ಬಂಟ್ವಾಳ : ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಿಂದ ಕಳ್ಳತನ ನಡೆಯುವುದು ಕೇಳಿದ್ದೇವೆ. ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ತಿಳಿಸಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅಗಸ್ಟ್ 11 ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್ ನ ವತಿಯಿಂದ ಇಂದು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ವಿಜಯ್ ಅವರು ತಿಳಿಸಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ…
Author: UllalaVani
ಮಂಗಳೂರು : ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15ರಿಂದ 17ರವರೆಗೆ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಲಾಗಿದೆ. ಪ್ರವಾಸಿಗರಿಗೆ ಹಲವು ವಿಶೇಷ ಕೊಡುಗೆಗಳನ್ನು ನೀಡುವ ಮೂಲಕ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ತನ್ನತ್ತ ಆಕಷಿಸುತ್ತಿದ್ದು, ಇದೀಗ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಿ ವಿಶೇಷ ಆಫರ್ಗಳನ್ನು ನೀಡುತ್ತಿದೆ. ಫ್ರೀಡಂ ಫೆಸ್ಟ್-2025ರಲ್ಲಿ ಪಾರ್ಕ್ ಎಂಟ್ರಿ ಕೇವಲ 299 ರೂ. ಗಳ ಇದ್ದು, ಈ ಆಫರ್ ಆ.15, 16, 17ರಂದು ಮಾನಸ ವಾಟರ್ ಪಾರ್ಕ್ ನಲ್ಲಿ ಸಿಗಲಿದೆ. ಈಗಾಗಲೇ ಮಾನಸ ವಾಟರ್ ಪಾರ್ಕ್ ನಲ್ಲಿ ವಿವಿಧ ಪ್ರಕಾರಗಳ ನೀರಾಟಗಳ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್ ರೈಡ್, ಮ್ಯೂಸಿಕಲ್ ಫೌಂಟೇನ್, ರೈನ್ ಡ್ಯಾನ್ಸ್, ವೇವ್ ಪೂಲ್, ಸ್ಲೈಡ್ಸ್, ಸ್ಕೈ ಸೈಕ್ಲಿಂಗ್ ಸೇರಿದಂತೆ ವಿವಿಧ ಪ್ರಕಾರಗಳ ನೀರಾಟಗಳು ಪ್ರವಾಸಿಗರ ಮನಸೂರೆಗೊಂಡಿದೆ.ಈ ಬಾರಿಯ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15ರಿಂದ 17ರವರೆಗೆ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಿ ಜನರನ್ನು ಮನರಂಜಿಸಲಿದೆ. ಹೆಚ್ಚಿನ ಮಾಹಿತಿಗಾಗಿ…
ಕಾಸರಗೋಡು : ಗಡಿನಾಡಿನ ಪತ್ರಕರ್ತ, ಲೇಖಕ ರವಿ ನಾಯ್ಕಾಪು ಅವರಿಗೆ ‘ಗಡಿನಾಡ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಇತ್ತೀಚಿಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆ.ಕೆ. ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ದೇಸಿ ಸಂಸ್ಕೃತಿ ಸೌರಭ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಕರ್ನಾಟಕ ಸರಕಾರದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಗೋವಿಂದ ಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು. ಕೆ.ಕೆ. ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕೆ. ಕುಂಬಣ್ಣ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪ್ರಾಧ್ಯಾಪಕ ಡಾ. ಎಚ್. ಲಕ್ಷ್ಮೀನಾರಾಯಣ ಸ್ವಾಮಿ, ನಿರೂಪಕಿ ಸೌಮ್ಯಾ ಗೌಡ, ವಿದುಷಿ ಪದ್ಮಜಾ ಜಯರಾಮ್ ಮುಖ್ಯ ಅತಿಥಿಗಳಾಗಿದ್ದರು. ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಕಾವ್ಯದರ್ಶಿ ಡಾ. ಕೆ.ಎನ್. ನಾಗೇಶ್ ಪ್ರಶಸ್ತಿ ವಿಜೇತರ ಪರಿಚಯಮಾಡಿದರು. ಸಂಘಟನೆ ಅಧ್ಯಕ್ಷ ಎ.…
