Author: UllalaVani

Kannada News From Coastal Karnataka

ಮಂಗಳೂರು: ಮೂಲತಃ ಪುತ್ತೂರಿನ ಯುವತಿ, ಮಂಗಳೂರಿನ ಪಶುವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಮಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ಸಂಭವಿಸಿದೆ.ಪುತ್ತೂರು ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್‌ ಗಣೇಶ್‌ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಮೃತ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ| ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಪಶುವೈದ್ಯೆಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ ಗಣೇಶ್‌ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

Read More

ಕೊಣಾಜೆ: ಬೋಳಿಯಾರು ಗ್ರಾಮದ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಗೋಡೆ ಬಿರುಕು ಬಿಟ್ಟು ಅಪಾಯಕಾರಿಯಾಗಿದ್ದು ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಡಿವೈಎಫ್‌ಐ ಪದಾಧಿಕಾರಿಗಳು ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿತ್ತು ಹಾಗೂ ಕ್ಷೇತ್ರ ಶಿಕ್ಷಣ ಇಲಾಖೆಯೆ ಗಮನಕ್ಕೂ ತಂದಿತ್ತು. ಇದೀಗ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರಿಶೀಲನೆ ನಡೆಸಿದ ಶಿಕ್ಷಣಾಧಿಕಾರಿ ಈಶ್ವರ್ ಅವರು, ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿ ಕೂಡಾ ಉಪಸ್ಥಿತರಿದ್ದು ಶಾಲೆ ಹಾಗೂ ಅಂಗನವಾಡಿಯ ಅವ್ಯವಸ್ಥೆಯನ್ನು ಪರಿಶೀಲಿಸಿದರು. ಕೇವಲ ಹತ್ತು ಹದಿನೈದು ವರ್ಷಗಳ ಹಿಂದೆಯಷ್ಟೆ ನಿರ್ಮಾಣವಾದ ಶಾಲೆ ಮತ್ತು ಅಂಗನವಾಡಿ ಕಟ್ಟಡವು ಬಿರುಕುಬಿಟ್ಟಿದ್ದು, ಭ್ರಷ್ಟಾಚಾರದ ಕಾರಣಕ್ಕಾಗಿ ಆಗಿದೆ. ಈ ಬಗ್ಗೆ ಕೂಡಾ ಇಲಾಖೆ ತನಿಖೆ ನಡೆಸಬೇಕು ಎಂದು ಡಿವೈಎಫ್‌ಐ ಸಂಘಟನೆಯು ಶಿಕ್ಷಣಾಧಿಕಾರಿಗೆ ಆಗ್ರಹಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳು…

Read More

ಮಂಗಳೂರು : ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್‌ನಿಂದ ನೀಡಲಾಗುವ ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಅಪೂರ್ವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೈಸೂರು ಸುತ್ತೂರು ಕ್ಷೇತ್ರದ ಪರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ 9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ…

Read More

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ನಗರದ ಪಂಪ್‌ವೆಲ್‌ನ ತೌಸಿಫ್ ಅಹ್ಮದ್ (38) ಮತ್ತು ಕೆ.ಸಿ.ರೋಡ್‌ನ ಅಬ್ದುಲ್ ಖಾದರ್(41) ಬಂಧಿತ ಆರೋಪಿಗಳಾಗಿದ್ದಾರೆ. ಕಂಕನಾಡಿ ನಗರ ಠಾಣೆಯ ಎಸ್ಸೈ ಶಿವಕುಮಾರ್ ಸಿಬ್ಬಂದಿಯ ಜೊತೆಗೂಡಿ ಸೋಮವಾರ ಅಪರಾಹ್ನ ರೌಂಡ್ಸ್ ಕರ್ತವ್ಯ ನಡೆಸುತ್ತಾ ಜೆಪ್ಪಿನಮೊಗರಿನಿಂದ ಕಲ್ಲಾಪು ಕಡೆಗೆ ಹೋಗುತ್ತಿದ್ದಾಗ ಕಡೆಕಾರ್ ಕ್ರಾಸ್ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲೆತ್ನಿಸಿದರು ಎನ್ನಲಾಗಿದೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಹಾಗೂ 6 ಸಜೀವ ಗುಂಡುಗಳನ್ನು ಹೊಂದಿರುವುದು ಕಂಡುಬಂದಿದೆ. ಈ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.”,

