Author: UllalaVani

Kannada News From Coastal Karnataka

ಮಂಗಳೂರು : ಉದ್ಯಮಿ, ಕೃಷಿಕರು ಮತ್ತು ವೃತ್ತಿಪರರಿಗೆ  ಕ್ಯಾಥೋಲಿಕ್ ವೇದಿಕೆ ರಚನಾ ನೀಡುವ  ರಚನಾ ಪುರಸ್ಕಾರ 2023–2025ರ ಘೋಷಿಸಿದ್ದು, ಈ ಬಾರಿ  ಉದ್ಯಮ ಕ್ಷೇತ್ರದಲ್ಲಿ  ಆಸ್ಟಿನ್ ರೋಚ್,  ವೃತ್ತಿಪರ ಕ್ಷೇತ್ರದಲ್ಲಿ  ಜಾನ್ ರಿಚರ್ಡ್ ಲೋಬೊ (ಕೆಎಎಸ್)ಬೆಂಗಳೂರು, ಕೃಷಿಕರ ಕ್ಷೇತ್ರದಲ್ಲಿ ಡಾ. ಗಾಡ್ವಿನ್ ರೋಡ್ರಿಗಸ್ ಬೆಳ್ವೈ, ಎನ್‌ಆರ್‌ಐ ಉದ್ಯಮ ಕ್ಷೇತ್ರಕ್ಕೆ ಪ್ರತಾಪ್ ಮೆಂಡೋನ್ಸಾ,  ಹಾಗೂ ಶ್ರೇಷ್ಠ ಮಹಿಳೆ ಸಾಧಕಿ ಶೋಭಾ ಮೆಂಡೋನ್ಸಾ, ದುಬೈ ಇವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ರಚನಾ  ಅಧ್ಯಕ್ಷ ಜಾನ್ ಬಿ. ಮೊಂಟೇರಿಯೋ  ಹೇಳಿದರು. ಮಂಗಳೂರಿನ ಉರ್ವ ಪ್ರೆಸ್‌ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದ ಅವರು ಪ್ರಶಸ್ತಿ ಪ್ರಧಾನ ಸಮಾರಂಭವು 2025ರ ಅಕ್ಟೋಬರ್ 5ರಂದು, ಭಾನುವಾರ ಸಂಜೆ 6 ಗಂಟೆಗೆ ಮಂಗಳೂರು ಮಿಲಾಗ್ರಿಸ್ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಮಿ. ರೆ. ಡಾ. ಪೀಟರ್ ಪಾಲ್ ಸಲ್ದಾನ್ಹಾ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ. ಜೆ. ಜಾರ್ಜ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.   ಇದೇ…

Read More

ಉಳ್ಳಾಲ : ತಡರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು ಬಳಸಿ ಕ್ಯಾಶ್ ಬಾಕ್ಸ್ ಅನ್ನು ಹಾನಿಗೊಳಿಸಿದ್ದಾನೆ. ದೆಹಲಿಯಿಂದ ಹಿಡಿದು ವಿವಿಧ ಜಿಲ್ಲೆಗಳ ಎಟಿಎಂಗಳ ಮೇಲೆ ನಿಗಾ ಇಡುವ ದೆಹಲಿಯ ಕಣ್ಗಾವಲು ವ್ಯವಸ್ಥೆಯು ಈ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿದೆ. ಬಳಿಕ ಕಣ್ಗಾವಲು ಸಿಬ್ಬಂದಿ ರಂಜಿತ್ ಅವರು ಬೀರಿ ಎಟಿಎಂ ನೋಡಿಕೊಳ್ಳುವ ದೀಪಕ್ ಅಮಿನ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ 112 ಗೆ ಕರೆ ಮಾಡಿದ್ದಾರೆ. ಈ ಮಾಹಿತಿಯನ್ನು ಉಳ್ಳಾಲ ಪೊಲೀಸರಿಗೆ ರವಾನಿಸಿದ್ದು,…

Read More

ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಇದರ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರಿನ ಹಂಪನ್‌ಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದ. ಕ. ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

