Author: UllalaVani

Kannada News From Coastal Karnataka

25ರ ಮಾರ್ಚ್ 22ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್ಚೇತನ ಸಂಸ್ಥೆಯ ಮಹಿಳೆಯರ ವಿಭಾಗದಲ್ಲಿ ದಾಖಲಿಸಿದರು. ದೊರೆತ ಮಾಹಿತಿಯ ಪ್ರಕಾರ ಪೂಜಾ ಓರ್ವ ಗೃಹಿಣಿಯಾಗಿದ್ದು, ಮಾನಸಿಕ ಅಸ್ವಸ್ಥತೆಯ ಕಾರಣದಿಂದ ಬಿಹಾರವನ್ನು ಬಿಟ್ಟು ಉದ್ಯೋಗಕ್ಕಾಗಿ ತಮಿಳುನಾಡಿಗೆ ಹೊರಟಿದ್ದರು. ಆದರೆ ದುರಾದೃಷ್ಟದಿಂದ ತಮ್ಮ ಕುಟುಂಬದೊಡನೆ ಸಂಪರ್ಕ ಕಳೆದುಕೊಂಡರು ಅವರಿಂದ ಬೇರ್ಪಟ್ಟರು. ಆದರೆ ಸ್ನೇಹಾಲಯದಲ್ಲಿ ಆವಳ ಜೀವನಕ್ಕೆ ಒಂದು ಹೊಸ ತಿರುವು ಬಂತು. ಸ್ನೇಹಾಲಯದಲ್ಲಿ ದೊರೆತ ಸಮಗ್ರ ಮಾನಸಿಕ ಶಾರೀರಿಕ ಚಿಕಿತ್ಸೆ, ಅತ್ತ್ಯುತ್ತಮ ಆರೈಕೆ ಮತ್ತು ಸಮಾಲೋಚನೆಗಳಿಂದ ಆಕೆಯು ತನ್ನ ಮಾನಸಿಕ ಆರೋಗ್ಯವನ್ನು ಪುನಃ ಪಡೆದುಕೊಂಡಳು. ತದನಂತರ ಅವರ ಪುನರ್ಮಿಲನ ಪ್ರಕ್ರಿಯೆ ಪ್ರಾರಂಭವಾಯಿತು. ಶ್ರದ್ಧಾ ಫೌಂಡೇಶನಿನ ಬಸವರಾಜ್ ಅವರ ನೇತ್ರತ್ವದಲ್ಲಿ ಪೂಜಾಳ ವಿಳಾಸವನ್ನು ಪತ್ತೆ ಹಚ್ಚುವ ಕಾರ್ಯ ನಡೆಯಿತು ಹಾಗೂ ದೂರದ ಬಿಹಾರದಲ್ಲಿ ವಾಸಿಸುತ್ತಿರುವ ಆಕೆಯ…

Read More

ಮಂಗಳೂರು : ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್‌ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್‌ ಗಳನ್ನು ಹೊಂದಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು, ರೋಹನ್ ಮರೀನಾ ಒನ್ ಅನ್ನು ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೇ ಹೊಸ ಮೈಲಿಗಲ್ಲಾಗಿ ನಿಲ್ಲುವಂತೆ ಮಾಡಿದೆ. ಕರಾವಳಿ ಜೀವನಶೈಲಿಯಲ್ಲೇ…

Read More

ದೇರಳಕಟ್ಟೆ : ಆಳುವ ಸರಕಾರಗಳು ಉದ್ಯೋಗಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಮರೆತು ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪೆನಿಗಳಿಗೆ ವಹಿಸಿ ಅಲ್ಲಿ ಯುವಜನರನ್ನು ಗುತ್ತಿಗೆ ಅರೆಗುತ್ತಿಗೆ ದುಡಿಸಿಕೊಳ್ಳಲಾಗುತ್ತಿದೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆರೋಪಿಸಿದ್ದಾರೆ. ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ‌ ನೇತೃತ್ವದಲ್ಲಿ ನಡೆಯುತ್ತಿರುವ ಉದ್ಯೋಗದ ಹಕ್ಕಿಗಾಗಿ ಯುವಜನ ಜಾಥಾದ ಭಾಗವಾಗಿ ದೇರಳಕಟ್ಟೆಯಲ್ಲಿ ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂತೋಷ್ “ಇತ್ತೀಚೆಗೆ ಕೇಂದ್ರ ಸರಕಾರ ಇತ್ತೀಚೆಗಿನ ಬಜೆಟ್ ನಲ್ಲಿ ಇಎಲ್ಐ ಸ್ಕೀಮ್ ಎಂದು 2 ಲಕ್ಷ ಕೋಟಿ ಹಣವನ್ನು ಉದ್ಯೋಗ ಸೃಷ್ಟಿಯ ಹೆಸರಲ್ಲಿ 500 ಖಾಸಗೀ ಕಂಪನಿಗಳಿಗೆ ವಹಿಸುವ ಕಾರ್ಪೊರೇಟ್ ಪರವಾದ ನೀತಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರದ ಪ್ರತಿಯೊಂದು ಇಲಾಖೆಯಲ್ಲಿ ಸಾವಿರಾರು ಉದ್ಯೋಗಗಳು ಖಾಲಿ ಬಿದ್ದಿದ್ದೆ ಅವುಗಳನ್ನು ಭರ್ತಿಗೆ ಕ್ರಮಗಳೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಮಾತನಾಡಿದ ಸಾಮಾಜಿಕ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ “ದೇಶದ ಯುವಜನತೆಗೆ ಸಮಾನ ಶಿಕ್ಷಣ ಸಮಾನ ಉದ್ಯೋಗವನ್ನು ಪಡೆಯುವ ಅವಕಾಶ…

