ಮಂಗಳೂರು : ಯಕ್ಷಗಾನ ವೇಷ ಧರಿಸಿ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸುವಂತೆ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠವು ದ.ಕ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಮನವಿ ಮಾಡಿದೆ. ವೇದಿಕೆಗಳಲ್ಲಿ ಮಾತ್ರ ಈ ಧಾರ್ಮಿಕ ಶ್ರೇಷ್ಠ ಕಲೆಯ ಪ್ರದರ್ಶನವಾಗಬೇಕು. ಆದರೆ ಅಷ್ಠಮಿ, ಗಣೇಶೋತ್ಸವ, ನವರಾತ್ರಿ ಮೊದಲಾದ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿಕೊಂಡು ಭಿಕ್ಷೆ ಎತ್ತುವುದು ಕಂಡು ಬರುತ್ತಿದೆ. ಯಕ್ಷಗಾನಕ್ಕೆ ತಾನೇ ಆದ ಗೌರವವಿದೆ. ಇದು ಪೂಜನೀಯವೂ ಆಗಿದ್ದು, ದೇಶ ವಿದೇಶಗಳಲ್ಲಿ ತನ್ನ ಕಂಪನ್ನು ಪಸರಿಸಿದೆ. ಇ೦ತಹ ಯಕ್ಷಗಾನವನ್ನು ಯಾರೋ ಇದರ ಗಂಧ ಗಾಳಿ ಗೊತ್ತಿಲ್ಲದವರು ಮುಖಕ್ಕೆ ಹಬ್ಬದಲ್ಲಿ ದಿನಗಳಲ್ಲಿ ಬಣ್ಣ ಹಚ್ಚಿಕೊಂಡು ಬಾಡಿಗೆಗೆ ಸಿಗುವ ಯಕ್ಷಗಾನದ ವೇಷಭೂಷಣ ತೊಟ್ಟುಕೊಂಡು ಅಸಹ್ಯಕರವಾಗಿ ಕುಚೇಷ್ಟೆ ಮಾಡುತ್ತಾ ಭಿಕ್ಷಾಟನೆ ಮಾಡುವುದನ್ನ ಕಾಣುತ್ತಿದ್ದೇವೆ. ಇದನ್ನು ನಿಷೇಧಿಸುವಂತೆ ಮನವಿ ಮಾಡಲಾಗಿದೆ ಎಂದು ಪ್ರಕೋಷ್ಠದ ಸಂಚಾಲಕ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: UllalaVani
ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು ಸಿಗಂದೂರಿಗೆ ಹೋಗುವ ಮಾರ್ಗಗಳನ್ನು ಒಳಗೊಂಡ ವಿಶೇಷ ಪ್ಯಾಕೇಜ್ ಪ್ರವಾಸಗಳನ್ನು ನಡೆಸಲಿದೆ. ಹಿಂದಿನ ವರ್ಷಗಳಿಗಿಂತ ಭಿನ್ನವಾಗಿ, ಈ ಬಾರಿ ಪ್ರವಾಸವನ್ನು ಕೊಡ್ಯಡ್ಕ ಮತ್ತು ಹೊಸಬಾಗ್ ಸಿಗಂದೂರು ದೇವಾಲಯಗಳಂತಹ ಸ್ಥಳೀಯ ದೇವಾಲಯಗಳನ್ನು ಸೇರಿಸಲಾಗಿದೆ. ಮಂಗಳೂರು ದಸರಾ ನವದುರ್ಗೆಯ ದರ್ಶನ ಪ್ಯಾಕೇಜ್ ಮಂಗಳೂರು ಬಸ್ ನಿಲ್ದಾಣ – ಮರೋಳಿ ಸೂರ್ಯನಾರಾಯಣ ದೇವಸ್ಥಾನ – ಬೋಳಾರ್ ಹಳೇ ಕೋಟೆ ದೇವಸ್ಥಾನ – ಶ್ರೀ ಮಂಗಳಾದೇವಿ ದೇವಸ್ಥಾನ – ಪೊಳಲಿ ರಾಜರಾಜೇಶ್ವರಿ ದೇವಸ್ಥಾನ – ಹೊಸನಾಡು…
ಮಂಗಳೂರು : 2024–25ನೇ ಹಣಕಾಸು ವರ್ಷದಲ್ಲಿ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಹೇಳೀದರು. ಅವರು 2025 ಸಪ್ಟಂಬರ್ 21ರಂದು ನಡೆದ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಎಂ.ಸಿ.ಸಿ. ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 21, 2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಗೆ ಮಂಗಳೂರಿನ ಕೊಡಿಯಾಲ್ಬೈಲ್ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್ನಲ್ಲಿ ನಡೆಸಲಾಯಿತು. ತಮ್ಮ ಭಾಷಣದಲ್ಲಿ, ಅಧ್ಯಕ್ಷರು ಬ್ಯಾಂಕಿನ ದಾಖಲೆಯ ಕಾರ್ಯಕ್ಷಮತೆಯನ್ನು ಸದಸ್ಯರ ಗಮನಕ್ಕೆ ತಂದರು. ₹9.51 ಕೋಟಿ ನಿವ್ವಳ ಲಾಭ, ₹705.40 ಕೋಟಿ ಠೇವಣಿಗಳು (10% ಹೆಚ್ಚಳ), ₹535.49 ಕೋಟಿ ಮುಂಗಡಗಳು (25.21% ಬೆಳವಣಿಗೆ), ₹830.30 ಕೋಟಿ ದುಡಿಯುವ ಬಂಡವಾಳ…
ಉಳ್ಳಾಲ: ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವದ ಆದಿಸ್ಥಳ ಕುತ್ತಾರು ಆಶ್ರಯದಲ್ಲಿ ಶ್ರೀ ಜೈ ಹನುಮಾನ್ ಕ್ರೀಡಾಮಂಡಳಿ (ರಿ) ಬಟ್ಟೆದಡಿ ಕುತ್ತಾರ್ ಮತ್ತು ಜೈ ಹನುಮಾನ್ ಮಹಿಳಾ ಸಮಿತಿ ಬಟ್ಟೆದಡಿ ಕುತ್ತಾರು ಇವರ ಸಹಕಾರದೊಂದಿಗೆ ದೇರಳಕಟ್ಟೆ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ, ಉಚಿತ ದಂತ ಚಿಕಿತ್ಸಾ ಶಿಬಿರ ದೆಕ್ಕಾಡು ಶ್ರೀ ಕೊರಗತನಿಯ ದೈವದ ಆದಿಸ್ಥಳದಲ್ಲಿ ನಡೆಯಿತು.ಇದೇ ವೇಳೆ ಭಕ್ತಾಧಿಗಳಿಗೆ ಮತ್ತು ಸ್ಥಳೀಯರ ಆರೋಗ್ಯ ರಕ್ಷಣೆಗೆ ನೆರವಾಗುವ ಉಚಿತ ಆಂಬ್ಯುಲೆನ್ಸ್ ವಾಹನವನ್ನು ಲೋಕಾರ್ಪಣೆಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಕ್ಷೇಮ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸುಮಲತಾ ಆರ್ ಶೆಟ್ಟಿ ಮಾತನಾಡಿ, ಸಕಾಲದಲ್ಲಿ ಆಂಬ್ಯುಲೆನ್ಸ್ ಸೇವೆ ದೊರೆತಲ್ಲಿ ರೋಗಿಯ ಪ್ರಾಣರಕ್ಷಣೆ ಸಾಧ್ಯ. ಗಾಯಗೊಂಡವರನ್ನು ಮತ್ತು ಅಸ್ವಸ್ಥರಾದವರನ್ನು ಯಾವ ವಾಹನದಲ್ಲಿ ಕೊಂಡೊಯ್ಯಲಾಗುತ್ತದೆ ಎಂಬುದು ಕೂಡಾ ಮುಖ್ಯವಾಗುತ್ತದೆ. ಅಪಘಾತದಲ್ಲಿ ಗಾಯಗೊಂಡವರನ್ನು ದ್ವಿಚಕ್ರ ವಾಹನ ಅಥವಾ ರಿಕ್ಷಾ, ಕಾರಿನಲ್ಲಿ ಕೊಂಡೊಯ್ದು ಸಂದರ್ಭ ಹಲವು ತೊಂದರೆಗೊಳಗಾಗುತ್ತದೆ. ಬಿ.ಪಿ ಹೆಚ್ಚಳ, ಸ್ಟ್ರೋಕ್ ಇಂತಹ ಸಂದರ್ಭಗಳಲ್ಲಿ ವಾಹನಗಳಲ್ಲಿ…
ಮಂಗಳೂರು: ಹೈದರಾಬಾದ್ ನಲ್ಲಿ ನಡೆದ ವಿದ್ಯಾ ಭಾರತಿ ಸಂಸ್ಕೃತಿ ಮಹೋತ್ಸವದಲ್ಲಿ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ತಂಡವು ಜಾನಪದ ನೃತ್ಯ ವಿಭಾಗದಲ್ಲಿ ರಾಜ್ಯಮಟ್ಟಲ್ಲಿ ಪ್ರಥಮ ಸ್ಥಾನ ಪಡೆದು ಬಿಹಾರದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶುಭ ಶೇಷಾದ್ರಿ ಪ್ರೀತೀಶ್ ಸಾಲಿಯಾನ್ ನಿತೇಶ್ ರಿಂದ ತರಬೇತಿ ಪಡೆದುಕೊಂಡಿದ್ದಾರೆ.ತಂಡದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾದ ನವೀನ್ ಎಲ್.ಸಾಲ್ಯಾನ್- ಭವ್ಯಾ ಬಂಗೇರ ದಂಪತಿ ಪುತ್ರಿ ವಿದ್ಯಾರ್ಥಿನಿ ಹವೀಷಾ ಕೂಡಾ ಒಬ್ಬರಾಗಿದ್ದಾರೆ.