Read More

ಉಳ್ಳಾಲ: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಗಡಿನಾಡು ಕೂಳೂರು ಎಲಿಯಾಣದ ನಿವಾಸಿ ಜಗದೀಶ್‌ ಶೆಟ್ಟಿ ಎ. ಇವರು ಆಯ್ಕೆಯಾಗಿದ್ದಾರೆ. 1988ರ ನವೆಂಬರ್ 30ರಂದು ಶಿಕ್ಷಕ ವೃತ್ತಿಗೆ ಕಾಲಿಟ್ಟ ಜಗದೀಶ್ ಶೆಟ್ಟಿ, ಒಟ್ಟು 37 ವರ್ಷಗಳ ಸೇವಾ ಅವಧಿಯಲ್ಲಿ 13 ವರ್ಷಗಳ ಕಾಲ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ಬಂಟ್ವಾಳದ ಇರಾ ಬಾಳೆಪುಣಿ ಶಾಲೆಯಿಂದ ವೃತ್ತಿ ಆರಂಭಿಸಿದ ಅವರು, ಅಂಬ್ಲಮೊಗರು ಶಾಲೆಯಲ್ಲಿ ಪ್ರಗತಿಪರ ಶಿಕ್ಷಣ ವಾತಾವರಣ ನಿರ್ಮಿಸಲು ಶ್ರಮಿಸಿದ್ದಾರೆ. ಅವರ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳು ವಿಶಿಷ್ಟ ರೂಪ ಪಡೆದಿವೆ. ಸ್ಥಳೀಯ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಪ್ರೌಢಶಾಲೆ ಸ್ಥಾಪನೆ ಮತ್ತು 1.28 ಕೋಟಿ ರೂ. ವೆಚ್ಚದ ಕಟ್ಟಡ ನಿರ್ಮಾಣ, ಶಾಲಾ ದಾಖಲಾತಿಯನ್ನು 106ರಿಂದ 217ಕ್ಕೆ ಏರಿಕೆ, ಉಚಿತ ಬಸ್ ವ್ಯವಸ್ಥೆ, ಎಲ್‌ಕೆಜಿ–ಯುಕೇಜಿ ತರಗತಿಗಳ ಸ್ಥಾಪನೆ, ದ್ವಿಭಾಷಾ (ಕನ್ನಡ–ಆಂಗ್ಲ) ಮಾಧ್ಯಮ ತರಗತಿಗಳು, ಸ್ಮಾರ್ಟ್ ಟಿವಿ ಹಾಗೂ ಕಂಪ್ಯೂಟರ್ ಮೂಲಕ ಬೋಧನೆ,…

Read More

ಮಂಗಳೂರು : ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅ. 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಆಗ ದಕ್ಷಿಣ ಕನ್ನಡ ನ್ಯಾಯಾಲಯ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಿಗೆ ಉಭಯ ಪಕ್ಷದವರನ್ನು ಕರೆಯಿಸಲಿದ್ದು, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬಹುದು. ಹೈಕೋರ್ಟ್‌ಗಳಲ್ಲಿ…

Read More

ನವದೆಹಲಿ : ಜಿಎಸ್‌ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತ ದೊರೆತಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ. ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಮೊದಲ ದಿನದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಮಾಡಲಾಗಿದೆ. ದಿನ ಬಳಕೆ ವಸ್ತುಗಳು, ಆರೋಗ್ಯ ವಲಯ ಸೇರಿ ಹಲವು ವಲಯಗಳಿಗೆ ಅನುಕೂಲವಾಗಲಿದೆ. ಸಾಕಷ್ಟು ಚರ್ಚೆ ಬಳಿಕ ನಿರ್ಧಾರಕ್ಕೆ ಬರಲಾಗಿದ್ದು ಎಲ್ಲರೂ ಒಮ್ಮತದಿಂದ ಬೆಂಬಲವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಜಿಎಸ್‌ಟಿ ಕೌನ್ಸಿಲ್ ನ ಎಲ್ಲ ಸದಸ್ಯರಿಗೂ ಅಭಾರಿಯಾಗಿದ್ದಾನೆ” ಎಂದು ಹೇಳಿದರು. ಯಾವ ವಸ್ತುಗಳು…

Read More

ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಬಿ.ದಾಮೋದರ ನಿಸರ್ಗ ಸಂಸ್ಮರಣ ಸಮಿತಿ ವತಿಯಿಂದ ಆ.31ರಂದು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರಗಿದ ದ್ವಿತೀಯ ಸಂಸ್ಮರಣ ಸಮಾರಂಭದಲ್ಲಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಮಂಗಳಾದೇವಿ ದೇವಸ್ಥಾನದ ಮೊಕ್ತೇಸರ ಅರುಣ್ ಕುಮಾರ್ ಐತಾಳ್ ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ದಿ.ನಿಸರ್ಗ ಅವರ ಪತ್ನಿ ಹೇಮಾ ದಾಮೋದರ ನಿಸರ್ಗ ಮತ್ತು ಮಕ್ಕಳು ಸ್ಥಾಪಿಸಿದ ಎರಡನೇ ವರ್ಷದ ‘ಬಿ.ದಾಮೋದರ ನಿಸರ್ಗ ಪ್ರಶಸ್ತಿ’ಯನ್ನು ಕ.ಸಾ.ಪ ಮಾಜಿ…

