ಕಡಬ : ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಜ್ಲ ಇಸ್ಮಾಯಿಲ್ ಅವರು ಕುರಾನ್ ನ 30 ಕಾಂಡಗಳನ್ನು ಕೈಯಲ್ಲಿ ಬರೆದು ಗಮನ ಸೆಳೆದಿದ್ದಾರೆ. ಪುತ್ತೂರು ತಾಲೂಕಿನ ಬೈತಡ್ಕದ ಇಸ್ಮಾಯಿಲ್ ಹಾಜಿ ಮತ್ತು ಝಕ್ರಾ ಜಾಸ್ಮಿನ್ ದಂಪತಿಯ ಪುತ್ರಿ ಸಜ್ಲ ಅವರು ಈ ಸಾಧನೆ ಮಾಡಿದ್ದಾರೆ. ಕುರಾನ್ ಬರವಣಿಗೆಯನ್ನು 2021ರ ಜನವರಿಯಲ್ಲಿ ಆರಂಭಿಸಿದ್ದ ಅವರು 2025ರ ಆಗಸ್ಟ್ ನಲ್ಲಿ ಪೂರ್ಣಗೊಳಿಸಿದ್ದಾರೆ. ಸಜ್ಲ ಅವರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ ಅವರು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಒಟ್ಟು 604 ಪುಟಗಳ ಈ ಕೃತಿಗೆ ಬಿಳಿ, ತಿಳಿನೀಲಿ, ತಿಳಿ ಹಸುರು ಬಣ್ಣದ ಕಾಗದವನ್ನು ಬಳಸಿದ್ದಾರೆ. ಆಕರ್ಷಕವಾದ ಕೆಂಪು ಮತ್ತು ಸ್ವರ್ಣ ವರ್ಣದ ಹೊರ ಕವಚವನ್ನು ಹೊದಿಸಲಾಗಿದೆ. ಈ ಕೃತಿಯು ಸುಮಾರು 14 ಕೆ.ಜಿ. ತೂಕ ಇದೆ. “ಒಂದು ಪುಟ ಬರೆಯಲು ನನಗೆ ಸುಮಾರು ನಾಲ್ಕು ಗಂಟೆ ಬೇಕಾಗುತ್ತಿತ್ತು. ಕೆಲವು ದಿನಗಳಲ್ಲಿ 8 ಗಂಟೆ ಬಳಸಿ…
Author: UllalaVani
ಮಂಗಳೂರು : “ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣರಾದ ಕೆಲವು ವಿದ್ಯಾರ್ಥಿಗಳು ಐಟಿಐನಲ್ಲಿದ್ದಾರೆ. ಅಂದರೆ ಇದರರ್ಥ ನೀವು ಜೀವನದಲ್ಲಿ ವಿಫಲರಾಗಿದ್ದೀರಿ ಎಂದಲ್ಲ. ಒಂದು ವಿಷಯದಲ್ಲಿ ಮಾತ್ರ ವಿಫಲರಾಗಿದ್ದೀರಿ ಎಂದಷ್ಟೇ ಅರ್ಥ. ನಿಮ್ಮ ಆಸಕ್ತಿಯನ್ನು ಅನುಸರಿಸಿ, ಆಗ ನೀವು ಯಶಸ್ಸನ್ನು ಕಂಡುಕೊಳ್ಳುತ್ತೀರಿ. ನಾವು ಯಾರನ್ನೂ ಕಡಿಮೆ ಎಂದು ಅಂದಾಜು ಮಾಡಬಾರದು. ಪಠ್ಯಕ್ರಮಕ್ಕೆ ಅಂತ್ಯವಿರಬಹುದು, ಆದರೆ ಜೀವನದಲ್ಲಿ ಕಲಿಕೆಗೆ ಅಂತ್ಯವಿಲ್ಲ. ನಿಮ್ಮ ಕೌಶಲ್ಯವನ್ನು ಯಶಸ್ಸಿನತ್ತ ನಿಮ್ಮ ಇಚ್ಛಾಶಕ್ತಿಯೊಂದಿಗೆ ಸಂಯೋಜಿಸಿದರೆ, ನೀವು ಯಶಸ್ವಿ ವ್ಯಕ್ತಿಯಾಗುತ್ತೀರಿ” ಎಂದು ಡೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಹೇಳಿದರು. ಸೇಂಟ್ ಅಲೋಶಿಯಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಸೋಮವಾರ ನಡೆದ 