Author: UllalaVani

Kannada News From Coastal Karnataka

ಕೊಣಾಜೆ: ಕನ್ನಡವನ್ನು ಪುಸ್ತಕ ಹಾಗೂ ತಂತ್ರಜ್ಞಾನದಲ್ಲಿ ಸಮಾನವಾಗಿ ಬಳಸಬೇಕಿದೆ. ತಂತ್ರಜ್ಞಾನ ಯಾವುದೂ ಶಾಶ್ವತವಲ್ಲ.ನಾವು ಅದರ ಗುಲಾಮರಾಗಬಾರದು. ನಮ್ಮ ತಿಳುವಳಿಕೆಯನ್ನು ಬಿಟ್ಟುಕೊಟ್ಟು ಕೃತಕ ಬುದ್ಧಿಮತ್ತೆಗೆ ದಾಸರಾಗದಿರೋಣ. ಕನ್ನಡವನ್ನು ಇಟ್ಟುಕೊಂಡೇ ಎಲ್ಲಾ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಾಕಚಕ್ಯತೆ ನಮ್ಮಲಿರಬೇಕು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ್ ರೈ ಅವರು ಹೇಳಿದರು. ಅವರು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಭಾನುವಾರ ನಡೆದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಅಧ್ಯಾಪಕ, ಸಿಬ್ಬಂದಿಗಳ ಒಕ್ಕೂಟ “ಗಿಳಿವಿಂಡು(ರಿ)” ಇದರ ನಾಲ್ಕನೇ ಮಹಾ ಸಮಾವೇಶವನ್ನು ಅವರು ಉದ್ಘಾಟಿಸಿ ಅವರು ಮಾತನಾಡಿದರು.1968 ರಲ್ಲಿ ಮೊಳಕೆಯೊಡೆದ ಕನ್ನಡದ ಬೀಜ ಎಸ್ ವಿಪಿ ಕನ್ನಡದ ಅಧ್ಯಯನ ಸಂಸ್ಥೆಯಾಗಿ ರೂಪುಗೊಂಡು ಹೆಮ್ಮರವಾಗಿ ಬೆಳೆಯುವುದರೊಂದಿಗೆ ಕನ್ನಡವನ್ನು ಕಟ್ಟುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಏಳು ತಲೆಮಾರುಗಳ ವಿದ್ಯಾರ್ಥಿಗಳು ಈ ಗಿಳಿವಿಂಡು ಸಮಾವೇಶದ ಮೂಲಕ ಕನ್ನಡದ ಮನಸ್ಸುಗಳನ್ಬು ಒಟ್ಟುಗೂಡಿಸಿರುವುದು ಸಂತಸ ತಂದಿದೆ ಎಂದರು. ಉಳ್ಳವರು ಶಿವಾಲಯ ಮಾಡುವರಯ್ಯ ಎಂದು ಅಂದು ಬಸವಣ್ಣ ಹೇಳಿದ್ದರು. ಆದರೆ ಪ್ರಸ್ತುತ ಉಳ್ಳವರು ಆಂಗ್ಲ ಶಾಲೆಯ…

Read More

ಕುಂಪಲ : ಇಲ್ಲಿನ ಬೈಪಾಸ್ ಸಮೀಪ ಮಧ್ಯವಯಸ್ಕನ ಮೃತದೇಹ ರಕ್ತದ ಮಡುವಿನಲ್ಲಿ ಮನೆ ಅಂಗಳದಲ್ಲಿ ಪತ್ತೆಯಾಗಿದೆ. ಸ್ಥಳೀಯ ಚಿಕನ್ ಅಂಗಡಿ ಬದಿಯಲ್ಲಿ ಗಾಯವಾಗಿ ಕಣ್ಣೊಂದು ಹೊರಬಿದ್ದು ಮನೆ ಅಂಗಳಕ್ಕೆ ಓಡಿ ಅಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಬೆಳಿಗ್ಗೆ ಸುಮಾರು 3 ಗಂಟ ವೇಳೆ ಈತನನ್ನು ಸ್ಥಳದಲ್ಲಿ ಹಲವರು ನೋಡಿದ್ದರು. ಬಳಿಕ ಮೃತದೇಹ ರಕ್ತದ ಮಡುವಿನಲ್ಲಿ ಕಂಡುಬಂದಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ಸ್ಥಳೀಯವಾಗಿ ನಾಯಿಯು ರಕ್ತದ ಮಡುವಿನಲ್ಲಿ ಇರುವುದು ಕಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫಾರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

