Author: UllalaVani

Kannada News From Coastal Karnataka

ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ಸಾಹಿತಿ, ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : 1565-1763 ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದರು. ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ 32 ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು, ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್‌ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ.…

Read More

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇದರ ವತಿಯಿಂದ ಸೆ.19 ಹಾಗೂ 20 ರಂದು ದಾವಣಗೆರೆ ಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ (ಪದವಿ ಪೂರ್ವ) ಟೂರ್ನಮೆಂಟ್‌ ನಲ್ಲಿ ಆಡುವ ಜಿಲ್ಲಾ ತಂಡದಲ್ಲಿ ಉಳ್ಳಾಲದ ಪ್ರತಿಷ್ಠಿತ ಪಾಂಡ್ಯ ರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜ್ ಇಲ್ಲಿನ ನಾಲ್ಕು ಗ್ರೇಟ್ ಆಟಗಾರರಾದ 1. ಮೊಹಮ್ಮದ್ ಆನಸ್ 2. ಸುಹೈಲ್ ಅಹ್ಮದ್ ಫಾರಿಸ್ 3. ಮೊಹಮ್ಮದ್ ಉನೈನ್ 4.ಅಫ್ನಾನ್ ರೆಹಮಾನ್ ಅಬ್ಬಾಸ್ ಇವರುಗಳು ಸ್ಥಾನ ಪಡೆಯುವ ಮೂಲಕ ಕಾಲೇಜು ಹಾಗೂ ಉಳ್ಳಾಲಕ್ಕೆ ಕೀರ್ತಿ ತಂದಿದ್ದಾರೆ. ಈ ಆಟಗಾರರು ಕಾಲೇಜು ಕೋಚ್ ತಮೀಮ್ ಉಳ್ಳಾಲ್ ರಿಂದ ತರಬೇತಿ ಪಡೆದಿದ್ದಾರೆ.

Read More

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇದರ ವತಿಯಿಂದ ಸೆ.19 ಹಾಗೂ 20 ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಗರ್ಲ್ಸ್ ವಿಭಾಗದ ಫುಟ್ಬಾಲ್ (ಪದವಿ ಪೂರ್ವ) ಟೂರ್ನಮೆಂಟ್‌ ನಲ್ಲಿ ಆಡುವ ಜಿಲ್ಲಾ ಟೀಮ್ ನಲ್ಲಿ ಉಳ್ಳಾಲದ ಪ್ರತಿಷ್ಠಿತ ಪಾಂಡ್ಯ ರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜ್ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ , ಪ್ರತಿಭಾವಂತ ಯುವ ಆಟಗಾರ್ತಿ “ಮೆಯ್ಸಾ ಮರಿಯಮ್ ” ಸ್ಥಾನ ಪಡೆದಿದ್ದಾರೆ. ಇವರು ಕಾಲೇಜು ಕೋಚ್ ತಮೀಮ್ ಉಳ್ಳಾಲ್ ರಿಂದ ತರಬೇತಿ ಪಡೆದಿದ್ದಾರೆ .

Read More

ಮಂಗಳೂರು : ಪ್ರಪಂಚದಾದ್ಯಂತದ ತುಳು ನಾಯಕರನ್ನು ಒಟ್ಟುಗೂಡಿಸುವ ಸಂಘಟನೆಯಾದ ಗ್ಲೋಬಲ್ ಅಲೈಯನ್ಸ್ ಆಫ್ ತುಳು ಅಸೋಸಿಯೇಷನ್ ​​(GATA), ಸೆಪ್ಟೆಂಬರ್ 21 ರಂದು ತನ್ನ ಮೊದಲ ತುಳು ಲಿಪಿ ಕಲಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಉದ್ಘಾಟನಾ ಅಧಿವೇಶನವು ಸಂಜೆ 7 ಗಂಟೆಗೆ ಜೂಮ್ ವೇದಿಕೆಯಲ್ಲಿ ವರ್ಚುವಲ್ ಆಗಿ ನಡೆಯಲಿದೆ. ಈ ಸಂದರ್ಭದಲ್ಲಿ ಒಡಿಯೂರು ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಹಿರಿಯ ನಾಯಕರಾದ ಡಿ.ಕೆ. ಶೆಟ್ಟಿ ಮತ್ತು ಸರ್ವೋತ್ತಮ ಶೆಟ್ಟಿ (ಅಬುಧಾಬಿ) ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ತರಗತಿಗಳನ್ನು ಅಮೆರಿಕದ ಫ್ಲೋರಿಡಾದ ಶ್ರೀವಲ್ಲಿ ರೈ ಮಾರ್ಟೆಲ್ ನಡೆಸಿಕೊಡಲಿದ್ದು, ಅವರಿಗೆ ಪ್ರಭಾಕರ್ ಭಟ್ (ಯುಎಸ್ಎ), ಸುರೇಶ್ ಪೂಂಜಾ (ಆಸ್ಟ್ರೇಲಿಯಾ), ಶುಭಶ್ರೀ ಕೆಎಂ (ಭಾರತ), ಸರಿತಾ ಅರುಣ್ ಶೆಟ್ಟಿ (ಯುಕೆ), ಶ್ರುತಾ ಶೆಟ್ಟಿ (ಯುಕೆ), ಮತ್ತು ಚಂದ್ರಹಾಸ ಶೆಟ್ಟಿ (ಮಸ್ಕತ್) ಬೆಂಬಲ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ತಾಂತ್ರಿಕ ಬೆಂಬಲವನ್ನು ಟೀಮ್ ಇಲೇಸಾ ಒದಗಿಸಲಿದೆ. ತುಳು ಲಿಪಿ ಕಲಿಯಲು ಆಸಕ್ತಿ ಇರುವವರು ಫಾರ್ಮ್ ಅನ್ನು ಭರ್ತಿ ಮಾಡಲು ಸಹಾಯಕ್ಕಾಗಿ, ಭಾಗವಹಿಸುವವರು ಸೂರಿ ಮಾರ್ನಾಡ್ ಅವರನ್ನು…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ವರ್ಷಧಾರೆ ಮುಂದುವರೆದಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವ ಮಾಹಿತಿ ಇಲ್ಲಿದೆ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್​ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ : ಕ್ಯಾಸಲ್​​ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ,…