ಮೂಡಿಗೆರೆ : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾದ ಚಾರ್ಮಾಡಿ ಘಾಟಿಯಲ್ಲಿ ಯುವಕನೋರ್ವ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. ಚಕ್ಮಕ್ಕಿ ಗ್ರಾಮದ ನಿವಾಸಿ ಮುಝಮ್ಮಿಲ್ (21) ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ ಯುವಕ ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ ಆತನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಹದಗೆಟ್ಟ ತೊಕ್ಕೊಟ್ಟು ಕುತ್ತಾರ್ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಬಬ್ಬುಕಟ್ಟೆ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮಾತನಾಡಿ, ವರ್ಷದ ಹಿಂದೆ ಹಾಕಲಾಗಿದ್ದ ಡಾಂಬರು ಒಂದೇ ಮಳೆಗೆ ಹಾಳಾಗಿದೆ. ಗುತ್ತಿಗೆದಾರರು ಭ್ರಷ್ಟಾಚಾರ ಮಾಡಿ ರಸ್ತೆಯ ಕೆಲಸವನ್ನು ಹಾಳು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವಾಗ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ರಸ್ತೆಯನ್ನು ಶೀಘ್ರ ಸರಿಪಡಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ಅಡ್ವೊಕೇಟ್ ನಿತಿನ್ ಕುತ್ತಾರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಕೋಶಾಧಿಕಾರಿ ಅಶ್ಫಾಕ್ ಅಳೇಕಲ, ಉಪಾಧ್ಯಕ್ಷ ಅಶ್ರಫ್ ಹರೇಕಳ ರಝಾಕ್ ಮುಡಿಪು, ರಾಣಿ ಅಬ್ಬಕ್ಕ ಬಸ್ ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್, ಕಾರ್ಮಿಕ ಮುಖಂಡರಾದ ಜನಾರ್ಧನ…
ಮಂಗಳೂರು : ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರಕಾರವು ತನ್ನ ಪಾಲು ನೀಡದ ಕಾರಣ ದಿಂದಾಗಿ ರಾಜ್ಯದಲ್ಲಿ ಈ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಸೋಮವಾರ ಲೋಕಸಭೆಯಲ್ಲಿ ಸರಕಾರದ ಗಮನ ಸೆಳೆದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿ ಈ ಗಂಭೀರ ವಿಷಯವನ್ನು ಎತ್ತಿರುವ ಸಂಸದರು, ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ವರ್ಷ ‘ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ’ ಜಾರಿಗೆ ತಂದಿದೆ. ಆದರೆ ಕರ್ನಾಟಕದಲ್ಲಿರುವ ಹಿರಿಯ ನಾಗರಿಕರಿಗೆ ಈ ಯೋಜನೆಯ ಫಲಾನುಭವ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಯೋಜನೆಗೆ ರಾಜ್ಯ ಸರಕಾರದ ತನ್ನ ಪಾಲಿನ ಶೇ.40 ರಷ್ಟು ಪಾಲನ್ನು ನೀಡಲು ನಿರಾಕರಿಸಿದೆ.…
ಉಳ್ಳಾಲ: ಇಲ್ಲಿನ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಜಂಟಿಯಾಗಿ ಉಳ್ಳಾಲದ ಅಬ್ಬಕ್ಕ ಸರ್ಕಲ್ನಲ್ಲಿರುವ ಅಬ್ಬಕ್ಕ ಪ್ರತಿಮೆ ಬಳಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಹಾಗೂ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ)ಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿಯವರು ಬೆಳಿಗ್ಗೆ 8 ಗಂಟೆಗೆ ಉಳ್ಳಾಲ ಅಬ್ಬಕ್ಕ ಸರ್ಕಲ್ನಲ್ಲಿ ನೇರವೇರಿಸಲಿರುವರು ಹಾಗೂ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯದ ಅಧ್ಯಕ್ಷರಾದ ಪ್ರವೀಣ್ ಬೀರಿಯವರು ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆಗೈಯಲಿರುವರು.
ಕೊಣಾಜೆ : ಇಂದಿನ ಆಧುನಿಕ ಕಾಲದ ಒತ್ತಡ, ಜಂಜಾಟದ ಬದುಕಿಗೆ ದೇವಾಲಯ, ಮಂದಿರಗಳು ನಮಗೆ ಏಕಾಗ್ರತೆಯೊಂದಿಗೆ ನೆಮ್ಮದಿ ಕೊಡುತ್ತದೆ. ಜ್ಞಾನಕ್ಕಿಂತ, ವಿದ್ಯೆಗಿಂತ ಮಿಗಿಲಾದುದು ಯಾವುದೂ ಇಲ್ಲ. ವಿದ್ಯೆಯ ಜೊತೆಗೆ ಸಂಸ್ಕೃತಿ, ಸಂಸ್ಕಾರದ ಅರಿವನ್ನು ಬೆಳೆಸಿಕೊಳ್ಳಬೇಕು. ಸತ್ಯ,ನ್ಯಾಯ, ನೀತಿಯೊಂದಿಗೆ ಧರ್ಮಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ ಎಂದು ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು ಅವರು ಹೇಳಿದರು. ಅವರು ಪಜೀರು ಸುದರ್ಶನ ನಗರದ ಶ್ರೀ ಕೃಷ್ಣ ಭಜನಾ ಮಂದಿರ(ರಿ) ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ 60 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿಯಾಗಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ದೈವೀ ಶಕ್ತಿಯೊಂದಿಗೆ ಮಾನವೀ ಶಕ್ತಿಯು ಇದ್ದಾಗ ಕ್ಷೇತ್ರವು ಬೆಳಗುತ್ತದೆ. ಬಹಳ ವರ್ಷದ ಇತಿಹಾಸ ಹೊಂದಿರುವ ಈ ಮಂದಿರದ ಮೂಲಕ ಸಾಮಾಜಿಕ ಧಾರ್ಮಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಾ ಬಂದಿರುವುದು ಮಹತ್ವದ ವಿಷಯವಾಗಿದೆ ಎಂದರು. ರಾಜ್ಯ…
ಮಂಗಳೂರು : ಇಂದಿನ ಕಾಲದಲ್ಲಿ ರಕ್ಷಾ ಬಂಧನದ ಅರ್ಥ ಇನ್ನೂ ವಿಸ್ತಾರವಾಗಿದೆ. ಕೆಲವರು ತಮ್ಮ ಆಪ್ತ ಸ್ನೇಹಿತರಿಗೆ, ಗುರುಗಳಿಗೆ, ಅಥವಾ ದೇಶವನ್ನು ಕಾಪಾಡುವ ಸೈನಿಕರಿಗೆ ರಾಖಿ ಕಟ್ಟುತ್ತಾರೆ. ಹೀಗೆ, ಈ ಹಬ್ಬವು ಕೇವಲ ಕುಟುಂಬದಷ್ಟೇ ಅಲ್ಲ, ಸಮಾಜದ ಏಕತೆಯ ಸಂಕೇತವೂ ಆಗಿದೆ ಎಂದು ಮಂಗಳೂರು ಮಹಾನಗರ ಸಾಮರಸ್ಯ ಟೋಳಿ ಸದಸ್ಯರಾದ ಪ್ರಸಾದ್ ಕಣ್ಣೂರ್ ಹೇಳಿದರು. ರಾಜಕೇಸರಿ ಸೇವಾ ಟ್ರಸ್ಟ್ (ರಿ) ಕರ್ನಾಟಕ ಇದರ 567 ನೇ ಸೇವಾ ಯೋಜನೆಯ ಅಂಗವಾಗಿ ಜೆಪ್ಪು ಮಾರ್ಕೆಟ್ ಬಳಿ ಇರುವ ಭಗಿನಿ ಸಮಾಜದಲ್ಲಿ ಭಗಿನಿ ಸಮಾಜದ ಸಹೋದರಿಯರೊಂದಿಗೆ “ರಕ್ಷಾಬಂಧನ ಸಂಭ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಭಗಿನಿ ಸಮಾಜದ ಅಧ್ಯಕ್ಷರಾದ ರತ್ನಾ.