Author: UllalaVani

Kannada News From Coastal Karnataka

ಉಳ್ಳಾಲ :ಬಡ ವರ್ಗ ಹಾಗೂ ವಾಹನ ಚಾಲಕರ ಕಷ್ಟಗಳನ್ನು ಮನಗಂಡು 1975ರಲ್ಲಿ ಫಾದರ್ ಫ್ರೆಡ್ ವಿ. ಪಿರೇರಾ ಅವರ ಮುಂದಾಳತ್ವದಲ್ಲಿ ಆರಂಭಗೊಡ ಮ್ಯಾಕೋ ಸಹಕಾರಿ ಸಂಘವು ಯಶಸ್ವಿಯಾಗಿ ತನ್ನ ಸುವರ್ಣ ಮಹೋತ್ಸವ ವರ್ಷವನ್ನು ಪೂರೈಸಿದೆ. ಮಂಗಳೂರಿನ ಮೊದಲ ಸಹಕಾರಿ ಸಂಘ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಮ್ಯಾಕೋ, ಕಳೆದ ಐದು ದಶಕಗಳಿಂದ ಸಮಾಜದ ಬಡ ವರ್ಗದವರಿಗೆ ಆರ್ಥಿಕ ಬಲವಾಗಿ ಪರಿಣಮಿಸಿದೆ. ಇದೀಗ ಉಳ್ಳಾಲದ ಹೃದಯಭಾಗ ತೊಕ್ಕೊಟ್ಟುವಿನಲ್ಲಿ ಕಾರ‍್ಯಾರಂಭಿಸುವ ಮೂಲಕ ಈ ಭಾಗದ ರಿಕ್ಷಾ ಚಾಲಕರು ಹಾಗೂ ಬಡ ವರ್ಗದವರಿಗೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯರು ಹಾಗೂ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಅಧ್ಯಕ್ಷ ಐವನ್ ಡಿಸೋಜ ಅಭಿಪ್ರಾಯಪಟ್ಟರು.ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತ ಇದರ ತೊಕ್ಕೊಟ್ಟು ಪೆರ್ಮನ್ನೂರು ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ವಾಹನ ಚಾಲಕರಿಗೆ ಆರ್ಥಿಕ ನೆರವು ಹಾಗೂ ಭದ್ರತೆ ನೀಡುವ ಉದ್ದೇಶದಿಂದ ಹುಟ್ಟಿಕೊಂಡ ಈ ಸಂಘ ಇಂದು ಸಾವಿರಾರು…

Read More

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಬಾಹಿರ ಸುತ್ತೋಲೆಗಳನ್ನು ಹೊರಡಿಸಿ, ಕಾನೂನುಬದ್ಧವಾಗಿ ನಿಯಮಗಳನ್ನು ಅನುಷ್ಠಾನಗೊಳಿಸದೆ ಕ್ವಾರಿ ಮತ್ತು ಕ್ರಷರ್‌ ಓನರ್ಸ್‌ , ಲಾರಿ ಮಾಲೀಕರ ಮೇಲೆ ಕೋಟ್ಯಂತರ ದಂಡ ವಿಧಿಸಿರುವುದರ ವಿರುದ್ಧ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ಬೆಂಗಳೂರು ಇದರ ರಾಜ್ಯಾಧ್ಯಕ್ಷರು ಡಾ॥ ರವೀಂದ್ರ ಶೆಟ್ಟಿ ಬಜಗೋಳಿ ಇವರ ಮುಖಂಡತ್ವದಲ್ಲಿ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯ ಹೂಡಿರುವ ದಾವೆ ಹಿನ್ನೆಲೆಯಲ್ಲಿ ಸರಕಾರಕ್ಕೆ ನೋಟೀಸ್‌ ಜಾರಿ ಮಾಡುವ ಮೂಲಕ ಪ್ರಾರಂಭಿಕ ಜಯ ದೊರೆತಿದೆ.ಸರ್ಕಾರ ರಾಜಧನ ಪಾವತಿ ವ್ಯವಸ್ಥೆಯನ್ನು ಸಮರ್ಪಕಗೊಳಿಸಿಲ್ಲ. ಸರ್ಕಾರಿ ಕಾಮಗಾರಿ ನಿರ್ವಹಣಾ ಗುತ್ತಿಗೆದಾರರು ಮತ್ತು ಖಾಸಗೀ ಕಾಮಗಾರಿ ನಿರ್ವಹಣಾ ಗುತ್ತಿಗೆದಾರರು ಯಾವ ರೀತಿ ರಾಜಧನವನ್ನು ಎಲ್ಲಿ ಪಾವತಿಸಬೇಕೆಂದು ಕೇಂದ್ರ MMDR-1957 ಮತ್ತು ರಾಜ್ಯ KMMCR- 1994 ನಿಯಮಗಳಲ್ಲಿ ಸ್ಪಷ್ಟತೆ ಇದ್ದರೂ ಕೂಡಾ ಅದನ್ನು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಬಾಹಿರ ಸುತ್ತೋಲೆಗಳನ್ನು ಹೊರಡಿಸಿ ಈ ಸುತ್ತೋಲೆಗೆ ಅನುಗುಣವಾಗಿ WEDA’s (Work Executive Department…

