Author: UllalaVani

Kannada News From Coastal Karnataka

“ಉಳ್ಳಾಲ:ಕೋಟೆಕಾರ್ ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಳಂಗರ ಸರಕಾರಿ ಕೆರೆಯ ಒಂದು ಭಾಗ ಪಾರ್ಶ್ವ ಕುಸಿದಿದೆ. ಇದರಿಂದ ಈ ಕೆರೆಯ ಸುತ್ತಮುತ್ತಲಿರುವ ಮನೆಗಳು ಅಪಾಯಕ್ಕೆ ಸಿಲುಕಿವೆ. ಇಲ್ಲಿನ ಅಬ್ಬುಲ್ ಖಾದರ್ ಎಂಬವರ ಮನೆ ಹೆಚ್ಚು ಅಪಾಯದಲ್ಲಿದೆ. ಈ ಬಗ್ಗೆ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಅಹ್ಮದ್ ಅಜ್ಜಿನಡ್ಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕೊಳಂಗರದಲ್ಲಿರುವ ಈ ಕೆರೆಯನ್ನು ಹತ್ತು ವರ್ಷಗಳ ಹಿಂದೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿಪಡಿಸಲಾಗಿತ್ತು. ಇದೀಗ ಕೆರೆಯ ಒಂದು ಬದಿ ಬಿರುಕುಬಿಟ್ಟಿದೆ ಎಂದು ಅಹ್ಮದ್ ಅಜ್ಜಿನಡ್ಕ ಮನವಿಯಲ್ಲಿ ತಿಳಿಸಿದ್ದಾರೆ,

Read More

ಮುನ್ನೂರು: ರಾಣಿಪುರ ನಿವಾಸಿ ಹಾಗೂ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕಿ ವೀಣಾ ಡಿಸೋಜಾ (49) ಅವರು ಜೂನ್ 7ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರು ಪತಿ ಅರ್ಬನ್ ಡಿಸೋಜ, ಕುಟುಂಬಸ್ಥರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವೀಣಾ ಡಿಸೋಜಾ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರು ಉಳ್ಳಾಲ ಕಾಪಿಕಾಡ್‌ನ ಜಾನ್ ಬೇಕರಿಯ ಜಾನ್ ಡಿಸೋಜ ಅವರ ಪುತ್ರಿಯಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಜೂನ್ 9ರಂದು ಸಂಜೆ 4 ಗಂಟೆಗೆ ರಾಣಿಪುರದ ನಿವಾಸದಿಂದ ಹೊರಟು ರಾಣಿಪುರದ ಲೇಡಿ ಕ್ವೀನ್ ಆಫ್ ಯೂನಿವರ್ಸ್ ಚರ್ಚ್ನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಕುಟುಂಬಸ್ಥರು ಹಾಗೂ ಬಂಧು-ಬಳಗ ಪ್ರಾರ್ಥಿಸಿದ್ದಾರೆ. ಮೃತರ ಪುತ್ರಿ ವಿವಲ್‌ ಬಿಂದಿಯ ಡಿಸೋಜ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ಓರ್ವ ಪುತ್ರ ವಿನ್ಸ್ಟನ್‌ ಬ್ರಯಾನ್‌ ಡಿಸೋಜ ಅವರನ್ನು ಅಗಲಿದ್ದಾರೆ. *****************************ಉಳ್ಳಾಲವಾಣಿ ಕಾಳಜಿ ;ಕ್ಯಾನ್ಸರ್ ಬಗ್ಗೆ ಜಾಗೃತಿ ಅಗತ್ಯ”ಕ್ಯಾನ್ಸರ್‌ನ್ನು…

