Author: UllalaVani

Kannada News From Coastal Karnataka

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಭಾರತ ಸರಕಾರವು ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು ನೀಡುವ ಸಹಾಯಧನಕ್ಕೆ ನಿವೇಶನ ರಹಿತರಿಂದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕೋಟೆಕಾರು ಪಟ್ಟಣ ಪಂಚಾಯತ್‌ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.2024ರ ಸೆ.01 ರಿಂದ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಆದ್ದರಿಂದ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ಕೇಂದ್ರ ಸರಕಾರದ ವೆಬ್‌ ಪೋರ್ಟಲ್‌ ನಲ್ಲಿ ಫಲಾನುಭವಿಗಳು ಸ್ವ-ಇಚ್ಛೆಯಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕೋಟೆಕಾರು ಪ.ಪಂ ಕಛೇರಿಯ ವಸತಿ ಶಾಖೆಯಲ್ಲಿ ಕಚೇರಿ ಸಮಯ ಬೆಳಿಗ್ಗೆ ಗಂಟೆ 10.00 ರಿಂದ ಸಂಜೆ 5.30ರೊಳಗೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.ಸಲ್ಲಿಸಬೇಕಾದ ದಾಖಲೆಗಳು : (URL…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತಾಲೂಕು ತಹಶೀಲ್ದಾರರಿಗೆ ತಮ್ಮ ತಮ್ಮ ತಾಲೂಕಿನ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ವಹಿಸಿದೆ. ಈ ಅಧಿಕಾರದಡಿಯಲ್ಲಿ ಉಳ್ಳಾಲ ಮತ್ತು ಬಂಟ್ವಾಳ ತಾಲೂಕುಗಳ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ರಜೆ ಘೋಷಣೆಯಾದ ತಾಲೂಕುಗಳಿಂದ ಕೆಲವೇ ಕಿ.ಮೀ ಅಂತರದಲ್ಲಿರುವ ಮಂಗಳೂರು ತಾಲೂಕಿನಲ್ಲಿ ಮಳೆಯೇ ಬಾರದ ಹಾಗೆ ಶಾಲೆಗಳಿಗೆ ರಜೆ ಘೋಷಿಸದಿರುವುದು ವಿದ್ಯಾರ್ಥಿಗಳ ಪೋಷಕರಲ್ಲಿ ಪ್ರಶ್ನೆಗಳನ್ನು ಆತಂಕವನ್ನುಂಟು ಮಾಡಿದೆ.ಮಂಗಳೂರು ತಾಲೂಕಿನಲ್ಲಿ ರಜೆ ಘೋಷಣೆಯಾಗದಿರಲು ಕಾರಣ:ತಾಲೂಕಿನ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಶ್ರೀ ಪ್ರಶಾಂತ್ ವಿ. ಪಾಟೀಲ್ ಅವರು, ಮಂಗಳೂರು ನಗರ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿಲ್ಲ ಎಂಬ ಕಾರಣವನ್ನು ರಜೆ ಘೋಷಿಸದಿರಲು ಮುಖ್ಯ ಕಾರಣವಾಗಿ ಉಲ್ಲೇಖಿಸಿದ್ದಾರೆ. ಈ ಹೇಳಿಕೆಯನ್ನು ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ನಿಯಂತ್ರಣ ಕೊಠಡಿಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಹವಾಮಾನ ಇಲಾಖೆಯಿಂದ ಮಂಗಳೂರು…

Read More

ನಾಟೆಕಲ್‌ : ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್‌ ಪುಟ್ಟರಾಜು ತಿಳಿಸಿದ್ದಾರೆ.

