ಪೆರ್ಲ : ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಮರದಡಿಗೆ ತೆರಳಿದ ಚಾಲಕ ಮರದ ರೆಂಬೆ ಮುರಿದು ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳಕಿಗೆ ಬಂದಿದೆ. ದ. ಕ. ಜಿಲ್ಲೆಯ ಬಂಟ್ವಾಳ ಪೆರಾಜೆ ಬಳಿಯ ಕುಡೇಲು ನಿವಾಸಿ ಕಾಂತಪ್ಪ ಗೌಡ – ಗೀತಮ್ಮ ದಂಪತಿಯ ಪುತ್ರ ಕೆ. ಜಗದೀಶ ಗೌಡ (50) ಮೃತ ವ್ಯಕ್ತಿಯಾಗಿದ್ದಾರೆ. ಬುಧವಾರ ಮುಂಜಾನೆ ಆರೂಕಾಲರ ವೇಳೆಗೆ ಪೆರ್ಲ- ಸೀತಾಂಗೋಳಿ ರಸ್ತೆಯ ಬೆದ್ರಂಪಳ್ಳದಲ್ಲಿ ಈ ಘಟನೆ ನಡೆಯಿತು. ಮೂಡಬಿದಿರೆಯಿಂದ ಕಾಸರಗೋಡಿಗೆ ಪಶು ಆಹಾರ ಸಾಗಿಸುತ್ತಿದ್ದ ಲಾರಿಯಲ್ಲಿ ಜಗದೀಶ ಚಾಲಕನಾಗಿದ್ದರು. ವಿಟ್ಲ ದಾರಿಯಾಗಿ ಸೀತಾಂಗೋಳಿ ಮೂಲಕ ಕಾಸರಗೋಡಿಗೆ ಲೋಡ್ ಸಾಗಿಸುತ್ತಿದ್ದರು. ಬೆದ್ರಂಪಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಲಾರಿ ನಿಲ್ಲಿಸಿ ಮರದಡಿಯೊಂದರಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಮರದ ರೆಂಬೆ ಮುರಿದು ದೇಹಕ್ಕೆ ಬಿದ್ದು ಮರಣ ಸಂಭವಿಸಿತು. ಲಾರಿಯಲ್ಲಿ ಜತೆಗಿದ್ದ ಕ್ಲೀನರ್ ಮೊದಲಿಗೆ ವಿಷಯ ಅರಿತಿದ್ದು ಬಳಿಕ ದಾರಿ ಹೋಕರ ಸಹಾಯ ಪಡೆದು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಿದರೂ ಅಪಾಯದಿಂದ ಪಾರಾಗಿಸಲು…
Author: UllalaVani
ಮಂಗಳೂರು : ಸರ್ಕಾರದ ಅಧಿಸೂಚನೆ ಸಂಖ್ಯೆ ಹೆಚ್.ಡಿ/77/ಪಿ.ಓ.ಪಿ/2020 ರಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಮರುವಿಂಗಡಿಸಿ ಸರಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿರುತ್ತದೆ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂದಿಸಿದಂತೆ ಪದವು ಗ್ರಾಮಕ್ಕೆ ಒಳಪಡುವ ಕುಲಶೇಖರ, ಸಿಲ್ವರ್ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್ ವೆಂಕಟರಮಣ ದೇವಸ್ಥಾನ ರಸ್ತೆ, ಕೊಪ್ಪಲಕಾಡು, ಬಾಂದೋಟ್ಟು ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿ ನಗರ, ಪೊಲೀಸ್ ಲೇನ್, ಪ್ರೀತಿನಗರ, ಸಂಜಯ ನಗರ, ಮುಗೋಡಿ, ಕಾರ್ಮಿಕ ಕಾಲೋನಿ, ಕೆಹೆಚ್ಬಿ, ನಾಲ್ಯಪದವು, ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತ ನಗರ,…
ಸುಳ್ಯ : ಕೇರಳದ ಕಾಞಂಗಾಡ್ನಿಂದ ಗಡಿ ಪ್ರದೇಶವಾದ ಬಂದಡ್ಕ ಮೂಲಕ ಸುಳ್ಯಕ್ಕೆ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆ.14ರಿಂದ ಸಂಚಾರ ಆರಂಭಗೊಂಡಿದೆ. ಕಾಞಂಗಾಡ್ ಡಿಪೋದಿಂದ ಪೆರಿಯ, ಮೂನಾಂಕಡವ್ ಕುಂಡಕುಯಿ-ಬಂದಡ್ಕ-ಕನ್ನಡಿತೋಡ್-ಕೋಲ್ಕಾರ್ ಮೂಲಕ ಸುಳ್ಯಕ್ಕೆ ಬಸ್ ಸೇವೆಯನ್ನು ಪ್ರಾರಂಭಿಸಲು ಕೇರಳ ಸರಕಾರ ಅನುಮತಿ ನೀಡಿದೆ. ಇಂದು ಬೆಳಿಗೆ ಕಾಞಂಗಾಡ್ನಿಂದ ಆರಂಭಗೊಂಡ ಬಸ್ಗೆ ಕುತ್ತಿ ಕೋಲಿನಲ್ಲಿ ಶಾಸಕ ಸಿ.