Read More

ಕೊಣಾಜೆ: ನಮ್ಮ ತುಳುನಾಡಿನ ಸಂಸ್ಕೃತಿಯು ವಿಭಿನ್ನವಾದುದು ಹಾಗೂ ಶ್ರೇಷ್ಠವಾದುದು. ನಮ್ಮ ತುಳುನಾಡು, ಸಂಸ್ಕೃತಿ , ಆರಾಧನೆ, ಆಚರಣೆಯಂತಹ ಅನೇಕ ಮಹತ್ವದ ಸಂಗತಿಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ತಲಪಾಡಿ ಕ್ಷೇತ್ರ ಮಹಾತ್ಮೆ ಹಾಗೂ ತುಳುನಾಡ ದೈವಾರಾಧನೆ ಕೃತಿಯ ಮೂಲಕ ನಮ್ಮ ನೆಲದ ಇತಿಹಾಸವನ್ನು ದಾಖಲಿಸುವ ಪ್ರಯತ್ನ ನಡೆದಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಕೊಣಾಜೆ ಕೆಳಗಿನ ಮನೆಯ ಶ್ರೀ ನಾಗಬ್ರಹ್ಮ‌ ಸನ್ನಿಧಿಯಲ್ಲಿ ಗುರುನಿತ್ಯಾನಂದ ಸೇವಾವೃಂದ ಇದರ ವತಿಯಿಂದ ಆಯೋಜಿಸಲಾದ ತಲಪಾಡಿ ಕ್ಷೇತ್ರ ಮಹಾತ್ಮೆ ಹಾಗೂ ತುಳುನಾಡ ದೈವಾರಾಧನೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ತುಳು ಸಂಸ್ಕೃತಿಯ ರಕ್ಷಣೆಗೆ ಹಾಗೂ ತುಳುನಾಡಿಗೆ ನಾವೇನು ಕೊಡುಗೆ ಕೊಡಬಹುದು ಎಂಬ ಚಿಂತನೆಯೊಂದಿಗೆ ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡೋಣ ಎಂದರು.ಹಿರಿಯರಾದ ಭಾಗಿ ನೀರ್ ದೀಪಿಕಲ್ ತಲಪಾಡಿ ಕ್ಷೇತ್ರ ಮಹಾತ್ಮೆ ಹಾಗೂ ತುಳುನಾಡ ದೈವಾರಾಧನೆ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.ಕಾರ್ಯಕ್ರಮದಲ್ಲಿ ಧಾರ್ಮಿಕ ವಾಗ್ಮಿ ತಮ್ಮಣ್ಣ…

Read More

ಕೊಣಾಜೆ: ಮಂಗಳೂರು ವಿವಿ ಜೀವವಿಜ್ಞಾನ ವಿಭಾಗದ ಉಪನ್ಯಾಸಕರಾದ‌ ಡಾ. ದಿವಾಕರ್ ಎಂ. ಎಸ್. ಅವರ ಇಂಡಿಯನ್ ಡಯಾಬಿಟಿಸ್ ಕಿಚನ್ – ಟ್ರೆಡಿಷನಲ್ ಫುಡ್ ಫಾರ್ ಗುಡ್ ಹೆಲ್ತ್ “Indian Diabetes Kitchen – Traditional Foods for Good Health” ಎಂಬ ಕೃತಿಯನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಶುಕ್ರವಾರ ಬಿಡುಗಡೆಗೊಳಿಸಿದರು. ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ಡಾ. ದಿವಾಕರ್ ಅವರ ಕೃತಿಯು ಭಾರತೀಯ ಪಾರಂಪರಿಕ ಆಹಾರದ ವೈಜ್ಞಾನಿಕ ಅಂಶಗಳನ್ನು ಜನರಿಗೆ ಸರಳವಾಗಿ ಪರಿಚಯಿಸುವ ಮಹತ್ವದ ಪ್ರಯತ್ನವಾಗಿದೆ. ಇಂತಹ ಪುಸ್ತಕಗಳು ಆಹಾರ ವಿಜ್ಞಾನ ಮತ್ತು ಪೌಷ್ಠಿಕಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತವೆ,” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ರಾಜು ಮೊಗವೀರ ಕೆ ಅವರು ಮಾತನಾಡಿ, ಈ ಕೃತಿಯು ಸಂಶೋಧನೆ ಮತ್ತು ಆರೋಗ್ಯಕರ ಜೀವನ ಶೈಲಿಯ ಕಡೆಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಶ್ಲಾಘಿಸಿದರು.ಪ್ರಾಧ್ಯಾಪಕ ಪ್ರೊ. ರಾಜು ಕೃಷ್ಣ ಸಿ.ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಆಹಾರ ವಿಜ್ಞಾನ ಮತ್ತು ಪೌಷ್ಠಿಕಶಾಸ್ತ್ರ…