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ದಿನಾಂಕ 13.07.2025ನೇ ಆದಿತ್ಯವಾರ ಪೂರ್ವಾಹ್ನ ಸಮಯ 9.30 ರಿಂದ ಮದ್ಯಾಹ್ನ 12.30ರ ವರೆಗೆ “ಶರೂನ್ ಸ್ಟ್ರಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಕೊಣಾಜೆ (ಶಾಖೆಯ ಆವರಣ) ಯಲ್ಲಿ ಆಯೋಜಿಸಲಾಗಿದೆ. ಈ ವೈದ್ಯಕೀಯ ಶಿಬಿರದಲ್ಲಿ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ, ಕೀಲು ಮತ್ತು ಗಂಟು ನೋವು ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ , ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಈ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು…

Read More

ಉಳ್ಳಾಲ : ಹಿಂದೂ ಧರ್ಮದಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಸುಬ್ರಾಯ ಗಟ್ಟಿಯವರ ಮೌಲ್ಯಾಧಾರಿತ ಜೀವನ ನನಗೂ ಪ್ರೇರಣೆಯಾಗಿದೆ. 95 ವರುಷದ ಹಿರಿತನದಲ್ಲಿಯೂ ಅವರ ಸುಧೃಡ ಆರೋಗ್ಯ, ಶ್ರವಣೇಂದ್ರಿಯ ಶಕ್ತಿಗಳು ಶಿಸ್ತುಬದ್ಧವಾದ ಜೀವನ ಕಿರಿಯರಾದ ನಮಗೆಲ್ಲರಿಗೂ ಪಾಠವಾಗಿದೆ ಎಂದು  ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ ಹೇಳಿದರುಗುರುಪೂರ್ಣಿಮೆಯ ಪ್ರಯುಕ್ತ ತೊಕ್ಕೊಟಿನ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ನಿವೃತ್ತ ಶಿಕ್ಷಕರು, ಪ್ರಗತಿಪರ ಕೃಷಿಕರಾದ ಪಿಲಾರು ಸುಬ್ರಾಯ ಗಟ್ಟಿ ಯವರಿಗೆ ಅವರ ಸ್ವಗೃಹದಲ್ಲಿ ಅವರ ಧರ್ಮಪತ್ನಿ ಪಾರ್ವತಿ ಯವರ ಜತೆಯಲ್ಲಿ ಗುರುವಂದನೆ ಅರ್ಪಿಸಿ ಬಳಿಕ ಮಾತನಾಡಿದರು. ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ರವರು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪ್ರತಿಷ್ಠಾನವು ರಾಷ್ಟ್ರಭಕ್ತನ ಹೆಸರಿಗೆ ತಕ್ಕಂತೆ ಸಮಾಜದಲ್ಲಿ ಉತ್ತಮವಾದ ಕೆಲಸ ಕಾರ್ಯವನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಥೆಯಾಗಿದೆ. ವಿಜಯ ಸಿಂಧೂರ ಸಾಹಸ ದಂತಹ ರಾಷ್ಟ್ರ ಜಾಗೃತಿ‌ ಕಾರ್ಯಕ್ರಮ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಜಾಗರಣೆ, ಗುರುವಂದನೆ ಕಾರ್ಯಕ್ರಮ ಮೂಲಕ ಸಂಸ್ಕಾರವನ್ನು ಬೆಳೆಸುತ್ತಿದೆ ಎಂದರು.ಪ್ರತಿಷ್ಠಾನದ ಅಧ್ಯಕ್ಷರಾದ…

Read More

ಅಸೈಗೋಳಿ : ಬಿಜೆಪಿ ಮಂಗಳೂರು ಮಂಡಲದ ಕೊಣಾಜೆ ಪಟ್ಟೋರಿ ಬೂತ್‌ ವತಿಯಿಂದ ಗುರುಪೂರ್ಣಿಮೆಯ ಗುರುವಂದನೆಯನ್ನು ಹಿರಿಯರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಕೊಣಾಜೆ ಗ್ರಾಮಪಂಚಾಯತ್‌ನ ಮಾಜಿ ಉಪಾಧ್ಯಕ್ಷರು  ಕರುಣಾಕರ ಕಾನ  ಇವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ರಾದ ಜಗದೀಶ್ ಆಳ್ವ ಕುವತ್ತಬೈಲು, ಕಾರ್ಯದರ್ಶಿಯಾದ  ಭರತ್ ರಾಜ್ ಗಟ್ಟಿ ಕೊಣಾಜೆ, ಕೊಣಾಜೆ ಶಕ್ತಿ ಕೇಂದ್ರದ ಪ್ರಮುಖರಾದ ಸನತ್ ಕುಮಾರ್ ರೈ ಕಕ್ಕೆಮಜಲು, ಪಟ್ಟೋರಿ ವಾರ್ಡ್ ಸಮಿತಿಯ ಅಧ್ಯಕ್ಷರಾದ ಗಂಗಾಧರ ಪಟ್ಟೋರಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಸತೀಶ್ ಪಟ್ಟೋರಿ, ಯತೀನ್ ಪಟ್ಟೋರಿ ಮದಕ, ಮತ್ತು ರಾಮಕೃಷ್ಣ ಪಟ್ಟೋರಿ ಉಪಸ್ಥಿತರಿದ್ದರು