ಎಚ್.ಕುಞಂಬು ಅವರ ನೇತೃತ್ವದಲ್ಲಿ ಸ್ವಾಗತ ನೀಡಲಾಯಿತು. ಬಳಿಕ ಶಾಸಕರು ಬಸ್ ಓಡಾಟಕ್ಕೆ ಚಾಲನೆ ನೀಡಿದರು. ಪಡ್ಪು, ಬಂದಡ್ಕಗಳಲ್ಲಿ ಗಡಿನಾಡ ಕನ್ನಡಿಗರ ಸಂಘ, ಬಂದಡ್ಕ ಗೌಡ ಗ್ರಾಮ ಸಮಿತಿ ವತಿಯಿಂದ ಗಡಿನಾಡ ಕನ್ನಡಿಗರ ಸಂಘದ ಅಧ್ಯಕ್ಷ ಪುರುಷೋತ್ತಮ ಬೊಡ್ಡನ ಕೊಚ್ಚಿ, ಹಾಗೂ ಮತ್ತಿತರ ನೇತೃತ್ವದಲ್ಲಿ ಸ್ವಾಗತ ಕೋರಲಾಯಿತು. ಗಡಿ ಪ್ರದೇಶವಾದ ಕೋಲ್ಕಾರ್ನಲ್ಲಿಯೂ ಬಸ್ಗೆ ಸ್ವಾಗತ ನೀಡಲಾಯಿತು. ಕಾಞಂಗಾಡ್ನಿಂದ ಸುಳ್ಯಕ್ಕೆ ಬಸ್ ಬೆಳಿಗ್ಗೆ 7ಕ್ಕೆ ಹೊರಟು 9.10 ಕ್ಕೆ ಸುಳ್ಯ ತಲುಪುತ್ತದೆ, ಸುಳ್ಯದಿಂದ 9.20ಕ್ಕೆ ಹೊರಟು11.30ಕ್ಕೆ ಕಾಞಂಗಾಡ್ ತಲುಪುತ್ತದೆ, ಕಾಂಞಂಗಾಡ್ ಮಧ್ಯಾಹ್ನ 12.10 ಹೊರಟು, 2.25ಕ್ಕೆ ಸುಳ್ಯ ತಲುಪುತ್ತದೆ,…
ಉಳ್ಳಾಲ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಒಬ್ಬ ರೈತ ಮತ್ತು ಓರ್ವ ರೈತ ಮಹಿಳೆಗೆ (ಅರ್ಜಿದಾರರ ಹೆಸರಿನಲ್ಲಿ ಪಹಣಿ ಇರುವುದು ಕಡ್ಡಾಯ) ಜಿಲ್ಲಾಮಟ್ಟದ ರೈತ ಪ್ರಶಸ್ತಿಯನ್ನು ನೀಡಲಿದ್ದಾರೆ. ಪ್ರಶಸ್ತಿಯನ್ನು ಅಕ್ಟೋಬರ್ನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ನೀಡಲಾಗುವುದು. ಆಸಕ್ತ ರೈತ, ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲ, ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ಮಂಗಳೂರು ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ. ಕೃಷಿ ಇಲಾಖೆ, ಲೋಕೋಪಯೋಗಿ ಇಲಾಖೆ ಕಟ್ಟಡ. ಮೊದಲನೆ ಮಹಡಿ, ಮಂಗಳೂರು ಇಲ್ಲಿ ಲಭ್ಯವಿರುವ ಅರ್ಜಿಯನ್ನು ಪಡೆದು ಭರ್ತಿಮಾಡಿ ಸ.15 ರ ಒಳಗೆ ಈ ಮೇಲಿನ ಕಚೇರಿಗೆ ನೀಡಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9480838970, 8794706468, 8277931060
ಹೊಸದಿಲ್ಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಸುಪ್ರೀಂ ಕೋರ್ಟ್ ಗುರುವಾರ (ಆ.14) ಜಾಮೀನು ರದ್ದು ಮಾಡಿ ಆದೇಶ ಪ್ರಕಟಿಸಿದೆ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜಿ.ಬಿ.ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ಪೀಠ ಗುರುವಾರ ದರ್ಶನ್ ಆ್ಯಂಡ್ ಗ್ಯಾಂಗ್ನ ಜಾಮೀನು ಅರ್ಜಿ ತೀರ್ಪು ಪ್ರಕಟಿಸಿದೆ. ಕಳೆದ ಕೆಲ ದಿನಗಳಿಂದ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಸಾಕ್ಷಿಗಳ ಬೆದರಿಕೆ ಮತ್ತು ಇತರ ಅಕ್ರಮಗಳನ್ನು ಸಮರ್ಪಕವಾಗಿ ಪರಿಗಣಿಸದೆ ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ರದ್ದುಗೊಳಿಸಿದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ಆದೇಶವನ್ನು “ವಿಕೃತ” ಮತ್ತು “ಸಂಪೂರ್ಣವಾಗಿ ಅನಗತ್ಯ” ಎಂದು ಕರೆದರು. “ಜಾಮೀನು ನೀಡಲು ಯಾವುದೇ ಕಾನೂನು ಕಾರಣವಿಲ್ಲ” ಎಂದು ಹೇಳಿದ ಪೀಠ, ದರ್ಶನ್ ಅವರ ಸ್ವಾತಂತ್ರ್ಯವು “ನ್ಯಾಯದ ಅಡಳಿತವನ್ನು ಹಳಿತಪ್ಪಿಸುವ ಅಪಾಯವನ್ನುಂಟುಮಾಡಿದೆ” ಎಂದು ಹೇಳಿದರು. ಕಾನೂನಿಗಿಂತ ಯಾವುದೇ ವ್ಯಕ್ತಿ ದೊಡ್ಡವರಲ್ಲ, ಕಾನೂನಿಗೆ…
ಉಳ್ಳಾಲ : ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದಾಗಿ ಜನ ಹಳ್ಳಿ ಸಂಸ್ಕೃತಿಯ ಸೊಬಗನ್ನು ಕಡಿಮೆ ಮಾಡಿಕೊಂಡು ಜೀವನ ನಡೆಸಲಾಗುತ್ತಿದೆ. ಆದರೆ ತುಳು ಸಂಸ್ಕೃತಿಯಡಿ ಹುಟ್ಟಿ ಬೆಳೆದವರು ಹಿರಿಯರ ಆದರ್ಶ ಮೌಲ್ಯಗಳನ್ನು ಮುಂದುವರೆಸಿಕೊಂಡು ಹೋಗುವ ಸದುದ್ದೇಶದಿಂದ ಹಾಗೂ ಮುಂದಿನ ಪೀಳಿಗೆಯಲ್ಲಿ ಕೃಷಿ ಸಂಸ್ಕೃತಿಯನ್ನು ಜ್ವಲಂತವಾಗಿಡಲು ವಿದ್ಯಾರತ್ನ ಶಾಲೆಯ ಕಾರ್ಯಕ್ರಮ ಪೂರಕವಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ, ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್ ಹೇಳಿದರು.ಅವರು ಹರೇಕಳ ಗ್ರಾಮದ ಮಂಜಲಗುತ್ತು ಮನೆಯ ಮುಂಭಾಗದಲ್ಲಿರುವ ಹಡಿಲು ಬಿದ್ದ ಮಡ್ಡೆಲ್ ಮಾರ್ ಗದ್ದೆ ಸೇರಿ ಒಟ್ಟು 16 ಗದ್ದೆಯಲ್ಲಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಹಮ್ಮಿಕೊಂಡ ಸಾಂಕೇತಿಕ ನಾಟಿ ಕಾರ್ಯಕ್ರಮ ಮತ್ತು ಕೆಸರುಗದ್ದೆಯಲ್ಲಿ ಆಟೋಟಗಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ತುಳುನಾಡು ಕೃಷಿಗೆ ಪೂರಕವಾದ ಫಲವತ್ತಾದ ಮಣ್ಣು ಹೊಂದಿದ್ದು, ಹಿಂದೆ ಧರ್ಮಬೇಧ, ವರ್ಗಬೇಧವಿಲ್ಲದೇ ಗದ್ದೆಗಳಲ್ಲಿ ಕೃಷಿ ಮಾಡಿದವರು. ಇದರಿಂದ ಜೀವನೋತ್ಸಾಹದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಸದ್ಯದ ಕಾಲಘಟ್ಟದಲ್ಲಿ ಕೃಷಿಯಿಂದ ದೂರ ಹೋಗುತ್ತಿದ್ದೇವೆ, ಶಿಕ್ಷಣದ ವ್ಯವಸ್ಥೆಯಿಂದಾಗಿ…
ಉಳ್ಳಾಲ : ಅಮೆರಿಕಾದ ಬಹುರಾಷ್ಟ್ರೀಯ ಐಟಿ ಕಂಪನಿಯ ಪ್ರಮುಖ ನಾಯಕತ್ವ ಹುದ್ದೆಗೆ ಉಳ್ಳಾಲ ಮೂಲದ ನಮ್ರತಾ ಯು.ಪಿ. ಇವರು ಪದೋನ್ನತಿಗೊಂಡಿದ್ದು, ಇವರು ಸಮಾಜಸೇವಕಿ, ಖ್ಯಾತ ರೇಡಿಯೋ ಜಾಕಿ ಆಗಿರುವ ರಶ್ಮೀ ಉಳ್ಳಾಲ್ ಇವರ ಸಹೋದರಿಯಾಗಿದ್ದಾರೆ. ಉಳ್ಳಾಲ ನಿವಾಸಿ ಯು.