2025-26ರ ಹೊಸ ಶೈಕ್ಷಣಿಕ ವರ್ಷ ಮತ್ತು ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಲು ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು. ಸೇಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಫಾದರ್ ಮೆಲ್ವಿನ್ ಜೋಸೆಫ್ ಪಿಂಟೊ ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಮ್ಮ…
ಉಡುಪಿ : ಬ್ರಹ್ಮಾವರದ ಮುಂಕಿಂಜಡ್ಡು ಮೂಲದ ಯುವ ಹಾಗೂ ಬಹುಮುಖ ಪ್ರತಿಭೆಯ ವಿದುಷಿ ದೀಕ್ಷಾ ವಿ ಅವರು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ತಮ್ಮ ಹೆಸರನ್ನು ದಾಖಲಿಸಲು ಸಜ್ಜಾಗಿದ್ದಾರೆ. ‘ನವರಸ ದೀಕ್ಷಾ ವೈಭವಂ’ ಶೀರ್ಷಿಕೆಯ ಈ ಒಂಬತ್ತು ದಿನಗಳ ಸಾಧನೆಯು ಆಗಸ್ಟ್ 21ರಿಂದ ಆಗಸ್ಟ್ 30ರವರೆಗೆ ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಪಿಜಿ ಆಡಿಟೋರಿಯಂನಲ್ಲಿ ನಡೆಯಲಿದೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದುಷಿ ದೀಕ್ಷಾ, “ಮೊದಲಿಗೆ ಏನು ಮಾಡಬೇಕೆಂದು ನನಗೆ ಗೊಂದಲವಿತ್ತು, ಆದರೆ ನನ್ನ ಗುರುಗಳು ಮೊದಲು ವಿದ್ವತ್ ಮುಗಿಸಿ ನಂತರ ಈ ಗುರಿಯನ್ನು ಬೆನ್ನಟ್ಟುವಂತೆ ಸಲಹೆ ನೀಡಿದರು. ನಂತರ ವಿದ್ವಾನ್ ಯಶ್ವಂತ್ ಎಂ.ಜಿ. ಅವರು 24 ಗಂಟೆಗಳ ಕಾಲ ಹಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದಾಗ, ನಾನೂ ಕೂಡ ಒಂದು ದಾಖಲೆ ಮಾಡಲು ಪ್ರೇರೇಪಿತನಾದೆ. ಅವರ ಮಾರ್ಗದರ್ಶನದಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದೆ. ನನ್ನ ವಿದ್ವತ್…
ಮಂಗಳೂರು : ನಗರದ ವಿವಿಧ ಭಾಗಗಳಿಗೆ 28 ಹೊಸ ರೂಟ್ಗಳಲ್ಲಿ ಸರಕಾರಿ ಬಸ್ಗಳ ಸಂಚಾರಕ್ಕೆ ಪರವಾನಿಗೆ (ಪರ್ಮಿಟ್) ನೀಡುವ ಕುರಿತಂತೆ ಪರ – ವಿರೋಧ ವಾದಗಳಿಗೆ ಸೋಮವಾರ ನಡೆದ ಆರ್ಟಿಎ ಸಭೆ ಸಾಕ್ಷಿಯಾಯಿತು. ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಪಡೀಲ್ನ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೆಎಸ್ಆರ್ಟಿಸಿಯಿಂದ ಸಲ್ಲಿಕೆಯಾಗಿರುವ ನೂತನ ರೂಟ್ಗಳಲ್ಲಿ ಬಸ್ಗಳ ಅಗತ್ಯವಿದೆಯೇ ಎಂಬ ಬಗ್ಗೆ ಜಂಟಿ ಸಮೀಕ್ಷೆಯ ನಡೆಸಿದ ಬಳಿಕವೇ ಪರವಾನಿಗೆ ನಿರ್ಧಾರ ಕೈಗೊಳ್ಳಬೇಕು ಎಂದು ಖಾಸಗಿ ಬಸ್ಸು ಮಾಲಕರ ಪರ ವಕೀಲರಾದ ಎಂ.ವಿ. ನಾಗೇಶ್, ಪರಸರ ಕುಮಾರ್ ವಾದಿಸಿದರು. ಕೆಎಸ್ಆರ್ಟಿಸಿ ಪರವಾಗಿ ವಾದಿಸಿದ ಕೆಎಸ್ಆರ್ಟಿಸಿ ಮಂಗಳೂರು ವಿಭಾಗಾಧಿಕಾರಿ ರಾಜೇಶ್ ಶೆಟ್ಟಿ, ಸಾರ್ವಜನಿಕರಿಂದ ಹಲವು ರೂಟ್ಗಳಿಗೆ ಬಸ್ಗಳ ಬೇಡಿಕೆ ಬಂದಲ್ಲಿಗೆ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಖಾಸಗಿ ಬಸ್ಸುಗಳು ಇರುವಲ್ಲಿಯೂ ಸಮಯವನ್ನು ಹೊಂದಾಣಿಕೆ ಮಾಡಿಕೊಂಡು ಕೆಎಸ್ಆರ್ಟಿಸಿ ಬಸ್ಸುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಕೇಂದ್ರ ಸರಕಾರದಿಂದ ನಗರಕ್ಕೆ ನಗರಕ್ಕೆ 100 ಇಲೆಕ್ಟ್ರಿಕ್…
ಮಂಗಳೂರು : ದಿವಂಗತ ಕೋರಿಕಾರ ವಸಂತಕುಮಾರ್ ಶೆಟ್ಟಿ ಅವರ ಪತ್ನಿ ನಿಟ್ಟೆ ಶಬರಿ ವಿ. ಶೆಟ್ಟಿ (85) ಮಂಗಳೂರಿನ ಕದ್ರಿಯ ಶಿವಬಾಗ್ನ ಸ್ವಗೃಹದಲ್ಲಿ ನಿಧನರಾದರು. ಲಯನ್ಸ್ ಕ್ಲಬ್ ಸೇರಿದಂತೆ ಬಹಳಷ್ಟು ಸಂಘ ಸಂಸ್ಥೆಗಳ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದರು. ಮೃತರು ಇಬ್ಬರು ಪುತ್ರರಾದ ನಿಟ್ಟೆ ಪರಿಗಣಿಸಲ್ಪಟ್ಟ ವಿವಿಯ ಡೆಪ್ಯೂಟಿ ಡೈರೆಕ್ಟರ್ ದೀಪಕ್ ಶೆಟ್ಟಿ ಹಾಗೂ ಶಿರೀಶ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಂಗಳೂರು : ನೂರ ಹದಿಮೂರು ವರ್ಷಗಳ ಸಮರ್ಪಿತ ಸೇವೆಯ ಪರಂಪರೆಯನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್ ಎಂಸಿಸಿ ಬ್ಯಾಂಕ್ನ ಆಶ್ರಯದಲ್ಲಿ ಎನ್ಆರ್ಐ ಸಮಾವೇಶ ಮಂಗಳೂರಿನ ಅತ್ತಾವರದಲ್ಲಿರುವ ದಿ ಅವತಾರ್ ಹೋಟೆಲ್ನಲ್ಲಿ ರವಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ಇತ್ತೀಚಿನ ಆವಿಷ್ಕಾರಗಳು ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸಿವೆ ಮತ್ತು ಬ್ಯಾಂಕಿನ ನಿರಂತರ ಬೆಳವಣಿಗೆಯಲ್ಲಿ ಅನಿವಾಸಿ ಭಾರತೀಯರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿವೆ ಎಂದು ಅವರು ಹೇಳಿದರು. ಕಾರ್ಯಕ್ರಮವನ್ನು ಕಂಕನಾಡಿಯ ಎಫ್ಎಂಸಿಐ ನಿರ್ದೇಶಕ ವಂ. ಫೌಸ್ಟಿನ್ ಲೋಬೊ ಉದ್ಘಾಟಿಸಿ ಮಾತನಾಡಿ ನಿರಂತರವಾಗಿ ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳುವ ಮಹತ್ವವನ್ನು ವಿವರಿಸಿದರು. ಎನ್ಆರ್ಐಗಳು ತಮ್ಮ ತಾಯ್ನಾಡು ಮತ್ತು ಮಾತೃಭಾಷೆಯ ಬಗ್ಗೆ ಕಾಳಜಿ ವಹಿಸುವಂತೆ ಕರೆ ನೀಡಿದರು. ರಿಲಯೆಬಲ್ ಫೆಬ್ರಿಕೇಟರ್ಸ್ ಎಲ್ಎಲ್ಸಿ ಮಾಲಕ ಜೇಮ್ಸ್ ಮೆಂಡೋನ್ಸಾ, ಅಬುಧಾಬಿ ಅಮಿಗೋ ಆಟೋಮೊಬೈಲ್ ಸರ್ವೀಸಸ್ ಎಸ್ಪಿ ಎಲ್ಎಲ್ಸಿ ಆಡಳಿತ ನಿರ್ದೇಶಕ ಲಿಯೊ ರೊಡ್ರಿಗಸ್ ಮತ್ತು ಲಿಯೊ ರೊಡ್ರಿಗಸ್ ಪತ್ನಿ ಲವೀನಾ ರೋಡ್ರಿಗಸ್ ,ಡೈಜಿವರ್ಲ್ಡ್ ಮೀಡಿಯಾ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ರವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಚರಣೆ ಬಗ್ಗೆ ಪ್ರಸ್ತಾಪಿಸಿದರು. ದೇಶ ಸೇವೆಯಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಶ ಸೇವೆಯ ಕಾಯಕದ ಜೊತೆಗೆ ತಮ್ಮ ಭವಿಷ್ಯವನ್ನು ಕೂಡ ಕೆಲಸದ ಭದ್ರತೆಯೊಂದಿಗೆ ಗಟ್ಟಿ ಗೊಳಿಸಬಹುದು. ದೇಶವನ್ನು ಬಲಿಷ್ಟಗೊಳಿಸುವ ಜವಾಬ್ದಾರಿ ಪ್ರಜೆಗಳದ್ದು, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಸಂಘವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾ ಬರುತ್ತಿದೆ. ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ನಾಯಕ್…
ಉಳ್ಳಾಲ : ಮುನ್ನೂರು ಯುವಕ ಮಂಡಲ (ರಿ ) ಕುತ್ತಾರು ರು ಇದರ ವತಿಯಿಂದ 79ನೇ ಸ್ವಾತಂತ್ರ್ಯ ಕಾರ್ಯಕ್ರಮವನ್ನು ಶ್ರೀ ರಾಮ ಭಜನಾ ಮಂದಿರ ಇದರ ಮಾಜಿ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕುತ್ತಾರ್ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಮುಂಡೋಳಿ, ಸಲಹೆಗಾರರಾದ ಕೃಷ್ಣಪ್ಪ ಸಾಲಿಯಾನ್, ಗೌರವ ಅಧ್ಯಕ್ಷರಾದ ಶಶೀಂದ್ರ ಕುಕ್ಕ್ಯಾನ್, ಕಾರ್ಯದರ್ಶಿ ರಕ್ಷಿತ್ ಕುತ್ತಾರ್ ಹಾಗೂ ಸದಸ್ಯರು, ಹಿತೈಷಿಗಳು ಉಪಸ್ಥಿತರಿದ್ದರು.