ಉಳ್ಳಾಲದ ಶ್ರೀ ಸಾಯಿ ಪರಿವಾರ ಟ್ರಸ್ಟ್ (ರಿ.) — ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ — ದಸರಾ ಮಹೋತ್ಸವದ ಪ್ರಯುಕ್ತ “ಮುದ್ದು ಮಕ್ಕಳ ಅಂದದ ಶಾರದೆ ಫೋಟೋ ಸ್ಪರ್ಧೆ-2025” ಆಯೋಜಿಸಿದ್ದು, ಆ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಂಗಳೂರು ದಸರಾ ಜರಗುವ ಕುದ್ರೋಳಿ ಶ್ರೀ ಗೋಕರ್ಣಾಥ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಕ್ಷೇತ್ರದ ಖಜಾಂಚಿ, ಬೆಳದಿಂಗಳು ಸೇವಾ ಟ್ರಸ್ಟ್ ಸ್ಥಾಪಕ ಪದ್ಮರಾಜ್ ಆರ್ ಪೋಸ್ಟರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡಿರುವ ಯುವಕರ ತಂಡವಾಗಿ ಸಾಯಿ ಪರಿವಾರ್ ಟ್ರಸ್ಟ್ ಸದಾ ಜನಮನ್ನಣೆಗೆ ಪಾತ್ರವಾಗಿದೆ. ಕೊರೊನಾ ಮಹಾಮಾರಿ ಸೇರಿದಂತೆ ವಿವಿಧ ಸಂಕಷ್ಟಗಳ ಸಂದರ್ಭಗಳಲ್ಲಿ ಸಂಸ್ಥೆ ಶೈಕ್ಷಣಿಕ, ಕ್ರೀಡೆ ಹಾಗೂ ಆರೋಗ್ಯ ಸಂಬಂಧಿ ನೆರವಿನ ಮೂಲಕ ಅನೇಕ ಕುಟುಂಬಗಳಿಗೆ ಆಶಾಕಿರಣವಾಗಿದೆ. ಈ ಸೇವಾಭಾವನೆಗೆ ಸಮಾಜದ ಎಲ್ಲ ವರ್ಗಗಳಿಂದ ಪ್ರಶಂಸೆ ಲಭಿಸಿದೆ.ಮೈಸೂರು ದಸರೆಯೊಂದಿಗೆ ಮಂಗಳೂರು ದಸರೆಯೂ ಇಂದಿಗೆ ಸಾಂಸ್ಕೃತಿಕ ಹಾಗೂ ಭಕ್ತಿಭಾವದ ಹಬ್ಬವಾಗಿ ಪ್ರಾಮುಖ್ಯತೆ ಪಡೆದಿದೆ. ಇದರ ಅಂಗವಾಗಿ ಸಾಯಿ ಪರಿವಾರ್ ಟ್ರಸ್ಟ್ ಆಯೋಜಿಸಿರುವ…
ಉಳ್ಳಾಲ: ಕಳೆದ ಮೂರು ತಲೆಮಾರುಗಳಿಂದ ಹಿಡಿದು 20,000 ಸದಸ್ಯರನ್ನು ಒಳಗೊಂಡ ಕೊಣಾಜೆ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯದ ಹಳೇ ವಿದ್ಯಾರ್ಥಿ ಸಂಘ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಮಾ’ ಇದರ ನೂತನ ಅಧ್ಯಕ್ಷರಾಗಿ 1986ರ ಬ್ಯಾಚ್ ನ ಸ್ಟಾಟಿಸ್ಟಿಕ್ಸ್ ಸ್ನಾತಕೋತ್ತರ ಪದವಿ ಪಡೆದ ಹಳೇ ವಿದ್ಯಾರ್ಥಿ ಮೂಲತ: ಉಳ್ಳಾಲ ಸದ್ಯ ಚಿಕ್ಕಮಗಳೂರು ಮೂಡಿಗೆರೆಯಲ್ಲಿ ನೆಲೆಸಿರುವ ರಾಮಕೃಷ್ಣ ರಾವ್ ಕೆ.ಎನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಜಯಪ್ಪ ಕೆ.ಎಸ್, ದೇವಿಪ್ರಭಾ ಆಳ್ವ, ಸರೋಜಿನಿ ಬಿ.ಕೆ, ಪ್ರಧಾನ ಕರ್ಯದರ್ಶಿಗಳಾಗಿ ಗಣೇಶ್ ಸಂಜೀವ, ಜತೆ ಕರ್ಯದರ್ಶಿಗಳಾಗಿ ಹರ್ಷಿತಾ, ಉಮ್ಮಪ್ಪ ಪೂಜಾರಿ, ಕೋಶಾಧಿಕಾರಿ ಡಾ. ಚಂದು ಹೆಗ್ಡೆ, ಸಂಘಟನಾ ಕರ್ಯದರ್ಶಿಯಾಗಿ ಸುಬ್ರಹ್ಮಣ್ಯ ಟಿ., ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ವೇಣು ಶರ್ಮಾ, ರಾಜರಾಮ ರಾವ್.