ಉಳ್ಳಾಲ : ಶ್ರೀ ಉಮಾಮಹೇಶ್ವರಿ ದೇವಸ್ಥಾನ ಉಮಾಪುರಿ ಕಾಪಿಕಾಡ್ ಕ್ಷೇತ್ರದಲ್ಲಿ ಸೆ. 22 ಸೋಮವಾರದಿಂದ ಅ.1 ಬುಧವಾರದ ವರೆಗೆ ಕುಂಟಾರು ರವೀಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ನವರಾತ್ರಿ ಉತ್ಸವವು ಅತ್ಯಂತ ಸಂಭ್ರಮದಿಂದ ನಡೆಯಲಿದೆ . ಸೆ 22 ಸೋಮವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ನವರಾತ್ರಿ ಉತ್ಸವದ ನಂದಾದೀಪ ಪ್ರಜ್ವಲನೆ , ಗಣಪತಿ ಹವನ, ನಾಗತಂಬಿಲ, ಪರಿವಾರ ದೈವಗಳಿಗೆ ತಂಬಿಲ, ಧಾನ್ಯಲಕ್ಷ್ಮೀ ಪೂಜೆ, ಭಕ್ತಾದಿಗಳಿಗೆ ತೆನೆ ವಿತರಣೆ, ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ 8 ಗಂಟೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸೆ. 26 ಶುಕ್ರವಾರ ಬೆಳಿಗ್ಗೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ, ಸಾಮೂಹಿಕ ಆಶ್ಲೇಷ ಪೂಜೆ ಸೆ .29 ರ ಸೋಮವಾದಂದು ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾಯಾಗ ಜರಗಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ.ಅ.1 ಬುಧವಾರ ಆಯುಧ ಪೂಜಾ ದಿವಸದಂದು ಬೆಳಿಗ್ಗೆ ಶ್ರೀ ದೇವರಿಗೆ ರಂಗ ಪೂಜೆ 8.00ಕ್ಕೆ ಮಹಾಪೂಜೆ,…
Author: UllalaVani
ಕೊಣಾಜೆ : ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಆಶ್ರಯದಲ್ಲಿ ಕೊಣಾಜೆ ಮಂಗಳೂರು ವಿಶ್ವವಿದ್ಯಾಲಯದ ಒಳಾಂಗಣ ಸಭಾಂಗಣದಲ್ಲಿ ಅಕ್ಟೋಬರ್ 19ರಂದು ನಡೆಯಲಿರುವ ಯುವವಾಹಿನಿ ಅಂತರ್ ಘಟಕದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಯುಕ್ತ ಗುರುವಾರ ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಶೀರ್ಷಿಕೆ ಗೀತೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ವಿಜೇತ್ ಪಜೀರ್ ಅವರು “ಗ್ರಾಮೀಣ ಭಾಗದ ಪ್ರತಿಭೆಗಳಿಂದಲೇ ಶೀರ್ಷಿಕೆ ಗೀತೆ ರಚನೆಗೊಂಡಿದೆ, ಯುವ ಪ್ರತಿಭೆಗಳು ಸಂಘದಲ್ಲೇ ಇರುವುದು ಇನ್ನಷ್ಟು ಹೆಮ್ಮೆಯ ವಿಚಾರ”, ಈ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳಗಲು ಸರ್ವರ ಪ್ರೋತ್ಸಾಹ ಅಗತ್ಯ ಎಂದರು. ಚಿತ್ರನಟ ದೀಕ್ಷಿತ್ ಕೆ.ಅಂಡಿಂಜೆ ಶೀರ್ಷಿಕೆ ಗೀತೆ ಬಿಡುಗಡೆಗೊಳಿಸಿ, ಶೀರ್ಷಿಕೆ ಗೀತೆ ಸುಂದರವಾಗಿ ಮೂಡಿಬಂದಿದೆ, ಅದೇ ರೀತಿ ಬ್ಯಾಡ್ಮಿಂಟನ್ ಪಂದ್ಯಾಟವೂ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.ಈ ಸಂದರ್ಭ ಶೀರ್ಷಿಕೆ ಗೀತೆ ಹಾಡಿದ ರಕ್ಷಿತ್ ಕೆ.ಅಸೈಗೋಳಿ, ಶ್ರೀರಕ್ಷಾ ಎಸ್.ಎಚ್. ಪೂಜಾರಿ ಕೊಣಾಜೆ ಮತ್ತು ಸಾಂಸ್ಕೃತಿಕ…
