Author: UllalaVani

Kannada News From Coastal Karnataka

ಮಂಗಳೂರು : ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಾರ್ಚ್ 29 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೆಕ್ಸ್ ನ ಮುತ್ತೂಟ್ ಫೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್ ಅನ್ನು ತುಂಡು ಮಾಡಿ ಫೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ ನಂ: 42/2025 ಕಲಂ: 331[40], 305, 62, 13 ಬಿಎನ್‌ಎಸ್ ರಂತೆ ಪ್ರಕರಣ ದಾಖಲಾರುತ್ತದೆ. ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ…

Read More

ಮಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಜ್ ಅವರ ನೇತೃತ್ವದಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಮಿತಿಯ ಸ್ವಯಂಸೇವಕರು 400 ಕ್ಕೂ ಹೆಚ್ಚು ಜನರಿಗೆ ಉಚಿತ ಊಟ ವಿತರಿಸಿದರು. ಇದೇ ವೇಳೆ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಬೆಂಬಲ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸ್ ಅವರು ಪ್ರತಿಪಾದಿಸಿದ ಸಾಮಾಜಿಕ ನ್ಯಾಯ, ಮತ್ತು ಸಮಾಜಕ್ಕೆ   ನೀಡುವ ಸೇವೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಯುವ ಕಾಂಗ್ರೆಸ್ ಸಮಿತಿಯು ಸಮುದಾಯದೊಂದಿಗೆ ನಿಂತು ಅಗತ್ಯವಿರುವವರಿಗೆ ಆರೈಕೆ ಮಾಡುವ ಅವರ ದೃಷ್ಟಿಕೋನವನ್ನು ಮುಂದುವರಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನೀತ್ ಡಿಸಾ ಕುಲಶೇಖರ್, ದೀಕ್ಷಿತ್ ಅತ್ತಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೌಹಾನ್ ಎಸ್.ಕೆ., ಮಂಗಳೂರು ದಕ್ಷಿಣ…

Read More

ಕಾಸರಗೋಡು : ಮದ್ರಸಕ್ಕೆ ತೆರಳುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರದ ರಶೀದ್ ಅವರ ಪುತ್ರ ಅಬೂಬಕ್ಕರ್ ರಫಾನ್ ಗಾಯಗೊಂಡ ಬಾಲಕ. ಬೆಳಿಗ್ಗೆ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ನಾಯಿ ಅಟ್ಟಾಡಿಸಿ ದಾಳಿ ನಡೆಸಿದೆ ಎನ್ನಲಾಗಿದೆ. ಬಾಲಕನ ಬೊಬ್ಬೆ ಕೇಳಿ ಸ್ಥಳೀಯರು ದಾವಿಸಿ ಬರುತ್ತಿದ್ದಂತೆ ನಾಯಿ ತಪ್ಪಿಸಿಕೊಂಡಿದೆ. ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಮಂಗಳೂರು : ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಿದ್ದು, ಚೌತಿಯ ಮುನ್ನಾದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದೊಂದಿಗೆ ಸೇರಿಕೊಳ್ಳಲು ಅನುಕೂಲವಾಗುವಂತೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಕೊಟ್ಟ ರೈಲ್ವೆ ಸಚಿವರಾದ ಅಶ್ವಿನ ವೈಷ್ಣವಿ ಮತ್ತು ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Read More