Read More

ಕೊಣಾಜೆ: ಬಿಲ್ಲವರ ಕುಲಕಸುಬು ಮೂರ್ತೆದಾರಿಕೆಯಾದರೂ ಇಂದು ಮೂರ್ತೆದಾರಿಕೆಯತ್ತ ಸಮುದಾಯದ ಒಲವು ಕಡಿಮೆಯಾಗಿದೆ. ಮೂರ್ತೆದಾರರ ವಿವಿದೋದ್ಧೇಶ ಸಹಕಾರಿ ಸಂಘದ ಮೂಲಕ ಸಮಾಜದ,‌ಸಮುದಾಯದ ಅಭಿವೃದ್ಧಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಜನರ‌ ಪ್ರೀತಿ ವಿಶ್ವಾಸದೊಂದಿಗೆ ಇದೀಗ ಸಂಘದ ಎರಡನೇ ಬ್ರಾಂಚ್ ಆರಂಭಗೊಂಡಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಇದರಿಂದ ಸಹಕಾರ ಸಿಗುವಂತಾಗಲಿ ಎಂದು ಕುದ್ರೋಳಿ ಗೋಕರ್ನಾಥ ಕ್ಷೇತ್ರದ ಕೋಶಾಧಿಕಾರಿ ಆರ್ ಪದ್ಮರಾಜ್ ಅವರು ಹೇಳಿದರು. ಅವರು ಪಾವೂರಿನಲ್ಲಿ ಮೂರ್ತೆದಾರರ ವಿವಿದೋದ್ಧೇಶ ಸಹಕಾರಿ ಸಂಘ ( ನಿ) ಪಾವೂರು ಇದರ ನೂತನ ಎರಡನೇ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಸಂಘದ ಉಳಿತಾಯ ಖಾತೆಯನ್ನು ಉದ್ಘಾಟಿಸಿದ .ಕ.ಜಿಲ್ಲಾ ಉಪಾಧ್ಯಕ್ಷರಾದ ಸತೀಶ್ ಕುಂಪಲ ಅವರು ಮಾತನಾಡಿ, ಸಹಕಾರ ಸಂಘವನ್ನು ಬೆಳೆಸುವುದು ಸುಲಭದ ಕೆಲಸವಲ್ಲ. ಎಲ್ಲರ ಒಗ್ಗಟ್ಟು ಸಹಕಾರದೊಂದಿಗೆ ಮೂರ್ತೆದಾರರ ಸಹಕಾರ ಸಂಘವು ಎರಡನೆ ಶಾಖೆಯಾಗಿ ಬೆಳೆದು ನಿಂತಿದೆ. ಅಲ್ಲದೆ ಸಮಾಜಮುಖಿ ಕಾರ್ಯಗಳೊಂದಿಗೆ ಮುನ್ನಡೆಯಲಿ ಎಂದು ಶುಭ ಹಾರೈಸಿದರು.ಸಂಘದ ಕೊಠಡಿಯನ್ನು ಮಂಗಳೂರು ಸಹಕಾರಿ‌ಸಂಮಘದ ಸಹಾಯಕ ನಿಬಂಧಕರು ತ್ರಿವೇಣಿ ರಾವ್ ಅವರು ಉದ್ಘಾಟಿಸಿ ಶುಭಹಾರೈಸಿದರು.…

