ಇಂದು ಮಕ್ಕಳು ಮೊಬೈಲ್ ದಾಸರಾಗಿದ್ದಾರೆ ಕಾರಣ ಕೇವಲ ಪಠ್ಯಕ್ಕೆ ಸೀಮಿತವಾದ ಶಿಕ್ಷಣ. ಮಕ್ಕಳಿಗೆ ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತನ್ನು ನೀಡಿದಾಗ ಸಮಯವನ್ನು ಕೂಡ ಸದುಪಯೋಗ ಪಡೆಸಿಕೊಳ್ಳುತ್ತಾರೆ. ಇದರಿಂದ ಮನೆಯಲ್ಲಿ ಮೊಬೈಲ್ ಮುಕ್ತ ವಾತಾವರಣ ಸೃಷ್ಟಿ ಯಾಗುತ್ತದೆ. ಯಕ್ಷಗಾನ ಕಲಿಯುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ , ಮಾನಸಿಕ, ಆಧ್ಯಾತ್ಮಿಕ ಅಭಿವೃದ್ಧಿಯಾಗುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು ಅಭಿಪ್ರಾಯ ಪಟ್ಟರು. ಇವರು ಹರೇಕಳ ಶ್ರೀರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷದ್ರುವ ಪಟ್ಲ ಪೌಂಡೇಶನ್ ವತಿಯಿಂದ ನಡೆದ ಉಚಿತ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ್ ಇವರು ಯಕ್ಷಗಾನ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗುತ್ತದೆ . ಇದರಿಂದ ಪಠ್ಯಕ್ಕೂ ಪ್ರಯೋಜನ ಆಗುತ್ತದೆ. ಮಾತ್ರವಲ್ಲದೇ ವಿದ್ಯಾರ್ಥಿಗಳಲ್ಲಿ ನಾಟ್ಯ , ಮಾತುಗಾರಿಕೆ, ಸೃಜನಶೀಲತೆ, ಮುಂತಾದವುಗಳು ಅಭಿವೃದ್ಧಿ ಹೊಂದುವುದರೊಂದಿಗೆ ಸಂಸ್ಕಾರವೂ…
Author: UllalaVani
ಮುದ್ರಾಡಿ ನಾಟ್ಕದೂರು : ನಮ್ಮ ವಿವಿಧ ಧರ್ಮದ ಆಚರಣೆಗಳು ಬೇರೆಯಾದರೂ ಉದ್ದೇಶ ಒಂದೇ ಜಗತ್ತಿಗೆ ಒಳಿತು ಮಾಡುವ ಬೆಳಕು ನೀಡುವುದು, ಮುದ್ರಾಡಿ ಶ್ರೀಕ್ಷೇತ್ರವು ಅಂತಹ ಮಹತ್ವದ ಕಾರ್ಯವನ್ನು ನಡೆಸುತ್ತಿದೆ, ಮುದ್ರಾಡಿ ಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ, ಧರ್ಮ ಯೋಗಿ ಮತ್ತು ಕರ್ಮಯೋಗಿಯಾಗಿದ್ದ ಮೋಹನ ಸ್ವಾಮೀಜಿಯಿಂದ ಕ್ಷೇತ್ರವು ಬೆಳಗುತ್ತಿದೆ ಎಂದು ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಹೇಳಿದರು.ಅವರು ಹೆಬ್ರಿಯ ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ಧರ್ಮಯೋಗಿ ಮೋಹನ ಸ್ವಾಮೀಜಿಯವರ 4ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಧರ್ಮಯೋಗಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಜಾತಿ ಮತ ಧರ್ಮವನ್ನು ನಾವು ಪ್ರೀತಿಸುತ್ತೇನೆ ಆಗ ಮಾತ್ರ ಧರ್ಮ ಬೆಳೆಯುತ್ತದೆ. ಕರಾವಳಿ ಜಿಲ್ಲೆ ತುಳುನಾಡಿನಲ್ಲಿ ನಾಗರಾಧನೆ ಮತ್ತು ದೈವನಾಧನೆಯ ಮೂಲಕ ಒಗ್ಗಟ್ಟು ಇದೆ, ಅದು ಸದೃಡ ಕುಟುಂಬದ ವ್ಯವಸ್ಥೆಗೆ ಕಾರಣವಾಗಿದೆ ಆ ಮೂಲಕ ಸಂಘಟಿತ ಸಮಾಜ ನಿರ್ಮಾಣವಾಗಿದೆ ಎಂದು ವಿನಯ ಗುರೂಜಿ ಹೇಳಿದರು.ಮುಖಂಡ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ ಸರ್ವ ಧರ್ಮದವರೂ…
