Author: UllalaVani

Kannada News From Coastal Karnataka

ಕೊಣಾಜೆ: ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದುಕೊಂಡು ಇದೀಗ ಧಾರವಾಡ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.ಎ.ಎಂ.ಖಾನ್ ಅವರನ್ನು ಮಂಗಳೂರು ವಿವಿ ವತಿಯಿಂದ ಅಭಿನಂದಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ವರ್ಷಗಳ ಕಾಲ ಪ್ರಾಧ್ಯಾಪಕರಾಗಿದ್ದ ಪ್ರೊ.ಎ.ಎಂ.ಖಾನ್ ಅವರು ಆಡಳಿತ ವಿಭಾಗದಲ್ಲೂ ಉತ್ತಮ ಅನುಭವ ಹೊಂದಿದ್ದಾರೆ. ವಿವಿಧ ಸಂಶೋಧನೆ ಯೋಜನೆ ಸೇರಿದಂತೆ ಮಂಗಳೂರು ವಿವಿಯ ಅಭಿವೃದ್ಧಿಗೆ ಅನೇಕ ರೀತಿಯ ಕೊಡುಗೆ ನೀಡಿದ್ದಾರೆ. ಅವರ ಸಮರ್ಥ ನಾಯಕತ್ವದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಲಿ ಎಂದು ಹೇಳಿದರು.ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ‌ ಇದ‌ರ ನೂತನ ಕುಲಪತಿ ಪ್ರೊ.ಎ.ಎಂ.ಖಾನ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ, ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ,‌ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಡಾ‌‌.ಕೆ.ಆರ್.ಶಾನಿ, ಡಾ.ವಜೀದಾ ಭಾನು ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಂಗಳೂರು ವಿವಿ ಶಿಕ್ಷಕೇತರ ಸಂಘದ ವತಿಯಿಂದಲೂ ಪ್ರೊ.ಎ.ಎಂ.ಖಾನ್ ಅವರನ್ನು ಅಭಿನಂದಿಸಲಾಯಿತು

Read More

ಉಳ್ಳಾಲ : ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಉಳ್ಳಾಲದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ, ಇದೇ ವೇಳೆ ಮಿಲ್ಲತ್‌ ನಗರದಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದು ಮನೆ ಖಾಲಿ ಮಾಡಿದ ಕೆಲವೇ ಕ್ಷಣಗಳಲ್ಲಿ ಮನೆ ಯಜಮಾನ ಮೃತಪಟ್ಟಿದ್ದಾರೆ. ಮಿಲ್ಲತ್ ನಗರ ನಿವಾಸಿ ರಫೀಕ್ (55) ಎಂಬವರು ಮೃತರು. ಇವರ ಮನೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮನೆಯೊಳಗಿದ್ದ ಸಾಮಗ್ರಿಗಳನ್ನು ಖಾಲಿ ಮಾಡಿ ಸಂಬಂಧಿಕರ ಮನೆಗೆ ಹೊರಟಿದ್ದರು. ಇದೇ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿಮಧ್ಯೆ ಮೃತಪಟ್ಟಿದ್ದಾರೆ. ಉಳ್ಳಾಲ‌ ದರ್ಗಾ ಸಮಿತಿಯ ಸದಸ್ಯರಾಗಿದ್ದರು. ಮೃತರು ಪತ್ನಿ, ಗಂಡು ಮತ್ತು ನಾಲ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Read More

ಕಾರ್ಕಳ : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ರವರ ತಂದೆ ಎಂ. ಕೆ. ವಾಸುದೇವ್ ರವರು ಅಲ್ಪಕಾಲದ ಅನಾರೋಗ್ಯದ ಪರಿಣಾಮ ಇಂದು ನಿಧನರಾಗಿದ್ದು, ಇವರ ಅಗಲಿಕೆಗೆ ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ, ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜೆಗೋಳಿ ಸಂತಾಪ ಸೂಚಿಸಿದ್ದಾರೆ.ಸಂಘದ ಹಿರಿಯ ಸ್ವಯಂಸೇವಕ, ಚಿಕ್ಕಮಗಳೂರು ರಾಷ್ಟೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯವಾಹಕರಾಗಿ ಜವಾಬ್ದಾರಿಯನ್ನು ನಿರ್ವಹಿಸಿ ಎಂ.ಕೆ ವಾಸುದೇವ್ ಎಲ್ಲರ ಪ್ರೀತಿಯ “ವಾಸು ಮಾಷ್ಟ್ರು” ಎಂದೇ ಖ್ಯಾತರಾಗಿದ್ದರು. ಇಹಕಾಯವನ್ನು ಅಗಲಿದ ಅವರ ಆತ್ಮಕ್ಕೆ ಮೋಕ್ಷವನ್ನು ಭಗವಂತ ಕರುಣಿಸಲಿ ಮತ್ತು ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗ, ಶಿಷ್ಯವರ್ಗ ಹಾಗೂ ಆತ್ಮೀಯರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Read More

