Author: UllalaVani

Kannada News From Coastal Karnataka

ಉಳ್ಳಾಲ: ದೇರಳಕಟ್ಟೆಯ ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ 2026-27 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಸತತ 10 ನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಹಮ್ಮದ್ ಕಮಾಲ್ 14 ನೇ ಬಾರಿಗೆ ಮರು ಆಯ್ಕೆ ಯಾಗಿದ್ದು ಕೋಶಾಧಿಕಾರಿ ಮಹಮ್ಮದ್ ಬೈತಾರ್ ಕಳೆದ 8 ವರ್ಷ ದಿಂದ ಉಪಾಧ್ಯಕ್ಷರಾಗಿ ಮಹಮ್ಮದ್ ಶರೀಫ್ 4 ನೇ ಬಾರಿಗೆ ಮರು ಆಯ್ಕೆಯಾಗಿದ್ದರೆ ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್, ಸದಸ್ಯರಾಗಿ ಹಾಜಿ ಬಾವುಜಿ, ಹಾಜಿ ಅಬ್ದುಲ್ ಖಾದರ್, ಇಬ್ರಾಹಿಂ, ಸಲೀಮ್ ಸಾಹೇಬ್, ಸಯ್ಯದ್ ಹಮೀದ್ ,ಹಂಝ ಶಾಂತಿ ಭಾಗ್, ಅಬೂಬಕ್ಕರ್ , ಅಬ್ದುಲ್ ಲತೀಫ್ ,ಮೈದೀನ್ ಶರೀಫ್ , ಅಬ್ದುಲ್ ಖಾದರ್ ಆಯ್ಕೆಯಾಗಿದ್ದಾರೆ.

Read More

ಕೊಣಾಜೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ ‌2026 ನೇ ಸಾಲಿನ ಡಾ.ಜಿ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಆಯ್ಕೆಯಾಗಿದ್ದಾರೆ.ರಾಮನಗರದ ಜಾನಪದ ಲೋಕದಲ್ಲಿ ಫೆಬ್ರವರಿ 7 ಮತ್ತು 8 ರಂದು ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ವಿದ್ಯಾರ್ಥಿ ಲೋಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಡಾ.ಕೆ.ಚಿನ್ನಪ್ಪ ಗೌಡರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ರೂ. 25,000 ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.ಜಾನಪದ‌ ಪರಿಷತ್ತುವಿನ ಇತರ ಪ್ರಶಸ್ತಿಗಳಾದ ನಾಡೋಜ ಎಚ್ ಎಲ್ ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿಗೆ ಜಾನಪದ ವಿದ್ವಾಂಸ ಹಿ.ಶಿ.ರಾಮೇಚಂದ್ರೇ ಗೌಡ, ನಾಡೋಜ ಡಾ.ಜಿ.ನಾರಾಯಣ ಜಾನಪದ ಲೋಕ ಪ್ರಶಸ್ತಿಗೆ ವಾದನ ಕಲಾವಿದರಾದ ಚಿಕ್ಕಣ್ಣ, ಶ್ರೀಮತಿ ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿಗೆ ಜನಪದ ಛಾಯಾಗ್ರಾಹಕರಾದ ಡಾ.ಸಿರಿಗಂಧ ಶ್ರೀನಿವಾಸ ಮೂರ್ತಿ ಅವರು…

