಂದರ್ಭದಲ್ಲಿ 1200 ಬಸ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದರು. 2022 ರ ಸೆ.7 ರಂದು ಮಂಗಳೂರು ಕಾಲೇಜಿಗೆ…
ಉಳ್ಳಾಲ : ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವೇಳೆ ಜಾತಿ, ಉಪಜಾತಿ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕರ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಶ್ನಾವಳಿಯ 8ನೇ ಕಾಲಂನಲ್ಲಿರುವ ‘ರಿಲೀಜನ್/ಧರ್ಮ’ ಎಂದಿರುವಲ್ಲಿ ಎಲ್ಲ ಮುಸ್ಲಿಮರು ‘ಇಸ್ಲಾಮ್’ ಎಂದು ಬರೆಸಬೇಕು. 9ನೇ ಕಾಲಂನಲ್ಲಿರುವ ‘ಜಾತಿ’ ಎಂದಿರುವಲ್ಲಿ ಮುಸ್ಲಿಮ್’ ಎಂದೂ, 10ನೇ ಕಾಲಂನಲ್ಲಿ ಉಪಜಾತಿ/ ಸಬ್ ಕಾಸ್ಟ್ ಎಂದಿರುವಲ್ಲಿ ಬ್ಯಾರಿ ಭಾಷೆಯವರು ‘ಬ್ಯಾರಿ ಮುಸ್ಲಿಮ್’ ಎಂದು ದಾಖಲಿಸಬೇಕು. ಪ್ರಶ್ನಾವಳಿಯ 15ನೇ ಕಾಲಂನಲ್ಲಿ ‘ಮಾತೃಭಾಷೆ/ಮದರ್ ಟಾಂಗ್’ ಎಂದಿರುವಲ್ಲಿ ಬ್ಯಾರಿ ಭಾಷೆಯವರು ‘ಬ್ಯಾರಿ’ ಎಂದೂ ಉರ್ದು, ನವಾಯತ್ ಇತ್ಯಾದಿ ಭಾಷೆಯವರು ತಮ್ಮ ಮಾತೃಭಾಷೆಯನ್ನು ಹೆಸರಿಸಬಹುದು ಎಂದು ಸೂಚಿಸಿದ್ದಾರೆ. ಸಮೀಕ್ಷೆಗೆ ಬರುವ ಸರಕಾರಿ ನೌಕರರನ್ನು ಆದರದಿಂದ ಸ್ವಾಗತಿಸಿ, ಸಂಪೂರ್ಣ ಸಹಕಾರ ನೀಡಬೇಕು. ತಮ್ಮ ಪಡಿತರ ಚೀಟಿ, ಕುಟುಂಬದ ಆರು ವರ್ಷಕ್ಕಿಂತ ಹೆಚ್ಚು…
ಉಳ್ಳಾಲ : ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಉಳ್ಳಾಲ ಸಮುದ್ರ ತೀರದ ಅಳಿವೆಬಾಗಿಲು ಬ್ರೇಕ್ ವಾಟರ್ ಕಲ್ಲುಗಳ ಮಧ್ಯೆ ಸಿಲುಕಿರುವುದನ್ನು ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರುಗಳಾದ ಯೋಗೀಶ್ ಅಮೀನ್, ಪ್ರಸಾದ್ ಸುವರ್ಣ, ಚಂದ್ರಹಾಸ್ ಸುವರ್ಣ ಎಂಬವರು ತೀರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೆಗಲ ಮೇಲೆ ಇಟ್ಟು ಆಂಬುಲೆನ್ಸ್ ವಾಹನಕ್ಕೆ ತಂದಿರಿಸಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ಅಳಿವೆಬಾಗಿಲು ಕಲ್ಲುಗಳ ಮಧ್ಯೆ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡಕ್ಕೆ ಕೊಳೆತ ಮೃತದೇಹ ಕಲ್ಲುಗಳ ಮಧ್ಯೆ ಸಿಲುಕಿರುವುದು ಗೋಚರಿಸಿದೆ. ತಕ್ಷಣ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಉಳ್ಳಾಲ ಪೋಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರಿಗೆ ತಂಡ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸುಮಾರು 40-45ರ ಹರೆಯದ…
ಮಂಗಳೂರು: ಇಂದಿನ ಆಧುನಿಕ ಯುಗದಲ್ಲಿ ಸೊಸೈಟಿಯ ಕಾರ್ಯಭಾರವನ್ನು ಅತಿ ಶೀಘ್ರದಲ್ಲಿ ಪ್ರತಿಯೊಬ್ಬ ಸದಸ್ಯರು ತಿಳಿದುಕೊಳ್ಳಲು ವೆಬ್ಸೈಟ್ ಸಹಕಾರಿಯಾಗಲಿದೆ ಎಂದು ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ಎಂ. ಕೆ. ಮಂಜನಾಡಿ ಹೇಳಿದರು.ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಶಿಕ್ಷಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ವೆಬ್ಸೈಟ್ ಅನ್ನು ಅನಾವರಣಗೊಳಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಉಪಾಧ್ಯಕ್ಷರಾದ ಉದಯಕುಮಾರ್, ಕಾರ್ಯನಿರ್ವಹಣಾಧಿಕಾರಿ ಶರ್ಮಿಳ ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಮತ್ತು ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಏಕೈಕ ಸ್ಕೌಟ್ ಅಧ್ಯಾಪಕರೆಂಬ ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದು ಪುರಸ್ಕೃತರಾದ ಅಂಬ್ಲಮೊಗರು ಶಾಲಾ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ ಎಲಿಯಾನ ಇವರನ್ನು ಗೌರವಾನ್ವಿತ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಇವರು ಬೆಂಗಳೂರು ರಾಜಭವನದಲ್ಲಿ ಗೌರವ ಸನ್ಮಾನ ಮಾಡಿದರು.
ಮಂಗಳೂರು : ಕೈರಂಗಳ ಪುಣ್ಯಕೋಟಿನಗರ ಶಾರದಾಗಣಪತಿ ವಿದ್ಯಾಕೇಂದ್ರ ಶಾಲೆಯ ವಾಲಿಬಾಲ್ ತಂಡವು ನಗರದ ಸಂತ ಆಲೋಶಿಯಸ್ ಕಾಲೇಜಿನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಅಂತರಕಾಲೇಜು ವಾಲಿಬಾಲ್ ಟೂರ್ನಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಶಾಲೆಯ ಹೆಮ್ಮೆಯ ವಾಲಿಬಾಲ್ ತರಬೇತುದಾರರಾದ ನಿಖಿಲ್ ಗಟ್ಟಿ ಅವರ ಮಾರ್ಗದರ್ಶನದಲ್ಲಿ ತಂಡವು ತರಬೇತು ಪಡೆದು ಅದ್ಭುತ ಕೌಶಲ್ಯವನ್ನು ಪ್ರದರ್ಶಿಸಿ ಚಾಂಪಿಯನ್ ಪಡೆದುಕೊಂಡಿದೆ. ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