Read More

ಕೊಣಾಜೆ : ಬಿಜೆಪಿ ಮಂಗಳೂರು ಮಂಡಲದ ಕೊಣಾಜೆ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 111 ರ ವತಿಯಿಂದ  ಗುರುವಂದನಾ” ಕಾರ್ಯಕ್ರಮವನ್ನು ಶ್ರೀರಾಮಕೃಷ್ಣ ಪ್ರೌಢಶಾಲೆ ಹರೇಕಳದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರವೀಂದ್ರ ರೈ ಕಲ್ಲಿಮಾರು ಇವರ ಕಲ್ಲಿಮಾರು ನಿವಾಸದಲ್ಲಿ ನೆರವೇರಿಸಲಾಯಿತು. ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತ ಬೈಲು ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡಲದ ಉಪಾಧ್ಯಕ್ಷರಾದ ಹುಕ್ರಪ್ಪ ನಾಯಕ್ ,ಕೋಶಾಧಿಕಾರಿ ಸುಮಲತಾ ಕೊಣಾಜೆ, ಯುವ ಮೋರ್ಚಾದ ಅಧ್ಯಕ್ಷರಾದ ಮುರಳಿಧರ ಕೋಣಾಜೆ , ರೈತ ಮೋರ್ಚಾದ ಅಧ್ಯಕ್ಷರಾದ ಪದ್ಮನಾಭಗಟ್ಟಿ ಕೊಣಾಜೆ , ಶಕ್ತಿಕೇಂದ್ರದ ಪ್ರಮುಖ ಸನತ್ ಶೆಟ್ಟಿ, ಸ್ಥಳೀಯರಾದ ಅಶೋಕ್ ಉಪಸ್ಥಿತರಿದ್ದರು.

Read More

ಮಂಗಳೂರು : ಮಂಗಳೂರಿನ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶವು “ಉಜ್ವಲ ಭವಿಷ್ಯಕ್ಕಾಗಿ ಮಾರ್ಗದರ್ಶಕರು (ಮೆಂಟರ್) ಮತ್ತು ವಿದ್ಯಾರ್ಥಿಗಳ ಸಂಬಂಧಗಳನ್ನು ಪೋಷಿಸುವುದು” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ನಡೆಯಿತು.ಉಡುಪಿಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಖ್ಯಾತ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಈ ಉಪನ್ಯಾಸವನ್ನು ನಡೆಸಿ ಕೊಟ್ಟರು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಸರ್ವತೋಮುಖ ಬೆಳವಣಿಗೆಗಾಗಿ ಮಾರ್ಗದರ್ಶಕರು (ಮೆಂಟರ್) ಮತ್ತು ವಿದ್ಯಾರ್ಥಿಗಳ ಸಂಬಂಧಗಳನ್ನು ಯಾವ ರೀತಿಯಲ್ಲಿ ಉತ್ತಮ ಪಡಿಸಬಹುದು ಎಂಬ ವಿಷಯದ ಬಗ್ಗೆ ಈ ಉಪನ್ಯಾಸದಲ್ಲಿ ಚರ್ಚಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂದೀಪ್ ಬೇಕಲ್, ಡಾ.ಸಪ್ನ ಭಂಡಾರಿ, ಡಾ ಗಣೇಶ್ ನಾಯ್ಕ್ ಕೆ ಹಾಗೂ ಬೋಧಕ ವರ್ಗದ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡರು.