ತೊಕ್ಕೊಟ್ಟು : 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಶೈಕ್ಷಣಿಕ ವರ್ಷ 2024-2025ರ ಸಾಲಿನಲ್ಲಿ ನಡೆದ SSLC ಪರೀಕ್ಷೆಯಲ್ಲಿ ಕುಮಾರಿ ರೆನಿಶಾ ಸ್ವೀಟಿ ಡಿಸೋಜ ಹಾಗೂ ಕುಮಾರಿ ಆತ್ಮಿಕ ಕೊಟ್ಟಾರಿ, ಪಿಯುಸಿ ಪರೀಕ್ಷೆಯಲ್ಲಿ, ಕುಮಾರಿ ತ್ರಿಷಾ ಕೆ. ಗಟ್ಟಿ ಹಾಗೂ ಕುಮಾರಿ ನೇಹಾ ಗಂಡಿ ಇವರನ್ನು ವಿಜಯ ಮಿತ್ರ ಮಂಡಲ ಮುಡಿಪೋಡಿ ಕಲ್ಲಾಪು ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿಯಾಗಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರೇಣುಕಾ, ಶಿಕ್ಷಕಿ ವಿನಯ, ಪುರುಷೋತ್ತಮ ಕಲ್ಲಾಪು ಸಮಿತಿಯ ಅಧ್ಯಕ್ಷರಾದ ಕಮಲಾಕ್ಷ ವಿ.ಕೆ, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಕಾಯಂಗಳ, ಕೋಶಾಧಿಕಾರಿಯಾದ ಪುರುಷೋತ್ತಮ ಮೇಲಂಟ, ಉಪಾಧ್ಯಕ್ಷರಾದ ಜಾನ್ ಆಪೋಸ್, ಜೊತೆಕಾರ್ಯದರ್ಶಿಯಾದ ಸಂಜಯ್, ಕ್ರೀಡಾಕಾರ್ಯದರ್ಶಿಯಾದ ಜ್ಞಾನೇಶ್, ಸದಸ್ಯರಾದ, ಗಿರೀಶ್, ಮುಕೇಶ್, ಸಂತೋಷ ಶೆಟ್ಟಿ, ರಾಜೇಶ್, ಯೋಗಿಶ್, ಸದಾನಂದ, ಬಾಲಕೃಷ್ಣ,ಯೋಗಿಶ್ ಆಚಾರ್ಯ, ಭಾವಿತ್, ಲೋಕೇಶ್, ರವೀಂದ್ರ, ಹರೀಶ್ ಕೊಟ್ಟಾರಿ, ಶರತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಉಳ್ಳಾಲ : ನಗರ ಸಭೆ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಅಧ್ಯಕ್ಷ ಶಶಿಕಲಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಪೌರಾಯುಕ್ತ ನವೀನ್ ಹೆಗ್ಡೆ, ಕೌನ್ಸಿಲರ್ ಖಲೀಲ್ , ಇಸ್ಮಾಯಿಲ್ ಮಾತನಾಡಿದರು. ಕಾರ್ಯಕ್ರಮ ದಲ್ಲಿ ರೋಹಿನಾಥ್, ತೆರಿಗೆ ವಿಭಾಗದ ನಿರೀಕ್ಷಕ ಚಂದ್ರ ಹಾಸ್, ಇಂಜಿನಿಯರ್ ತುಳಸಿ ದಾಸ್, ಕೌನ್ಸಿಲರ್ ಜಬ್ಬಾರ್, ಅಸ್ಗರ್, ಮುಸ್ತಫಾ, ಅಝೀಝ್, ಗೀತಾ ಬಾಯಿ, ರಮೀಝ್ ಮತ್ತಿತರರು ಉಪಸ್ಥಿತರಿದ್ದರು.