ಉಳ್ಳಾಲ : ಲೋ ಬಿಪಿಗೆ ಒಳಗಾಗಿ ಮಂಗಳೂರಿನ ಫಾರಮ್ ಮಾಲ್ ನಲ್ಲಿರುವ ಸ್ವಂತ ಮಳಿಗೆಯಲ್ಲಿ ಕುಸಿದುಬಿದ್ದಿದ್ದ ಮಂಜನಾಡಿ ನಿವಾಸಿ ನವವಿವಾಹಿತ ಇಂದು ಚಿಜಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಂಜನಾಡಿ ಮೊಂಟೆಪದವು ವೀರಮಾರುತಿ ಮಂದಿರ ಬಳಿಯ ಶಾಂತನಗರ ನಿವಾಸಿ ದಿ. ವೆಂಕಪ್ಪ ಟೈಲರ್ ಮತ್ತು ಪಾರ್ವತಿ ದಂಪತಿ ಪುತ್ರ ಭರತ್ (36) ಮೃತರು. ಜು.1 ರಂದು ಫಾರಮ್ ಮಾಲ್ ನಲ್ಲಿರುವ ಅಂಗಡಿಯಲ್ಲಿ ಇರುವಾಗ ಲೋ ಬಿಪಿಯಾಗಿ ಎಕಾಏಕಿ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು 9 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಭರತ್ ಸಾವನ್ನಾಪ್ಪಿದ್ದಾರೆ. ಏಪ್ರಿಲ್ 21 ರಂದು ವಿವಾಹವಾಗಿದ್ದರು . ಪತ್ನಿಯೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.ಮೃತರು ತಾಯಿ , ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರು : ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬೈಕ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಜೂನ್ ತಿಂಗಳಲ್ಲೆ ಆರು ದ್ವಿಚಕ್ರ ವಾಹನ ಕಳವಾಗಿದೆ. ಹೆಚ್ಚಾಗಿ ಸ್ಕೂಟರ್ ಹಾಗು ಸ್ಪ್ಲೆಂಡರ್ ಬೈಕ್ಗಳೇ ಖದೀಮರ ಟಾರ್ಗೆಟ್ ಆಗಿದ್ದು, ನಾಲ್ಕು ಸ್ಕೂಟರ್ ಮತ್ತು ಎರಡು ಬೈಕ್ಗಳು ಕಳವಾಗಿದೆ. ಒಂದು ಕಡೆ ಪಾರ್ಕ್ ಮಾಡಿದ ಹತ್ತೇ ನಿಮಿಷದಲ್ಲಿ ಬೈಕ್ ಕಳವಾಗಿದ್ದು, ಇನ್ನೊಂದು ಕಡೆ 25 ನಿಮಿಷದಲ್ಲೇ ಕಳವು ಸಂಭವಿಸಿದೆ. ಬೈಕ್ ಪಾರ್ಕ್ ಮಾಡುವ ಸ್ಥಳದ ಸಮೀಪವೇ ಕಳ್ಳರು ಹೊಂಚು ಹಾಕಿ ಕಾದುಕೂರುತ್ತಿದ್ಡಾರೆ. ಸ್ಟೇಟ್ ಬ್ಯಾಂಕ್, ನಾಗುರಿ, ಉಳ್ಳಾಲ, ಮುನ್ನೂರು, ಕೇಂದ್ರ ರೈಲು ನಿಲ್ದಾಣಗಳು ಕಳ್ಳರ ಕೇಂದ್ರಗಳು. ಉಳ್ಳಾಲದ ಮುನ್ನೂರು ಗ್ರಾಮದ ಸಂತೋಷ್ ನಗರದಲ್ಲಿ ಪಾರ್ಕ್ ಮಾಡಿದ 10 ನಿಮಿಷಕ್ಕೆ ಕಳವಾದರೆ, ಮುನ್ನೂರಿನ ಮದನಿ ನಗರದಲ್ಲಿ ಗ್ಯಾರೇಜ್ನಲ್ಲಿಟ್ಟಿದ್ದ ಸ್ಕೂಟರ್ ಕಳವಾಗಿದೆ. ನಾಗುರಿಯಲ್ಲಿ ಪಾರ್ಕ್ ಮಾಡಿದ 35 ನಿಮಿಷದೊಳಗೆ ಡೆಲಿವರಿ ಬಾಯ್ ಯ ಸ್ಕೂಟರ್ ಕಳವುಗೊಂಡಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿಯ ಮುಖಂಡ ದಯಾನಂದ ಕತ್ತಲ್ ಸಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರು ನಾಮಕರಣ ಮಾಡುವ ಹೋರಾಟಕ್ಕೆ ಸಮಿತಿ ರಚಿಸಲಾಗಿದೆ. ಇದರಲ್ಲಿ ಪದಾಧಿಕಾರಿಗಳ ನೇಮಕ ಮಾಡಿಲ್ಲ ಪಕ್ಷಾತೀತವಾಗಿ ಎಲ್ಲರನ್ನೂ ಒಳಗೊಂಡ ಸಮಿತಿಯಾಗಿದೆ ಎಂದು ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ. ಸಾರ್ವತ್ರಿಕವಾಗಿ ತುಳುನಾಡು ಎಂದು ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡನ್ನು ಒಳಗೊಂಡ ಭೂಭಾಗಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೆಸರು ಇತ್ತು. ಸುಮಾರು 2,000 ವರ್ಷಗಳ ಹಿಂದೆ ತಮಿಳಿನ ಸಂಗಂ ಸಾಹಿತ್ಯವಾದ ಅಗನಾನೂರು’ ಎಂಬ ಕಾವ್ಯಮಾಲೆಯ 13ನೇ ಪದ್ಯದಲ್ಲಿ ತುಳುನಾಡು ಎಂಬ ಉಲ್ಲೇಖವಿರುವುದು ನಮ್ಮ ಪ್ರದೇಶದ ಪುರಾತನ ದಾಖಲೆಯಾಗಿದೆ. ಮುಂದೆ ಅಳುಪರು, ಪಲ್ಲವರು, ಹೊಯ್ಸಳರು, ವಿಜಯನಗರ, ಕೆಳದಿ ರಾಜರು ತುಳು ವಿಷಯ, ತುಳು ದೇಶ, ತುಳು ರಾಜ್ಯ ಎಂದು ನಮ್ಮ ಅವಿಭಜಿತ…
ಕೊಣಾಜೆ : ಯುವವಾಹಿನಿ ಗ್ರಾಮಚಾವಡಿ ಕೊಣಾಜೆ ಘಟಕದ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮಚಾವಡಿ ನಾರಾಯಣ ಗುರು ಸಮುದಾಯ ಭವನದಲ್ಲಿ ರವಿವಾರ ನಡೆಯಿತು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಚಾವಡಿ ಕೊಣಾಜೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಕೊಣಾಜೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಥಮ ಉಪಾಧ್ಯಕ್ಷ ವಿಜೇತ್ ಪಜೀರ್ ಸ್ವಾಗತಿಸಿದರು. ಕಾರ್ಯದರ್ಶಿ ಅಜಿತ್ ಪೂಜಾರಿ ಪಜೀರ್ ವರದಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಮಂಜನಾಡಿ ದುರಂತ ಸಂತ್ರಸ್ತ ಕುಟುಂಬಕ್ಕೆ ಧನಸಹಾಯದ ಚೆಕ್ ಹಸ್ತಾಂತರಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆ ಸಾಂಸ್ಕೃತಿಕ ಹಾಗೂ ವಿವಿಧ ಕ್ಷೇತ್ರದ ಸಾಧಕರು ಸಮಾಜ ಸೇವಕರು, ನವದಂಪತಿಗಳನ್ನು ಸನ್ಮಾನಿಸಲಾಯಿತು. ಮಣಿಪಾಲ್ ಕಾಲೇಜ್ ಆಫ್…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಸಂಘದ ಸದಸ್ಯರಾದ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್ನ್ನು ಹಸ್ತಾಂತರಿಸುವ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ” ಬೈರಾಡಿಕೆರೆ, ಪಡೀಲ್ನಲ್ಲಿ ಜರುಗಿತು. ಸ್ಕೂಟರ್ ಹಸ್ತಾಂತರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ದಿನಕರ್ ಕುಲಾಲ್ ರವರು ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮತ್ತು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ವಾಮನ್ ಕೆ., ದಕ್ಷಿಣ ಕನ್ನಡ ಗ್ಯಾರೇಜ್…
ದೇರಳಕಟ್ಟೆ : ಯಕ್ಷಗಾನದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಮುಂದೆ ಜೀವನದಲ್ಲಿ ನಾಯಕತ್ವದ ಗುಣವನ್ನೂ ಸಹ ಹೆಚ್ಚಿಸಲು ಸಹಕಾರಿಯಾಗುವುದು ಎಂದು ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಗುರುರಾಜ್ ಭಟ್ ಕೈರಂಗಳ ಅಭಿಪ್ರಾಯಪಟ್ಟರು.