Read More

ವಿಜಯ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡಿನ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಿಳಾ ಜಿಲ್ಲಾಧಿಕಾರಿಗಳು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಜಿಲ್ಲಾಧಿಕಾರಿ ಹುದ್ದೆಯು ಜಿಲ್ಲೆಯ ಆಡಳಿತದ ಕೇಂದ್ರಬಿಂದುವಾಗಿದೆ. ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಕಾನೂನು ಸುವ್ಯವಸ್ಥೆ ಕಾಪಾಡುವುದು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ವಿಪತ್ತು ನಿರ್ವಹಣೆಯಂತಹ ಮಹತ್ವದ ಕಾರ್ಯಗಳು ಜಿಲ್ಲಾಧಿಕಾರಿಗಳ ಹೊಣೆಗಾರಿಕೆಯ ಭಾಗವಾಗಿವೆ. ಇಂತಹ ಜವಾಬ್ದಾರಿಯುತ ಹುದ್ದೆಗಳಲ್ಲಿ ಮಹಿಳೆಯರು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಮಾಜದ ಪ್ರಗತಿಯ ಪ್ರತಿಬಿಂಬವಾಗಿದೆ. ಪ್ರಸ್ತುತ ಚೆನ್ನೈನಲ್ಲಿ ಮಾಲತಿ ಹೆಲೆನ್, ಅರಿಯಲೂರಿನಲ್ಲಿ ಮಿರುಣಾಳಿನಿ, ಕಳ್ಳಕ್ಕುರಿಚಿಯಲ್ಲಿ ಪದ್ಮಜಾ, ಕಾಂಚೀಪುರಂನಲ್ಲಿ ಶಿನೇಕಾ, ಪೆರಂಬಲೂರಿನಲ್ಲಿ ಸರಣ್ಯಾ ಅರಿ, ಪುಡುಕ್ಕೋಟೈನಲ್ಲಿ ಅರುಣಾ, ರಾಮನಾಥಪುರಂನಲ್ಲಿ ಪ್ರಿಯಾ ರವಿಚಂದ್ರನ್, ಶಿವಗಂಗೈನಲ್ಲಿ ಪೊರ್ಕೊಡಿ, ತಂಜಾವೂರಿನಲ್ಲಿ ರೇವತಿ, ನೀಲಗಿರಿಯಲ್ಲಿ ಲಕ್ಷ್ಮಿ ಭವ್ಯಾ, ತಿರುವಳ್ಳೂರಿನಲ್ಲಿ ಕವಿತಾ, ತಿರುವಣ್ಣಾಮಲೈನಲ್ಲಿ ವಂದನಾ ಕಾರ್ಗ್ ಹಾಗೂ ವೇಲೂರಿನಲ್ಲಿ ವೀಣಾ…

Read More

ತೊಕ್ಕೊಟ್ಟು: ತೊಕ್ಕೊಟ್ಟು ಪಿಲಾರಿನ ಶ್ರೀ ಸಾಯಿಬಾಬಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ. ಅಳಿಯೂರು ಭೇಟಿ ನೀಡಿ, ಮಂದಿರದ ವಾರ್ಷಿಕ ಕಾರ್ಯಕ್ರಮದ ಅಂಗವಾಗಿ ವಿಶೇಷ ಸಭೆ ನಡೆಸಿದರು. ಸಭೆಯಲ್ಲಿ ಸುತ್ತಮುತ್ತಲಿನ ಐದು ಗ್ರಾಮಗಳ ಭಜನಾ ಮಂಡಳಿಗಳನ್ನು ಒಗ್ಗೂಡಿಸಿ, ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಭಜನಾ ಪರಿಷತ್ತಿನ ಸಂಯೋಜನೆಯಲ್ಲಿ ಭವ್ಯ ಭಜನೋತ್ಸವ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಗ್ರಾಮ ಮಟ್ಟದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಸಲಹೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಂದಿರದ ಪ್ರಧಾನರಾದ ದಿನೇಶ್ ಶರ್ಮಾ, ಶ್ರೀಮತಿ ಸೌಮ್ಯ, ಭಜನಾ ಪರಿಷತ್ ಗೌರವ ಸಲಹೆಗಾರ ಸತೀಶ್ ದೀಪಂ, ವಲಯ ಮೇಲ್ವಿಚಾರಕರಾದ ಮೋಹನ್ ಕುಮಾರ್, ಸುನೀಲ್ ಭಟ್, ಶೈಲೇಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಉಳ್ಳಾಲ: ನರ್ಸಿಂಗ್‌ ವೃತ್ತಿಗೆ ಉತ್ತಮ ನಾಯಕತ್ವದ ಅಗತ್ಯವಿದೆ. ನಾಯಕತ್ವ ಗುಣಗಳು ಹಾಗೂ ವೃತ್ತಿಪರ ಅಭಿವೃದ್ಧಿಯ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ. ಜೊತೆಗೆ ದಾದಿಯರ ಕೆಲಸದ ಪರಿಸ್ಥಿತಿಗಳು ಇನ್ನಷ್ಟು ಸುಧಾರಿಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶ್ರೀಕಾಂತ್‌ ಫುಲಾರಿ ಹೇಳಿದರು.ಕೊಣಾಜೆ ನಡುಪದವಿನ ಕೆಎಂಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿದ ಉಳ್ಳಾಲ ಚಾರಿಟೇಬಲ್ ಟ್ರಸ್ಟ್‌ನ ಘಟಕಗಳಾದ ಮಂಗಳೂರು ಕಾಲೇಜ್ ಆಫ್ ನರ್ಸಿಂಗ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ 2026ನೇ ಸಾಲಿನ ಪದವಿ ಹಾಗೂ ಡಿಪ್ಲೊಮಾ ಪದವಿ ಪ್ರದಾನ ನೆರವೇರಿಸಿ ಮಾತನಾಡಿದರು. ಡಿಜಿಟಲ್‌ ಯುಗದಲ್ಲಿ ವೈದ್ಯಕೀಯ ಕ್ಷೇತ್ರವೂ ವೇಗವಾಗಿ ಬದಲಾಗುತ್ತಿದೆ. ಡಿಜಿಟಲ್‌ ಆರೋಗ್ಯ ಸೇವೆಗಳು, ಆಧುನಿಕ ವೈದ್ಯಕೀಯ ತಂತ್ರಜ್ಞಾನಗಳು ಹಾಗೂ ಹೊಸ ಆವಿಷ್ಕಾರಗಳ ಕುರಿತು ನರ್ಸರು ನಿರಂತರವಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರತಿಯೊಬ್ಬ ನರ್ಸ್‌ ಕರ್ನಾಟಕ ರಾಜ್ಯ ನರ್ಸಿಂಗ್‌ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ…

