Author: UllalaVani

Kannada News From Coastal Karnataka

ಮಂಗಳೂರು : ದ.ಕ. ಜಿಲ್ಲೆಯ ಟೈಕ್ವಾಂಡೋ ತಂಡಕ್ಕೆ ಮೈಸೂರು ವಿಭಾಗ ಮಟ್ಟದ ಟೈಕ್ವಾಂಡೋ ಚಾಂಪಿಯನ್ ಶಿಪ್- 2025ರಲ್ಲಿ 2 ಪದಕಗಳು ದೊರೆತಿವೆ. ಚಿಕ್ಕಮಗಳೂರು ಶತಮಾನೋತ್ಸವ ಒಳಾಂಗಣ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಟೈಕ್ವಾಂಡೋ ಚಾಂಪಿಯನ್ ಶಿಪ್-2025ರಲ್ಲಿ ದ.ಕ. ಜಿಲ್ಲೆಯ ಟೈಕ್ವಾಂಡೋ ತಂಡವು ಉತ್ತಮ ಪ್ರದರ್ಶನ ನೀಡಿದೆ. ಕ್ರೀಡಾಪಟುಗಳು 1 ಚಿನ್ನ ಹಾಗೂ 1 ಬೆಳ್ಳಿ ಸಹಿತ 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಹಮ್ಮದ್ ನಿಹಾಲ್ ನಝೀರ್ 69 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಮುಹಮ್ಮದ್ ಅಯಾನ್ 82 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಇಬ್ಬರು ಕ್ರೀಡಾಪಟುಗಳು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ – 2025ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಚಿನ್ನದ ಪದಕ ಗೆದ್ದ ಮುಹಮ್ಮದ್ ನಿಹಾಲ್ ನಝೀರ್ ಮಂಗಳೂರಿನ ಯೆನಪೋಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಪಿಸಿಎಂಸಿ ವಿಭಾಗದ ವಿದ್ಯಾರ್ಥಿಯಾಗಿದ್ದು, ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ದಿ.ಅಬ್ದುಲ್ ನಝೀರ್…

Read More

ಮಂಗಳೂರು : ಮಂಗಳೂರು ಮಹಾನಗರ ಪಾಲಿಕಾ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಇರುವ ಕಾರಣ ಸೆ.16ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ. ಹಾಗಾಗಿ ಸೆ.16ರಂದು ನಗರದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್ ಬೇಕರಿ ಬಳಿ ನಿಂತಿದ್ದರು. ಆ ಸಂದರ್ಭದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಭಿಸಿದ ಮಾಹಿತಿ ಮೇರೆಗೆ, ಪೊಲೀಸರು ಸೆಪ್ಟೆಂಬರ್ 12 ರಂದು ಮಿನ್ನತ್ ಅವರನ್ನು ಬಂಧಿಸಿ ಕದ್ದ ಸರವನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ, ಜುಲೈ 9 ರಂದು ಕೆಎಂಎಸ್ ಕನ್ವೆನ್ಷನ್…

Read More

ಕಣ್ಣೂರು: ಹೆಬ್ಬಾವು ಕೊಂದು ಪದಾರ್ಥ ಮಾಡಿ ತಿಂದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಮಾದಮಂಗಲ ಮುಂಡಕ್ಕೆ ನಿವಾಸಿಗಳಾದ ಯು.ಪ್ರಮೋದ್(40), ಬಿನೀಶ್ (37) ಬಂಧಿತರು. ರಹಸ್ಯ ಮಾಹಿತಿಯನ್ವಯ ಅರಣ್ಯ ಅಧಿಕಾರಿಗಳು ಪ್ರಮೋದ್‌ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಹೆಬ್ಬಾವು ಪದಾರ್ಥ, ಅದರ ಮೂಳೆಗಳು, ಪಾತ್ರೆಗಳು ಲಭಿಸಿತ್ತು. ಪ್ರಮೋದ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಲಭಿಸಿದ ಮಾಹಿತಿಯಂತೆ ಬಿನೀಶ್ ಸೆರೆಯಾಗಿದ್ದಾನೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸಲಾಗಿದ್ದು ರಿಮಾಂಡ್ ವಿಧಿಸಲಾಗಿದೆ.