ಯಕ್ಷರಂಗ ಯಕ್ಷಗಾನ ತರಬೇತಿ ಕೇಂದ್ರ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ದೇರಳಕಟ್ಟೆ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಕಾರದಲ್ಲಿ ದೇರಳಕಟ್ಟೆಯ ಶ್ರೀ ಅಯ್ಯಪ್ಪ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಯಕ್ಷಗಾನದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಯು ಮುಂದೆ ತನ್ನ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು, ಶಿಸ್ತು, ಸಮಯಪಾಲನೆ ಮತ್ತು ಜವಾಬ್ದಾರಿಯುತ ವರ್ತನೆ ವಿಕಸಿಸಲು ಸಹಾಯವಾಗುತ್ತದೆ. ಇದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಯಕ್ಷಗಾನವು ಉತ್ತಮ ಪಾಠಶಾಲೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅನ್ನಸಂತರ್ಪಣಾ ಸಮಿತಿ ಸಂಚಾಲಕ ಶರತ್ ರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ಕೃಷ್ಣಪ್ಪ ಕಿನ್ಯ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಸಂಚಾಲಕ ರೋಹಿತ್ ಬಗಂಬಿಲ,…
ಮಂಗಳೂರು : ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಫ್ತಾಬ್ ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ವಿವಾಹವಾಗಿದ್ದಾರೆ. ಅವರ ತಾಯಿ ಕೋವಿಡ್ ಸಮಯದಲ್ಲಿ ನಿಧನರಾಗಿದ್ದರು. ಅಂದಿನಿಂದ ತಂದೆ ಮತ್ತು ಮಗ ಮಾತ್ರ ಒಟ್ಟಿಗೆ ವಾಸಿಸುತ್ತಿದ್ದರು. ಆಟೋ ರಿಕ್ಷಾ ಚಾಲಕರಾದ ಅಲಿ, ಮಧ್ಯಾಹ್ನದವರೆಗೂ ತಮ್ಮ ಮಗನೊಂದಿಗೆ ಮನೆಯಲ್ಲಿದ್ದರು. ಅವರು ಸುಮಾರು 1 ಗಂಟೆಗೆ ಕೆಲಸಕ್ಕೆ ಹೋದ ನಂತರ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ ಹೆಸರಿನಲ್ಲಿ 4.59 ಲಕ್ಷ ರೂ. ವಂಚಿಸಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.19ರಂದು ವಾಟ್ಸ್ಆ್ಯಪ್ ನೋಡುತ್ತಿದ್ದಾಗ ಎಫ್ಎಫ್ 143 ಎನ್ನುವ ಗ್ರೂಪ್ಗೆ ತನ್ನನ್ನು ಸೇರ್ಪಡೆ ಗೊಳಿಸಿರುವುದು ಕಂಡು ಬಂದಿದೆ. ಗ್ರೂಪ್ ನಲ್ಲಿ ಕಳುಹಿಸಿದ್ದ ಲಿಂಕ್ನಲ್ಲಿರುವ ವೀಡಿಯೋ ಲೈಕ್ ಮಾಡಿ ಪೇಜ್ ಸಬ್ಸ್ಕ್ರೈಬ್ ಮಾಡಿ ಸ್ಕ್ರೀನ್ ಶಾಟ್ ತೆಗೆದು ಇನ್ನೊಬ್ಬಾತನ ವಾಟ್ಸ್ಆ್ಯಪ್ಗೆ ಸೆಂಡ್ ಮಾಡಿದರೆ 150 ರೂ. ನೀಡುವುದಾಗಿ ತಿಳಿಸಲಾಗಿತ್ತು. ಅದರಂತೆ ತಾನು ಸ್ಕ್ರೀನ್ ಶಾಟ್ ಕಳುಹಿಸಿದ್ದು, ಆ ವ್ಯಕ್ತಿ ವೈಯಕ್ತಿಕ ಮಾಹಿತಿಯನ್ನು ಕೂಡ ಪಡೆದನಲ್ಲದೆ ಟೆಲಿಗ್ರಾಂ ಆ್ಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಿದ್ದ ನಂತರ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಇಕಾನಮಿ ಟಾಸ್ಕ್ ಗಳ ಬಗ್ಗೆ ಲಿಂಕ್ ಕಳುಹಿಸಿಕೊಟ್ಟಿದ್ದು ಹೆಚ್ಚಿನ ಲಾಭದೊರೆಯುವುದಾಗಿ ಆಮಿಷ ಒಡ್ಡಿದ್ದ. ಅದನ್ನು ನಂಬಿದ ತಾನು ಹಂತ ಹಂತವಾಗಿ 4.59 ಲಕ್ಷ ರೂ. ಜಮೆ ಮಾಡಿದ್ರೆ ಷೇರು ಖಾತೆ ಪರಿಶೀಲಿಸಿದಾಗ 6.85 ಲಕ್ಷ ರೂ. ಒಟ್ಟಾಗಿರುವುದು ಕಂಡು…