Read More

ಕುತ್ತಾರು, ಜೂನ್ 6: ಕುತ್ತಾರು ಭಾಗದ ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣದ ವ್ಯವಸ್ಥೆ ಕಲ್ಪಿಸಿ, ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಸ್ಥಳೀಯ ಆಟಗಾರರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಪ್ರೋತ್ಸಾಹಿಸುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಅಭಿಪ್ರಾಯಪಟ್ಟರು. ಅವರು ಮುನ್ನೂರು ಕುತ್ತಾರಿನ ವಾಲಿಬಾಲ್ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಹಾಗೂ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕೆವಿಎಫ್‌ಸಿ ಟ್ರೋಫಿ-2026 ಸೀಸನ್-3 ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕಿಶೋರ್ ದಂಪತಿಯ ಅವಿರತ ಶ್ರಮ ಹಾಗೂ ಮುನ್ನೂರು ಗ್ರಾಮ ಪಂಚಾಯತ್‌ನ ಪ್ರೋತ್ಸಾಹದಿಂದ ವಾಲಿಬಾಲ್ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿದೆ. ಕ್ರೀಡಾಂಗಣದ ವ್ಯವಸ್ಥೆಯಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತಿದ್ದು, ನಿರಂತರ ಪ್ರೋತ್ಸಾಹದಿಂದ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ತಂಡಗಳನ್ನು ಪ್ರತಿನಿಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು. ಜಿ.ಪಂ. ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಿದ್ದು,…

Read More

ಸೋಮೇಶ್ವರ : ಸೋಮೇಶ್ವರ ಪುರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ 2026 ರ ಅಂಗವಾಗಿ ಪುರಸಭಾ ಕಛೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿಯವರಾದ ಮತ್ತಡಿಯವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಹಾಗೂ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು 2026 ರ ಆದೇಶದಂತೆ ವಿಂಗಡಿಸಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿರುತ್ತದೆ. ಇದನ್ನು ಎಲ್ಲರೂ ಪಾಲಿಸಬೇಕೆಂದು ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಅರಿವು ಮೂಡಿಸುವ ಬಗ್ಗೆ ಮಾಹಿತಿ ನೀಡಿದರು. ಸೋಮೇಶ್ವರ ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿ ಮಾಡುವಲ್ಲಿ ಎಲ್ಲರ ಸಹಕಾರ ಅತ್ಯಗತ್ಯ . ಇದಕ್ಕೆ ಎಲ್ಲರೂ ಸಹಕಾರ ಒದಗಿಸುವಂತೆ ಮನವಿ ಮಾಡಿದರು. ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು 2026ರ ಆದೇಶದಂತೆ ನಾಲ್ಕು ವಿಧದ ತ್ಯಾಜ್ಯ ವಿಂಗಡಣೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿ ಈ ಬಗ್ಗೆ ಪರಿಸರ ಅಭಿಯಂತರರಾದ ಪುನೀತ್ ರವರು ವಾರ್ಡ್ ಸದಸ್ಯರು, ಸಿಬ್ಬಂದಿಗಳು ,ಪೌರಕಾರ್ಮಿಕರು ಹಾಗೂ ಕಮ್ಯುನಿಟಿ ಮೊಬಿಲೈಝರ್ಸ್ ಗೆ…

