ಕೊಣಾಜೆ: ಇಲ್ಲಿನ ಗ್ರಾಮಚಾವಡಿ ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ 2025-2027ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ವಿಜೇತ್ ಪಜೀರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸುಭಾಷ್ ಬೋಳ್ಯಾರ್, ಪ್ರಧಾನ ಕಾರ್ಯದರ್ಶಿಯಾಗಿ ವೇಣುಗೋಪಾಲ್ ಪಾವೂರು, ಜತೆ ಕಾರ್ಯದರ್ಶಿಯಾಗಿ ಸುಜಾತ ಹರೇಕಳ, ಕೋಶಾಧಿಕಾರಿಯಾಗಿ ದಿನೇಶ್ ಬಂಗೇರ ಕೊಣಾಜೆ, ಪೂಜಾ ಸಂಚಾಲಕರಾಗಿ ಜನಾರ್ಧನ ಕೋಟ್ಯಾನ್ ಕೊಣಾಜೆ, ಭಜನಾ ಸಂಚಾಲಕರಾಗಿ ಸುರೇಶ್ ಪೂಜಾರಿ ಹರೇಕಳ, ಪ್ರವಾಸ ಸಂಚಾಲಕರಾಗಿ ರವೀಂದ್ರ ಬಂಗೇರ ಕೊಣಾಜೆ ಮತ್ತು ದಾಮೋದರ ಕುಂದರ್ ಕೊಣಾಜೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂರ್ಣಿಮಾ ಪಜೀರು, ಆ್ಯಂಬುಲೆನ್ಸ್ ಸಂಚಾಲಕರಾಗಿ ಹರೀಶ್ ಕೊಣಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಖ ಹರೀಶ್ ಕೊಣಾಜೆ, ಮಹಿಳಾ ಘಟಕದ ಅಧ್ಯಕ್ಷರಾಗಿ ಬಬಿತಾ ಪಜೀರು, ಉಪಾಧ್ಯಕ್ಷರಾಗಿ ಲಾವಣ್ಯ ಬೋಳ್ಯಾರು, ಪ್ರಧಾನ ಕಾರ್ಯದರ್ಶಿಯಾಗಿ ಜಯಂತಿ ಪಾವೂರು, ಜತೆಕಾರ್ಯದರ್ಶಿಯಾಗಿ ಉಮಾವತಿ ಹರೇಕಳ, ಕೋಶಾಧಿಕಾರಿಯಾಗಿ ಸುರೇಖ ಹರೀಶ್ ಕೊಣಾಜೆ ಇವರುಗಳು ಆಯ್ಕೆಯಾಗಿರುತ್ತಾರೆ.
Author: UllalaVani
ಇನೋಳಿ: ಬೆಂಗಳೂರಿಗೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ತೆರಳಿದ ಇನೋಳಿ ಪಾವೂರು ಕೆಳಗಿನಕೆರೆ ನಿವಾಸಿ ಐ.ಮೊಹಮ್ಮದ್ ನಿಯಾಜ್ (೩೩) ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆ.೨ ರಂದು ತಾಯಿ ಹಾಜಿರಾ ಎಂಬವರಲ್ಲಿ ಬೆಂಗಳೂರಿನಲ್ಲಿ ಕೆಲಸವಿರುವುದಾಗಿ ಹೇಳಿ ಬಟ್ಟೆಗಳನ್ನು ಹಿಡಿದುಕೊಂಡು, ಅದೇ ದಿನ ಮದ್ಯಾಹ್ನ ಪತ್ನಿ ಶಹಳಾಳಿಗೆ ಕರೆ ಮಾಡಿ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ನನ್ನ ತಂಗಿ ಮಗುವನ್ನು ನೋಡಲು ಹೋಗೋಣ ನೀನು ರೆಡಿಯಾಗಿರು ಎಂದು ತಿಳಿಸಿರುವುದಾಗಿ ಹೇಳಿರುತ್ತಾರೆ. ನಂತರ ಆಕೆ ಫೋನಾಯಿಸಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಸಂಬAಧಿಕರ ಮನೆಗಳಲ್ಲಿ ಹುಡುಕಾಡಿದರೂ ನಿಯಾಝ್ ಪತ್ತೆಯಾಗದೇ ಇದ್ದಾಗ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೈಂದೂರು: ಸಮಾಜದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವರವಾದು. ಸದಸ್ಯರ ಜೊತೆಗೆ ಉತ್ತಮ ಬಾಂಧವ್ಯ, ಉತ್ತಮ ಸೇವೆ, ಆಡಳಿತ ಮಂಡಳಿ ಕಾರ್ಯವೈಖರಿಯ ಮೂಲಕ ಬ್ಯಾಂಕುಗಳು ಜನರ ವಿಶ್ವಾಸ ಪಡೆದುಕೊಳ್ಳುತ್ತದೆ. ಸಮಾಜಮುಖಿಯಾಗಿರುವ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ವರ್ಗದ ಜನರನ್ನು ಸೌಹಾರ್ದ, ಸಾಮರಸ್ಯೆತೆಯ ಜೀವನ ನಡೆಸಲು ಕಾರಣವಾಗಿದೆ ಎಂದು ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರು ವಂ.