Read More

ಕೊಣಾಜೆ: ದೈನಂದಿನ ಬದುಕಿನಲ್ಲಿ ಹಾಸ್ಯದ ಅನೇಕ ಸನ್ನಿವೇಶಗಳು ನಡೆಯುತ್ತಾ ಇರುತ್ತವೆ. ಅದನ್ನು ಕಲೆಯಾಗಿ ಪರಿವರ್ತಿಸುವ ಪ್ರತಿ ಭೆ ಕಲಾವಿದರಲ್ಲಿರಬೇಕು. ಸಾಮಾನ್ಯ ರೇಖೆಗಳಲ್ಲಿ ಅರಳುವ ವ್ಯಂಗ್ಯ ಚಿತ್ರಗಳಿಗೆ ಸಮಾಜ ಅಂಕುಡೊಂಕುಗಳನ್ನು ತಿದ್ದುವ ಸಾಮರ್ಥ್ಯವಿದೆ ಎಂದು ವ್ಯಂಗ್ಯಚಿತ್ರ ಕಲಾವಿದ ವೆಂಕಟ್ ಭಟ್ ಎಡನೀರು ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎನ್. ಜಿ. ಪಾವಂಜೆ ಲಲಿತಾ ಕಲಾ ಪೀಠ ಹಾಗೂ ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್, ಮಂಗಳೂರು ಇದರ ವತಿಯಿಂದ ಸೋಮವಾರ ನಡೆದ “ವ್ಯಂಗ್ಯಚಿತ್ರ ರಚನೆ ಮತ್ತು ಆಸ್ವಾದನೆ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಡಾ. ಸೇಸಪ್ಪ ಅಮೀನ್ ಅವರು ಮಾತನಾಡಿ, ಎನ್ ಎಸ್ ಎಸ್ ನಂತಹ ಶಿಬಿರಗಳು ಶೈಕ್ಷಣಿಕ ವಾತಾವರಣದ ನಡುವೆ ಭವಿಷ್ಯದ ಜೀವನಾನುಭವನ್ನು ಒದಗಿಸಿಕೊಡುತ್ತದೆ. ಅಲ್ಲದೆ ನಮ್ಮಲ್ಲಿರುವ ಪ್ರತಿಭೆಯ ಅನಾವರಣಕ್ಕೆ, ವ್ಯಕ್ತಿತ್ವವನ್ನು ರೂಪಿಸಲು ಇಂತಹ ಶಿಬಿರಗಳು ಪ್ರಯೋಜನಕಾರಿಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಎನ್. ಜಿ .ಪಾವಂಜೆ ಲಲಿತಕಲಾ…

Read More

ಉಳ್ಳಾಲ: ಫೆ.1 ರಿಂದ 6 ರ ತನಕ ತೊಕ್ಕೊಟ್ಟು ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಜರುಗಲಿದ್ದು ಆ ಪ್ರಯುಕ್ತ ಭಾನುವಾರದಂದು ಕಲ್ಲಾಪು,ಕೆರೆಬೈಲು ಶ್ರೀ ನಾಗನ ಕಟ್ಟೆಯಿಂದ ಶ್ರೀ ಕ್ಷೇತ್ರದ ಕಡೆಗೆ ಹೊರಟ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಉಳ್ಳಾಲ ಬಂಡಿಕೊಟ್ಯ ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸುಂದರ್ ಉಳ್ಳಾಲ್ ಚಾಲನೆ ನೀಡಿದರು. ಈ ವೇಳೆ ಶ್ರೀ ಉಮಾಮಹೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪರಮೇಶ್ವರ ಜೋಷಿ,ಕೊಲ್ಯ ಶ್ರೀ ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಭಾಸ್ಕರ ಐತಾಳ್,ಉಮಾಮಹೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎ.ಜೆ.ಶೇಖರ್,ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಅತ್ತಾವರ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ,ಕಾರ್ಯಾಧ್ಯಕ್ಷರಾದ ಸುರೇಶ್ ಭಟ್ನಗರ,ಗೌರವ ಸಲಹೆಗಾರರಾದ ಕೆ.ಟಿ.ಸುವರ್ಣ,ಕೃಷ್ಣ ಶಿವಕೃಪಾ ಕುಂಜತ್ತೂರು,ಉಪಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್,ಸತೀಶ್ ಕರ್ಕೇರ,ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು,ಕ್ಷೇತ್ರದ ಮೊಕ್ತೇಸರರಾದ ಡಾ.ರಾಮಕೃಷ್ಣ ಶೆಟ್ಟಿ,ರಘುರಾಮ ಶೆಟ್ಟಿ,ಕೂಸಪ್ಪ ಗಟ್ಟಿ,ನಿರ್ಮಲಾ ಕುಂಙಬು,ಹೊರೆ ಕಾಣಿಕೆ ಸಮಿತಿ ಅಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಪ್ರಚಾರ ಸಮಿತಿ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಉಮಾಮಹೇಶ್ವರಿ ಸೇವಾ ಸಮಿತಿಯ ಅಧ್ಯಕ್ಷರಾದ ದಿನೇಶ್ ರೈ…

