ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ಕೇರಳ ವಯನಾಡಿನ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕಾರ್ಪೊರೇಟರ್ ಪತಿ ರವೀಂದ್ರ ನಾಯಕ್ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಟಿಲ ಪ್ರಕರಣದಲ್ಲಿ ವಕೀಲರಾದ ವೈ ವಿಕ್ರಮ್ ಹೆಗ್ಡೆ ನಡೆಸಿದ ವಾದದಿಂದಾಗಿ ಜಾಮೀನು ಮಂಜೂರಾಗಿದೆ. ಪ್ರಕರಣ ಸಂಬಂಧ ಬಂಧಿತ ೨೦ ಆರೋಪಿಗಳಿಗೂ ಈವರೆಗೆ ಜಾಮೀನು ದೊರೆತಿಲ್ಲ.ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 482ರಡಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ, ನ್ಯಾಯಾಲಯವು ಮಂಗಳೂರಿನ ಗ್ರಾಮೀಣ ಪೊಲೀಸ್ ಠಾಣೆಯ ಕ್ರೈಂ ನಂ.37/2025ಕ್ಕೆ ಸಂಬಂಧಿಸಿದಂತೆ ಜೆಎಂಎಫ್ಸಿ ತೃತೀಯ ನ್ಯಾಯಾಲಯದಲ್ಲಿ ಪ್ರಚಲಿತದಲ್ಲಿರುವ ಸಿ.ಸಿ. ನಂ.4015/2025ರಲ್ಲಿ ಆರೋಪಿಗೆ ಬಂಧನವಾಗುವ ಸಂದರ್ಭ ಜಾಮೀನು ನೀಡಲು ಆದೇಶಿಸಿದೆ. ನ್ಯಾಯಾಲಯವು 1,00,000 ರೂಪಾಯಿಗಳ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಇಬ್ಬರು ಜಾಮೀನುದಾರರನ್ನು ಒದಗಿಸುವಂತೆ ಪ್ರತಿವಾದಿಗೆ ಸೂಚಿಸಿದೆ. ಜೊತೆಗೆ, ಸೆಪ್ಟೆಂಬರ್ 22, 2025ರೊಳಗೆ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಆದೇಶಿಸಿದೆ. ಅದೇ ರೀತಿ, ಸಾಕ್ಷಿದಾರರ ಮೇಲೆ ಪ್ರಭಾವ…
Author: UllalaVani
ಮಂಗಳೂರು: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ಮಹತ್ವದ ಸಾಧನೆ ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಆರ್ಥೋ ಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಆರಂಭಿಸಿದೆ. ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಸಹಭಾಗಿತ್ವ ದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಯೆನೆಪೊಯದಲ್ಲಿ ಆರಂಭಿಸಲಾಗಿದೆ ಎಂದು ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ತಿಳಿಸಿದ್ದಾರೆ. ಅವರು ಮಂಗಳವಾರ ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಗಳವಾರ ಹೊಸ ರೊಬೊಟಿಕ್ ಸರ್ಜರಿ ವ್ಯವಸ್ಥೆಯನ್ನು ಅನಾವರಣಗೊಳಿಸಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಮೂಲಕ ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಸಬ್-ಮಿಲಿಮೀಟರ್ ಮಟ್ಟದ ನಿಖರತೆಯನ್ನು ನೀಡುತ್ತವೆ.ಅದರಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿ ಯವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ…
ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್ ಸಿಕ್ಕೇರ ಅವರ ತೋಟದ ಬಾವಿಯ ನೀರಿನ ಪಂಪ್ ಚಾಲೂ ಆಗದೆ ಇದ್ದ ಪರಿಣಾಮ ಮಧ್ಯಾಹ್ನದ ವೇಳೆ ತೆರಳಿ ಪರಿಶೀಲಿಸಿದಾಗ ಚಿರತೆ ಬಾವಿಯಲ್ಲಿ ಇರುವುದು ಕಂಡು ಬಂದಿದೆ. ಸುಮಾರು 2-3 ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಇದಾಗಿದ್ದು, ಅರಣ್ಯ ಇಲಾಖೆಯವರು ಮತ್ತು ಎನ್ ಜಿ ಒ ಉಡುಪಿಯ ಅಕ್ಷಯ್ ಶೇಟ್ ಹಾಗೂ ಸ್ಥಳೀಯರ ಸಹಕಾರದಿಂದ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು.
