ಪುತ್ತೂರು : ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Author: UllalaVani
ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್ ಅವರೊಂದಿಗೆ ಲೈಫ್ ಜಾಕೆಟ್ಗಳನ್ನು ತೆಗೆದುಕೊಂಡು ಸ್ಥಳಕ್ಕೆ ಧಾವಿಸಿ, ನಾಲ್ವರು ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. “ಮಲ್ಪೆಯಲ್ಲಿ ಸಮುದ್ರವು ಅತ್ಯಂತ ಅನಿರೀಕ್ಷಿತ ಮತ್ತು ಪ್ರಕ್ಷುಬ್ಧವಾಗಿದೆ. ಈಜಲು ತಿಳಿದಿದ್ದರೂ ಯಾರೂ ಕೂಡ ನೀರಿಗೆ ಇಳಿಯಬಾರದು. ಸಮುದ್ರದ ಅಲೆಗಳು ಯಾವುದೇ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಏರಬಹುದು. ಮೀನುಗಾರರು ಸಮುದ್ರಕ್ಕೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್ಗಳನ್ನು ಧರಿಸಬೇಕು” ಎಂದು ಈಶ್ವರ್ ಮಲ್ಪೆ ತಿಳಿಸಿದರು.
ಮಂಗಳೂರು : ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಈ ಘಟನೆಗೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವ ಅವರು ಆಸ್ಪತ್ರೆಗೆ ಧಾವಿಸಿ ಬಂದು ಆಸ್ಪತ್ರೆಯ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿರವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.
ಬಂಟ್ವಾಳ : ವಾಯುಭಾರ ಕುಸಿತ ದ.ಕ. ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು,ಹಲವೆಡೆ ಹಾನಿಯಾಗಿದೆ. ಈ ನಡುವೆ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಸದ್ಯ ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ರವಾನೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿವೀಕ್ಷಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ.
ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್ಗೆ ಕರೆ ಬಂದಿದ್ದು, ತಮ್ಮನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದನೆನ್ನಲಾಗಿದೆ ರಂಜೇಶ್ ಈ ಕರೆ ಮಾಡಿದ್ದನೆನ್ನಲಾಗಿದೆ. ಸಂಬಂಧಿಕರು ಹಾಗೂ ನಾಗರಿಕರು ತಲುಪಿ ಆಸ್ಪತ್ರೆಗೆ ತಲಪಿಸಿದರೂ ಮೂವರೂ ಮೃತಪಟ್ಟಿದ್ದರು. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ದುಬೈಯಲ್ಲಿದ್ದರು. ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದು, ಉದ್ಯಮ ನಡೆಸುತ್ತಿದ್ದರು. ಇದು ಯಶಸ್ವಿ ಯಾಗಲಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಿತ್ತು ಎನ್ನಲಾಗಿದೆ. ಉದ್ಯಮ ನಿಲ್ಲಿಸಿ ಕೂಲಿ ಕೆಲಸಕ್ಕೆ…