Read More

ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ವಿವಾಹ ಪ್ರೋತ್ಸಾಹ ಧನ ಯೋಜನೆ ಜಾರಿಗೆ ತಂದಿದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದವರನ್ನು ಬೇರೆ ವರ್ಗದ ವ್ಯಕ್ತಿ ವಿವಾಹವಾದರೆ ಆ ದಂಪತಿಗಳಿಗೆ ₹5.50 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು. ವಧುವಿಗೆ ₹3ಲಕ್ಷ ಹಾಗೂ ವರನಿಗೆ ₹2.5ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಹತೆಗಳು ದಂಪತಿಗಳು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. ಜೋಡಿಗಳು ಹಿಂದೂ ಧರ್ಮದವರಾಗಿರಬೇಕು. ಒಬ್ಬ ಸಂಗಾತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದರೆ, ಇನ್ನೊಬ್ಬರು ಬೇರೆ ಸಮುದಾಯಕ್ಕೆ ಸೇರಿರಬೇಕು. ದಂಪತಿಗಳ ಒಟ್ಟು ವಾರ್ಷಿಕ ಆದಾಯ ₹5ಲಕ್ಷಕ್ಕಿಂತ ಕಡಿಮೆ ಇರಬೇಕು. ವಿವಾಹವಾಗಿ 18 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಗೆ ಅರ್ಹರು. ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಹಂತ 1: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.https://swdservices.karnataka.gov.in/SWIncentive/ICM/ICMHome.aspx ಹಂತ 2: ‘ವಿವಾಹಕ್ಕೆ ಪ್ರೋತ್ಸಾಹ ಧನ’ ಎಂಬ ಗುಂಡಿಯನ್ನು ಒತ್ತಿ. ನಂತರ ‘ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ’ ಯೋಜನೆಯನ್ನು ಆಯ್ಕೆಮಾಡಿ. ಹಂತ…

Read More

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ತೆರೆಗೆ ಬರಲಿದೆ. ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನ‌ರ್ ಅಡಿಯಲ್ಲಿ ವೀರ್ ರೆಡ್ಡಿ ಎಂ. ನಿರ್ಮಿಸುತ್ತಿರುವ ಈ ಚಿತ್ರಕ್ಕೆ ‘ಮಾ ವಂದೇ’ ಎಂದು ಹೆಸರಿಡಲಾಗಿದೆ. ಅವರ ಜನ್ಮ ದಿನದ ಅಂಗವಾಗಿ ಸಿನಿಮಾದ ಪೋಸ್ಟರ್ ಅನ್ನು ರಿವೀಲ್ ಮಾಡಲಾಗಿದೆ. ಚಿತ್ರದಲ್ಲಿ ಮಲಯಾಳದ ನಟ ಉಣ್ಣಿ ಮುಕುಂದನ್‌ ನರೇಂದ್ರ ಮೋದಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ನಟ ಉಣ್ಣೆ ಮುಕುಂದನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕ್ರಾಂತಿ ಕುಮಾರ್ ನಿರ್ದೇಶನದ ‘ಮಾ ವಂದೇ’ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ನಾನು ನಿರ್ವಹಿಸುತ್ತಿದ್ದೇನೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಹರ್ಷವಾಗುತ್ತಿದೆ. ಅಹಮದಾಬಾದ್‌ನಲ್ಲಿ ಬೆಳೆದ ನನಗೆ, ಬಾಲ್ಯದಲ್ಲಿ ಅವರು(ಮೋದಿ) ನಮ್ಮ ಮುಖ್ಯಮಂತ್ರಿ ಎಂದು ತಿಳಿದಿತ್ತು. ವರ್ಷಗಳ ನಂತರ, 2023ರ ಏಪ್ರಿಲ್‌ನಲ್ಲಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅದು ನನ್ನ ಪಾಲಿಗೆ ಮರೆಯಲಾಗದ ಕ್ಷಣ ಎಂದಿದ್ದಾರೆ. ಒಬ್ಬ ನಟನಾಗಿ, ಈ ಪಾತ್ರವನ್ನು…

