ಉಳ್ಳಾಲ : ನಗರ ಸಭೆ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಅಧ್ಯಕ್ಷ ಶಶಿಕಲಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಪೌರಾಯುಕ್ತ ನವೀನ್ ಹೆಗ್ಡೆ, ಕೌನ್ಸಿಲರ್ ಖಲೀಲ್ , ಇಸ್ಮಾಯಿಲ್ ಮಾತನಾಡಿದರು. ಕಾರ್ಯಕ್ರಮ ದಲ್ಲಿ ರೋಹಿನಾಥ್, ತೆರಿಗೆ ವಿಭಾಗದ ನಿರೀಕ್ಷಕ ಚಂದ್ರ ಹಾಸ್, ಇಂಜಿನಿಯರ್ ತುಳಸಿ ದಾಸ್, ಕೌನ್ಸಿಲರ್ ಜಬ್ಬಾರ್, ಅಸ್ಗರ್, ಮುಸ್ತಫಾ, ಅಝೀಝ್, ಗೀತಾ ಬಾಯಿ, ರಮೀಝ್ ಮತ್ತಿತರರು ಉಪಸ್ಥಿತರಿದ್ದರು.
Author: UllalaVani
ಉಳ್ಳಾಲ : ನಾಟೆಕಲ್ನ ಉಳ್ಳಾಲದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಟೇಲ್ ಧ್ವಜಾರೋಹಣಗೈದರು. ಈ ಸಂದರ್ಭ ಕಂದಾಯ ನಿರೀಕ್ಷಕ ಪ್ರಮೋದ್ ಕುಮಾರ್, ಕಿರಣ್ ಕುಮಾರ್, ಆಹಾರ ನಿರೀಕ್ಷಕರಾದ ಮೊಹಮ್ಮದ್ ರಫೀಕ್ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ಹರೇಕಳ : ಈ ದಿನವು ನಮ್ಮ ದೇಶದ ಏಕತೆ ಮತ್ತು ಭ್ರಾತೃತ್ವವನ್ನು ಎತ್ತಿ ಹಿಡಿಯುವ ದಿನವಾಗಿದೆ. ಮುಖ್ಯವಾಗಿ ಈ ಸಂದರ್ಭದಲ್ಲಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಟ್ಟುಕೊಳ್ಳಬೇಕು ಮತ್ತು ಅವರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಕೆ ಎನ್ ಆಳ್ವ ಹೇಳಿದರು. ಇವರು ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಪಾವೂರು ಹರೇಕಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಶೆಟ್ಟಿ ಮಂಚವುದಡಿ, ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ದುರ್ಗಾಪ್ರಸಾದ್ ರೈ ಕಲ್ಲಾಯಿ, ಸಮಾಜ ಸೇವಕರಾದ ನರಸಿಂಹ ನಾಯ್ಕ್ ಪಂಜಿಲಗುರಿ ಮುಂತಾದವರು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಕಡೆಂಜ ಸೋಮಶೇಖರ್ ಚೌಟ ವಹಿಸಿದ್ದರು.ಈ ಸಂದರ್ಭದಲ್ಲಿ ಮಕ್ಕಳಿಂದ ಭಾಷಣ ಸ್ಪರ್ಧೆ, ದೇಶಭಕ್ತಿ ಸ್ಪರ್ಧೆ ಹಮ್ಮಿ ಕೊಂಡು ವಿಜೇತರಿಗೆ ಬಹುಮಾನ ನೀಡಿ…