ಮಂಗಳೂರು : ತುಳುನಾಡಿನ ಕೃಷಿ ಪರಂಪರೆ ಪ್ರಕೃತಿ ಆರಾಧನೆ, ಸೌಹಾರ್ದ ಹಾಗೂ ಸಮೃದ್ಧ ಬದುಕಿನ ಆಶಯವನ್ನು ಪೋಷಿಸಿಕೊಂಡಿದೆ. ಮನೆ ತುಂಬಿಸುವ ಹಿನ್ನೆಲೆಯಲ್ಲಿ ಭತ್ತದ ತೆನೆಯನ್ನು ಕಟ್ಟುವ ಸಂಪ್ರದಾಯ ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆಸುವ ಆಚರಣೆಯಾಗಿ ಮುಂದುವರಿದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಕುಲಶೇಖರದ ಕನ್ನಗುಡ್ಡೆಯ ಕೊರಗತನಿಯ ಕ್ಷೇತ್ರದಲ್ಲಿ ನಡೆದ ತೆನೆ ಹಾಗೂ ಕಬ್ಬು ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಶಾಸಕ ಜೆ.ಆರ್. ಲೋಬೋ ಅವರು, “ಕೃಷಿ ಬದುಕು ಎಲ್ಲರನ್ನು ಒಂದಾಗಿಸುವ ಪರಂಪರೆಯನ್ನು ಹೊಂದಿದೆ. ಕ್ರೈಸ್ತರು ಆಚರಿಸುವ ತೆನೆ ಹಬ್ಬವು ತುಳುನಾಡಿನಲ್ಲಿ ಕುರಲ್ ಪರ್ಬ ಎಂದು ಜನಾನುರಾಗಿಯಾಗಿದ್ದು, ಇದು ಸಾಮರಸ್ಯದ ಪ್ರತೀಕವಾಗಿದೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿ-ಫೋರ್ ಟಿವಿ ವಾಹಿನಿಯ ಮುಖ್ಯಸ್ಥ ಲಕ್ಷ್ಮಣ್ ಕುಂದರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಘಟಕ ಡೆನಿಸ್ ಡಿಸಿಲ್ವಾ, ಮಾಜಿ ಕಾರ್ಪೊರೇಟರ್ ಪ್ರಕಾಶ್, ಕೆಎಸ್ಆರ್ಟಿಸಿ ಮಾಜಿ ನಿರ್ದೇಶಕ ಟಿ.ಕೆ. ಸುಧೀರ್, ಶೇಖರ್…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಲ್ಲಾಪುವಿನ ಪೀಸ್ ಪಬ್ಲಿಕ್ ಸ್ಕೂಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯಾವಳಿಯಲ್ಲಿ ಮೊದಲ ಬಾರಿ ಸ್ಪರ್ಧಿಸಿದ ಪೀಸ್ ಪಬ್ಲಿಕ್ ಸ್ಕೂಲ್ ತಂಡ ಆರು ಪಂದ್ಯಗಳಲ್ಲಿ ಅತ್ಯುತ್ತಮವಾಗಿ ಆಡಿ ಪ್ರಶಸ್ತಿ ಪ್ರವೇಶಿಸಿತ್ತು. ಫೈನಲ್ ಪಂದ್ಯದಲ್ಲಿ ಮೂಡುಬಿದಿರೆಯ ಅಲ್ ಪುರ್ಖಾನ್ ಪ್ರಾಥಮಿಕ ಶಾಲಾ ತಂಡವನ್ನು 1-0 ಅಂತರದ ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಪೀಸ್ ಪಬ್ಲಿಕ್ ಸ್ಕೂಲ್ ತಂಡಕ್ಕೆ ಕೋಚ್ ಎನ್.ಉಸ್ಮಾನ್ ಮುಸ್ತಫ ತರಬೇತಿ ನೀಡಿದ್ದರೆ, ಸ್ಕೂಲ್ ಫಿಟ್ನೆಸ್ ಟ್ರೈನರ್ ಅಂತಾರಾಷ್ಟ್ರೀಯ ಖ್ಯಾತಿಯ ಅತ್ಲೀಟ್ ಅಬ್ದುಲ್ ರಹ್ಮಾನ್ ಫಿಟ್ನೆಸ್ ಸಲಹೆ ನೀಡಿದ್ದಾರೆ. ವಿಜೇತ ತಂಡವನ್ನು ಸ್ಕೂಲ್ ಆಡಳಿತ ಸಮಿತಿಯ ಮುಖ್ಯಸ್ಥ ಅಬ್ದುಲ್ ರಹಿಮಾನ್(ಬಾಶಾ) ಅಭಿನಂದಿಸಿದ್ದಾರೆ.