Read More

ಉಳ್ಳಾಲ: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಗೆ ನಗರ ಸಭೆ 14 ಲಕ್ಷ ನೀಡುವ ವಿಚಾರದಲ್ಲಿ ವ್ಯಾಪಕ ಆಕ್ಷೇಪ ಉಳ್ಳಾಲ ನಗರ ಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.ನಗರಸಭೆ ಅಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ದಿನಕರ್ ಉಳ್ಳಾಲ ಉಳ್ಳಾಲ ತಾಲೂಕಿನ ಪಜೀರ್ ಗ್ರಾಮದಲ್ಲಿ ಬಹು ನೀರಾವರಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಆಗಿದೆ. ಅಂದಾಜು 200 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ನಗರಸಭೆ 14 ಲಕ್ಷ ಯಾಕಾಗಿ ನೀಡಬೇಕು ? ಈ ನೀರು ಉಳ್ಳಾಲಕ್ಕೆ ಬರುತ್ತದೆ ಯೇ , ಈ ಯೋಜನೆ ಗೆ14 ಲಕ್ಷ ನೀಡಬೇಕು ಎಂದು ಸಭೆಯಲ್ಲಿ ನಿರ್ಣಯ ಆಗಿದೆಯೇ ಎಂದು ಪ್ರಶ್ನಿಸಿದರು.ಪೌರಾಯುಕ್ತ ನವೀನ್ ಹೆಗ್ಡೆ ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತಾಲೂಕಿಗೆ ಸಂಬಂಧ ಪಟ್ಟದ್ದು. ಈ ನೀರು ಉಳ್ಳಾಲಕ್ಕೂ ಬರುತ್ತದೆ. ಇದರ ವೆಚ್ಚ ತಾಲೂಕು ವ್ಯಾಪ್ತಿಯ ಗ್ರಾ.ಪಂ. ಹಾಗೂ ನಗರಸಭೆ ಹಂಚಬೇಕು. ಹಣ ನೀಡುವ ಬಗ್ಗೆ ಸಭೆ…

Read More

ಉಳ್ಳಾಲ: ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.

Read More

ಬೆಳ್ಮ : ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ವಿಪರೀತ ಮಳೆ ಮತ್ತು ಬಿಸಿಲಿನಿಂದ ಮೂರು ನಾಲ್ಕು ದಿವಸ ಮನೆಯಿಂದ ಹೊರಗೆ ಬಾರದೆ ಸರಿಯಾಗಿ ಊಟ ಮಾಡದೆ ಅವಿಭಕ್ತ ಕುಟುಂಬದೊAದಿಗೆ ಇದ್ದ ಸಮಯವನ್ನು ನೆನಪಿಸುವಂತಹ ಕಾರ್ಯಕ್ರಮವನ್ನು ಇವತ್ತು ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಯಾವುದೇ ವಿಜೃಂಭಣೆ ಇಲ್ಲದೆ ಸೇವಾಶ್ರಮದಲ್ಲಿ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ತಿಳಿಸಿದರು.ಅವರು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದೇರಳಕಟ್ಟೆ ಬೆಳ್ಮ ಸೇವಾಭಾವ ಚಾರಿಟೇಬಲ್ ಟ್ರಸ್ಟ್ (ಸೇವಾಶ್ರಮ) ದಲ್ಲಿ ಆಚರಿಸಲಾದ ತುಳುವೆರೆ ಆಟಿ ಒಂದು ನೆನಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ.ಸಾಯಿಗೀತಾ ಹೆಗ್ಡೆ ತುಳುವರಿಗೆ ಪ್ರತಿ ತಿಂಗಳು ಕೂಡಾ ವಿಶೇಷ. ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡೇ ತುಳುವರ ಆಹಾರವನ್ನು ರೂಪಿಸಲಾಗಿದೆ. ಉಷ್ಣದ ಸಮಯದಲ್ಲಿ ಮೈಯನ್ನು ತಂಪುಗೊಳಿಸುವ, ಶೀತ ಸಮಯದಲ್ಲಿ ಉಷ್ಣದ ಆಹಾರವನ್ನು ದೇಹಕ್ಕೆ ಉಷ್ಣವಾಗುವ ಆಹಾರವಸ್ತುಗಳೊಂದಿಗೆ ತಂಪುಗೊಳಿಸುವ ಆಹಾರ ಪದಾರ್ಥಗಳನ್ನು ಸೇರಿಸಿ ಉಣ್ಣುವ…