ಉಳ್ಳಾಲ : ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಹಾಗೂ ಶ್ರೀ ವಿದ್ಯಾಂಜನೇಯ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಉಳ್ಳಾಲ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ, ಸೆ,14 ಭಾನುವಾರ ಬೆಳಿಗ್ಗೆ 10ರಿಂದ ಉಳ್ಳಾಲದ ಪುರಸಭೆ ಮೈದಾನದಲ್ಲಿ ದಸರಾ ಕಬಡ್ಡಿ -2025 ಜರಗಲಿದೆ. ದಿ| ರವೀಂದ್ರ ಮರೋಳಿ ಸ್ಮರಣಾರ್ಥ ನಡೆಯಲಿರುವ ಈ ಪಂದ್ಯಾವಳಿ ಉಳ್ಳಾಲ ತಾಲೂಕು ಮಟ್ಟದಲ್ಲಿ ನಡೆಯಲಿದೆ. ಪ್ರಥಮ ಸ್ಥಾನ ವಿಜೇತರಿಗೆ ರೂ.10,000 ಮತ್ತು ಟ್ರೋಫಿ, ದ್ವಿತೀಯ ಸ್ಥಾನಿಗಳಿಗೆ ರೂ. 6000 ಮತ್ತು ಟ್ರೋಫಿ, ತೃತೀಯ ಹಾಗೂ ಚತುರ್ಥ ಸ್ಥಾನಿಗಳಿಗೆ ತಲಾ ರೂ.3000 ನಗದು ಹಾಗೂ ಟ್ರೋಫಿಯನ್ನು ನೀಡಲಾಗುವುದಲ್ಲದೆ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಸವ್ಯಸಾಚಿ ಪ್ರಶಸ್ತಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8880462587 ಅಥವಾ 7899445010 ಮೊಬೈಲನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್ ನಂಬರ್ ಪತ್ತೆ ಹಚ್ಚಿದ್ದರು. ಅದರ ಆಧಾರದ ಮೇಲೆ ಬೆಳ್ಳಾರೆ ಠಾಣೆಯ ಎಸ್ಐ ಡಿ.ಎನ್. ಈರಯ್ಯ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಉದಯನನ್ನು ಬಂಧಿಸಿದ್ದಾರೆ.
ಮಂಗಳೂರು : ಬೆಂಗಳೂರು ವಿದ್ಯಾರಣ್ಯ ಪುರದ ಕಿಂಗ್ಸ್ ಮೇಯಾಡಿಸ್ ಹೋಟೆಲ್ ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಮಿಸ್ ಆ್ಯಂಡ್ ಮಿಸಸ್ ಇಂಡಿಯಾ ಆಸ್ಟ್ರಲ್ ಪೇಜಂಟ್ಸ್ – 2025ರ 9ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಯಲ್ಲಿ ಮಂಗಳೂರಿನ ಆದಿಶ್ (5) ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೂರು ದಿನಗಳ ಕಾಲ ವಿವಿಧ ಆಯಾಮಗಳಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಪಾಧ್ವೆ ಮಾಡಲಿಂಗ್ ಬಲ್ಲಾಳ್ ಬಾಗ್ ದೀಪಕ್ ಗಂಗೂಲಿ ಇವರ ಮಾರ್ಗದರ್ಶನದಲ್ಲಿ ಸ್ಪರ್ಧಿಸಿದ್ದಾರೆ. ವಿಜೇತ ಆದಿಶ್ ನಗರದ ಅಜಿತ್ ಮತ್ತು ಮಂಜುಶ ದಂಪತಿಯ ಪುತ್ರ, ಮಂಗಳೂರಿನ ಕ್ಯಾರ್ಮೆಲ್ ಶಾಲೆಯ ಯುಕೆಜಿ ವಿದ್ಯಾರ್ಥಿ.
ಮಂಗಳೂರು : ಮಂಗಳೂರಿನ ಫೆರಾರ್ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್ ಬೆಸ್ಟ್ ಸ್ಟೇಜ್ ಪ್ರೆಸೆನ್ಸ್, ಹಾಗೂ ಮಿಸ್ ಬೆಸ್ಟ್ ವಾಕ್ ಪ್ರಶಸ್ತಿಗಳು ಅವರನ್ನು ಈ ಸ್ಪರ್ಧೆಯ ಪ್ರಮುಖ ವಿಜೇತೆಯನ್ನಾಗಿ ಮಾಡಿತು. ಈ ಸಾಧನೆಯೊಂದಿಗೆ, ಆಶ್ನಾ ಮಿಸ್ ಯೂನಿವರ್ಸ್ ಸೆಲೆಸ್ಟಿಯಲ್ ಇಂಡಿಯಾ 2026 ಎಂಬ ಗೌರವಾನ್ವಿತ ಬಿರುದನ್ನೂ ಗಳಿಸಿದ್ದಾರೆ. ಇದರ ಮೂಲಕ ಅವರು ಮುಂದಿನ ಮಿಸ್ ಯೂನಿವರ್ಸ್ ಸೆಲೆಸ್ಟಿಯಲ್ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್ ಆಯೋಜಿಸಿದ ಈ ಕಾರ್ಯಕ್ರಮ ಅದ್ಭುತ…
ಮಂಗಳೂರು : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ ಆಹುತಿಯಿಂದ ಸರಿ ಸುಮಾರು 4 ಕೋಟಿ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಫ್ಯಾಕ್ಟರಿ ಇದಾಗಿದೆ.
ಮಂಗಳೂರು : ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11 ಗುರುವಾರದಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ. ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆಯವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಡಿನ ಖ್ಯಾತ ಸಾಹಿತಿಗಳಾದ ಡಾ. ಕೆ. ಶರೀಫಾ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷರಾದ ಅತೀ. ವಂ. ಡಾ| ಎಲೋಶಿಯಸ್ ಪೌಲ್ ಡಿ’ಸೋಜರವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 8.30ಕ್ಕೆ ಏಕತಾರಿ ಹಾಡುಗಾರರಾದ ನಾದಾ ಮಣಿನಾಲ್ಕೂರುರವರಿಂದ ‘ಪ್ರೀತಿಯ ಸಿಂಚನ’ ಎಂಬ…
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಡಿಯೋನ್ ಮೊಂತೆರೋ “ಒಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.“ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹೇಳಿದರು.ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ ಒಣಂ ಆಚರಣೆಯು ಕೇವಲ…