Read More

ಉಳ್ಳಾಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆಯ ಭಾಗವಾಗಿ ಮಂಗಳೂರಿನ ಉಳ್ಳಾಲ ತಾಲೂಕಿನ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಉಳ್ಳಾಲ ಚೋಟ ಮಂಗಳೂರಿನ ಐಸ್ ಪ್ಲಾಂಟ್ ಬಳಿ ನಡೆಯಿತು. ಉಳ್ಳಾಲದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ವೈಭವದೊಂದಿಗೆ ಒಂದು ಮಹತ್ವದ ಕಾರ್ಯಕ್ರಮವಾಗಿ ಹಿಂದು ಸಂಗಮ ಆಯೋಜನಾ ಸಮಿತಿ ಉಳ್ಳಾಲ ತಾಲೂಕು ವತಿಯಿಂದ ಈ ಅದ್ದೂರಿ ಸಮಾವೇಶ ನಡೆದಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವೈದ್ಯರಾದ ಡಾ.ಸದಾಶಿವ ಪೊಲ್ನಾಯ ವಹಿಸಿದ್ದರು. ಸಮಾವೇಶದ ದಿಕ್ಕೂಚಿ ಭಾಷಣವನ್ನ ಕ್ಯಾಂಪ್ಕೋ ಅಧ್ಯಕ್ಷರಾದ ಸತೀಶ್ ಚಂದ್ರ ಮಾಡಿದ್ದು, ಸಮಾವೇಶದ ಉದ್ದೇಶ ಹಾಗೂ ಹಿಂದೂ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲಿದ್ರು.‌ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರ ಉಳಿಯ ಇದರ ಧರ್ಮದರ್ಶಿಗಳಾದ ದೇವು ಮೂಲ್ಯಣ್ಣ, ಅರ್ಟ್‌ಆಫ್ ಲಿವಿಂಗ್ ಶಿಕ್ಷಕಿ ಶ್ರೀಮತಿ ಸುಮನಾ ಕಾಮತ್, ಹಿಂದೂ ಸಂಗಮ ಆಯೋಜನಾ ಸಮಿತಿ, ಉಳ್ಳಾಲ ತಾಲೂಕು ಇದರ ಗೌರವಾಧ್ಯಕ್ಷ ಸುದೇಶ್ ಮರೋಳಿ ಹಾಗೂ ಹಿಂದೂ ಸಂಗಮ ಆಯೋಜನಾ…

