ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮವನ್ನು ಫೆ.6ರಿಂದ ಫೆ.25ರವರೆಗೆ ಮಂಜನಾಡಿಯ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಯೆನೆಪೋಯ ನ್ಯಾಚುರೋಪತಿ ಆ್ಯಂಡ್ ಯೋಗ ಸೈನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ.ಪುನೀತ್ ತಿಳಿಸಿದ್ದಾರೆ. ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವು ಯೋಗಾಭ್ಯಾಸ, ಪ್ರಕೃತಿ ಚಿಕಿತ್ಸಾ ವಿಧಾನಗಳು, ಆಹಾರ ನಿಯಂತ್ರಣ ಮತ್ತು ಜೀವನಶೈಲಿ ಪರಿವರ್ತನೆಯ ಮೂಲಕ ಸ್ಥೂಲಕಾಯದ ಸಮಗ್ರ, ಸುರಕ್ಷಿತ ಹಾಗೂ ಸಹಜ ನಿರ್ವಹಣೆಯನ್ನು ಪರಿಣಿತ ವೈದ್ಯರ ಮಾರ್ಗದರ್ಶನದಲ್ಲಿ ಒದಗಿಸುವ ಉದ್ದೇಶವನ್ನು ಹೊಂದಿದೆ ಎಂದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಾಗಿ ಪ್ರಮಾಣಾಧಾರಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನಗಳು, ಔಷಧ ರಹಿತ ಹಾಗೂ ಸಹಜ…
Author: UllalaVani
ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್ ಸುಭಾಷನಗರ ನಿವಾಸಿ ಅನ್ವರ್ ಯಾನೆ ಅನ್ವರ್ ಹುಸೈನ್ (42) ಬಂಧಿತ. ತಡೆದು ಹಣದ ಬೆದರಿಕೆ, ಅವಮಾನಿಸಿದ ಹಿನ್ನೆಲೆಯಲ್ಲಿ 2007 ರಲ್ಲಿ ಐಪಿಸಿ 341, 384, 504, 506 ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜೆಎಂಎಫ್ ಸಿ ಮೂರನೇ ನ್ಯಾಯಾಲಯಕ್ಕೆ ಹಾಜರಾಗದೇ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸದ್ದಾರೆ.
ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ ವಿಷಯವಾಗಿದೆ. ಈ ಅವಧಿಯಲ್ಲಿ ಸದಾ ಸಹಕಾರ, ಮಾರ್ಗದರ್ಶನ ಹಾಗೂ ಸಹಾನುಭೂತಿಯೊಂದಿಗೆ ಬೆಂಬಲ ನೀಡಿದ ಕೆನರಾ ಬ್ಯಾಂಕ್ನ ಎಲ್ಲಾ ಗೌರವಾನ್ವಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ ಕಾಸರಗೋಡು ಹೇಳಿದರು. ದೇರಳಕಟ್ಟೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ನಿಸ್ವಾರ್ಥ ಸೇವಾಭಾವ, ಸಮಯೋಚಿತ ಸ್ಪಂದನೆ ಮತ್ತು ಗ್ರಾಹಕಪರ ದೃಷ್ಟಿಕೋನದಿಂದ ಬ್ಯಾಂಕಿನ ಕಾರ್ಯ ಯಶಸ್ವಿಯಾಗಿ ನೆರವೇರಲು ಸಾಧ್ಯವಾಯಿತು. ಈ ಸಂದರ್ಭದಲ್ಲಿ ಎಲ್ಲರ ಸಹಕಾರಕ್ಕೆ ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ ಎಂದರು.ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆನರಾ ಬ್ಯಾಂಕ್ನಲ್ಲಿ ಕಳೆದ ನಾಲ್ಕು ದಶಕಗಳಿಂದ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಶಿವರಾಮ ಕಾಸರಗೋಡು ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಸಾಂಸ್ಕೃತಿಕ…
ಹಿದಾಯತ್ ನಗರ:ಕೋಟೆಕಾರ್ ಹುಸೈನಿಯ್ಯ ದಅವಾ ದರ್ಸ್ ಅಲ್ ಹಿದಾಯ ಜುಮಾ ಮಸ್ಜಿದ್ ,ಕರ್ನಾಟಕ ಮುಸ್ಲಿಂ ಜಮಾಅತ್ ,ಎಸ್ ವೈ ಎಸ್,ಎಸ್ಸೆಸ್ಸಫ್, ಹಿದಾಯತ್ ನಗರ ಇದರ ವತಿಯಿಂದ ಮಹ್ಳರತುಲ್ ಬದ್ರಿಯ ವಾರ್ಷಿಕ , ದರ್ಸ್ ವಾರ್ಷಿಕ ಹಾಗೂ ” ಮಾದರಿ ಮದುವೆ ಶತದಿನ ಅಭಿಯಾನದ ” ಪ್ರಯುಕ್ತ ಯೂನಿಟ್ ಕಾನ್ಫರೆನ್ಸ್ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ, ಅವರ ನೇತೃತ್ವದಲ್ಲಿ 2026 ಫೆಬ್ರವರಿ 08 ಆದಿತ್ಯವಾರ ಮಗ್ರಿಬ್ ನಮಾಝ್ ಬಳಿಕ ಮಸೀದಿ ವಠಾರದಲ್ಲಿ ಜರಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ,