Read More

ನರಿಂಗಾನ: ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿ ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ನರಿಂಗಾನ ಗ್ರಾಮಪಂಚಾಯತ್ ಅಧ್ಯಕ್ಷರಾದ ನವಾಝ್ ಎಂ.ಬಿ ತೆಂಗಿನ ಸಿರಿ ಅರಳಿಸಿ ಉದ್ಘಾಟಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕಿ ನಯನ ಕುಮಾರಿ.ಕೆ ಅವರು ವಹಿಸಿಕೊಂಡಿದ್ದರು.ವೇದಿಕೆಯಲ್ಲಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಝಾಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಅಬೂಬಕ್ಕರ್, ಪ್ರಾ ಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯನಿ ಸುಜಾತ ಅವರು ಉಪಸ್ಥಿತರಿದ್ದರು.ಶಾಲಾ ವಿಜ್ಞಾನ ಶಿಕ್ಷಕಿ ವಿನಿತಾ ಮೇಡಂ ಅವರು ಆಷಾಢ ತಿಂಗಳಲ್ಲಿ ಹಿರಿಯರು ಪಟ್ಟ ಕಷ್ಟ, ರೋಗ ರುಜಿನ ದೂರ ಗೊಳಿಸುವ ಆಟಿ ಕಳೆಂಜನ ಬಗ್ಗೆ, ಆಷಾಢ ಅಮಾವಾಸ್ಯೆಯ ದಿನ ಕುಡಿಯುವ ಹಾಳೆಮರದ ತೊಗಟೆಯಿಂದ ತಯಾರಿಸುವ ಕಷಾಯದ ಬಗ್ಗೆ ಮಾಹಿತಿ ನೀಡಿದರು.ಹಿರಿಯ ಶಿಕ್ಷಕಿ ಸೀಮಾ ಮರಿಯಾ ಡಿಸೋಜ ಸ್ವಾಗತಿಸಿದರು, ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷಿ÷್ಮÃ ವಂದಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭ ಮಕ್ಕಳು ತಮ್ಮ ಹೆತ್ತವರ ಸಹಕಾರದೊಂದಿಗೆ ತಯಾರಿಸಿದ 47 ಖಾದ್ಯಗಳನ್ನು ವೇದಿಕೆಯಲ್ಲಿ ಜೋಡಿಸಿ ಇಟ್ಟು,…

Read More

ಕುತ್ತಾರು : ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಮಂಜನಾಡಿ ಇದರ 20ನೇ ವರ್ಷಾಚರಣೆ ಅಂಗವಾಗಿ ಸರಣಿ ಕಾರ್ಯಕ್ರಮದ ಪ್ರಯುಕ್ತ 9ನೇ ಕಾರ್ಯಕ್ರಮವು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಶೃತಿಲಯ ಕಲಾ ಕೇಂದ್ರದ ಸಹಯೋಗದಿಂದ ಜರಗಿತು.ಶೃತಿಲಯ ಕಲಾ ಕೇಂದ್ರದ ಸಂಚಾಲಕರಾದ ಹರೀಶ್ ಮಾಸ್ಟರ್, ಬಿಜೆಪಿ ಮಹಿಳಾ ಮೋರ್ಚದ ಅಧ್ಯಕ್ಷೆ ಮಾಧವಿ ಉಳ್ಳಾಲ, ಯಕ್ಷಗಾನ ಅಧ್ಯಯನ ಟ್ರಸ್ಟ್ ನ ನಿರ್ದೇಶಕರಾದ ಜಗದೀಶ್ ಎಸ್ ಗಟ್ಟಿ ಉಚ್ಚಿಲ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕೃಷ್ಣಪ್ಪ ಕೀನ್ಯಾ, ಸಮರ್ಪಣಾ ಪರಿವಾರ ಟ್ರಸ್ಟ್ ರಿಜಿಸ್ಟರ್ಡ್ ಮಂಗಳೂರು ಇದರ ರಾಮಚಂದ್ರ ಆಚಾರ್ಯ ದೇರ್ಲಕಟ್ಟೆ, ಜೀವನ್ ಕೆಎಸ್ ಮಾಡೂರು, ಮೋಹನ್ ಶಿರ್ಲಾಲ್, ವಸಂತ ಕೋಡಿ, ಶ್ರೀ ವಿಷ್ಣುಮೂರ್ತಿ ಜನಾರ್ಧನ ಭಜನಾ ಮಂಡಳಿಯ ಕಾರ್ಯದರ್ಶಿ ಪುರಂದರ ಅಸೈ, ಟ್ರಸ್ಟಿನ ಅಧ್ಯಕ್ಷ ಹರೀಶ್ ಭಟ್ಯಡ್ಕ, ಅಧ್ಯಯನ ಟ್ರಸ್ಟಿನ ಸಾಂಸ್ಕöÈತಿಕ ಕಾರ್ಯದರ್ಶಿ ಉದಯ ಅಂಚನ್ ಮಂಜನಾಡಿ ಹಾಗೂ ಅಂಗನವಾಡಿ ಶಿಕ್ಷಕಿ ಸುಜಾತ ಕಲ್ಕಟ್ಟ ಉಪಸ್ಥಿತರಿದ್ದರು.ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಅಸ್ಸಿಸಿ…