Read More

ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಲ್ಲಿ ಅವರ ತಾಯಿ ಬಂದು ‘ಬಿಹಾರದಲ್ಲಿ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದೀಯಾ’ ಎಂದು ಗದರಿಸುವಂತೆ ಸಾಮಾಜಿಕ ಮಾಧ್ಯಗಳಲ್ಲಿ ಹಂಚಿಕೊಂಡಿದ್ದ ಎಐ ಆಧಾರಿತ ವಿಡಿಯೊವನ್ನು ಕೂಡಲೇ ತೆಗೆಯುವಂತೆ ಕಾಂಗ್ರೆಸ್‌ನ ಬಿಹಾರ ಘಟಕಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ವಿವೇಕಾನಂದ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ಬೈಜಂತ್ರಿ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ. ಅರ್ಜಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪಕ್ಷಗಾರರನ್ನಾಗಿ ಮಾಡಲಾಗಿತ್ತು. ವಿಡಿಯೊ ತೆಗೆದುಹಾಕಲು ಸೂಚಿಸಿದ ಪೀಠವು ರಾಹುಲ್ ಗಾಂಧಿ, ಫೇಸ್‌ಬುಕ್, ಟ್ವಿಟರ್ ಮತ್ತು ಗೂಗಲ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯೋಗದ ಪರ ವಕೀಲ ಸಿದ್ದಾರ್ಥ ಪ್ರಸಾದ್‌ ತಿಳಿಸಿದ್ದಾರೆ. ಇದೇ ವರ್ಷಾಂತ್ಯದಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ರಾಜಕೀಯ ಸಂಚಲನ ಜೋರಾಗಿದ್ದು. ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಈ ವಿಡಿಯೊ ಹಂಚಿಕೊಂಡಿತ್ತು. ಕಾಂಗ್ರೆಸ್‌ನ…

Read More

ಮಂಗಳೂರು : ಕೈಯಲ್ಲೇ ಸಂಪೂರ್ಣ ಕುರ್‌ಆನ್‌ನ್ನು ಬರೆದು ಸಾಧನೆಗೈದ ಕುಂಬ್ರ ಮರ್ಕಝುಲ್ ಹುದಾ ವುಮನ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಜ್‌ಲಾ ಹಾಗೂ ಮಿತ್ತ್ ಬೈಲ್ ಕಾಲೇಜು ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅವರನ್ನು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್‌ಹಾಜ್ ಕೆ ಎಸ್ ಮುಹಮ್ಮದ್ ಮಸೂದ್‌ರ ಸೊಸೆ ಗುಲ್ಸನ್ ಫರ್ವಿನ್ ಅವರು ಸಾಧಕಿಯರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ವಹಿಸಿದ್ದರು. ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಹಾಜಿ ಸಿ ಮಹಮೂದ್, ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಮೂಸ ಮೊಯ್ದೀನ್, ಕಾರ್ಯದರ್ಶಿಗಳಾದ ಹಾಜಿ ಅಹ್ಮದ್ ಬಾವ ಪಡೀಲ್, ಡಿ.ಎಂ. ಅಸ್ಲಾಂ, ಡಾ. ಮುಹಮ್ಮದ್ ಆರಿಫ್ ಮಸೂದ್, ಸಿ.ಎಂ. ಹನೀಫ್, ಎಂ.ಎ. ಅಶ್ರಫ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹಾಜಿ ಬಿ ಅಬೂಬಕರ್, ಹಾಜಿ ರಿಯಾಝುದ್ದೀನ್, ಎನ್.ಕೆ. ಅಬೂಬಕರ್,…

Read More

ಮಂಗಳೂರು : ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More