ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಬೆಳಿಗ್ಗೆ ಕ್ಷೀರಾಭಿಷೇಕ,ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ, ತಂಬಿಲ ಸೇವೆ ಜರಗಿತು. ಬೆಳಿಗ್ಗೆ 11.30ರಿಂದ ಕ್ಷೀರಾಭಿಷೇಕ,ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ, ಸರ್ವ ಹೂಗಳ ಅಲಂಕಾರ ಸೇವೆ,ತಂಬಿಲ ಸೇವೆ ನಡೆದು ಮಧ್ಯಾಹ್ನ 12.00ಗಂಟೆಗೆ ನಾಗದೇವರಿಗೆ ನಾಗರಪಂಚಮಿಯ ವಿಶೇಷ ಮಹಾಮಂಗಳಾರತಿ ನಡೆಯಿತು. ಬಳಿಕ ನೆರದ ಭಕ್ತರಿಗೆ ಅನ್ನದಾನ ಸೇವೆ ನಡೆಯಿತು.
Author: UllalaVani
ಭಾರತದ ನಿಕೋಬಾರ್ ದ್ವೀಪಗಳ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ 6.5 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ, ಸುನಾಮಿ ಎಚ್ಚರಿಕೆ ನೀಡಿಲ್ಲ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಸುನಾಮಿ ಎಚ್ಚರಿಕೆ ವ್ಯವಸ್ಥೆ ತಿಳಿಸಿದೆ. ಪಶ್ಚಿಮ ಇಂಡೋನೇಷ್ಯಾದ ಅಕೆಹ್ ಪ್ರಾಂತ್ಯದ ವಾಯುವ್ಯಕ್ಕೆ 259 ಕಿಲೋಮೀಟರ್ ದೂರದಲ್ಲಿ ಮತ್ತು ಭೂಮಿಯಿಂದ 10 ಕಿಲೋಮೀಟರ್ (ಆರು ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ಜಿಎಸ್ ತಿಳಿಸಿದೆ. 2004ರಲ್ಲಿ ಈ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 15 ದೇಶಗಳ 2.20,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
ನವದೆಹಲಿ : ಚುನಾವಣೆಗಳಲ್ಲಿ ಜನರ ಮತಗಳನ್ನು ಸೆಳೆಯುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಣಿತಿ ಶಿಂಧೆ ಗಂಭೀರವಾಗಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ್ದ ಅವರು, ಚುನಾವಣೆಗೆ ಮುನ್ನ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಿಂದ ದೇಶಭಕ್ತಿಯನ್ನು ಸಾರುವಂತೆ ಮೇಲ್ನೋಟಕ್ಕೆ ಕಾಣಿಸುತ್ತದೆ. ಆದರೆ ಕಾರ್ಯಾಚರಣೆ ಮೂಲಕ ಏನನ್ನು ಸಾಧಿಸಲಾಗಿದೆ. ಇದು ಕೇವಲ ಮಾಧ್ಯಮಗಳ ಪ್ರಚಾರಕ್ಕಾಗಿ ಎಂದು ಪ್ರಣಿತಿ ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ : ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್-ಎ-ತಯ್ಯಬಾದ ಉಗ್ರರ ವಿರುದ್ಧ ‘ಅಪರೇಷನ್ ಮಹಾದೇವ್’ ಎಂಬ ಹೆಸರಿನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸಂಸತ್ತಿನಲ್ಲಿ ಘೋಷಿಸಿದರು. ಎಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ನಡೆದ ಭಯಾನಕ ದಾಳಿಯಲ್ಲಿ ಮೂವರು ಲಷ್ಕರ್ ಉಗ್ರರು-ಸುಲೇಮಾನ್ ಶಾ (ಲಷ್ಕರ್ ಉನ್ನತ ಕಮಾಂಡರ್, ಅಫ್ಘಾನ್ ಹಾಗೂ ಜಿಬ್ರಾನ್-ಅಮಾಯಕ ನಾಗರಿಕರನ್ನು ಹತ್ಯೆಗೈದಿದ್ದರು. ಈ ಘಟನೆಗೆ ಪ್ರತೀಕಾರವಾಗಿ ಸೇನೆ, ಸಿಆರ್ಪಿಎಫ್ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಉಗ್ರರು ಹತ್ಯೆಯಾಗಿದ್ದಾರೆ ಎಂದು ಶಾ ತಿಳಿಸಿದರು. ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಸ್ಥಳೀಯರು ಪರ್ವೈಝ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ‘ಭಯೋತ್ಪಾದಕರಿಗೆ ಆಹಾರ ಹಾಗೂ ಆಶ್ರಯ ನೀಡುತ್ತಿದ್ದವರನ್ನು ಮೊದಲೇ ಬಂಧಿಸಲಾಗಿತ್ತು ಅವರ ಶವಗಳನ್ನು ಶ್ರೀನಗರಕ್ಕೆ ತರಲಾದ ನಂತರ ಬಂಧಿತರು…