Read More

ಉಳ್ಳಾಲ: ನ-13; ಉಳ್ಳಾಲ ದರ್ಗಾ ಆಡಳಿತ ಸಮಿತಿಯಿಂದ‌ ಸದಸ್ಯತ್ವ ಕಳಕೊಂಡವರು ದರ್ಗಾದಲ್ಲಿ ಅವ್ಯವಹಾರ ನಡೆದಿದೆಯೆಂದು ಆರೋಪಿಸಿ ರಾಜ್ಯ ವಕ್ಫ್ ಬೋರ್ಡ್,ಹೈಕೋರ್ಟ್ ಗೆ ದೂರು ನೀಡಿದ್ದರು. ಪ್ರಕರಣವು ಹೈಕೋರ್ಟ್ ನಲ್ಲಿರುವಾಗಲೇ ಸಂಶಯದ ಆಧಾರ ಮೇಲೆ ಪತ್ರಿಕಾಗೋಷ್ಟಿ ನಡೆಸಿ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಿರುವುದು ಖಂಡನೀಯ.ಇಂತವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸುವುದಾಗಿ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಎಚ್ಚರಿಸಿದರು.ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರದಂದು ನಡೆದ ಪತ್ರಿಕಾಗೋಷ್ಟಿಯನ್ನುದ್ಧೇಶಿಸಿ ಅವರು ಮಾತನಾಡಿದರು.ವಕ್ಫ್ ನಿಯಮದಡಿ ನಿರಂತರ ಮೂರು ಬಾರಿ ಸಮಿತಿ ಸಭೆಗೆ ಹಾಜರಾಗದೆ ದರ್ಗಾ ಸಮಿತಿಯ ಸದಸ್ಯತನವನ್ನ ಕಳಕೊಂಡವರೇ ಪತ್ರಿಕಾಗೋಷ್ಟಿ ಕರೆದು ಅಪಪ್ರಚಾರ ನಡೆಸಿದ್ದಾರೆ.ದರ್ಗಾ ಸಮಿತಿಯಿಂದ ಅವ್ಯವಹಾರ ನಡೆದಿದೆಯೆಂದು ಜಿಲ್ಲಾ ,ರಾಜ್ಯ ವಕ್ಫ್ ಬೋರ್ಡ್,ಹೈಕೋರ್ಟಿಗೂ ಅವರು ದೂರು ನೀಡಿದ್ದಾರೆ.ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ಪತ್ರಿಕಾಗೋಷ್ಟಿ ನಡೆಸುವ ಅವಶ್ಯಕತೆ ಇದೆಯೇ..?ಇತಿಹಾಸ ಪ್ರಸಿದ್ಧ ದರ್ಗಾ ಆಡಳಿತ ಸಮಿತಿಯ ಪಾರದರ್ಶಕತೆಗೆ ಕಪ್ಪು ಚುಕ್ಕೆ ತರುವುದೇ ಇದರ ಉದ್ದೇಶವಾಗಿದೆ.ಸಮಿತಿಯು ಮಹಾಸಭೆ…

Read More

ಬಂಟ್ವಾಳ,ನ.13: ಸುರಿಬೈಲು ದಾರುಲ್ ಅಶ್‌ಅರಿಯ್ಯ ಎಜ್ಯುಕೇಶನಲ್ ಸಂಸ್ಥೆಯಲ್ಲಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಅಲ್ಲಿಮ್ ಮೆಹರ್ಜಾನ್ ಸ್ಪರ್ಧಾಕೂಟವು ನಡೆಯಿತು. ಶೈಖುನಾ ಸುರಿಬೈಲು ಉಸ್ತಾದರ ಮಖಾಂ ಝಿಯಾರತ್‌ನೊಂದಿಗೆ ಆರಂಭಗೊAಡ ಕಾರ್ಯಕ್ರಮವನ್ನು ಬೊಳ್ಮಾರ್ ಉಸ್ತಾದ್ ಉದ್ಘಾಟಿಸಿದರು. ಮುಅಲ್ಲಿಮ್ ಮೆಹರ್ಜಾನ್ ಸಮಿತಿಯ ಅಧ್ಯಕ್ಷ ಮುಹಮ್ಮದ್ ಹನೀಫ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಎಸ್ಜೆಎಂ ರಾಜ್ಯ ಉಪಾಧ್ಯಕ್ಷ ಮುಹಿಯುದ್ದೀನ್ ಸಅದಿ ತೋಟಾಲ್ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಯಾಕೂಬ್ ಲತೀಫಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ, ಸುಲೈಮಾನ್ ಹಾಜಿ ನಾರ್ಶಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂಎAಎ ಸಿದ್ದೀಕ್ ಸಅದಿ ಅಲ್ ಫುರ್ಖಾನಿ, ಹೈದರ್ ಅಶ್ರಫಿ ಮತ್ತಿತರರು ಭಾಗವಹಿಸಿದ್ದರು.