ಉಳ್ಳಾಲ: ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ, ಹಲಸು ಮೇಳ, ಆಟಿ ಆಹಾರೋತ್ಸವ, ಮತ್ತು ಕೃಷಿ ಪ್ರೇರಣೆ ಚಟುವಟಿಕೆಗಳು ಆ. 2 ಮತ್ತು 3 ರ ಶನಿವಾರ ಮತ್ತು ಭಾನುವಾರ ದಂದು ಅದ್ಧೂರಿಯಾಗಿ ಜರಗಲಿದೆ. ಈ ವಿಶೇಷ ಕಾರ್ಯಕ್ರಮವನ್ನು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ (K.V.S.S.) ಮುಂಚೂಣಿಯಲ್ಲಿದ್ದು, ಮಾಧ್ಯಮ ಕೇಂದ್ರ ತೊಕ್ಕೊಟ್ಟು ಮತ್ತು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಆಯೋಜಿಸಲಾಗಿದೆ. ಈ ಮೇಳದ ಮುಖ್ಯ ಆಕರ್ಷಣೆಗಳಲ್ಲೊಂದು ಹಲಸಿನ ನಾನಾ ಬಗೆಯ ಪೈರುಗಳು, ಉತ್ಪನ್ನಗಳು, ಹಾಗೂ ಜನಪರ ಪರಂಪರೆಯ ಆಟಿ ಆಹಾರ. ಜೊತೆಗೆ, ಕೃಷಿಕರಿಗೆ ಪ್ರೇರಣೆ ನೀಡುವ ಕಾರ್ಯಾಗಾರಗಳು, ಸುಸ್ಥಿರ ಕೃಷಿ ತಂತ್ರಗಳು ಹಾಗೂ ಸ್ಥಳೀಯ ಉತ್ಪನ್ನಗಳ ಪ್ರದರ್ಶನವೂ ಇರಲಿದೆ. ಮೀಡಿಯಾ ಪಾರ್ಟ್ನರ್‌ ಆಗಿ ಉಳ್ಳಾಲವಾಣಿ ಇದ್ದು, Bee Bharath Honey Farm ಮತ್ತು Udupi Naturals ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ಉಳ್ಳಾಲದ ಕೃಷಿಕರ, ಆಹಾರ ಪ್ರಿಯರ, ಮತ್ತು ಪರಿಸರಾಭಿಮಾನಿಗಳಿಗಾಗಿ ಒಂದು ವಿಶಿಷ್ಟ ವೇದಿಕೆಯಾಗಲಿದ್ದು, ಎಲ್ಲರಿಗೂ ಮುಕ್ತ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪಿ.ಕೆ ಉಪಧ್ಯಾಯ, ಶ್ರೀನಿವಾಸ್ ರಾವ್, ರಾಧ, ಅಬ್ದುಲ್ ಖಾದರ್ ಹಾಗೂ ದೀಕ್ಷಿತ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಸಂಘದ ಸದಸ್ಯರಾದ ಪಿ.ಕೆ ಉಪಾಧ್ಯಯ ರವರು ಮಾತನಾಡಿ “ಸಹಕಾರ ಸಂಘಗಳಲ್ಲಿ ಬೆಳವಣಿಗೆಯಲ್ಲಿ ಠೇವಣಿದಾರರು ಹಾಗೂ ಸಾಲಗಾರರ ಪಾತ್ರ ತುಂಬಾ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರ ಸಭೆಯನ್ನು ಆಯೋಜಿಸಿ ಸಂಘದ ಗ್ರಾಹಕರನ್ನು ನೆನೆಪಿಸಿಕೊಳ್ಳುವ ಕಾರ್ಯ ಮಾಡಿರುವುದು ಶ್ಲಾಘನೀಯ” ವೆಂದರು.ಶ್ರೀ ಪಿ.ಎಚ್.ಎಂ ರಫೀಕ್ ರವರು ಮಾತನಾಡಿ “ಕೃಷ್ಣಾಪುರ ಶಾಖೆಯಲ್ಲಿ ಸಿಬ್ಬಂದಿಗಳ ಸೇವೆಯು ಉತ್ತಮವಾಗಿದ್ದು, ಇದು ಶಾಖೆಯ ಬೆಳವಣಿಗೆಗೆ ಕಾರಣ. ಆತ್ಮಶಕ್ತಿಯು ಹೀಗೆಯೆ ಉತ್ತಮ ಸೇವೆಗಳನ್ನು ನೀಡುತ್ತಾ ಇನ್ನಷ್ಟೂ ಬೆಳಗಲಿ” ಎಂದು ಶುಭಹಾರೈಸಿದರು. ಯಶಸ್ವಿನಿ ರವರು ಮಾತನಾಡಿ “ಆತ್ಮಶಕ್ತಿಯು ಬ್ಯಾಂಕಿಂಗ್ ಸೌಲಭ್ಯಗಳನ್ನು ಗ್ರಾಹಕ ಸ್ನೇಹಿ ಸೇವೆ ನೀಡುವುದರ ಮೂಲಕ ಮನೆ ಬಾಗಿಲಿಗೆ ತಲುಪಿಸುವಲ್ಲಿ…