Read More

ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿಯೊಬ್ಬರು ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮೇ 3ರಂದು ನೀಟ್ ನೀಟ್-ಯುಜಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಗೆ ಹಾಜರಾದ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಆಕಾಂಕ್ಷಾ ಚತುರ್ವೇದಿ ಕೂಡಾ ಒಬ್ಬರು. ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ಸಂಪೂರ್ಣ ಪರೀಕ್ಷೆಯನ್ನೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 12ರಂದು ರದ್ದುಗೊಳಿಸಿದೆ. ಜೂನ್ 21ರಂದು ಮರು ಪರೀಕ್ಷೆ ನಡೆಯಲಿದೆ. ಈ ಬೆಳವಣಿಗೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾದ ಆಕಾಂಕ್ಷಾ ಚತುರ್ವೇದಿ “ಮತ್ತೆ ಪರೀಕ್ಷೆ ಬರೆಯಲು ಧೈರ್ಯವಿಲ್ಲ” ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕುಟುಂಬಸ್ಥರು ಹೇಳುವ ಪ್ರಕಾರ ಆಕಾಂಕ್ಷಾ ನೀಟ್ ಪರೀಕ್ಷೆಯಲ್ಲಿ ಸುಮಾರು 650 ಅಂಕಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಬೆಳಕಿಗೆ ಬಂದ ಬಳಿಕ ಆಕಾಂಕ್ಷಾ ತೀವ್ರವಾಗಿ ನೊಂದಿದ್ದರು. ಆಕಾಂಕ್ಷಾಳ ಹೆತ್ತವರು ವೈದ್ಯೆಯಾಗುವ ಕನಸು ಸಾಕಾರಗೊಳಿಸಲು…

Read More

ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಸಂಭವಿಸಿರುವ ಮೀನುಗಳ ಸಾಮೂಹಿಕ ಸಾವು ಕೇವಲ ಒಂದು ಸ್ಥಳೀಯ ಘಟನೆ ಎಂದು ಕಡೆಗಣಿಸಲಾಗದು. ಇದು ನಮ್ಮ ಪರಿಸರ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಜಲಮೂಲಗಳ ರಕ್ಷಣೆಯಲ್ಲಿ ಉಂಟಾಗಿರುವ ಗಂಭೀರ ವೈಫಲ್ಯವನ್ನು ಎತ್ತಿ ತೋರಿಸುವ ಎಚ್ಚರಿಕೆಯ ಸಂಕೇತವಾಗಿದೆ. ನೀರಿನಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಪರಿಸರ ವ್ಯವಸ್ಥೆಯ ಅಸಮತೋಲನಕ್ಕೆ ಸಾಕ್ಷಿಯಾಗಿದೆ. ಜಲಮೂಲಗಳು ಮಾಲಿನ್ಯಗೊಂಡಾಗ ಅದರ ಮೊದಲ ಬಲಿಯಾಗುವುದು ಜಲಚರ ಜೀವಿಗಳು. ಇಂದು ಮೀನುಗಳು ಸತ್ತಿವೆ, ನಾಳೆ ಇದೇ ಮಾಲಿನ್ಯ ಮಾನವ ಆರೋಗ್ಯ, ಮೀನುಗಾರರ ಬದುಕು ಹಾಗೂ ಸಮುದ್ರ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಂಬಂಧಿಸಿದ ಇಲಾಖೆಗಳು ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಮೀನುಗಳ ಸಾವಿಗೆ ಕಾರಣವಾದ ಅಂಶಗಳನ್ನು ವೈಜ್ಞಾನಿಕವಾಗಿ ಪತ್ತೆಹಚ್ಚಿ ಸಾರ್ವಜನಿಕರಿಗೆ ವರದಿ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. “ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು…

Read More

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆಯುಂಟು ಮಾಡಿದ NEET ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ NEET ಹಾಗೂ ಇತರೆ ಪರೀಕ್ಷಾ ಅಕ್ರಮಗಳಿಂದ ಮಾನಸಿಕವಾಗಿ ನೊಂದು, ಭವಿಷ್ಯದ ಅನಿಶ್ಚಿತತೆಯಿಂದ ಸಾವನ್ನು ಅಪ್ಪಿದ ವಿದ್ಯಾರ್ಥಿಗಳ ಆತ್ಮಗಳಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದವರು ವಿದ್ಯಾರ್ಥಿಗಳ ಕನಸುಗಳು, ಪರಿಶ್ರಮ ಹಾಗೂ ಭವಿಷ್ಯವನ್ನು ರಕ್ಷಿಸುವುದು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರತಿಭಟನಾಕಾರರು NEET ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪಗಳು ಮತ್ತು ಅಕ್ರಮಗಳ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು…

Read More