Read More

ದೇರಳಕಟ್ಟೆ; ಸಾಧನೆಗೆ ವಯಸ್ಸಿನ ಮಿತಿಯಿಲ್ಲ ಎಂಬ ಮಾತಿಗೆ 11ರ ಹರೆಯದ ಈ ಪೋರ ನಿದರ್ಶನವಾಗಿದ್ದಾನೆ. ಕಿರಿಯ ವಯಸ್ಸಿನಲ್ಲೇ ಕ್ರೀಡಾಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಚಿಂತ್ಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ನಡೆದ ಆಟೋ ಕ್ರಾಸ್ ಡರ್ಟ್ ಬೈಕ್ ರೇಸಿಂಗ್” ಸ್ಪರ್ಧೆಯಲ್ಲಿ ಕಿಡ್ಸ್ ಕ್ಲಾಸ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ತಲಪಾಡಿಯ ಶಾರದ ವಿದ್ಯಾ ನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಚಿಂತ್ಯ ತನ್ನ ಅವಿರತ ಶ್ರಮದಿಂದ ಎರಡನೇ ಸ್ಥಾನವನ್ನು ಪಡೆದುಕೊಂಡು ತಾನು ವಿದ್ಯಾರ್ಜನೆ ಪಡೆಯುತ್ತಿರುವ ಸಂಸ್ಥೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ. ಈ ಅಸಾಧಾರಣ ಪ್ರತಿಭೆ ಅಚಿಂತ್ಯ ಅವರು ದೇರಳಕಟ್ಟೆ ಮಾಗಂತಡಿ ನಿವಾಸಿ ಕಿರಣ್ ಕುಮಾರ್ ಹಾಗೂ ಅಕ್ಷತಾ ದಂಪತಿಯ ಸುಪುತ್ರನಾಗಿದ್ದಾನೆ. ಸಣ್ಣವಯಸ್ಸಿನಿಂದಲೇ ಮಗನ ಪ್ರತಿಭೆಯನ್ನು ಗುರುತಿಸಿ ಅವನಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಪೋಷಕರಿಗೆ, ತನ್ನ ಅತೀ ಚಿಕ್ಕ ವಯಸ್ಸಿನಲ್ಲೇ ತನ್ನ ಕ್ರೀಡಾ ಪ್ರತಿಭೆಯಿಂದ ಹೆಮ್ಮೆ ಮೂಡಿಸುವಂತಹ ಕಾರ್ಯವನ್ನು ಅಚಿಂತ್ಯ ಮಾಡಿದ್ದಾನೆ. ಈ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ತನ್ನ ವಯಸ್ಸಿಗಿಂತ ಹೆಚ್ಚಿನ…

Read More

ಪುತ್ತೂರು: ಕಾರು ಮತ್ತು ಅಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ಸ್ಕೂಟರ್ ಸವಾರ ಪುತ್ತೂರು ನಗರದ ಸಾಮೆತ್ತಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಶಶಿಕುಮಾರ್ (36) ಗಾಯಗೊಂಡವರು.ಮಸಾಲ ಹುಡಿಯೊಂದರ ಏಜನ್ಸಿಯಲ್ಲಿ ಕೆಲಸ ಮಾಡುತ್ತಿರುವ ಶಶಿಕುಮಾರ್ ಅವರು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಪೋಳ್ಯ ತಿರುವಿನಲ್ಲಿ ಹಿಂಬಾಗದಿಂದ ಆಗಮಿಸಿದ ಕಬಕ ನಿವಾಸಿ ತೌಫೀಕ್ ಎಂಬವರು ಚಲಾಯಿಸುತ್ತಿದ್ದ ಹುಂಡೈ ಕಾರು ಸ್ಕೂಟರ್ ಗೆ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ‌ ಸ್ಕೂಟರ್ ಸಹಿತ ರಸ್ತೆಗೆ ಎಸೆಯಲ್ಪಟ್ಟ ಶಶಿಕುಮಾರ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ನ. 13  ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ.ಸುಮಾ ಅವರು ಸೋಮವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದರು, ಆದರೆ ಅವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ, ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಕಾರಣ, ಕುಮಾರ್ ಅವರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.ಸುಮಾ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ಮೈಕಟ್ಟು ಮತ್ತು ಗೋಧಿ ಬಣ್ಣದ ಮೈಕಟ್ಟು ಹೋಂದಿದ್ದಾರೆ. ಅವರು ಕೊನೆಯದಾಗಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್ ಧರಿಸಿದ್ದರು. ಅವರು ಕನ್ನಡ, ತುಳು ಮತ್ತು…

Read More