Read More

ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಲಾಗಿದೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು.15 ರಂದು ಭಾರೀ ಮಳೆ ಹಿನ್ನೆಲೆ ರಜೆ ಘೋಷಿಸಿದ ಬೆನ್ನಲ್ಲೇ, ಇಂದು ತಡರಾತ್ರಿ ಮಳೆ ಹಾಗೂ ಹವಾಮಾನ ಇಲಾಖೆ ವರದಿಯಂತೆ ನಾಳೆಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ರಜೆ ಘೋಷಿಸಲಾಗಿದೆ.

Read More

ಪಂಡಿತ್‌ಹೌಸ್: ಟಯರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗಲೇ ಪಂಡಿತ್ ಹೌಸ್ ನಿವಾಸಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಪದಂಗಡಿ ಅಜ್ಜನಕಟ್ಟೆ ಸಮೀಪದ ಟಯರ್ ಅಂಗಡಿಯಲ್ಲಿ ನಡೆದಿದೆ.ಪಂಡಿತ್ ಹೌಸ್, ವಿಜೇತನಗರ ಗಂಡಿ ನಿವಾಸಿ ವೇಣುಗೋಪಾಲ(40) ಸಾವನ್ನಪ್ಪಿದವರು. ಹಲವು ವರ್ಷಗಳಿಂದ ಟಯರ್ ಶಾಪ್ ನಲ್ಲಿ ಟೆಕ್ನೀಷಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಣುಗೋಪಾಲ್, ಇಂದು ಸಂಜೆ ವೇಳೆ ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದಿದ್ದರು. ಬಳಿಕ ಮೃತಪಟ್ಟಿದ್ದಾರೆ. ಹೃದಯಘಾತಕ್ಕೀಡಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಅವಿವಾಹಿತರಾಗಿರುವ ಇವರು ತಾಯಿ , ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನು ಅಗಲಿದ್ದಾರೆ.