Read More

ಮಂಗಳೂರು : ಯುನಿಸೆಕ್ಸ್ ಬ್ಯೂಟಿಪಾರ್ಲರ್, ಆಯುರ್ವೇದಿಕ್ ಸೆಂಟರ್ ಸೇರಿದಂತೆ ಕೆಲವೆಡೆ ಮಸಾಜ್ ಹೆಸರಿನಲ್ಲಿ ನಡೆಯುವ ಅನೈತಿಕ ದಂಧೆಗೆ ಕಡಿವಾಣ ಹಾಕಲು ಕೇರಳ ಮಾದರಿಯ ಕಾನೂನು ಜಾರಿಗೊಳಿಸಬೇಕು ಎಂದು ನ್ಯಾಯವಾದಿ ಮನೋರಾಜ್ ರಾಜೀವ ಒತ್ತಾಯಿಸಿದ್ದಾರೆ.ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ವಿಪಕ್ಷ ನಾಯಕರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತಿದ್ದು, ಜನಪ್ರತಿನಿಧಿಗಳು ಅಧಿವೇಶ ನದಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದರು.ಯುನಿಸೆಕ್ಸ್ ಬ್ಯೂಟಿ ಪಾರ್ಲರ್‌ಗಳಲ್ಲಿ ಯುವತಿಯರಿಂದ ಯುವಕರಿಗೆ ಮಸಾಜ್ ನೆಪದಲ್ಲಿ ಅನೈತಿಕ ದಂಧೆ ನಡೆಸಲಾಗುತ್ತಿರುವ ದೂರುಗಳಿವೆ. ಆಯುರ್ವೇದಿಕ್ ಸೆಂಟರ್‌ಗಳಲ್ಲಿಯೂ ಯಾವ ರೀತಿಯಲ್ಲಿ ಮಸಾಜ್ ಮಾಡಬೇಕು, ಅನುಸರಿಸಬೇಕಾದ ನಿಯಮಗಳು, ವ್ಯವಸ್ಥೆ ಹೇಗಿರಬೇಕು ಎಂಬ ಬಗ್ಗೆ ಯಾವುದೇ ಕಾನೂನು ದೇಶದ ಕೇರಳ ರಾಜ್ಯದಲ್ಲಿ ಹೊರತು ಪಡಿಸಿ ಎಲ್ಲಿಯೂ ಇಲ್ಲ. ಹಾಗಾಗಿ ಕೆಲವೊಂದು ಯುನಿಸೆಕ್ಸ್ ಬ್ಯೂಟಿಪಾರ್ಲರ್‌ ಗಳಲ್ಲಿ ಯುವತಿಯರಿಂದ ಯುವಕರಿಗೆ ಸೇವೆಯನ್ನು ಒದಗಿಸುವ ನೆಪದಲ್ಲಿ ಪೊಲೀಸರಿಂದ ದಾಳಿ ನಡೆಸಿ ತೊಂದರೆ ನೀಡುವ ಪ್ರಕ್ರಿಯೆಯೂ ನಡೆಯುತ್ತದೆ. ಇದರಿಂದ ಅಲ್ಲಿ…