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕೇಂದ್ರ ಮಹಿಳಾ ಫಟಕದ ನವಮ ವಾರ್ಷಿಕೋತ್ಸವ ಪಾವಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ತಡಂಬೈಲ್ ವಹಿಸಿದ್ದರು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ಅಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದಾರೆ. ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಪಟ್ಲರವರು ಆ ಕಾರಣಕ್ಕಾಗಿಯೇ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಿಸಿ ಕಲಾವಿದರಿಗೆ ಆಸರೆಯಾದರು ಎಂದವರು ತಿಳಿಸಿದರು. ಕಲಾವಿದರಿಗೆ ಮನೆ ನಿರ್ಮಣಕ್ಕೆ ಕಲಾವಿದರ ಮಕ್ಕಳಿಗೆ ಶಿಕ್ಷಣ ಮತ್ತು ಕಲಾವಿದರ ಆರೋಗ್ಯಕ್ಕೆ ಟ್ರಸ್ಟ್ ನಿಂದ ಸಹಾಯ ಮಾಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಟ್ರಸ್ಟ್ ಮೂಲಕ ನಿರಂತರ ಕಾರ್ಯಯೋಜನೆಗಳನ್ನು ಕೈಗೊಳ್ಳುತಿರುವ ಪಟ್ಲರ ಸಾಧನೆ ಶ್ಲಾಘನೆಗೆ ಪಾತ್ರವಾಗಿದೆ ಎಂದರು.ಪಟ್ಲ ಸತೀಶ್ ಶೆಟ್ಟಿ ಮಾತನಾಡಿ ಕೇಂದ್ರೀಯ ಮಹಿಳಾ ಘಟಕ ಕಳೆದ ಒಂಬತ್ತು ವರ್ಷಗಳಿಂದ ಕಲಾ ಸೇವೆ ಮಾಡುತ್ತಾ…
ಉಳ್ಳಾಲ: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಳ್ಳಾಲ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಉಳ್ಳಾಲ ಮುಕ್ಕಚ್ಚೇರಿಯ ಮೊಹಮ್ಮದ್ ಸಂಶೀರ್ ಎಂಬವರನ್ನು ಬಂಧಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ 2011 ರಲ್ಲಿ ಮಾದಕ ವ್ಯಸನಗಳಿಗೆ ಸಂಬಂಧಿಸಿದ ಪ್ರಕರಣ ಈತನ ಮೇಲಿದ್ದು, ನ್ಯಾಯಾಲಯವು ಆರೋಪಿತನಿಗೆ ಎಲ್ ಪಿಸಿ ವಾರಂಟ್ ಹೊರಡಿಸಿತ್ತು. ಇದೀಗ 14 ವರ್ಷಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್ ಥಿಯೇಟರ್ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶ ಇದಾಗಿದೆ“ ಎಂದು ಚಿತ್ರದ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು .”ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ ನಾನ್ವೆಜ್ ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ಸು ಫ್ರಂ ಸೋ ಸಿನಿಮಾದ ಹೆಚ್ಚಿನ ಕಲಾವಿದರು ನಾನ್ವೆಜ್ ಸಿನಿಮಾದಲ್ಲೂ ಇದ್ದಾರೆ. ಚಿತ್ರದ…
ಮಂಜೇಶ್ವರ, ಫೆ.3 : ಆಸ್ತಿ ಕಲಹ ವಿಚಾರದಲ್ಲಿ ಜಗಳ ಸಂದರ್ಭ ಮಗಳ ಮೇಲೆ ಕತ್ತಿಯೇಟು ಬಿದ್ದು ಆಕೆ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದ್ದ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ತಂದೆಯೇ ತನ್ನ ಪತ್ನಿ ಮೇಲಿನ ದ್ವೇಷದಿಂದ ವಿಚ್ಚೇದನ ಬಗ್ಗೆ ಮಾತುಕತೆಯಾಡಿದ್ದ ಮಗಳ ಕುತ್ತಿಗೆಯನ್ನು ಕಡಿದು ಹತ್ಯೆ ಮಾಡಿದ್ದಾನೆಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇದೇ ವೇಳೆ, ದಾಳಿ ತಡೆಯಲು ಬಂದು