ಉಳ್ಳಾಲ: ಮಾ.29 ರಂದು ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೇಕ್ಸ್ ನ ಮುತ್ತೂಟ್ ಪೈನಾನ್ಸ್ ಕಚೇರಿಯಿಂದ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ವೆಲ್ಲರಿಕುಂಡು ಜಿಲ್ಲೆಯ ಮಂಡಿಯಾನ್‌ ನಿವಾಸಿ ಅಬ್ದುಲ್‌ ಲತೀಫ್‌ ಯಾನೆ ಲತೀಫ್‌ (47) ಬಂಧಿತ.ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್ ಅನ್ನು ತುಂಡು ಮಾಡಿ ಪೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಮೂವರು ಆರೋಪಿಗಳು ಪ್ರಯತ್ನಿಸಿದ್ದರು. ಪ್ರಕರಣ ಸಂಬಂಧ ಸ್ಥಳೀಯರ ಸಹಕಾರದೊಂದಿಗೆ ಕೊಣಾಜೆ ಪೊಲೀಸರು ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಞಂಗಾಡ್ ನ ಆರ್ಷದ್ ಎಂಬವರನ್ನು ಬಂಧಿಸಿದ್ದರು. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ ನಂ: 42/2025 ಕಲಂ: 331[40], 305, 62, 13 BNS ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಆರು ತಿಂಗಳುಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಈ ಹಿಂದೆ ಕೇರಳದ ರಾಜಧಾನಿ ಜ್ಯುವೆಲ್ಲರಿ ಅಂಗಡಿಯಿಂದ 20 ಕೆಜಿ ಚಿನ್ನ ಹಾಗೂ ಕೇರಳದ ವಿಜಯ ಬ್ಯಾಂಕ್‌ನಿಂದ 15.80 ಕೆಜಿ…

Read More

ಮಂಗಳೂರು : ಈ ಬಾರಿ ಅಧಿಕ ಮಳೆ, ಕೊಳೆರೋಗದಿಂದ ಶೇ 50ಕ್ಕಿಂತ ಅಧಿಕ ಅಡಿಕೆ ನಷ್ಟವಾಗಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.ಸಂಘವು ಈ ಬಗ್ಗೆ ಆನ್‌ಲೈನ್-ಮೂಲಕ ಸಮೀಕ್ಷೆ ನಡೆಸಿತ್ತು. ದಕ್ಷಿಣ ಕನ್ನಡ ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳ ಕೃಷಿಕರು ಕೊಳೆರೋಗದ ಬಗ್ಗೆ ಮಾಹಿತಿ-ನೀಡಿದ್ದಾರೆ. ಒಟ್ಟು 503 ಕೃಷಿಕರ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಮಾಹಿತಿ -ಪ್ರಕಾರ, ಶೇ 95 ಕೃಷಿಕರ ಅಡಿಕೆ ತೋಟದಲ್ಲಿ ಕೊಳೆರೋಗ ಕಂಡು ಬಂದಿದ್ದು ಶೇ 50ಕ್ಕಿಂತ ಅಧಿಕ ಬೆಳೆ ನಷ್ಟವಾಗಿದೆ ಎಂದು ಸಂಘ ತಿಳಿಸಿದೆ. ಮಳೆಯ ಕಾರಣದಿಂದ ಶೇ 84ರಷ್ಟು ಕೃಷಿಕರಿಗೆ ಔಷಧ ಸಿಂಪಡಣೆ ಸಾಧ್ಯವಾಗಿಲ್ಲ. ಶೇ 47ರಷ್ಟು ಕೃಷಿಕರಿಗೆ  ಒಂದು ಬಾರಿ ಔಷಧ ಸಿಂಪಡಣೆ ಸಾಧ್ಯವಾಗಿದೆ. ಶೇ 40ರಷ್ಟು ಜನರು ಎರಡು ಬಾರಿ ಔಷಧ ಸಿಂಪಡಣೆ ಮಾಡಿದ್ದಾರೆ. ಬಹುತೇಕ ಕೃಷಿಕರು ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೊ…