ಟಿ.ಆಳ್ವ ಮಾತನಾಡಿ, ರಕ್ಷಾ ಬಂಧನದ ಆಚರಣೆಯಿಂದ ಸಹೋದರತ್ವ, ಸಾಮರಸ್ಯ ಮತ್ತು ಸ್ವಾಭಿಮಾನದ ಸಂಕೇತವನ್ನು ಪ್ರತಿಬಿಂಬಿಸಿದಂತೆ ಆಗುವುದು ಎಂದರು.ಸಂಸ್ಥಾಪಕರಾದ ದೀಪಕ್ .ಜಿ. ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು. ಭಗಿನಿ ಸಮಾಜದ ಉಪಾಧ್ಯಕ್ಷ ಚಿತ್ರಾ ಪ್ರಭು, ಸಾಮಾಜಿಕ ಸೇವಾಕರ್ತೆ ಶಬರಿ ನಿತಿನ್ ಶೆಟ್ಟಿ, ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್…
ಸುರತ್ಕಲ್ : ನಮ್ಮ ಗ್ರಾಹಕರೇ ನಮ್ಮ ಬ್ರಾಂಡ್ ರಾಯಭಾರಿಗಳು. ಕಳೆದ ಎಂಟು ವರ್ಷಗಳಲ್ಲಿ ₹500 ಕೋಟಿ ವ್ಯವಹಾರದಿಂದ ₹1,300 ಕೋಟಿಗೆ ಬ್ಯಾಂಕ್ ತಲುಪಿದೆ. ಈ ಬೆಳವಣಿಗೆಗೆ ಬಲವಾದ ನಾಯಕತ್ವ, ಆಡಳಿತ ಮಂಡಳಿಯ ಬದ್ಧತೆ ಮತ್ತು ಅಚಲವಾದ ಗ್ರಾಹಕರ ನಂಬಿಕೆ ಕಾರಣವಾಗಿದೆ. ಎಂಸಿಸಿ ಬ್ಯಾಂಕ್ ಪ್ರಸ್ತುತ ಹಣಕಾಸು ವರ್ಷದ ಅಂತ್ಯದ ವೇಳೆಗೆ 25 ಶಾಖೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದು ಎಂ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಹೇಳಿದ್ದಾರೆ. ಅವರು ಎಂ.ಸಿ.ಸಿ ಬ್ಯಾಂಕ್ ನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದು ಕೇವಲ ಸಿಬ್ಬಂದಿ ಅಥವಾ ನಿರ್ದೇಶಕರಿಗೆ ಸೇರದೇ ಗ್ರಾಹಕರು ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿದೆ. ನಮ್ಮ ಗ್ರಾಹಕರು ನಮ್ಮ ಬ್ರಾಂಡ್ ರಾಯಭಾರಿಗಳು. ಹೊಸ ಡಿಜಿಟಲ್ ಪ್ಲಾಟ್ಫಾರ್ಮ್’ಗಳನ್ನು ಅಳವಡಿಸಿಕೊಳ್ಳಲು ಬ್ಯಾಂಕ್ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಯುಪಿಐ ಸೇವೆಗಳನ್ನು ಪರಿಚಯಿಸುವ ಯೋಜನೆಗಳಿವೆ. ಆಡಳಿತ ಮಂಡಳಿ, ಸಿಬ್ಬಂದಿ, ಗ್ರಾಹಕರು ಮತ್ತು ಸಮುದಾಯದ ಸದಸ್ಯರಿಗೆ ಅವರ ನಿರಂತರ…