ಕತ್ತಿಯೇಟಿಗೆ ಒಳಗಾಗಿದ್ದ ಪತ್ನಿಯ ಸೋದರಿ ಗಂಡ ಶೇಕುಂಞ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 5 ಗಂಟೆ ವೇಳೆಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ತುಮ್ಮಿನಾಡಿನಲ್ಲಿ ಘಟನೆ ನಡೆದಿತ್ತು. ಆರೋಪಿ ಉಮ್ಮರ್ ಫಾರೂಕ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಮ್ಮರ್ ಫಾರೂಕ್ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದು ಪತ್ನಿಯ ಜೊತೆಗಿನ ವಿರಸದಿಂದ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದ. ಆನಂತರ, ಪತ್ನಿ ತಾಹಿರಾ (41) ಮಾತಿಗೆ ಮಾತು ಬೆಳೆದು ನಿನ್ನ ಸಂಬಂಧವೇ ಬೇಡ. ವಿಚ್ಛೇದನ ಕೊಟ್ಟುಬಿಡು ಎಂದು ಹೇಳಿದ್ದಳು. ಅದರಂತೆ,…
ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ತೀವ್ರ ರಕ್ತದೊತ್ತಡದಿಂದ ನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ನಲ್ಲಿ ಕಳೆದ ಆರು ವರ್ಷಗಳಿಂದ ಸಿಬ್ಬಂದಿಯಾಗಿ ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಾಗಿ ಕರ್ತವ್ಯ ನಿರ್ವಹಿಸಿದ್ದರು. 2016ರ ನೇ ಬ್ಯಾಚ್ ಸಿಬ್ಬಂದಿಯಾಗಿದ್ದ ಇವರ, ಪತ್ನಿಯೂ ಪೊಲೀಸ್ ಸಿಬ್ಬಂದಿ ಆಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾತ್ರಿ ಪಾಳಯದ ಕರ್ತವ್ಯ ನಿರ್ವಹಿಸಿ ಬಿಕರ್ನಕಟ್ಟೆಯಲ್ಲಿರುವ ಮನೆಗೆ ವಾಪಸ್ಸಾಗಿದ್ದ ಇವರು, ಎದೆ ನೋವು ಕಾಣಿಸಿ ಮಲಗಿದ್ದರು. ಬಳಿಕ ಮನೆಮಂದಿ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಕಾಣಿಸಿಕೊಂಡು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಿಧನರಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಅಧಿಕಾರಿ ಗೋಪಾಲಕೃಷ್ಣ ಭಟ್ ಅವರ ಜೀಪ್…
ಪಿಲಾರು: ಭಾರತೀಯ ಪರಂಪರೆಯ ಉಸಿರು ಭಕ್ತಿ. ಸರ್ವಧರ್ಮದವರು ಅವರವರ ಭಕ್ತಿಯನ್ನು ಆಚರಣೆ ಮಾಡುತ್ತಾರೆ. ದೇಶವೇ ಭಕ್ತಿ ಮೇಲೆ ನಿಂತಿದೆ. ಭಗವಂತನ ಇಚ್ಛೆ ಇಲ್ಲದಿದ್ದರೆ ಹುಲ್ಲು ಕಡ್ಡಿಯೂ ಅಲುಗಾಡದು ಎಂದು ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾದ ಗೋಪಾಲಕೃಷ್ಣ ಅಸ್ರಣ್ಣರು ಹೇಳಿದರು. ಇವರು ಶ್ರೀ ನಾಗಬ್ರಹ್ಮ ಕ್ಷೇತ್ರ ಪಿಲಾರು ಲಕ್ಷಿö್ಮÃ ಗುಡ್ಡೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪ್ರಧಾನ ಅರ್ಚಕರಾಗಿದ್ದ ಕೀರ್ತಿಶೇಷ ಬ್ರಹ್ಮಶ್ರೀ ವೇದಮೂರ್ತಿ ಬಿ.ಕೇಶವ ಜೋಗಿತ್ತಾಯ ಬಂಗಳಾಯಿ ಆಶೀರ್ವಾದಗಳೊಂದಿಗೆ ನಡೆದ 17ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಈ ಮಣ್ಣಿನಲ್ಲಿ ಸರ್ವಧರ್ಮದ ಐಕ್ಯಮತಿಯನ್ನು ದೇವರಿಗೆ ಕಾಣುವ ಇಚ್ಛೆಯಿಂದ ಈ ಜಾಗ ಅಬ್ದುಲ್ ಕುಂಞ್ ಅವರ ಕೈ ಸೇರಿದೆ. ಆ ಮೂಲಕ ನಾವೆಲ್ಲರೂ ಒಂದಾಗಿ ಪುಣ್ಯಕಾಯಕದಲ್ಲಿ ತೊಡಗಿಸಿಕೊಳ್ಳುವಂತೆ ಆಯಿತು. ಮುಂದೆ ನಡೆಯುವ ಪ್ರತೀ ವರ್ಧಂತ್ಯೋತ್ಸವದಲ್ಲಿ ಒಂದು ಗಿಡವನ್ನು ನೆಡುವಂತಹ ಕಾರ್ಯಕ್ರಮ ನಡೆಯಲಿ ಎಂದು ನುಡಿದರು. ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ…