ಕೊಣಾಜೆ : ಉಳ್ಳಾಲ ರಾಣಿ ಅಬ್ಬಕ್ಕ ತುಳುನಾಡಿನ ಶೌರ್ಯ ಸ್ವಾಭಿಮಾನದ ವೀರ ಮಹಿಳೆ. ಪೋರ್ಚುಗೀಸರನ್ನು ಎದುರಿಸಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಭಾರತದ ಹೆಮ್ಮೆಯ ಪುತ್ರಿ. ರಾಣಿ ಅಬ್ಬಕ್ಕನ ಕುರಿತು ಯಾರು ಕಾರ್ಯಕ್ರಮ ಮಾಡಿದರೂ ನಮ್ಮ ಬೆಂಬಲವಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಪೀಠದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಹೇಳಿದರು. ಅವರು ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ- ವೀರನಾರಿ ಅಬ್ಬಕ್ಕಳ 500 ನೇ ಜಯಂತಿಯ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆಗೆ ಕೊಣಾಜೆ ಮಂಗಳೂರು ವಿವಿಯ ಸಿ.ವಿ.ರಾಮನ್ ವೃತ್ತದಲ್ಲಿ ಸ್ವಾಗತಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಗೋವಾದಲ್ಲಿ ಪೋರ್ಚುಗೀಸರ ಉಪಟಳಕ್ಕೆ ಅಲ್ಲಿನ ಭಾರತೀಯ ಬಂಧುಗಳು ಊರು ಬಿಟ್ಟು ಓಡಬೇಕಾಯಿತು. ಅದೇ ಸ್ಥಿತಿ ಕರಾವಳಿಯಲ್ಲಿ ನಡೆಯದ ಹಾಗೆ ರಕ್ಷಿಸಿದ್ದು ರಾಣಿ ಅಬ್ಬಕ್ಕ. ಆಕೆಯ ಸ್ವಾಭಿಮಾನ, ದೇಶಪ್ರೇಮ ಇಂದಿನ ಯುವ ತಲೆಮಾರಿಗೆ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.ರಥಯಾತ್ರೆಯ ಪ್ರಾಂತ ಅಧ್ಯಕ್ಣರಾದ ರವಿ ಮಂಡ್ಯ, ಮಂಗಳೂರು ವಿವಿ…
ಉಳ್ಳಾಲ : ಡ್ರಗ್ಸ್ ಮುಕ್ತ ಸಮಾಜದ ವಿರುದ್ಧ ಅಚ್ಚರಿ ಸೇವೆ ನೀಡುತ್ತಿರುವ ದೇರಳಕಟ್ಟೆಯ ಅಲ್ ಸಲಾಮ ಸಭಾಂಗಣದಲ್ಲಿ ಸೆಪ್ಟೆಂಬರ್ 14ರಂದು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ದೇರಳಕಟ್ಟೆಯ ಅಲ್ ಸಲಾಮ ಸಭಾಂಗಣದಲ್ಲಿ ನಡೆಯಿತು.ಸೌಹಾರ್ದತೆ ಮತ್ತು ಮಾದಕತೆಯ ವಿರುದ್ಧ ಕವಿಗಳು ಚುಟುಕು ಕವನ ವಾಚಿಸಿದರು. ರಾಜ್ಯದ ವಿವಿಧ ಕಡೆಗಳಿಂದ ಕವಿಗಳು ಭಾಗವಹಿಸಿದ್ದು ಕವಿಗಳಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಶ್ರೀ ವಸಂತ ಜೋಗಿ ಕುಂದಾಪುರ ಕಾರ್ಯಕ್ರಮ ಉದ್ಘಾಟಿಸಿ ಸಮಾಜದಲ್ಲಿ ಇಂತಹಾ ಕಾರ್ಯಕ್ರಮ ನಿರಂತರ ನಡೆಯುತ್ತಲೇ ಇರಬೇಕು ಇದು ಕರಾವಳಿಯ ಪಾಲಿಗೆ ಉತ್ತಮ ಬೆಳವಣಿಗೆ ಎಂದು ಹೇಳಿದರು.ಹಿರಿಯ ಮುಖಂಡ ಹೈದರ್ ಪೆರ್ತಿಪ್ಪಾಡಿ ಕಾರ್ಯಕ್ರಮದಲ್ಲಿ ಶುಭಹಾರೖಸಿ ಮಾತನಾಡಿದರು. ಅರೋಗ್ಯ ಮತ್ತು ಶೈಕ್ಷಣಿಕ ಸೇವೆಗಾಗಿ ಡಾ.ಯು.ಟಿ ಇಫ್ತಿಖಾರ್ ಅಲಿಯವರಿಗೆ ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕವಿಗೋಷ್ಠಿ ಅಧ್ಯಕ್ಷತೆಯನ್ನು ನಾರಾಯಣ ರೈ ಕುಕ್ಕುವಳ್ಳಿ ವಹಿಸಿದ್ದರು. ನಂತರ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಾಧಕರಿಗೆ ನೀಡುವ…