Read More

ಮಂಗಳೂರು : ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಸೆಂಟರ್, ಸಂತ ಅಲೋಶಿಯಸ್ (ಪರಿಗಣಿತ ವಿವಿ) ಸಹಯೋಗದಲ್ಲಿ ಕನ್‌ವರ್ಜೆನ್ಸ್ – 2025 : ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತರ್‌ರಾಷ್ಟ್ರೀಯ ಸಮ್ಮೇಳನವು ಸೆ.27ರಂದು ನಡುಪದವು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ಎಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ. ಹಾಸಿಮ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೃತಕ ಬುದ್ಧಿಮತ್ತೆ ಅವಿಷ್ಕಾರಗಳನ್ನು ಹೇಗೆ ಮುನ್ನಡೆಸಬಹುದು ಮತ್ತು ಯುನೈಟೆಡ್ ನೇಷನ್‌ಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಹೇಗೆ ಸಹಕಾರಿಯಾಗಿತ್ತು ಎಂಬುದನ್ನು ಮುಕ್ತವಾಗಿ ಚರ್ಚಿಸಲು ವೇದಿಕೆಯನ್ನು ಕ‌ಲ್ಪಿಸಲಾ‌ಗುವುದು. ಪ್ರಮುಖ ವಿದ್ವಾಂಸರು, ಉದ್ಯಮ ತಜ್ಞರು ಹಾಗೂ ಸಂಶೋಧಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಬಹರೈನ್‌ನ ಕಿಂಗ್‌ಡಮ್ ವಿವಿಯ ಕಾಲೇಜ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್‌ನ ಪ್ರೊ. ಇಕ್ಸಾಲ್ ತೋನ್ಸೆ ಹವಾಲ್ದಾರ್, ಯುಎಇ ವೆಸ್ಟ್ಟ್‌ಫೋರ್ಡ್ ಎಚ್‌ಈನ ಅಸೋಸಿಯೆಟ್ ಡೀನ್ ಡಾ.ಸೂಫಿ ಅನ್ವರ್ ಸಮ್ಮೇಳನದಲ್ಲಿ ಮುಖ್ಯ…

Read More

ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿದರು. ಅಪಘಾತದಲ್ಲಿ ವಾಹನದಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾರು ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿಗಳದ್ದಾಗಿದೆ ಎಂದು ವರದಿಯಾಗಿದೆ . ಗಾಯಾಳುಗಳನ್ನು ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಡಿಕ್ಕಿಯ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ.

Read More

ದೇರಳಕಟ್ಟೆ : ಯೆನೆಪೋಯ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ದೇರಳಕಟ್ಟೆ ನಿವಾಸಿ ಹಸನ್‌ ಮತ್ತು ಆಯೇಷಾ ದಂಪತಿ ಪುತ್ರಿ ರಜಿಯಾ ಹಸನ್‌ ಇವರು ಐದು ವರ್ಷಗಳ ವೈದ್ಯಕೀಯ ಪದವಿಯನ್ನು ಪೂರೈಸಿ ವೈದ್ಯೆಯಾಗಿ ಹೊರಹೊಮ್ಮಿದ್ದಾರೆ. ವೈದ್ಯಕೀಯ ಕ್ಷೇತ್ರವು ಕೇವಲ ವೃತ್ತಿಯಾಗದೆ, ಸೇವೆಯ ಒಂದು ಉದಾತ್ತ ರೂಪವಾಗಿದೆ. ತನ್ನ ಛಲ ಹಾಗೂ ಶ್ರದ್ಧೆಯಿಂದ ಶಿಕ್ಷಣ ಪೂರೈಸಿರುವ ರಜಿಯಾ ಹಸನ್‌ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಲು ಸಿದ್ಧರಾಗಿದ್ದಾರೆ. ಒಬ್ಬ ವೈದ್ಯೆಯಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ , ಆರೋಗ್ಯ ಜಾಗೃತಿ, ಶಿಕ್ಷಣ ಮತ್ತು ಸಾಮಾಜಿಕವಾಗಿಯೂ ಕಾರ್ಯನಿರ್ವಹಿಸುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ. ರಜಿಯಾ ಹಸನ್ ಅವರ ಸಾಧನೆಯನ್ನು ಬಿಜೆಪಿ ಮಂಗಳೂರು ಮಂಡಲ ಅಲ್ಪಸಂಖ್ಯಾತ ಮೋರ್ಛಾ ಅಭಿನಂದಿಸಿದೆ.

Read More