Read More

ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇಲ್ಲಿನ ಹಳೇ ವಿದ್ಯಾರ್ಥಿ, ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಪೌಲ್ಸ್ ಮೆಮೋರಿಯಲ್ ಪ್ರಾವಿಡೆನ್ಸ್ , ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್) ಸಹಯೋಗದೊಂದಿಗೆ ನಗರದ ಬಾವುಟಗುಡ್ಡೆಯ ಅಲೋಶಿಯಸ್ ಸಂಸ್ಥೆಯ ಅರ‍್ರುಪೆ ಬ್ಲಾಕ್ ಆಡಿಟೋರಿಯಂ (.ಎ.ಆರ್ 803)  ನಲ್ಲಿ  ಜು.12 ಬೆಳಿಗ್ಗೆ 9 ಕ್ಕೆ  ರಕ್ತದಾನ ಶಿಬಿರ ನಡೆಯಲಿದೆ. ಅರ್ಥಪೂರ್ಣ ಶಿಬಿರವು 2013-15 ಬ್ಯಾಚಿನ ಎನ್ ಎಸ್ ಎಸ್‌ನ ನಿಷ್ಠಾವಂತ ಸ್ವಯಂಸೇವಕ ಪಾಲೋಸ್ ಬೆಂಜಮಿನ್ ಅವರ ಸ್ಮರಣಾರ್ಥವಾಗಿ ನಡೆಯುತ್ತಿದೆ. ಅವರ ಸೇವಾ ಮನೋಭಾವನೆಯನ್ನು ಗೌರವಿಸುವ ಹಾಗೂ ಅವರ ಪರಂಪರೆಯನ್ನು ಮುಂದುವರಿಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಕೆಎಂಸಿ ಬ್ಲಡ್ ಸೆಂಟರ್‌ನ ನಿರ್ದೇಶಕಿ ಡಾ. ದೀಪಾ ಅಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸೆಂಟ್ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಡಾ. ಅಲ್ವಿನ್ ಡಿಸಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪೌಲ್ಸ್ ಮೆಮೊರಿಯಲ್ ಪ್ರಾವಿಡೆನ್ಸ್ ನ ಪ್ರತಿನಿಧಿ ಜೀವನ್ ಅವರು ಗೌರವ ಅತಿಥಿಯಾಗಿ ಉಪಸ್ಥಿತರಿರುವರು.

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು.ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಸುಧಾಕರ್ ರಾವ್, ಶ್ರಿ ಯೋಗೀಶ್ ಶೆಟ್ಟಿ, ಶ್ರೀಮತಿ ಕುಶಾಲ ಎಸ್. ಕುಕ್ಯಾನ್, ಶ್ರೀ ಶಿವಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮ ಹಾಗೂ ಶ್ರೀಮತಿ ಸಾರಿಕ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಸುಧಾಕರ್ ರಾವ್ ಅವರು ಮಾತಾನಾಡಿ “ಪಕ್ಷಿಕೆರೆಯಲ್ಲಿ ಶಾಖೆ ತೆರೆದು ಬ್ಯಾಂಕಿಂಗ್, ವಿಮೆ , ಆರೋಗ್ಯ ಕಾರ್ಡ್ ಈ ಎಲ್ಲಾ ವ್ಯವಸ್ಥೆ ಒಂದೇ ಸೂರಿನಲ್ಲಿ ಕಲ್ಪಿಸಿದಕ್ಕೆ ಸಂಘಕ್ಕೆ ಧನ್ಯವಾದಗಳನ್ನು ಸಲ್ಲಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಹೊಂದಲಿ” ಎಂದು ಶುಭಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಸ್ಥೆಯು 13 ವರ್ಷಗಳಲ್ಲಿ 33 ಶಾಖೆಗಳನ್ನು ತೆರೆದು, ರೂ. 2000 ಕೋಟಿಗೂ ಮಿಕ್ಕಿ…

Read More