ಉಳ್ಳಾಲ : ಕರಾವಳಿಗರು ಏಕಮನಸ್ಸಿನಿಂದ ಆರಾಧಿಸುವ, ಆಸ್ವಾದಿಸುವ ಕಲೆ ಯಕ್ಷಗಾನ. ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಕಥಾನಕಗಳ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿದ್ದು, ಯುವಕರಿಗೆ ಉತ್ತಮ ಸಂದೇಶ ನೀಡುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಆಶ್ರಯದಲ್ಲಿ ಕೈರಂಗಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಭಾನುವಾರ ಆಯೋಜಿಸಲಾದ ‘ಯಕ್ಷಧಾರೆ’ ಯಕ್ಷಗಾನ ಕಾರ್ಯಕ್ರಮ ಸಮಾರೋಪದಲ್ಲಿ ಆಶೀರ್ವಚನ ನೀಡಿದರು. ಧ್ವನಿವರ್ಧಕ ಸಮಯಾವಕಾಶ ಕುರಿತು ವಿವಾದವೆದ್ದಿದ್ದು ಕಲಾಭಿಮಾನಿಗಳಲ್ಲಿ ಈ ಬಗ್ಗೆ ವಿಷಾದ ಇದೆ. ನವೆಂಬರ್ ನಲ್ಲಿ ಮೇಳಗಳು ತಿರುಗಾಟ ಆರಂಭಿಸುವುದರಿಂದ ಈ ಸಮಸ್ಯೆ ಬಗ್ಗೆ ಸರ್ಕಾರ ಈಗಲೇ ಗಮನಹರಿಸಬೇಕು. ಯಕ್ಷಗಾನ ಇಲ್ಲದೆ ಕರಾವಳಿಯಲ್ಲಿ ಕಾರ್ಯಕ್ರಮ ಕಳೆಗಟ್ಟಲು ಸಾಧ್ಯವಿಲ್ಲ ಎಂದರು.ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾನವ ಹಕ್ಕು ಆಯೋಗದ ಅಧ್ಯಕ್ಷ ಡಾ.ಟಿ.ಶಾಮ ಭಟ್, ಶಾರದಾ ಗಣಪತಿ ವಿದ್ಯಾಕೇಂದ್ರದ ಅಧ್ಯಕ್ಷ ಟಿ.ಜಿ.ರಾಜಾರಾಮ ಭಟ್, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರೀಕಾಕ್ಷ…
ಉಳ್ಳಾಲ: ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ “ಶ್ರೀ ಕ್ಷೇತ್ರ ಕುತ್ತಾರು” ಯಲ್ಲಿ ಈ ವರ್ಷದ ನವರಾತ್ರಿ ಉತ್ಸವವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ವೈಭವೋಪೇತವಾಗಿ ನಡೆಯಲಿದೆ.ದೇವಸ್ಥಾನದಲ್ಲಿ ನಡೆಯಲಿರುವ 11 ದಿನಗಳ ಧಾರ್ಮಿಕ ಕಾರ್ಯಕ್ರಮಗಳ ಸೆ.22 ಯೋಗಿನಿ ಪೂಜೆ – ನವರಾತ್ರಿ ಪ್ರಾರಂಭ, ಸೆ. 23 ಆರ್ಯ ಪೂಜೆ, ಸೆ.24 ಭಗವತೀ ಪೂಜೆ, ಸೆ.25 ಕುಮಾರಿ ಪೂಜೆ ,ಸೆ. 26 ಅಂಬಿಕಾ ಪೂಜೆ – ಲಲಿತಾ ಪಂಚಮಿ ಪ್ರಯುಕ್ತ ಸಂಜೆ, ಸೆ.27 ಮಹಿಷಮರ್ದಿನಿ ಪೂಜೆ, ಸೆ.28 ಚಂಡಿಕಾ ದೇವಿ ಪೂಜೆ, ಸೆ. 