ಉಳ್ಳಾಲ : ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಉಳ್ಳಾಲದ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲಿಸಿ ಅಕ್ರಮ ಕಲ್ಲು ಸಾಗಾಟಕ್ಕೆ ಬಳಸಿದ್ದ ಎರಡು ಟಿಪ್ಪರ್ ಒಂದು ಹಿಟಾಚಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜು.26 ರಂದು ಸುಂದರ, ಪಿಎಸ್ಐ ರವರು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಟಿಪ್ಪರ್ ನಂಬ್ರ KA-20 AA-3566 ರ ಚಾಲಕನು ದೊಡ್ಡ ಕಲ್ಲುಗಳನ್ನು ಲೋಡ್ ಮಾಡಿಕೊಂಡು ಬರುತ್ತಿದ್ದು ಸದ್ರಿ ಚಾಲಕನಲ್ಲಿ ಕಲ್ಲು ಸಾಗಾಟ ಮಾಡಲು ಪರವಾನಿಗೆ ಬಗ್ಗೆ ಕೇಳಿದಾಗ ಅದು ದಿನೇಶ ಶೆಟ್ಟಿ ಬೆಳ್ಮಣ್ ಯವರ ಬಳಿ ಇದೆ. ಕಲ್ಲುಗಳನ್ನು ಉಳ್ಳಾಲದ ಕಡಲ್ಕೊರೆತ ಸ್ಥಳಕ್ಕೆ ಹಾಕಲು ಹೋಗುತ್ತಿರುವುದಾಗಿ ತಿಳಿಸಿದ್ದು ಚಾಲಕನನ್ನು ಜೊತೆಯಲ್ಲಿ ಕರೆದುಕೊಂಡು ಕಲ್ಲು ಲೋಡ್ ಮಾಡಿದ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ನಂದಳಿಕೆ ಗ್ರಾಮದ ಬಾರೆಜಡ್ಡು ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಹಿಟಾಚಿ ಸಹಾಯದಿಂದ ಅದರ ನಿರ್ವಾಹಕನು KA-20 AA-2787 ಟಿಪ್ಪರ್ಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಲೋಡ್ ಮಾಡಲು ನಿಲ್ಲಿಸಿದ್ದನು. ಅದರ…
ದಕ್ಷಿಣ ಕನ್ನಡ : ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (Cancer Day Care Center) ಸ್ಥಾಪನೆಗೆ ಅನುಮೋದನೆ ನೀಡಿದೆ. ಇದಕ್ಕಾಗಿ 1.49 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2025-26ರ ಕೇಂದ್ರ ಬಜೆಟ್ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿತ್ತು. ಈ ಉಪಕ್ರಮದ ಭಾಗವಾಗಿ ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು…
ಕೋಝಿಕ್ಕೋಡ್. ಯೆಮನ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ. ನಿಮಿಷಪ್ರಿಯಾ ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಯೆಮನ್ ನ ತರೀಮ್ ಮೂಲದ ಪಂಡಿತ ಹಬೀಬ್ ಉಮರ್ ಬಿನ್ ಹಫೀಝ್ ಅವರು ನಿಯೋಜಿಸಿದ ಯೆಮನ್ ಪಂಡಿತರ ತಂಡದ ಜೊತೆಗೆ, ಉತ್ತರ ಯೆಮನ್ ನ ಆಡಳಿತಗಾರರು ಮತ್ತು ಅಂತರರಾಷ್ಟ್ರೀಯ ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸಿದ್ದ ಮಧ್ಯಸ್ಥಿಕೆ ಮಾತುಕತೆಗಳಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಕೊಲೆಯಾದ ತಲಾಲ್ ಅವರ ಕುಟುಂಬದೊಂದಿಗೆ ಮುಂದಿನ ಮಾತುಕತೆಗಳ ನಂತರ ಶಿಕ್ಷೆಗೆ ಸಂಬಂಧಿಸಿದ ಇತರ ವಿಷಯಗಳನ್ನು ನಿರ್ಧರಿಸಲಾಗುವುದು ಎಂದು ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ. ಯೆಮನ್ ನಲ್ಲಿ ನಡೆದ ಮಧ್ಯಸ್ಥಿಕೆ ಮಾತುಕತೆಗಳಲ್ಲಿ ಪ್ರಗತಿ ಕಂಡುಬಂದಿದೆ. ನಿಮಿಷಪ್ರಿಯಾ ಅವರಿಗೆ ಕ್ಷಮಾದಾನ ನೀಡಲು, ಕೊಲೆಯಾದ ತಲಾಲ್ ಅವರ ಕುಟುಂಬ ಒಪ್ಪಿಗೆ ಸೂಚಿಸಿದೆ ಎಂದು ಮಧ್ಯಸ್ಥಿಕೆ ವಹಿಸಿರುವವರು ತಿಳಿಸಿದ್ದಾರೆ ಎಂದು mediaoneonline.com ವರದಿ ಮಾಡಿದೆ. ಜುಲೈ 16 ರಂದು…
ಮಂಜೇಶ್ವರ : ಮೀಂಜ ಪಂಚಾಯತಿನ ವಾರ್ಡ್ ವಿಭಜನೆ ಸಂದರ್ಭದಲ್ಲಿ ಚಾರಿತ್ರಿಕ ಪಟ್ಟತಮೊಗೇರು ಎಂಬ ಸ್ಥಳನಾಮವನ್ನು ಏಕಾಎಕಿ ಪಟ್ಟತ್ತೂರು ಎಂದು ಬದಲಾಯಿಸಲಾಗಿದೆ. ಇದರ ವಿರುದ್ಧ ಸ್ಥಳೀಯರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಹಿಂದಿನ ಮೂಡಂಬೈಲು ಮತ್ತು ಮಜಿಬೈಲು ಎಂಬ ವಾರ್ಡನ್ನು ಹೊಸತಾಗಿ ಹೆಚ್ಚುವರಿ ವಾರ್ಡ್ ನ್ನು ರಚಿಸುವ ಪಟ್ಟತಮೊಗೇರು ಸ್ಥಳನಾಮವನ್ನು ತೆಗೆದು ಹೊಸದಾಗಿ ಪಟ್ಟತ್ತೂರು ಎಂದು ಬದಲಾಯಿಸಲಾಗಿದೆ. ಸರಕಾರದ ಎಲ್ಲಾ ದಾಖಲೆಗಳಲ್ಲಿ ಸ್ತಳೀಯ ಮಸೀದಿ, ತರವಾಡು ಮನೆಗಳಲ್ಲಿ ಪಟ್ಟತಮೊಗೇರು ಎಂದೇ ದಾಖಲೆ ಇರುವಾಗ ಈ ಹೆಸರಿನ ಹಿಂದಿನ ಚರಿತ್ರೆಯನ್ನು ಮರೆ ಮಾಚುವ ಉದ್ದೇಶದಿಂದ ಏಕಾಎಕಿ ಪಟ್ಟತ್ತೂರು ಎಂದು ಬದಲಾಯಿಸಲಾಗಿದೆ. ನಿಜವಾಗಿಯೂ ಪಟ್ಟತ್ತೂರು ಎಂಬ ಹೆಸರೇ ಈ ಪ್ರದೇಶದಲ್ಲಿ ಇಲ್ಲದಿರುವಾಗ ಜನರ ಭಾವನೆಗಳನ್ನು ಕಡೆಗಣಿಸಿ ಈ ಹೆಸರು ಇಡಲಾಗಿದೆ. ಮೊಗೇರ ಸಮುದಾಯದ ಮುಗೇರನೆಂಬ ರಾಜ ರಾಜ್ಯವಾಳಿದ ಕುರುಹು ಈಗಲೂ ಇಲ್ಲಿದೆ. ಈ ಹಿನ್ನಲೆಯಲ್ಲಿ ಇಲ್ಲಿಗೆ ಪಟ್ಟತ್ತಮೊಗೇರು ಎಂಬ ಸ್ಥಳನಾಮ ಬಂದಿತ್ತು. ಇಂತಹ ಮಹತ್ವ ಪೂರ್ಣ ಇತಿಹಾಸವನ್ನು ಮರೆ ಮಾಚುವುದು ಸರಿಯಲ್ಲ.ಈ ಬಗ್ಗೆ…
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್, ಸಂದೇಶ ರವಾನಿಸುತ್ತಿದ್ದ 30ಕ್ಕೂ ಅಧಿಕ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ಚಿತ್ರ ನಟಿ ರಮ್ಯಾ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ. ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28ರಂದು ಖುದ್ದು ರಮ್ಯಾ ಅವರೇ ತೆರಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಕಮಿಷನರ್…
ಪುತ್ತೂರು : ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಗಣೇಶ್ ಬಾಗ್ ಎಂಬಲ್ಲಿ ನಡೆದಿದೆ. ದಿ.ವಸಂತ ಎಂಬವರ ಪುತ್ರ ವಿಶ್ವಾಸ್(38) ಮೃತಪಟ್ಟ ಯುವಕ. ವಿಶ್ವಾಸ್ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಅಂಗನವಾಡಿಯಿಂದ ತನ್ನ ಕೆಲಸ ಮುಗಿಸಿ ಮನೆಗೆ ಸಂಜೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಶ್ವಾಸ್ ಅವರು ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ 2ನೇ ತರಗತಿಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಪತ್ನಿ ದಿವ್ಯಾ ಅವರು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