ಕೊಣಾಜೆ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆಗಳು ನಡೆಯಲಿವೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಈ ವರ್ಷದ ದಸರಾದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿವೆ ಎಂದು ಪದ್ಮರಾಜ್ ದೃಢಪಡಿಸಿದರು. ನವದುರ್ಗಾ ಮತ್ತು ಶಾರದಾ ದೇವಿಯ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗುವುದು, ದೇವಾಲಯದ ಆವರಣದೊಳಗೆ ಶಾರದಾ ದೇವಿಯ ವಿಗ್ರಹವನ್ನು ಸಾಧಾರಣ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು. ಗಮನಾರ್ಹ ನಡೆಯಲ್ಲಿ, ಈ ವರ್ಷ ಹೊಸ ಸಾಂಸ್ಕೃತಿಕ ತಂಡಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗಿದೆ. 700 ರಿಂದ 800 ಕಲಾವಿದರನ್ನು ಒಳಗೊಂಡ ಒಟ್ಟು 31 ತಂಡಗಳು ಭಾಗವಹಿಸಲಿವೆ. ಈ ಉತ್ಸವದಲ್ಲಿ ಸಮಾಜಕ್ಕೆ ಗಣನೀಯ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು ಸಂಸ್ಥೆಗಳಿಗೆ ಸನ್ಮಾನಗಳು ಸಹ ನಡೆಯಲಿವೆ. ಉತ್ಸವದ ಭಾಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿವೆ, ಅವುಗಳೆಂದರೆ : ಚಿತ್ರ ಬಿಡಿಸುವ ಸ್ಪರ್ಧೆ, ಕಿನ್ನಿ ಪಿಲಿ ಸ್ಪರ್ಧೆ (ಎರಡು ವಯೋಮಾನದವರಿಗೆ:…
ದೇರಳಕಟ್ಟೆ : ಮಹಿಳೆಯರ ಆರೋಗ್ಯ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯವಿಲ್ಲದೆ ದೇಹ ಸದೃಢವಾಗಲು ಸಾಧ್ಯವಿಲ್ಲ. ಮಹಿಳೆಯರಲ್ಲಿ ಪೌಷ್ಠಿಕಾಂಶದ ಕೊರತೆ ಉಂಟಾದರೆ, ಅದರ ಪರಿಣಾಮ ಸಂಪೂರ್ಣ ಕುಟುಂಬದ ಮೇಲೆ ಬೀಳುತ್ತದೆ ಎಂದು ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ಆಡಳಿತ ನಿರ್ದೇಶಕ ಫಾ.ಫಾಸ್ಟಿನ್ ಲೂಕಸ್ ಲೋಬೊ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಸ್ತ್ರೀ ಆಯೋಗ ಹಾಗೂ ಕೆಥೋಲಿಕಾ ಸ್ತ್ರೀ ಸಂಘಟನೆ , ದಕ್ಷಿಣ ವಲಯ , ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ದೇರಳಕಟ್ಟೆ , ಹಳೆಯ ವಿದ್ಯಾರ್ಥಿಗಳ ಅಸೋಸಿಯೇಶನ್ , ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ ಸಹಯೋಗದೊಂದಿಗೆ ದೇರಳಕಟ್ಟೆಯ ಫಾದರ್ ಮುಲ್ಲರ್ ಆಡಿಟೋರಿಯಂನಲ್ಲಿ ಜರಗಿದ ಬೃಹತ್ ಮಹಿಳಾ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಆರೋಗ್ಯಕ್ಕೆ ಗಮನಕೊಟ್ಟಾಗ ಮಾತ್ರ, ಇಡೀ ಸಮಾಜ ಆರೋಗ್ಯವಾಗಿರಲು ಸಾಧ್ಯ. ಆದುದರಿಂದ ಮಹಿಳೆಯರ ಆರೋಗ್ಯಕ್ಕೆ ಪ್ರಥಮ ಪ್ರಾಶಸ್ತ್ಯ ನೀಡೋಣ. ಈ ನಿಟ್ಟಿನಲ್ಲಿ ಸಂಸ್ಥೆ ಹಾಗೂ…