Read More

ಉಳ್ಳಾಲ;  ನಮ್ಮ ಭಾರತದ  ನೆಲಕ್ಕೆ ಅಪಮಾನವಾದಾಗ ನಾವೆಲ್ಲರೂ ಒಗ್ಗಟ್ಟಾಗಿ ಉತ್ತರ ನೀಡೋಣ. ಈ ದೇಶದ ಮೇಲೆ ನಿರಂತರವಾಗಿ ಆಕ್ರಮಣಗಳಾಗಿವೆ. ಇಂತಹ ಆಕ್ರಮಣಗಳಿಂದ  ಬೇರೆ ಬೇರೆ ದೇಶಗಳ ಸಂಸ್ಕೃತಿಯು ನಾಶವಾಗಿದೆ. ಆದರೆ ಭಾರತೀಯ ಸಂಸ್ಕೃತಿಯ ನಾಶ ಎಂದಿಗೂ ಸಾಧ್ಯವಿಲ್ಲ ವಕೀಲರಾದ ಪ್ರಸಾದ್ ಕುಮಾರ್ ರೈ ಬಿ.ಸಿ.ರೋಡ್ ಹೇಳಿದರು. ಹಿಂದೂ ಸಂಗಮ ಆಯೋಜನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಕುರ್ನಾಡು, ಪಜೀರು, ಬೋಳಿಯಾರ್, ಚೇಳೂರು, ಸಜಿಪನಡು, ಸಜಿಪಪಡು ಗ್ರಾಮಗಳನ್ನೊಳಗೊಂಡ ಕುರ್ನಾಡು ಮಂಡಲದ ಮುಡಿಪುವಿನಲ್ಲಿ ಭಾನುವಾರ ನಡೆದ ಹಿಂದೂ ಸಂಗಮದಲ್ಲಿ ಬೌದ್ಧಿಕ್ ನೀಡಿದರು. ಎಲ್ಲರಿಗೂ ಒಳಿತಾಗಲಿ ಎನ್ನುವ ಸಂಸ್ಕೃತಿ ನಮ್ಮದು. ಶತ್ರುಪಾಲಯದ ಮೇಲೆ ನುಗ್ಗಿ ದಾಳಿ ಮಾಡುವುದೂ ನಮಗೆ ತಿಳಿದಿದೆ. ರಾಮಾಯಣ ಕಾಲದಿಂದ ಹಿಡಿದು ಇತ್ತೀಚಿನ ಸಿಂಧೂರ ಆಪರೇಷನ್ ವರಗೂ  ಇದು ನಡೆದಿದೆ.  ನಮ್ಮ ಶಕ್ತಿಯನ್ನು, ಸಾಮರ್ಥ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಅಗತ್ಯವಿದ್ದು, ಈ  ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮತನವನ್ನು ಗಟ್ಟಿಗೊಳಿಸುವ ಕಾರ್ಯ ಆಗಬೇಕಿದೆ. ಕುಟುಂಬ ಪದ್ದತಿಯನ್ನು ಸುದೃಢಗೊಳಿಸಬೇಕಿದೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಬೆಳೆಸೋಣ ಎಂದರು.…

Read More

ಕಣಚೂರು: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಶಾಸ್ತ್ರ ಹಾಗೂ ಚಿಕಿತ್ಸಾ ವಿಭಾಗ, ಸೂಕ್ಷ್ಮ ಜೀವ ವಿಜ್ಞಾನ (ಮೈಕ್ರೋಬಿಯಾಲಜಿ) ವಿಭಾಗ ಮತ್ತು ಔಷಧ ಶಾಸ್ತ್ರ (ಫಾರ್ಮಕಾಲಜಿ) ವಿಭಾಗಗಳ ಸಹಯೋಗದಲ್ಲಿ ಒಂದು ದಿನದ ಸಮಗ್ರ ವೈದ್ಯಕೀಯ ಕಾರ್ಯಗಾರವು “ಪುಟ್ಟ ರೋಗಿಗಳು – ದೊಡ್ಡ ನಿರ್ಧಾರಗಳು” ಎಂಬ ಶೀರ್ಷಿಕೆಯಡಿ ಫೆಬ್ರವರಿ 7ರಂದು ಕಣಚೂರು ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಕ್ಕಳ ಶಾಸ್ತ್ರ ತಜ್ಞರು ಹಾಗೂ ಕಾರ್ಯಗಾರದ ಸಂಘಟನಾ ಕಾರ್ಯದರ್ಶಿಯಾದ ಡಾ. ಪೃಥ್ವಿ ತಿಳಿಸಿದ್ದಾರೆ. ಸೋಮವಾರ ತೊಕ್ಕೊಟ್ಟು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರಗಳನ್ನು ನೀಡಿದರು. ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಯು.ಕೆ. ಮೋನು ವೈದ್ಯಕೀಯ ಕಾರ್ಯಗಾರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಿಮ್ಸ್ ನಿರ್ದೇಶಕರಾದ ಅಬ್ದುಲ್ ರಹೀಮಾನ್, ಡೀನ್ ಪ್ರೊ. ಡಾ. ಶಹನವಾಜ್ ಮಣಿಪಾಡಿ, ಮುಖ್ಯ ಸಲಹೆಗಾರ ಪ್ರೊ. ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ , ಪ್ರೊಫೆಸರ್ ಎಮೆರಿಟಸ್ (ಮಕ್ಕಳ ವೈದ್ಯಕೀಯ) ಪ್ರೊ. ಡಾ. ಶಂಶಾದ್ ಎ. ಖಾನ್, ಮಕ್ಕಳ ವೈದ್ಯಕೀಯ…