Read More

ತೊಕ್ಕೊಟ್ಟು: ಕುಸ್ತಿ, ಪವರ್ ಲಿಫ್ಟಿಂಗ್, ದೇಹರ್ದಾರ್ಢ್ಯ, ಕಬಡ್ಡಿ ಮತ್ತು ಹಗ್ಗಜಗ್ಗಾಟ ಕ್ರೀಡೆಯಲ್ಲಿ ಮುಂಚೂಣಿಯಲ್ಲಿರುವ ತೊಕ್ಕೊಟ್ಟು ಭಟ್ನಗರದ ಶ್ರೀ ಶಕ್ತಿಭಾರತ್ ವ್ಯಾಯಾಮ ಶಾಲೆಗೆ ಸುವರ್ಣ ಸಂಭ್ರಮ, ಆ ಪ್ರಯುಕ್ತದ.ಕ. ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ಮತ್ತು ದ.ಕ. ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ದ.ಕ. ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಪುರುಷರ ಮತ್ತು ಮಹಿಳೆಯರ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್-2025 (CLASSIC & EQUIPPED) (ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಮಾಸ್ಟರ್ಸ್) ಅ.24, 25, 26 ರಂದು ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ಜರಗಲಿದ್ದು, ಇದರ ವಿಜ್ಞಾಪನಾ ಪತ್ರವನ್ನು ಹಿರಿಯ ಮುಖಂಡ ಸೀತಾರಾಮ ಬಂಗೇರ ಬಿಡುಗಡೆಗೊಳಿಸಿದರು.ಈ ಸ್ಪರ್ಧಾಕೂಟಕ್ಕೆ ರಾಜ್ಯದಿಂದ ಸುಮಾರು 1600 ಕ್ರೀಡಾಪಟುಗಳು ಆಗಮಿಸಲಿದ್ದಾರೆ. ದ.ಕ ಜಿಲ್ಲೆಯ ಉಳ್ಳಾಲದ ರಾಣಿ ಅಬ್ಬಕ್ಕನ ಐತಿಹಾಸಿಕ ಪ್ರದೇಶದಲ್ಲಿ 1976ರಲ್ಲಿ ದಿ. ಶೇಖರ್ ಬಂಗೇರ ಭಟ್ನಗರ ತೊಕ್ಕೊಟ್ಟು ಇವರ ಮಾರ್ಗದರ್ಶನದಲ್ಲಿ ಪ್ರಾರಂಭಗೊಂಡ ಶ್ರೀ ಶಕ್ತಿಭಾರತ್ ವ್ಯಾಯಾಮ ಶಾಲೆ (ಭಟ್ನಗರ) ಉಳ್ಳಾಲಬೈಲ್, ತೊಕ್ಕೊಟ್ಟು ಭಾಗದಲ್ಲಿ…

Read More

ಮಂಗಳೂರು: ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತ, ಬಲ್ಮಠ, ಮಂಗಳೂರು ತನ್ನ 50ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುವರ್ಣ ಮಹೋತ್ಸವದ ಅಂಗವಾಗಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದೆ.ಸಂಘದ ವಾರ್ಷಿಕ ಮಹಾಸಭೆಯ ಅಂಗವಾಗಿ ಸೆಪ್ಟೆಂಬರ್ 21, 2025ರಂದು ಬೆಳಿಗ್ಗೆ 8.00ರಿಂದ ಮಧ್ಯಾಹ್ನ 12.30ರವರೆಗೆ ಜಪ್ಪು ಸೈಂಟ್ ಜೋಸೇಫ್ ಸೆಂಟಿನರಿ ಮೆಮೋರಿಯಲ್ ಹಾಲ್‌ನಲ್ಲಿ ಈ ಶಿಬಿರ ನಡೆಯಲಿದೆ.ಡಾ. ಕವಿತ ಡಿ’ಸೋಜ, ತಜ್ಞರು, ಪ್ರಸೂತಿ ಮತ್ತು ಹೆರಿಗೆ ವಿಭಾಗ, ಎ.ಜೆ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಅವರ ನೇತೃತ್ವದಲ್ಲಿ, ಹಾಗೂ ಎ.ಜೆ. ಕಣ್ಣಿನ ವಿಭಾಗದ ಸಹಕಾರದೊಂದಿಗೆ ಉಚಿತ ಕಣ್ಣಿನ ಪರೀಕ್ಷೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ನಡೆಯಲಿದೆ.ಕಾರ್ಯಕ್ರಮವನ್ನು ಬೆಳಿಗ್ಗೆ 8.30ಕ್ಕೆ ಸಂಘದ ಅಧ್ಯಕ್ಷರಾದ ವಿಧಾನಪರಿಷತ್‌ ಸದಸ್ಯ ಐವನ್ ಡಿಸೋಜ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ಆಸ್ಪತ್ರೆಯ ಕಣ್ಣಿನ ವಿಭಾಗದ ಮುಖ್ಯಸ್ಥರು ಭಾಗವಹಿಸಲಿದ್ದಾರೆ.ಬೆಳಿಗ್ಗೆ 8.00ರಿಂದ ನೋಂದಣಿ ಪ್ರಾರಂಭವಾಗಲಿದ್ದು, ಆಗಮಿಸುವ ಪ್ರತಿಯೊಬ್ಬರಿಗೂ ನೋಂದಣಿ ಕಾರ್ಡ್ ನೀಡಲಾಗುವುದು. ನೋಂದಣಿಗೆ ಆಧಾರ್ ಕಾರ್ಡ್…