Read More

ಮಂಗಳೂರು : ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ದೊಡ್ಡ ರಸ್ತೆಯ ಗುಂಡಿಗೆ ಬಿದ್ದಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು. ಈ ದಾರುಣ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟುಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ಗೆ ಸಾಗುವ ಹೆದ್ದಾರಿಯ ದುಸ್ಥಿತಿಯ ಬಗ್ಗೆ ಗಂಭೀರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಾರ್ಗದಲ್ಲಿ ಹಲವಾರು ದೊಡ್ಡ ಗುಂಡಿಗಳು ಇರುವುದರಿಂದ ದಿನಕ್ಕೊಂದು ಅಪಘಾತ ಸಂಭವಿಸುವಂತಹ ಪರಿಸ್ಥಿತಿಯಿದೆ ಎಂದು ಸ್ಥಳೀಯರು ದೂರಿದ್ದಾರೆ ನಿವಾಸಿಗಳ ಪ್ರಕಾರ, ರಸ್ತೆಯ ದುರಸ್ತಿಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಕೂಡ ನಿರ್ಲಕ್ಷ್ಯ ಮಾತ್ರ ಮುಂದುವರೆದಿದೆ. ಇಂತಹ ದುರ್ಘಟನೆಗಳು ನಡೆದ ಬಳಿಕ ಮಾತ್ರ ತುರ್ತು ಕ್ರಮ ಕೈಗೊಳ್ಳುವ ನಿಯಮವಾಗಿಬಿಟ್ಟಿದೆ ಎಂದು ಜನರು ಆಕ್ರೋಶಗೊಂಡಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಇನ್ನೂ ಅನೇಕ ಅಮೂಲ್ಯ ಜೀವಗಳು ಈ ಅಪಾಯಕಾರಿ…

Read More

ಉಳ್ಳಾಲ : ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ, ಅಭಿಷೇಕ, ಮಹಾ ಪೂಜೆ ಸಾರ್ವಜನಿಕ ಗ್ರಹಣ ಶಾಂತಿ ಹೋಮ ಶಿವ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ ಮಧ್ಯಾಹ್ನ ಮಹಾಪೂಜೆ ಅನ್ನದಾನ ಸೇವೆ ನಡೆಯಿತು.

Read More

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿಯಮಿತ .ಕಲ್ಲಡ್ಕ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾ ಭವನದಲ್ಲಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘವು 2024-25ನೇ ಆರ್ಥಿಕ ವರ್ಷದಲ್ಲಿ ಲೆಕ್ಕಪರಿಶೋಧನೆಯಂತೆ ರೂ. 486 ಕೋಟಿ ವ್ಯವಹಾರ ನಡೆಸಿ ಆಡಿಟ್ ವರ್ಗೀಕರಣದಲ್ಲಿ “ಎ” ಗ್ರೇಡ್ ಹೊಂದಿ ರೂ.1,55,11,828.70 ಲಾಭಗಳಿಸಿರುತ್ತದೆ ಎಂದು ಹೇಳಿದರು. ಸಂಘದ ಸದಸ್ಯರಿಗೆ 12% ಡಿವಿಡೆಂಡ್ ನೀಡುವುದೆಂದು ಸಂಘವು ಘೋಷಿಸಲಾಯಿತು. ಸಂಘವು 2024-2025ನೇ ಆರ್ಥಿಕ ವರ್ಷದಲ್ಲಿ 1495 ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ರೂ. 24.11 ಕೋಟಿ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡು ಸಾಲವನ್ನು ವಿತರಿಸಿದೆ. 164 ಸದಸ್ಯರಿಗೆ 3% ಬಡ್ಡಿಯಲ್ಲಿ ಕೃಷಿ ಅಭಿವೃದ್ಧಿಗಾಗಿ ರೂ 4.97 ಕೋಟಿ ಸಾಲ, ವಾಹನ ಖರೀದಿ ಸಾಲ, 8.2ಲಕ್ಷ.34 ಸದಸ್ಯರಿಗೆ, ಪಶುಗಳ ದೈನಂದಿನ ನಿರ್ವಹಣೆಗಾಗಿ ಶೂನ್ಯ ಬಡ್ಡಿದರದಲ್ಲಿ 25 ಲಕ್ಷ ಸಾಲ, 18 ಸದಸ್ಯರಿಗೆ ರೂ. 1.50 ಕೋಟಿ…