ವಿನ್ಸೆಂಟ್ ಕುವೆಲ್ಹೊ ಹೇಳಿದ್ದಾರೆ.ಬೈಂದೂರು ಮುಖ್ಯರಸ್ತೆಯ ದೀಪಾ ಕಾಂಪ್ಲೆಕ್ಸ್ನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಎಂ.ಸಿ.ಸಿ. ಬ್ಯಾಂಕು ಉತ್ತಮ ಸೇವೆಗೆ ಹೆಸರಾಗಿದೆ. ಗ್ರಾಹಕರ ಜೊತೆಗೆ ಉತ್ತಮ ಬಾಂಧವ್ಯ, ಸ್ನೇಹಮಯ ವಾತಾವರಣವನ್ನು ಇಲ್ಲಿದೆ. ಕ್ಲಪ್ತ ಸಮಯದ ಸ್ಪಂದಿಸುವ ರೀತಿ, ಅಗತ್ಯತೆಗಳನ್ನು ಪೂರೈಸುವಿಕೆ, ಪರಿಸರದ ಬೇಡಿಕೆಯನ್ನು ಆಧರಿಸಿ ಅವಶ್ಯಕತೆಗಳನ್ನು ಪೂರೈಸುತ್ತಿದೆ. ಈ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು 125ನೇ ವರ್ಷ ಬ್ಯಾಂಕು ಇನ್ನಷ್ಟು ಶಾಖೆಗಳನ್ನು ತೆರೆದು ಸಾಧನೆ ಮಾಡಲಿ ಎಂದು ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ,…
ಚಾಮರಾಜನಗರ : ನಟ ಸಾರ್ವಭೌಮ ಡಾ.ರಾಜ್ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಆ.1 ರಂದು ವಿಧಿವಶರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ರಾಜ್ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ತಮ್ಮ 92ನೇ ವಯಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್ಗಳನ್ನು ಸೇರಿಸಿ 48 ಅಕೌಂಟ್ಗಳ ಮೇಲೆ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್ಗಳು ಅಕೌಂಟ್ ಡಿಟೇಲ್ಸ್ ನೀಡುವಂತೆ ಕೋರಿದ್ದರು. ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಇದೀಗ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ…
ಉಳ್ಳಾಲ : ಶಿಕ್ಷಕ ವೃತ್ತಿಯು ತುಂಬಾ ಜವಾಬ್ದಾರಿಯುತವಾದ ವೃತ್ತಿಯಾಗಿದೆ. ಒಮ್ಮೆ ಶಿಕ್ಷಕರಾದವರು ಜೀವನ ಪರ್ಯಂತ ತನ್ನ ವೃತ್ತಿಯನ್ನು ಗೌರವಿಸುತ್ತಾರೆ. ಈ ವೃತ್ತಿಯಿಂದ ನಿರ್ಗಮಿಸುವಾಗ ಪರಿತಪಿಸುತ್ತಾರೆ. ಬೆಳಗ್ಗೆ ಶಾಲೆಗೆ ಬಂದು ವಿದ್ಯಾರ್ಥಿಗಳೊಂದಿಗೆ ತನ್ನ ಕೌಶಲತೆಯೊಂದಿಗೆ ವೃತ್ತಿಯನ್ನು ಪ್ರಾರಂಭಿಸಿದರೆ ಎಲ್ಲಾ ನೋವು ನಲಿವುಗಳಿಂದ ದೂರವಿದ್ದು ಮನಸ್ಸಿಗೆ ಉಲ್ಲಾಸವನ್ನು ಮತ್ತು ಸಂತಸವನ್ನು ತುಂಬುತ್ತಾರೆ. ಇಂತಹ ಪವಿತ್ರವಾದ ವೃತ್ತಿ ಜೀವನದಿಂದ ನಿರ್ಗಮಿಸುವುದು ಅಥವಾ ನಿವೃತ್ತಿ ಯಾಗುವುದು ನೋವಿನ ಸಂಗತಿಯಾಗಿದೆ ಎಂದು ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಹೇಳಿದರು. ಉಳ್ಳಾಲದ ಟಿಪ್ಪುಸುಲ್ತಾನ್ ಪ್ರೌಢಶಾಲೆಯಲ್ಲಿ 28 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಶಾಹಿನಾ ಬೇಗಂ ಅವರಿಗೆ ಗುರುವಾರ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಅಹ್ಮದ್ ಶಾಲೆ ಕೈತೋಟದಲ್ಲಿ ಗಿಡ ನೆಟ್ಟರು. ಹಳೆಕೋಟೆಯ ಸೈಯದ್ ಮದನಿ ಶಾಲೆಯ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಶಾಲಾ ಸಂಸತ್ತನ್ನು ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ…