Read More

ಮುಡಿಪು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ಸಹಯೋಗದಲ್ಲಿ ರಾಣಿ ಅಬ್ಬಕ್ಕಳ 500ನೇ ಜಯಂತಿಯ ಪ್ರಯುಕ್ತ ‘ಅಬ್ಬಕ್ಕ 500 ವರ್ಷದ 51ನೇ ಎಸಳು’ ಕಾರ್ಯಕ್ರಮವು ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಿತು. ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಮನೋಹರ್ ಕುರ್ನಾಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.ಮೈತ್ರಿ ಭಟ್ ಅಬ್ಬಕ್ಕನ ಜೀವನ ಚರಿತ್ರೆಯನ್ನು, ಅವಳ ಸಾಧನೆಯನ್ನು ವಿಶ್ಲೇಷಿಸಿದರು. ಹಾಗೂ ಅಂತಹ ವ್ಯಕ್ತಿತ್ವ ನಮಗೆ ಮಾರ್ಗದರ್ಶನವನ್ನು ಆದರ್ಶವನ್ನು ನೀಡುತ್ತದೆ ನಾವು ಅವಳನ್ನು ಅನುಸರಿಸಬೇಕು ಹಾಗೂ ತುಳುನಾಡಿನ ವೀರರಾಣಿಯಾದ ಅಬ್ಬಕ್ಕಳ ಚರಿತ್ರೆಯನ್ನು ಅಜರಾಮರವಾಗಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಕವಿತಾ ಎಂ.ಎಲ್. ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಡಾ. ಶೇಷಪ್ಪ ಕೆ., ಕಾರ್ಯಕ್ರಮದ ಸಂಯೋಜಕರಾದ ಕಾಜಲ್ ಹಾಗೂ ತನುಜ ಎಂ. ಉಪಸ್ಥಿತರಿದ್ದರು. ಚೈತ್ರಾ ಕಾರ್ಯಕ್ರಮ ನಿರೂಪಿಸಿದರು. ಕಾಜಲ್ ಸ್ವಾಗತಿಸಿ,…

Read More

ಮಂಗಳೂರು : ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ (ದಸರಾ) ರಜೆ ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ (ರಾಜ್ಯ ಪಠ್ಯಕ್ರಮ) ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್‌ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್‌ ಆರಂಭವಾಗಲಿದೆ. ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ ವರೆಗೂ ಇರಲಿದೆ. ಅ. 3ರಿಂದ ತರಗತಿಗಳು ಪುನಃ ಆರಂಭವಾಗಲಿದೆ. ಸಿಬಿಎಸ್‌ಇ ಕೆಲವು ಆಡಳಿತ ಮಂಡಳಿಗಳ ರಜಾವಧಿಯಲ್ಲಿ ಸ್ವಲ್ಪ ವ್ಯತ್ಯಾಸವೂ ಇರಬಹುದು. ದೀಪಾವಳಿ ಹಾಗೂ ಕ್ರಿಸ್ಮಸ್‌ ಸಂದರ್ಭದಲ್ಲಿ ಹೆಚ್ಚು ದಿನ ರಜಾ ಕೊಡುವ ಶಾಲೆಗಳು ಈ ರಜಾವಧಿಯ ಕಡಿಮೆ ಮಾಡಿಕೊಳ್ಳುವ ಪದ್ಧತಿಯೂ ಇದೆ. ರಾಜ್ಯ ಪಠ್ಯಕ್ರಮ ಸಹಿತ ವಿವಿಧ ಪಠ್ಯಕ್ರಮದ ಕೆಲ ಶಾಲೆಗಳಲ್ಲಿ ಎಸೆಸೆಲ್ಸಿ/ ಫ‌ಲಿತಾಂಶ ಸುಧಾರಣೆಯ ದೃಷ್ಟಿಯಿಂದ ಆಯಾ ತರಗತಿಯ…