Read More

ಕಾಪಿಕಾಡು: ತುಳುನಾಡಿನಲ್ಲಿ ಆಟಿ ತಿಂಗಳ ಕಾರ್ಯಕ್ರಮ ವನ್ನು ಸಂಘ ಸಂಸ್ಥೆಗಳು ಎಲ್ಲರನ್ನೂ ಒಟ್ಟು ಸೇರಿಸಿ ಆಚರಿಸುವುದರ ಜತೆಗೆ ಯುವ ಪೀಳಿಗೆಗೆ ತುಳುವ ಸಂಸ್ಕöÈತಿಗಳನ್ನು ತಿಳಿಸುವ ಕಾರ್ಯ ಆಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ವತಿಯಿಂದ ಕಾಪಿಕಾಡು ಖಾಸಗಿ ಸಭಾಂಗಣದಲ್ಲಿ ನಡೆದ ಬಿರುವೆರ್ನ ಆಟಿದ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷರಾದ ಕೆ.ಟಿ.ಸುವರ್ಣ ವಹಿಸಿದ್ದರು. ಕಾರ್ಯಾಧ್ಯಕ್ಷರಾದ ಸತೀಶ್ ಕರ್ಕೇರ, ಗೌರವ ಸಲಹೆಗಾರರಾದ ಎ.ಜೆ.ಶೇಖರ್, ದಿನೇಶ್ ಕೆ.ಅತ್ತಾವರ, ಚಂದ್ರಶೇಖರ ಉಚ್ಚಿಲ, ಮಾಧವ ಪೂಜಾರಿ,ಪ್ರಧಾನ ಕಾರ್ಯದರ್ಶಿ ಆನಂದ ಕೆ.ಅಸೈಗೋಳಿ, ಕೋಶಾಧಿಕಾರಿ ಲಕ್ಷ÷್ಮಣ ಪೂಜಾರಿ, ಮಹಿಳಾ ವೇದಿಕೆ ಗೌರವಧ್ಯಕ್ಷರಾದ ಯೋಗಿನಿ ಕೆ.ಟಿ.ಸುವರ್ಣ, ಅಧ್ಯಕ್ಷರಾದ ಗಂಗಾ ಆನಂದ, ವೇದಿಕೆಯ ಪ್ರಮುಖರಾದ ಹರೀಶ್ ಅಂಬ್ಲಮೊಗರು, ರಾಜೇಶ್ ಕೆರೆಬೈಲು, ಭಗವಾನ್ ದಾಸ್, ಜಗದೀಶ್ ಕೆರೆಬೈಲು, ಗೋಪಿನಾಥ್ ಬಗಂಬಿಲ, ರಾಜೀವ ಮಾಸ್ಟರ್, ರಾಕೇಶ್ ಕುಮಾರ್, ಉದಯ ಆರ್.ಕೆ, ಮೋಹನ್ ಸಾಲ್ಯಾನ್, ರಾಜೇಶ್ ಪಿಲಾರು, ಪ್ರವೀಣ್ ನೆರಿಯ,…

Read More