ಮಂಗಳೂರು : ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ಶುಕ್ರವಾರ ಮತ್ತೆ ವರ್ಗಾವಣೆಗೊಳಿಸಲಾಗಿದೆ. ಎಡಿಸಿ ಆಗಿದ್ದ ಸಂತೋಷ್ ಕುಮಾರ್ರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಜುಲೈ 29ರಂದು ವರ್ಗಾಯಿಸಲಾಗಿತ್ತು. ಇದೀಗ ಆ ಹುದ್ದೆಯನ್ನು ರದ್ದುಗೊಳಿಸಿರುವ ಸರಕಾರ ದ.ಕ.ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ. ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿತ್ತು. ಜುಲೈ 31ರಂದು ರಾಜು ಕೆ. ಅವರನ್ನು ದ.ಕ.ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು. ಇದೀಗ ಮತ್ತೆ ಅದನ್ನು ರದ್ದುಪಡಿಸಿ ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಕೋಡಿ ಹೊಳೆಯಲ್ಲಿ ಡ್ರೆಜ್ಜಿಂಗ್ ಯಂತ್ರ ಬಳಸಿ ಮರಳು ತೆಗೆಯುತ್ತಿದ್ದಲ್ಲಿಗೆ ವಿಟ್ಲ ಪೊಲೀಸ್ ದಾಳಿ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮರಳು ತೆಗೆಯುತ್ತಿದ್ದರೂ, ಸಾಲೆತ್ತೂರು ಗ್ರಾಮ ಪಂಚಾಯತ್ ಮೌನ ವಹಿಸಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಟ್ಲ ಉಪನಿರೀಕ್ಷಕ ರತ್ನ ಕುಮಾರ್ ನೇತೃತ್ವದ ಪೊಲೀಸ್ ತಂಡ ದಾಳಿಯನ್ನು ನಡೆಸಿದೆ. ಈ ಸಂದರ್ಭ ನದಿಯ ಬದಿಯಲ್ಲಿ ತೆಗೆದು ಹಾಕಿದ ಮರಳಿನ ರಾಶಿ ಹಾಗೂ ಮರಳು ತೆಗೆಯಲು ಬಳಸಿದ ಯಂತ್ರವನ್ನು ವಶಕ್ಕೆ ಪಡೆದುಕೊಂಡು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಪ್ಪಿನಂಗಡಿ : ಇಲ್ಲಿನ 34ನೇ ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂಬಾಕೆ ನಾಪತ್ತೆಯಾದ ಮಹಿಳೆಯಾಗಿದ್ದು ಆಕೆ ಪತಿಯೊಂದಿಗೆ 34 ನೇ ನೆಕ್ಕಿಲಾಡಿ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದು, ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26 ರಂದು ಹಾವೇರಿಗೆ ಹೋಗಿ ಜು.30 ರಂದು ಹಿಂತಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿದ್ದಾಳೆಂದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ.ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.“ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಎಂದು ಡಾ.ರೋಹನ್ ಮೊಂತೇರೊ ಹೇಳಿದರು.ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ…