Read More

ಅಮರಾವತಿ : 121 ಕೆ.ಜಿ. ಚಿನ್ನವನ್ನು ತಿರುಪತಿ ವೆಂಕಟೇಶ್ವರ ಸ್ವಾಮಿಗೆ ದೇಣಿಗೆಯಾಗಿ ನೀಡಲು ಭಕ್ತರೊಬ್ಬರು ಮುಂದೆ ಬಂದಿದ್ದಾರೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ತಿಳಿಸಿದ್ದಾರೆ. ತಮ್ಮ ಉದ್ಯಮವು ಯಶಸ್ವಿಯಾಗಿರುವ ಕಾರಣಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸಲು ಸುಮಾರು ₹140 ಕೋಟಿ ಮೌಲ್ಯದ ಈ ಚಿನ್ನವನ್ನು ಅವರು ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಂಗಳಗಿರಿಯಲ್ಲಿ ನಡೆದ ‘ಬಡತನ ನಿರ್ಮೂಲನೆ’ ಕಾರ್ಯಕ್ರಮದಲ್ಲಿ ಮಾತನಾಡಿದ ನಾಯ್ಡು, ‘ಕಂಪನಿಯೊಂದನ್ನು ಸ್ಥಾಪಿಸಲು ಬಯಸಿದ್ದ ಭಕ್ತರೊಬ್ಬರು, ಅದನ್ನು ಪ್ರಾರಂಭಿಸಿ ಉದ್ಯಮದಲ್ಲಿ ಯಶಸ್ವಿಯಾದರು. ಹಾಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ದೇಣಿಗೆ ನೀಡುತ್ತಿದ್ದಾರೆ’ ಎಂದಿದ್ದಾರೆ. ದೇಣಿಗೆ ನೀಡಲಿರುವ ಭಕ್ತ ಅನಾಮಧೇಯರಾಗಿ ಉಳಿಯಲು ಬಯಸಿದ್ದಾರೆ ಎಂದು ಹೇಳಿದ ಅವರು, ‘ತಮ್ಮ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಿ ಸುಮಾರು ₹6 ಸಾವಿರದಿಂದ ₹7 ಸಾವಿರ ಕೋಟಿ ಗಳಿಸಿದ್ದಾರೆ’ ಎಂದೂ ಮಾಹಿತಿ ನೀಡಿದ್ದಾರೆ.

Read More

ನವದೆಹಲಿ : ಚೀನಾ ದೇಶದಲ್ಲಿ ಕುಕ್ಕುಟೋದ್ಯಮ ನೆಲಕಚ್ಚಿದೆ. ಅದರ ಪರಿಣಾಮ ಬ್ಯಾಡ್ಮಿಂಟನ್ ಕ್ರೀಡೆಯ ಮೇಲಾಗುತ್ತಿದೆ.  ಹೌದು; ಚೀನಾದಲ್ಲಿ ಹಂದಿ ಮಾಂಸ ಖಾದ್ಯಗಳ ಸೇವನೆ ಹೆಚ್ಚುತ್ತಿದ್ದು, ಬಾತುಕೋಳಿಗಳ ಖಾದ್ಯಗಳ ಬೇಡಿಕೆ ಕುಸಿದಿದೆ. ಇದರಿಂದಾಗಿ ಬಾತುಕೋಳಿಗಳ ಪುಕ್ಕಗಳ ಲಭ್ಯತೆ ಗಣನೀಯವಾಗಿ ಕುಸಿದಿದ್ದು, ಬ್ಯಾಡ್ಮಿಂಟನ್ ಆಟದಲ್ಲಿ ಬಳಸಲಾಗುವ ಶಟಲ್ ಕಾಕ್‌ಗಳ ತಯಾರಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಫ್ರೆಂಚ್ ಸುದ್ದಿ ಪತ್ರಿಕೆ ‘ಲಾ ಎಕ್ವಿಪ್’ ಈಚೆಗೆ ವರದಿ ಮಾಡಿದೆ. ಬಾತುಕೋಳಿ ಅಥವಾ ಇನ್ನಿತರ ಪ್ರಾಣಿ, ಪಕ್ಷಿಗಳಿಂದ ಶಟಲ್ ತಯಾರಿಕೆಯ ಕಚ್ಚಾವಸ್ತುಗಳ ಮೇಲೆ ಅವಲಂಬಿತರಾಗುವುದನ್ನು ಬಿಡುವ ಕಾಲ ಇದು. ಅದಕ್ಕಾಗಿ ಈಗ ಪರ್ಯಾಯ ಮಾರ್ಗ ಹುಡುಕಬೇಕು ಎಂದು ಭಾರತದ ಶಟಲ್ ತಯಾರಕರು ಅಭಿಪ್ರಾಯಪಟ್ಟಿದ್ದಾರೆ. ‘ಈಗ ಅಥವಾ ಮುಂದಿನ ದಿನಗಳಲ್ಲಿ ಪುಕ್ಕಗಳ ಬಳಕೆಯನ್ನು ಬಿಟ್ಟು ಬೇರೆ ಮಾರ್ಗದತ್ತ ನಾವು ಸಾಗಬೇಕಿದೆ. ನಮ್ಮ ಕ್ರೀಡೆಯು ಅಗಾಧವಾಗಿ ಬೆಳೆದಿದೆ. ಚೀನಾ, ಇಂಡೊನೇಷ್ಯಾ ಮತ್ತು ಭಾರತ ದೇಶಗಳು ಶಟಲ್‌ಗಳ ಬಳಕೆಯಲ್ಲಿ ಸಿಂಹಪಾಲು ಹೊಂದಿವೆ’ ಎಂದು ಭಾರತದ ರಾಷ್ಟ್ರೀಯ ಮುಖ್ಯ ಕೋಚ್ ಪುಲ್ಲೇಲ ಗೋಪಿಚಂದ್ ಅಭಿಪ್ರಾಯಪಟ್ಟಿದ್ದಾರೆ.’ಶಟಲ್‌ಗಳ ಕೊರತೆಗೆ…