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ.) ಗ್ರಾಮಚಾವಡಿ ಕೊಣಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ(ರಿ.), ಅಂಬ್ಲಮೊಗರು, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಎಲ್ಯಾರ್‌ಪದವು, ಯುವ ಕ್ಯಾಥೋಲಿಕ್ ಸಂಚಲನ ಎಲ್ಯಾರ್‌ಪದವು, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ) ಎಲ್ಯಾರ್‌ಪದವು ಇವರ ಸಹಕಾರದೊಂದಿಗೆ ಶರೂನ್ ಸ್ಟ್ರಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ ಎಲ್ಯಾರ್‌ಪದವು ಕೊಣಾಜೆ ಇಲ್ಲಿ ದಿನಾಂಕ 13.07.2025ರ ಭಾನುವಾರದಂದು ಜರುಗಿತು. ಈ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಯ ವೈದ್ಯರಾದ ಡಾ| ರಾಘವೇಂದ್ರ ರವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕಣಚೂರು ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು.ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪುಟ್ಟಸ್ವಾಮಿ ಹೆಚ್, ರಮೇಶ್ ಯು, ಶ್ರೀಧರ್ ಹಾಗೂ ಅಶೋಕ್ ಎಮ್.ಕೆ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಸುಮ ಪ್ರಸಾದ್ ರವರು ಮಾತನಾಡಿ ಶಾಖೆಯು ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಿದ್ದು, ಶಾಖೆಯ ಸಿಬ್ಬಂದಿಗಳ ನಗುಮೊಗದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಸಂಘದ ಸದಸ್ಯರಾದ ರಾಜರಾಮನ್ ತಾಳಿಪಾಡಿ ರವರು ಮಾತನಾಡಿ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆಯನ್ನು ಶೀಘ್ರವಾಗಿ ನೀಡುತ್ತಿರುವ ಹಾಗೂ ಆಯ್ದ ರಜಾ ದಿನಗಳಲ್ಲಿ ಬ್ಯಾಂಕಿಂಗ್ ಹಾಗೂ ಇ-ಸ್ಟಾಂಪಿಂಗ್ ಸೇವೆ ನೀಡುತ್ತಿರುವದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು.ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಈ “ಸಂಸ್ಥೆಯು 13 ವರ್ಷದಲ್ಲಿ 33 ಶಾಖೆಗಳನ್ನು ತೆರೆದು, 2000 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಲು ಗ್ರಾಹಕರೇ ಕಾರಣ. ಗ್ರಾಹಕರ ಸಹಕಾರದಿಂದ…

Read More

ಕೊಣಾಜೆ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವು ಸಮೀಪ ಅತ್ಯಾಚಾರವೆಸಗಿ ಹತ್ಯೆಗೈದು ಬಾವಿಗೆ ಕಟ್ಟಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಎರಡು ತಿಂಗಳ ಬಳಿಕ ಹೊರರಾಜ್ಯದಿಂದ ವಶಕ್ಕೆ ಪಡೆದು ಬಂಧಿಸಲಾಗಿದೆ.ಬಿಹಾರ ಮೂಲದ , ಮರದ ಮಿಲ್ ಕಾರ್ಮಿಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.ಮೇ.29 ರಂದು ಬಾವಿಯೊಳಕ್ಕೆ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬ ಮಹಿಳೆ ಶವ ಪತ್ತೆಯಾಗಿತ್ತು. ಒಂದೂವರೆ ವರ್ಷಗಳಿಂದ ಮನೆ ಮನೆಗಳಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದ ಸುಂದರಿಯವರು ಮೊಂಟೆಪದವು ಸಮೀಪ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಇವರ ಜೊತೆಗಿದ್ದ ಇನ್ನೋರ್ವ ಕಾರ್ಮಿಕ ಆತನ ಮದುವೆ ನಿಮಿತ್ತ ಒಂದುನ ತಿಂಗಳ ಹಿಂದೆಯೇ ತೆರಳಿದ್ದರು. ಇದೇ ಸಂದರ್ಭವನ್ನು ಬಳಸಿಕೊಂಡ ಹತ್ತಿರದ ಮರದ ಮಿಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಅತ್ಯಾಚಾರವೆಸಗಿ ಹತ್ಯೆ ನಡೆಸಿ, ಸಮೀಪದ ಖಾಸಗಿ ವ್ಯಕ್ತಿಯೋರ್ವರ ತೋಟದ ಬಾವಿಗೆ ಎಸೆದಿದ್ದನು. ಶವ ಮೇಲಕ್ಕೆ ಬಾರದಂತೆ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿಹಾಕಿ ಎಸೆಯಲಾಗಿತ್ತು. ಪ್ರಕರಣ ಕುರಿತು ತನಿಖೆ…

Read More