Read More

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2024-25ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.21 ರವಿವಾರದಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಛೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Read More

ಪುತ್ತೂರು : ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು. 65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದ್ದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ…

Read More

ಮಂಗಳೂರು : ಸ್ಪ್ರಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸ್ಟೊಲೆಕ್ಸ್, ಮಂಗಳೂರಿನ ಬಲ್ಲಾಳ್‌ ಬಾಗ್‌ನಲ್ಲಿ ತನ್ನ ಹೊಸ ವಿಶೇಷ ಫ್ರಾಂಚೈಸಿ ಮಳಿಗೆಗೆ ಶುಕ್ರವಾರ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ ಎಂದು ಸಂಸ್ಥೆಯ ಪಾಲುದಾರರಾದ ವಿಜಯ ಕಾಮತ್‌ ಹೇಳಿದರು. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ ಮಳಿಗೆಯು ರೆಸ್ಟೊಲೆಕ್ಸ್ ನ ಸಂಪೂರ್ಣ ಶ್ರೇಣಿಯ ಕೊಡುಗೆಗಳನ್ನು ಒಳಗೊಂಡಿದೆ. ಇದರಲ್ಲಿ ಹಾಸಿಗೆಗಳು, ದಿಂಬುಗಳು, ಬೆಡ್‌ಶೀಟ್‌ಗಳು, ಕಂಫರ್ಟ‌ರ್‌ ಗಳು, ಹಾಸಿಗೆ ಕವರ್‌ಗಳು, ದಿಂಬು ಮತ್ತಿತರ ಉತ್ಪನ್ನಗಳು ಸೇರಿವೆ. ರೆಸ್ಟೊಲೆಕ್ಸ್ ಕಾಯಿರ್ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಡೇವಿಡ್ ಕುರುವಿಲ್ಲಾ ನೂತನ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಅವರು, ʻರೆಸ್ಟೊಲೆಕ್ಸ್ ನಾಲ್ಕು ದಶಕಗಳಿಂದ ಗ್ರಾಹಕರ ಅನುಭವಗಳನ್ನು ಹೆಚ್ಚಿಸುವುದು ಮತ್ತು ಸೂಕ್ತ ಆಯ್ಕೆಗಳನ್ನು ಬೆಂಬಲಿಸುವತ್ತ ಗಮನಹರಿಸಿದೆ.…

Read More

ಉಳ್ಳಾಲ : ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ (402) ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ) ರವರ ಜನ್ಮ ದಿನ ಪ್ರಯುಕ್ತ ಬೃಹತ್ ಮೀಲಾದು ನ್ನಬಿ ರ‍್ಯಾಲಿ ಶುಕ್ರವಾರ ನಡೆಯಿತುಕೋಡಿ ಜುಮಾ ಮಸೀದಿ ಖತೀಬ್ ಇರ್ಶಾದ್ ಸಖಾಫಿ ದುಆ ನೆರವೇರಿಸಿದರು. ರ‍್ಯಾಲಿ ಉದ್ಘಾಟಿಸಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್ ಅವರು, ಶಾಂತಿ ಸೌಹಾರ್ದತೆಯನ್ನು ಸಾರಿದ ಪ್ರವಾದಿ ಮುಹಮ್ಮದ್ ( ಸ) ರವರ ಜೀವನ ನಮಗೆ ಮಾರ್ಗದರ್ಶನ ಆಗಿದೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು, ಸಮಾಜ ನಿರ್ಮಾಣ ಮಾಡಬೇಕು ಎಂದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಟೆಪುರ ಮಸೀದಿಯಿಂದ ಉಳ್ಳಾಲ ದರ್ಗಾವರೆಗೆ ಕಾಲ್ನಡಿಗೆಯಲ್ಲಿ ಶಾಂತಿಯುತ ಮೀಲಾದ್ ರ‍್ಯಾಲಿ ನಡೆಯಿತು. ಐದು ಕರಿಯದ 28 ಮೊಹಲ್ಲಾ ಗಳ ವಿದ್ಯಾರ್ಥಿಗಳ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ,ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ…

Read More