ಎ. ಪ್ರೇಮನಾಥ್ ಮತ್ತು ಪ್ರಮೀಳಾ ಕುಮಾರಿ ಕೆ. ದಂಪತಿ ಪುತ್ರಿ ಹಲವು ವರ್ಷಗಳಿಂದ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೇವಾ ಅವಧಿಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆ ಹಾಗೂ ಶ್ರೇಷ್ಠತೆಯ ನಿಷ್ಠೆಗಾಗಿ ಈ ಜಾಗತಿಕ ಗೌರವ ದೊರಕಿದೆ. ನಮ್ರತಾ ಇವರು ದಿಡಿನ್ ರವಿ ಕುಮಾರ್ ಅವರ ಪತ್ನಿ ಹಾಗೂ ಖ್ಯಾತ ಸಮಾಜಸೇವಕಿ ರಶ್ಮಿ ಉಳ್ಳಾಲ ಅವರ ಸಹೋದರಿ. ಅವರು ಮೂರು ವರ್ಷದ ಆದ್ಯಾಳ ತಾಯಿ ಕೂಡ ಹೌದು. ಇವರ ಪ್ರೇರಣಾದಾಯಕ ಪಯಣ ಅನೇಕರಿಗೆ ಮಾದರಿಯಾಗಿದ್ದು, ಉಳ್ಳಾಲದ ಕೀರ್ತಿ ಪತಾಕೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಸೋಮವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದು, ಮಂಗಳವಾರ ರಾತ್ರಿ ಮಗು ಮೃತಪಟ್ಟ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿಕ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯುವಕನ ಮೇಲೆ ಫೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ಸಮಯಕ್ಕೆ ಮೊದಲೇ ಮಗು ಜನನವಾಗಿದ್ದರಿಂದಲೇ ಹಾಗೂ ಮಗು ತಿಂಗಳಿಗೆ ತಕ್ಕಂತೆ ತೂಕ ಇಲ್ಲದೇ ಇರುವುದಿಂದ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ : ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ, ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಉಪ ತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಉಪ ತಹಶೀಲ್ದಾರ್ ರಾಜೇಶ್ ನಾಯಕ್, ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಸಂತೋಷ್ ಮತ್ತು ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯ ನಂತರ ಮೂವರನ್ನೂ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ರಾಜೇಶ್ ನಾಯ್ಕ್, ಸಂತೋಷ್, ಗಣೇಶ್ ಭ್ರಷ್ಟಾಚಾರದಲ್ಲಿ ತಹಶೀಲ್ದಾರ್ ಅವರ ಪಾತ್ರವಿದೆಯೇ ಎಂದು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ದೃಢಪಡಿಸಿವೆ. ಸಜಿಪಮುನ್ನೂರಿನ ನಿವಾಸಿ ಪುಷ್ಪರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ದಾಳಿ ನಡೆಸಲಾಗಿದ್ದು, ಮಧ್ಯವರ್ತಿಯ ಮೂಲಕ ಲಂಚದ ವಹಿವಾಟು ನಡೆಯುತ್ತಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಲೋಕಾಯುಕ್ತ ತಂಡವು ಬಿ.ಸಿ. ರೋಡ್ ರಸ್ತೆಯ ದೇವಸ್ಥಾನದ ಬಳಿ ಲಂಚದ ಹಣವನ್ನು ವಿನಿಮಯ…
ಮಂಗಳೂರು : ಸ್ವಲ್ಪ ಸಮಯದ ವಿರಾಮದ ನಂತರ, ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯಲ್ಲೋ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು, ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಪಡುಬಿದ್ರಿ, ಕಾಪು, ಶಿರ್ವ, ಕಟಪಾಡಿ, ಉಡುಪಿ, ಮಲ್ಪೆ, ಬ್ರಹ್ಮಾವರ, ಕೋಟ, ಮಣಿಪಾಲ, ಹೆಬ್ರಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.