ಟಿ, ಎನ್.ಕೆ.ಹೀರೇಗೌಡ, ಡಾ. ಪ್ರಭಾಕರ ನೀರುಮಾರ್ಗ, ಸದಾನಂದ ಶೆಟ್ಟಿ, ಪ್ರೊ.ವಿ.ಜಿ ಭಟ್, ಪ್ರದೀಪ್ ಡಿಸೋಜ, ಸುಷ್ಮಾ, ಸುಧಾ ವಿ ವೈದ್ಯ, ಪ್ರೊ.ಇಕ್ಬಾಲ್ , ಪ್ರೊ.ಇಸ್ಮಾಯಿಲ್, ಶ್ರುತಿ ಶೆಟ್ಟಿ, ಡಾ.ವನಜ, ಪ್ರೊ.ಮಂಜುನಾಥ್ ಪಟ್ಟಾಭಿ, ಡಾ.ವಿಶ್ವನಾಥ ಆಯ್ಕೆಗೊಂಡಿದ್ದಾರೆ. ಮಂಗಳೂರು ವಿ.ವಿಯಲ್ಲಿರುವ…
ಉಳ್ಳಾಲ : ಶ್ರೀ ಉಮಾಮಹೇಶ್ವರಿ ದೇವಸ್ಥಾನ ಉಮಾಪುರಿ ಕಾಪಿಕಾಡ್ ಕ್ಷೇತ್ರದಲ್ಲಿ ಸೆ. 22 ಸೋಮವಾರದಿಂದ ಅ.1 ಬುಧವಾರದ ವರೆಗೆ ಕುಂಟಾರು ರವೀಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ನವರಾತ್ರಿ ಉತ್ಸವವು ಅತ್ಯಂತ ಸಂಭ್ರಮದಿಂದ ನಡೆಯಲಿದೆ . ಸೆ 22 ಸೋಮವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ನವರಾತ್ರಿ ಉತ್ಸವದ ನಂದಾದೀಪ ಪ್ರಜ್ವಲನೆ , ಗಣಪತಿ ಹವನ, ನಾಗತಂಬಿಲ, ಪರಿವಾರ ದೈವಗಳಿಗೆ ತಂಬಿಲ, ಧಾನ್ಯಲಕ್ಷ್ಮೀ ಪೂಜೆ, ಭಕ್ತಾದಿಗಳಿಗೆ ತೆನೆ ವಿತರಣೆ, ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ 8 ಗಂಟೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸೆ. 26 ಶುಕ್ರವಾರ ಬೆಳಿಗ್ಗೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ, ಸಾಮೂಹಿಕ ಆಶ್ಲೇಷ ಪೂಜೆ ಸೆ .29 ರ ಸೋಮವಾದಂದು ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾಯಾಗ ಜರಗಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ.ಅ.1 ಬುಧವಾರ ಆಯುಧ ಪೂಜಾ ದಿವಸದಂದು ಬೆಳಿಗ್ಗೆ ಶ್ರೀ ದೇವರಿಗೆ ರಂಗ ಪೂಜೆ 8.00ಕ್ಕೆ ಮಹಾಪೂಜೆ,…
ಕೊಣಾಜೆ : ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಆಶ್ರಯದಲ್ಲಿ ಕೊಣಾಜೆ ಮಂಗಳೂರು ವಿಶ್ವವಿದ್ಯಾಲಯದ ಒಳಾಂಗಣ ಸಭಾಂಗಣದಲ್ಲಿ ಅಕ್ಟೋಬರ್ 19ರಂದು ನಡೆಯಲಿರುವ ಯುವವಾಹಿನಿ ಅಂತರ್ ಘಟಕದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಯುಕ್ತ ಗುರುವಾರ ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಶೀರ್ಷಿಕೆ ಗೀತೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ವಿಜೇತ್ ಪಜೀರ್ ಅವರು “ಗ್ರಾಮೀಣ ಭಾಗದ ಪ್ರತಿಭೆಗಳಿಂದಲೇ ಶೀರ್ಷಿಕೆ ಗೀತೆ ರಚನೆಗೊಂಡಿದೆ, ಯುವ ಪ್ರತಿಭೆಗಳು ಸಂಘದಲ್ಲೇ ಇರುವುದು ಇನ್ನಷ್ಟು ಹೆಮ್ಮೆಯ ವಿಚಾರ”, ಈ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳಗಲು ಸರ್ವರ ಪ್ರೋತ್ಸಾಹ ಅಗತ್ಯ ಎಂದರು. ಚಿತ್ರನಟ ದೀಕ್ಷಿತ್ ಕೆ.ಅಂಡಿಂಜೆ ಶೀರ್ಷಿಕೆ ಗೀತೆ ಬಿಡುಗಡೆಗೊಳಿಸಿ, ಶೀರ್ಷಿಕೆ ಗೀತೆ ಸುಂದರವಾಗಿ ಮೂಡಿಬಂದಿದೆ, ಅದೇ ರೀತಿ ಬ್ಯಾಡ್ಮಿಂಟನ್ ಪಂದ್ಯಾಟವೂ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.ಈ ಸಂದರ್ಭ ಶೀರ್ಷಿಕೆ ಗೀತೆ ಹಾಡಿದ ರಕ್ಷಿತ್ ಕೆ.ಅಸೈಗೋಳಿ, ಶ್ರೀರಕ್ಷಾ ಎಸ್.ಎಚ್. ಪೂಜಾರಿ ಕೊಣಾಜೆ ಮತ್ತು ಸಾಂಸ್ಕೃತಿಕ…
ಕೊಣಾಜೆ : ಉಳ್ಳಾಲ ರಾಣಿ ಅಬ್ಬಕ್ಕ ತುಳುನಾಡಿನ ಶೌರ್ಯ ಸ್ವಾಭಿಮಾನದ ವೀರ ಮಹಿಳೆ. ಪೋರ್ಚುಗೀಸರನ್ನು ಎದುರಿಸಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಭಾರತದ ಹೆಮ್ಮೆಯ ಪುತ್ರಿ. ರಾಣಿ ಅಬ್ಬಕ್ಕನ ಕುರಿತು ಯಾರು ಕಾರ್ಯಕ್ರಮ ಮಾಡಿದರೂ ನಮ್ಮ ಬೆಂಬಲವಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಪೀಠದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಹೇಳಿದರು. ಅವರು ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ- ವೀರನಾರಿ ಅಬ್ಬಕ್ಕಳ 500 ನೇ ಜಯಂತಿಯ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆಗೆ ಕೊಣಾಜೆ ಮಂಗಳೂರು ವಿವಿಯ ಸಿ.ವಿ.ರಾಮನ್ ವೃತ್ತದಲ್ಲಿ ಸ್ವಾಗತಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಗೋವಾದಲ್ಲಿ ಪೋರ್ಚುಗೀಸರ ಉಪಟಳಕ್ಕೆ ಅಲ್ಲಿನ ಭಾರತೀಯ ಬಂಧುಗಳು ಊರು ಬಿಟ್ಟು ಓಡಬೇಕಾಯಿತು. ಅದೇ ಸ್ಥಿತಿ ಕರಾವಳಿಯಲ್ಲಿ ನಡೆಯದ ಹಾಗೆ ರಕ್ಷಿಸಿದ್ದು ರಾಣಿ ಅಬ್ಬಕ್ಕ. ಆಕೆಯ ಸ್ವಾಭಿಮಾನ, ದೇಶಪ್ರೇಮ ಇಂದಿನ ಯುವ ತಲೆಮಾರಿಗೆ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.ರಥಯಾತ್ರೆಯ ಪ್ರಾಂತ ಅಧ್ಯಕ್ಣರಾದ ರವಿ ಮಂಡ್ಯ, ಮಂಗಳೂರು ವಿವಿ…