Read More

ಉಳ್ಳಾಲ: ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಸ್ಥಾನದ ಪತ್ರವನ್ನು ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಪ್ರೋ.ಬೋರಲಿಂಗಯ್ಯರವರಿAದ ದ.ಕ ಜಿಲ್ಲಾಘಟಕದ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಲ್‌ಬೈಲ್ ಉಪಸ್ಥಿತಿಯಲ್ಲಿ ಉಳ್ಳಾಲ ತಾಲೂಕು ಘಟಕದ ನೂತನ ಅಧ್ಯಕ್ಷರಾದ ಪ್ರವೀಣ್ ಎಸ್ ಕುಂಪಲ ಸ್ವೀಕರಿಸಿದರು. ಉಳ್ಳಾಲ ತಾಲೂಕು ಘಟಕದ ಪ್ರಧಾನ ಸಂಘಟನಾ ಕಾರ್ಯದರ್ಶಿ ಕಿರಣ್ ಕೊಲ್ಯ ಉಪಸ್ಥಿತರಿದ್ದರು.

Read More

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು.ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, “ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, “ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ…

Read More

ಸೋಮೇಶ್ವರ; ಲಯನ್ಸ್ ಕ್ಲಬ್ ಆಫ್ ಸೋಮೇಶ್ವರ ಆಯೋಜಿಸಿದ ಝೋನ್ ಸಾಮಾಜಿಕ ಸಭೆಯ ಸಂದರ್ಭದಲ್ಲಿ, ಆರೋಗ್ಯಕರ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸ್ವಾರ್ಥರಹಿತವಾಗಿ ಸೇವೆ ಸಲ್ಲಿಸುತ್ತಿರುವ ದೇಹದಾರ್ಢ್ಯ ತರಬೇತುದಾರರು ಹಾಗೂ ಯೋಗ ಶಿಕ್ಷಕರನ್ನು ಗೌರವಿಸಲಾಯಿತು. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು. ಲಯನ್ ವಿಜಯಕುಮಾರ್, ಲಯನ್ ಶಶಿ ಕುಮಾರ್ ನಾಯರ್, ಲಯನ್ ನಿರ್ಮಿತಾ ಭಂಡಾರಿ ಹಾಗೂ ಲಯನ್ ರಾಜಶ್ರೀ ನಾಯರ್ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ ವಿಜಯನ್ ಕೆ, ಅಧ್ಯಕ್ಷರು, ಲಯನ್ಸ್ ಕ್ಲಬ್ ಸೋಮೇಶ್ವರ ವಹಿಸಿದ್ದರು. ರಿಜನ್ 5 ರ ರೀಜನಲ್ ಚೇರ್‌ಪರ್ಸನ್ ಲಯನ್ ಮಲ್ಲಿಕಾ ಭಂಡಾರಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಝೋನ್ 1 ರ ಚೇರ್‌ಪರ್ಸನ್ ಲಯನ್ ಜೆಸಿಂತ ಮೆಂಡೋನ್ಸ, ಕ್ಲಬ್ ಎಕ್ಸ್‌ಟೆನ್ಶನ್ ಆಫೀಸರ್ ಲಯನ್ ಭಾರತಿ ವಿನೋದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಲಯನ್ ರಾಜಶ್ರೀ ನಾಯರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕ್ಲಬ್ ಉಪಾಧ್ಯಕ್ಷ ಲಯನ್ ವಿಜಯಕುಮಾರ್ ಕೆ…

Read More