ತಲಪಾಡಿ : ತಲಪಾಡಿಯ ಸ್ವಾಮಿ ಕೃಪಾ ಶ್ರೀ ವೀರಾಂಜನೇಯ ವ್ಯಾಯಾಮಶಾಲೆ (ರಿ) ಹಾಗೂ ಹ್ಯೂಮನ್ ವೆಲ್ಫೇರ್ ಅಸೋಸಿಯೇಷನ್ ತಲಪಾಡಿ ಇದರ ಜಂಟಿ ಆಶ್ರಯದಲ್ಲಿ ತಲಪಾಡಿಯ ದಿವಂಗತ ಐತಪ್ಪ ರೈ ವೇದಿಕೆಯಲ್ಲಿ 79 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಧ್ವಜಾರೋಹಣವನ್ನು ನಿವೃತ್ತ ಸೇನಾನಿ ಕ್ಯಾಪ್ಟನ್ ಮಾಧವ ಶೆಟ್ಟಿ ತಲಪಾಡಿ ನೆರೆವೇರಿಸಿದರು. ಮುಖ್ಯ ಅತಿಥಿಗಳಾಗಿ ತಲಪಾಡಿ ವ್ಯಾಯಾಮ ಶಾಲಾ ಅಧ್ಯಕ್ಷರಾದ ಅಶೋಕ್ ಕೆ ,ಸಿ ರೋಡ್ ,ಹ್ಯೂಮನ್ ವೆಲ್ಫೇರ್ ತಲಪಾಡಿಯ ಅಧ್ಯಕ್ಷ ಸಂಶುದ್ದೀನ್ ತಲಪಾಡಿ ,ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ಖಾದರ್ ಬಿ.ಎಸ್ ,ಇಸ್ಮಾಯಿಲ್ ತಲಪಾಡಿ, ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿದ್ದಿಕ್ ತಲಪಾಡಿ, ದುಬೈ ಉದ್ಯಮಿ ಮೊಹಮ್ಮದ್ ಹಸ್ಸನ್, ಶ್ರೀ ಮಾತಾ ಮಹಿಳಾ ಮಂಡಳಿ ತಲಪಾಡಿ ಇದರ ಅಧ್ಯಕ್ಷೆ ಶ್ರೀಮತಿ ಶ್ವೇತ ಕಿರಣ್, ಮಹಿಳಾ ಮಂಡಳಿ ಮಾಜಿ ಅಧ್ಯಕ್ಷೆ ಶ್ರೀಮತಿ ಶೋಭಾ ಶೇಖರ್ ಶೆಟ್ಟಿ , ವ್ಯಾಯಾಮಶಾಲಾ ಮಾಜಿ ಅಧ್ಯಕ್ಷರುಗಳಾದ ಯಥೀರಾಜ್ ಶೇಣವ ದೊಡ್ಡಮನೆ ,ರಾಜೇಶ್ ಕೊಟ್ಟಾರಿ ,ಸತೀಶ್ ಕುದ್ರು ತಲಪಾಡಿ ಇವರುಗಳು…
ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು, ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಅನೇಕ ರೀತಿಯ ಬದಲಾವಣೆಗಳಾಗಿವೆ. ಯಾವುದೇ ಸಮಾಜ, ಸಂಸ್ಥೆಯೊಳಗೆ ಗಡಿರೇಖೆಗಳು ಅಪಾಯಕಾರಿ, ಜಾತಿ ಧರ್ಮಗಳ ಮೂಲಕ ಕಂದಕ ಸೃಷ್ಡಿಯಾಗಬಾರದು. ನಾವು ಸ್ವತಃ ಆತ್ಮಾವಲೋಕನ ಮಾಡುವುದರೊಂದಿಗೆ ಸೌಹಾರ್ದತೆಯ ಸಮಾಜ ನಿರ್ಮಿಸಬೇಕಿದೆ ಎಂದರು. ಕುಲಸಚಿವ ಕೆ.ರಾಜು ಮೊಗವೀರ ಅವರು ಮಾತನಾಡಿ, ಸ್ವಾತಂತ್ರ್ಯದ ಶುಭದಿನದಲ್ಲಿ ತ್ಯಾಗ ಬಲಿದಾನದ ಮಾಡಿದ ಮಹಾತ್ಮರನ್ನು ನೆನಪಿಸಿಕೊಳ್ಳುತ್ತಾ ಶಾಂತಿ, ಸಮಾನತೆ, ಸಹಬಾಳ್ವತೆಯೊಂದಿಗೆ ಬಾಳುವುದರೊಂದಿಗೆ ದೇಶ ಕಟ್ಟುವ ಕೆಲಸ ಮಾಡೋಣ ಎಂದರು. ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ದೈಹಿಕ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಡಾ.ಸಂತೋಷ್ ಜೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಪ್ರೊ.ಪ್ರಶಾಂತ್ ನಾಯ್ಕ್ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಡಾ.ಪ್ರಸನ್ನ ಅವರು…