Read More

ಮಂಗಳೂರು: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ‌ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿಯ ನಗರ ಅಧ್ಯಕ್ಷೆಯಾಗಿ ಮಾಜಿ ಕಾರ್ಪೊರೇಟರ್ ಕುಮಾರಿ ಅಪ್ಪಿ ಹಾಗೂ ಗ್ರಾಮಾಂತರ ಅಧ್ಯಕ್ಷೆಯಾಗಿ ಉಷಾ ಅಂಚನ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು. ರಾಜ್ಯ ಮಹಿಳಾ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಡಿ ರಾವ್ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಝೀನತ್ ಅವರನ್ನು ನೇಮಕ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ,‌ ಪದ್ಮರಾಜ್ ಪೂಜಾರಿ, ಸದಾಶಿವ ಉಳ್ಳಾಲ್ ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಮಂಜುಳ ನಾಯಕ್, ಶಕುಂತಲಾ ಕಾಮತ್, ನಮಿತಾ.ಡಿ.ರಾವ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಕಾಸರಗೋಡು : ಬೇಕಲ ಸಮೀಪದ ಕೋಟಿಕುಳಂ ಎಂಬಲ್ಲಿನ ಜನವಾಸವಿಲ್ಲದ ಮನೆಯ ಕೊಠಡಿಯಲ್ಲಿ ಭಾರೀ ಪ್ರಮಾಣದ ಪ್ರಾಚ್ಯ ವಸ್ತು ಪತ್ತೆಯಾಗಿದೆ. ಕಂಚಿನ ಪಾತ್ರೆಗಳು, ಕಾಲ್ಗೆಜ್ಜೆ , ಖಡ್ಗ ಗಳು ಹಾಗೂ ಇನ್ನಿತರ ವಸ್ತುಗಳು ಪತ್ತೆಯಾಗಿವೆ. ಕೆಲ ಸಾಮಾಗ್ರಿಗಳಲ್ಲಿ ಅರಬಿ ಅಕ್ಷರಗಳನ್ನು ಪತ್ತೆ ಹಚ್ಚಲಾಗಿದೆ. ಪೊಲೀಸರು ಪ್ರಾಚ್ಯ ವಸ್ತು ಇಲಾಖೆಗೆ ಮಾಹಿತಿ ನೀಡಿದ್ದು, ತನಿಖೆಯ ಬಳಿಕ ನೈಜ ಸ್ಥಿತಿ ಅರಿವಾಗಲಿದೆ. ಮನೆಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.

Read More