Read More

ಉಳ್ಳಾಲ: ಶಾಂತಿ ಎಜುಕೇಶನಲ್ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ಹಿರಾ ಶಿಕ್ಷಣ ಸಂಸ್ಥೆ ಗಳ ರಜತ ಮಹೋತ್ಸವ ಆಚರಣೆ ಪ್ರಯುಕ್ತ ಮಜ್ಲಿಸ್-ಎ-ಅನ್ಸಾರ್-ಎ-ತ’ಲೀಮ್ ಹಿತೈಷಿ ಗಳ ಶೈಕ್ಷಣಿಕ ಸಭೆಯು ಹಿರಾ ಕಾಲೇಜು ಸಭಾಂಗಣದಲ್ಲಿ ನಡೆಯಿತು.ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ,ಡಾ. ವೈ. ಅಬ್ದುಲ್ಲಾ ಕುಂಞಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಣ ಕೇಂದ್ರ ಆರಂಭಿಸುವುದು ಮುಖ್ಯ ಅಲ್ಲ, ಜನರ ಮೇಲೆ ವಿಶ್ವಾಸ ಗಳಿಸುವುದು ಮುಖ್ಯ ಆಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದು ಲೆಕ್ಕಾಚಾರ ಮಾಡಿ ಅವರ ಪಾಲಿಗೆ ಪೋಷಕರು ಬಿಡಬಾರದು.ಶಿಕ್ಷಕರ ಜೊತೆ ಪೋಷಕರು ಕೈಜೋಡಿಸಿದರೆ ಮಾತ್ರ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.ಯೂನಿಟಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಾ ಅಧ್ಯಕ್ಷ ಡಾ. ಹಬೀಬ್ ರಹ್ಮಾನ್ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಹಿರಾ ಶಿಕ್ಷಣ ಸಂಸ್ಥೆ ಅಭಿವೃದ್ಧಿಯ ಹೆಜ್ಜೆ ಇಟ್ಟಿದ್ದು, ಉತ್ತಮ ಸಾಧನೆ ಮಾಡಿದೆ. ಇಲ್ಲಿ ಕಲಿತ ಬಹಳಷ್ಟು ವಿದ್ಯಾರ್ಥಿನಿ ಯರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿ ಕೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರು ಬೆಳೆದರೆ…

Read More

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಚಿನ್ ಟಿ. (26) ಮತ್ತು ಮಂಜುನಾಥ್ (32) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ವಜಾಗೊಳಿಸಿದೆ.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅಪರಾಧದ ಸ್ವರೂಪ ಮತ್ತು ತೀವ್ರತೆಯ ಕಾರಣದಿಂದಾಗಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಉಚಿತ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ.ಕರ್ನಾಟಕದಲ್ಲಿ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಲಾಗುತ್ತಿದೆ. ಈ ವರ್ಷ ಈ ಉದ್ದೇಶಕ್ಕಾಗಿ 111 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲ್ವೀಚಾರಣಾ ಸಮಿತಿಯು ಶೂ ಮತ್ತು ಸಾಕ್ಸ್‌ಗಳ ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ. 1 ರಿಂದ 5 ನೇ ತರಗತಿಳ ಮಕ್ಕಳಿಗೆ ಪ್ರತಿ ಸೆಟ್‌ಗೆ 265 ರೂ., 6 ರಿಂದ 8 ನೇ ತರಗತಿಗಳಿಗೆ 295 ರೂ. ಮತ್ತು 9 ರಿಂದ 10 ನೇ ತರಗತಿಗಳಿಗೆ ವಿತರಿಸಲಾಗುವ ಶೂ , ಸಾಕ್ಸ್‌ಗಳ 325 ರೂ.ಗಳ ಬಜೆಟ್ ನಿಗದಿಪಡಿಸಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನಾಲ್ಕು ತಿಂಗಳ ಕಾಲ ಮಳೆ ಇರುವ ಕಾರಣಕ್ಕಾಗಿ ಶೂಗಳ ಬದಲಿಗೆ ಚಪ್ಪಲಿ ಗಳನ್ನು ವಿತರಿಸಲಾಗುತ್ತದೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಉತ್ತೇಜಿಸಲು ಶಿಕ್ಷಣ ಇಲಾಖೆ 2015-16…

Read More

ಕುಂಪಲ: ಬೈಕ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೋಂಡು ಆಸ್ಪತ್ರೆಯಲ್ಲಿದ್ದ ಪಾದಚಾರಿ ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ಘಟನೆ ನಡೆದಿದೆ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Read More

ಉಳ್ಳಾಲ: ಪಿಲಾರು ಲಕ್ಷ್ಮೀಗುಡ್ಡೆ ನಿವಾಸಿ ರೋಹಿತಾಶ್ವ (40)  ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಪಿಲಾರು ನಾಗಬ್ರಹ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಇವರು,  ಎಟಿಎಂ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಅವಿವಾಹಿತರಾಗಿರುವ ಇವರು  ಇಬ್ಬರು ಸಹೋದರರು, ಮೂವರು ಸಹೋದರಿಯರು ತಾಯಿ ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ

Read More

ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿಧಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಆದಾಗ್ಯೂ ಸಾರ್ವಜನಿಕರು, ಹಿರಿಯ ನಾಗರಿಕರು ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಧ್ವನಿವರ್ಧಕ ನೀಡದಿರಲು ನಿರ್ಧಾರ : ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ…

Read More

ಉಳ್ಳಾಲ : ಕಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ದಕ್ಷಿಣ ವಲಯ ಹಾಗೂ ಪೆರ್ಮನ್ನೂರು ಘಟಕ, ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು, ಎಸ್‌‌.ಎಸ್ ವಿ.ಪಿ ಯೂತ್ ವಿಂಗ್, ಲಯನ್ಸ್ ಮತ್ತು ಲಿಯೋ‌ ಕ್ಲಬ್ ಸಹಭಾಗಿತ್ವ ದಲ್ಲಿ ರಕ್ತದಾನ ಶಿಬಿರ ತೊಕ್ಕೋಟ್ಟು ಸೆಂಟ್ ಸೆಬಾಸ್ಟಿಯನ್ ಶಾಲಾ‌ ವಠಾರದಲ್ಲಿ ನಡೆಯಿತು. ಪೆರ್ಮನ್ನೂರು ಸೆಂಟ್ ಸೆಬಾಸ್ಟಿಯನ್ ಚಚ್೯ ನ ಧರ್ಮಗುರು ಸಿಪ್ರಿಯಾನ್ ಪಿಂಟೋ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ದಾನದಲ್ಲಿ‌ ಮಹಾ ದಾನ ರಕ್ತದಾನ. ರಕ್ತದಾನ ಮಾಡುವ ಮೂಲಕ ನಮ್ಮ ಅರೋಗ್ಯ ವೃದ್ಧಿಸುದರ ಜೊತೆಗೆ ಹಲವು ಜೀವಗಳನ್ನು ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ರಕ್ತದಾನ ಮಾಡುವ ಮೂಲಕ ಇತರಿಗೆ ಮಾದರಿಯಾಗಬೇಕು ಎಂದು ಹೇಳಿದರು. ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪನೀರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕಳೆದ ಐದಾರು ವರ್ಷಗಳಿಂದ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ದಕ್ಷಿಣ ವಲಯದ ರಕ್ತನಿಧಿ ವಿಭಾಗವು ರಕ್ತದ ಮಹತ್ವವನ್ನು ಅರಿತು ನಿರಂತರವಾಗಿ ರಕ್ತದಾನಶಿಬಿರ ಅಯೋಜಿಸುವ ಮೂಲಕ…

Read More