Read More

ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆಯು ಹೊಸ ಕ್ರಮವೊಂದನ್ನು ಜಾರಿಗೆ ತಂದಿದೆ. ಇದರ ಪ್ರಕಾರ, 20,000 ರೂಪಾಯಿಗಿಂತ ($240) ಹೆಚ್ಚಿನ ನಗದು ಸಾಲವನ್ನು ವಿತರಿಸುವುದು ಕಾನೂನು ಬಾಹಿರವಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ದಂಡದ ರೂಪದಲ್ಲಿ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಈ ಕ್ರಮವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಹ ಬೆಂಬಲಿಸಿದ್ದು, ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಆದಾಯ ತೆರಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ. ನಿಯಮ ಏಕೆ ಜಾರಿಗೆ?ಈ ಕ್ರಮದ ಮುಖ್ಯ ಉದ್ದೇಶವು ಕಪ್ಪು ಹಣದ ವ್ಯವಹಾರವನ್ನು ತಡೆಗಟ್ಟುವುದು ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಖಾತರಿಪಡಿಸುವುದು. 20,000 ರೂಪಾಯಿಗಿಂತ ಹೆಚ್ಚಿನ ನಗದು ಸಾಲವನ್ನು ನೀಡುವುದು ಅಥವಾ ತೆಗೆದುಕೊಳ್ಳುವುದು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269SS ರ ಅಡಿಯಲ್ಲಿ ನಿಷೇಧಿಸಲಾಗಿದೆ. ಈ ನಿಯಮವು ವೈಯಕ್ತಿಕ ಸಾಲದಾತರು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ (NBFCs) ಕಡ್ಡಾಯವಾಗಿ ಅನ್ವಯವಾಗುತ್ತದೆ. ನಿಯಮ ಉಲ್ಲಂಘನೆಯಾದರೆ ಏನು? 20,000 ರೂಪಾಯಿಗಿಂತ ಹೆಚ್ಚಿನ ನಗದು ಸಾಲವನ್ನು ನೀಡಿದರೆ ಅಥವಾ ತೆಗೆದುಕೊಂಡರೆ,…

Read More

ಮಂಗಳೂರು : ನಗರದ ಕಂಕನಾಡಿಯಿಂದ ಪಂಪವೆಲ್ ಸಂಪರ್ಕಿಸುವ ಮುಖ್ಯರಸ್ತೆ ಇದೀಗ ತೀರಾ ಹದಗೆಟ್ಟು ಸಂಚಾರಕ್ಕೆ ದೊಡ್ಡ ಅಡಚಣೆಯಾಗಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ನೌಕರರು ಹಾಗೂ ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ರಸ್ತೆಯ ಹಾಳಾದ ಸ್ಥಿತಿಯಿಂದಾಗಿ ಅಪಘಾತದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. ಸಾರಿಗೆ ನೌಕರರ ದಿನನಿತ್ಯದ ಕೆಲಸವೇ ಜೀವದ ಹಂಗಿನಲ್ಲಿದೆ. ಪ್ರಯಾಣಿಕರ ಸುರಕ್ಷತೆ ನಮ್ಮ ಹೊಣೆಗಾರಿಕೆ ಆದರೂ, ರಸ್ತೆ ಪರಿಸ್ಥಿತಿ ನೌಕರರ ಕೈಯಲ್ಲಿಲ್ಲ. ಈ ಹಿನ್ನೆಲೆಯಲ್ಲಿ, ಸಂಬಂಧಿತ ಅಧಿಕಾರಿಗಳು, ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಜನಸಾಮಾನ್ಯರು ಎಲ್ಲರೂ ಒಟ್ಟಾಗಿ ಗಮನಹರಿಸಿ ಈ ರಸ್ತೆ ದುರಸ್ತಿ ತಕ್ಷಣ ಕೈಗೊಳ್ಳುವಂತೆ ಸಂಘ ಮನವಿ ಮಾಡಿದೆ. “ಮಂಗಳೂರಿನ ಸಾರಿಗೆ ವ್ಯವಸ್ಥೆಯ ದೈನಂದಿನ ನಾಡಿಯೇ ಈ ರಸ್ತೆ. ಇದನ್ನು ನಿರ್ಲಕ್ಷಿಸುವುದಾದರೆ, ಅದು ನೇರವಾಗಿ ಜನಜೀವನವನ್ನು ನಿರ್ಲಕ್ಷಿಸುವಂತಾಗಿದೆ. ತ್ವರಿತ ಕ್ರಮ ಕೈಗೊಳ್ಳುವುದು ಎಲ್ಲರ ಜವಾಬ್ದಾರಿ” ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More