ಉಳ್ಳಾಲ : ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಇವುಗಳ ಆಶ್ರಯದಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್ ಬಳಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಶಾಸಕ ಸ್ವಾಗತ ಅಧ್ಯಕ್ಷ ಜಯರಾಮ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಉಳ್ಳಾಲ ವಲಯ ಫೊಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಪ್ರವೀಣ್ ಬೀರಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಗೈದರು. ಪೌರಾಯುಕ್ತ ನವೀನ್ ಹೆಗ್ಡೆ ಮಾತನಾಡಿ ಪರಿಸರ ಉಳಿಸುವ ಬಗ್ಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷ ಆಲಿಯಬ್ಬ, ಚಿದಾನಂದ, ಸಿದ್ದೀಕ್ ದೇರಳಕಟ್ಟೆ, ಮಾಧವ ಉಳ್ಳಾಲ, ಸರ್ಫರಾಜ್ ಉಳ್ಳಾಲ, ಪೊಟೋಗ್ರಾಫರ್ ಸಂತೋಷ್ , ಸದಾನಂದ ಬಂಗೇರ, ಶಶಿಕಾಂತಿ, ಜಬ್ಬಾರ್ , ಅಸ್ಗರ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು. ಧನಲಕ್ಷ್ಮಿ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಸ್ವಾಗತಿಸಿ, ವಂದಿಸಿದರು.
ಉಳ್ಳಾಲ : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಬೂಸಾಲಿ ಕಿನ್ಯ, ನಿರ್ದೇಶಕ ಉದಯಕುಮಾರ್ ಶೆಟ್ಟಿ ಕೊಂಡಾಣ ಗುತ್ತು, ಅರುಣ್ ಕುಮಾರ್.ಯು, ರಾಘವ ಆರ್ ಉಚ್ಚಿಲ್, ಶ್ರೀಮತಿ ಸುರೇಖಾ ಚಂದ್ರಹಾಸ, ಸಿಇಓ ಹರ್ಷವರ್ಧನ್ ಉಳ್ಳಾಲ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು ವ್ಯವಸ್ಥಾಪಕರಾದ ಲೋಕಯ್ಯ ಪನೀರ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರ : ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರದ ಕಟ್ಬೆಲ್ತೂರು ಎಂಬಲ್ಲಿ ನಡೆದಿದೆ. ಮೃತರನ್ನು ಕಟ್ಬೆಲ್ತೂರು ಗ್ರಾಮದ ನಾಗರಾಜ(48) ಎಂದು ಗುರುತಿಸಲಾಗಿದೆ. ಇವರು ಮಳೆಗಾಲದಲ್ಲಿ ಕೆಲಸವಿಲ್ಲದೇ ಇರುವುದರಿಂದ ಆ.12ರಂದು ಬೆಳಗ್ಗೆ ಮೀನು ಹಿಡಿಯಲು ಹೋಗಿದ್ದು, ಸಂಜೆಯಾದರೂ ವಾಪಾಸು ಬಾರದೇ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಆ.13ರಂದು ಬೆಳಗ್ಗೆ ನಾಗರಾಜ ಅವರ ಮೃತದೇಹವು ಕಟ್ಬೆಲ್ತೂರು ಗ್ರಾಮದ ಸಿಗಡಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಪ್ರಪ್ರಥಮ ಬಾರಿಗೆ ಇಸ್ಕಾನ್ ಮಂಗಳೂರು ವತಿಯಿಂದ ಆ.15ರಂದು ಕೊಡಿಯಾಲ್ ಬೈಲ್ ಕಲಾಕುಂಜದ ಶ್ರೀ ಕೃಷ್ಣ ಬಲರಾಮ ಮಂದಿರ ಮಂಗಳೂರಿನಲ್ಲಿ ಅದ್ದೂರಿಯಾದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಮಾಡುತ್ತಿದೆ ಎಂದು ಅಧ್ಯಕ್ಷ ಗುಣಕರ ರಾಮದಾಸ್ ರವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧ್ಯಾಯ 1 – ಭಗವಾನ್ ಶ್ರೀಕೃಷ್ಣನ ದೈವಸ್ವರೂಪ ಅವತಾರಕ್ಕೆ ಸಮರ್ಪಿತ ಎರಡು ದಿನಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಮ್ಮಿಲಿತವಾದ ಹಬ್ಬ. ಭಕ್ತಿ, ಸಂಸ್ಕೃತಿ ಮತ್ತು ಕ್ರಿಯಾತ್ಮತೆಯ ಮೂಲಕ ಮಂಗಳೂರ ಜನತೆಯನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ನಗರದಲ್ಲಿ ಶ್ರೀಕೃಷ್ಣ ಪ್ರಜ್ಞೆಯನ್ನು ಪಸರಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ವಿನೋದಾವಳಿಗಳು, ಸ್ಪರ್ಧೆಗಳು, ಡಿಜಿಟಲ್ ಪ್ರಚಾರ, ಪವಿತ್ರ ಆಚರಣೆಗಳು ಹಾಗೂ ಇನ್ನಿತರ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಉಳ್ಳಾಲ : ‘ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕ್ಲೆಗ್ ಮಲ್ಲ ಪಾಲ್” ಎಂಬ ಘೋಷಣೆ ಅಡಿಯಲ್ಲಿ ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೆಪ್ಟೆಂಬರ್ 7 ರಿಂದ 9 ರ ತನಕ ನಡೆಯಲಿರುವ ಯುವಜನ ಜಾಥಾದ ಯಶಸ್ವಿಗಾಗಿ ಮುಡಿಪು ವಲಯ ಮಟ್ಟದ ಸ್ವಾಗತ ಸಮಿತಿ ರಚಿಸಲಾಯಿತು. ಸ್ವಾಗತ ಸಮಿತಿ ರಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸರಕಾರದ ಹಲವು ತಪ್ಪಾದ ನೀತಿಗಳಿಂದ ಭಾರತದ ಯುವ ಜನತೆ ನಿರುದ್ಯೋಗಿಗಳಾಗಿ ಬದಲಾಗುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಖಾಸಗಿ ಕಾರ್ಪೊರೇಟ್ ಸಂಸ್ಥೆಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಕಡೆಗಣಿಸುತ್ತಿವೆ. ಯುವ ಜನರಿಗೆ ಪ್ರತಿ ವರ್ಷ ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯನ್ನು ನೀಡಿ ಆಡಳಿತಕ್ಕೆ ಬಂದಿರುವ ಕೇಂದ್ರ ಸರಕಾರ ಯುವ ಜನತೆಗೆ ಮೋಸ ಮಾಡಿದೆ ಎಂದು ತಿಳಿಸಿದರು. ಮುಡಿಪುವಿನಲ್ಲಿ ನಡೆದ ಸ್ವಾಗತ ಸಮಿತಿ ರಚನಾ ಸಭೆಯಲ್ಲಿ, ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಪುಂಡರಿಕಾಕ್ಷ, ಗೌರವ…