29 ಸರಸ್ವತೀ ಪೂಜೆ, ಸೆ.30 ವಾಗೀಶ್ವರೀ ಪೂಜೆ, ಅ.1 ರಂದು ಆಯುಧ ಪೂಜೆ, ಅ.2ರಂದು ವಿಜಯದಶಮಿ – ಬೆಳಿಗ್ಗೆ 7:30ರಿಂದ ಅಕ್ಷರಾಭ್ಯಾಸ ಆರಂಭ, ಸಾರ್ವಜನಿಕ ದುರ್ಗಾ ನಮಸ್ಕಾರ ಪೂಜೆ ಜರಗಲಿದೆ. ಪ್ರತಿದಿನ ಸಂಜೆ 7:30ಕ್ಕೆ ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವರಿಗೆ ರಂಗಪೂಜೆ ನಡೆಯಲಿದೆ. ಬಳಿಕ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯಿದೆ ಎಂದು ದೇವಸ್ಥಾನ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳೂರು : ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಒಂದು ಕೋಟಿ ಆದಾಯ ಗಳಿಸಿ ದಾಖಲೆ ನಿರ್ಮಿಸಿದೆ. ಕಳೆದ ವರ್ಷ 125 ಕೋಟಿಗೂ ಅಧಿಕ ರೂಪಾಯಿ ಠೇವಣಿ ಸಂಗ್ರಹಿಸಲಾಗಿದೆ. 100 ಕೋಟಿ ರೂ.ಗೂ ಅಧಿಕ ಸಾಲ ನೀಡಲಾಗಿದೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ, ಸೊಸೈಟಿ ಅಧ್ಯಕ್ಷರಾಗಿರುವ ಪಿ ಪಿ ಹೆಗ್ಡೆ ಹೇಳಿದ್ದಾರೆ. ಅವರು ನಗರದ ಬಲ್ಲಾಲ್ ಬಾಗ್ ತಕ್ಷಿಲಾ ಕಟ್ಟಡದ ಪ್ರಧಾನ ಕಚೇರಿಯಲ್ಲಿ ಜರಗಿದ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.25 ವರ್ಷಗಳ ಹಿಂದೆ ಆರಂಭಗೊಂಡಿರುವ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉತ್ತಮವಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ. ಈಗಾಗಲೇ ಹನ್ನೊಂದು ಶಾಖೆಯನ್ನು ನಮ್ಮ ಸಂಸ್ಥೆ ಹೊಂದಿದೆ. ಬಜ್ಪೆ, ಕಾರ್ಕಳ, ಮೂಡಬಿದ್ರೆ, ಉಜಿರೆ, ಪುತ್ತೂರು, ಬಿ.ಸಿ.ರೋಡ್, ಸುರತ್ಕಲ್, ತೊಕ್ಕೊಟ್ಟು, ಮಂಗಳೂರು ರಥಬೀದಿ, ಬಳ್ಳಾಲ್ ಬಾಗ್ ಹಾಗೂ ಎಂ.ಜಿ. ರೋಡಿನಲ್ಲಿರುವ ಶಾಖೆಗಳ ಮೂಲಕ ಸಂಸ್ಥೆ ಏಳು ಸಾವಿರ ಸದಸ್ಯರನ್ನು ಹೊಂದಿದೆ.…
ಮಂಗಳೂರು : ನಗರದ ಸ್ಟೇಟ್ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್ನಲ್ಲಿ ಕರ್ತವ್ಯನಿರತ ಹೆಡ್ಕಾನ್ ಸ್ಟೇಬಲ್ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ ಸವರಿದ್ದಾರೆ. ಇದರಿಂದ ಆಕ್ರೋಶಗೊಂಡ ಆಸಿಫ್ ಬಾವ ಟ್ರಾಫಿಕ್ ಎಚ್ಸಿ ಜೊತೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸ್ ಜೊತೆ ವಾಗ್ವಾದ ನಡೆಸುತ್ತಿರುವುದನ್ನು ಸಾರ್ವಜನಿಕರೊಬ್ಬರು ವೀಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಈ ವೀಡಿಯೋವನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಕೂಟರ್ ಸವಾರನು ಟ್ರಾಫಿಕ್ ಪೊಲೀಸ್ ರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಸ್ಪಷ್ಟವಾಗಿದೆ. ಆ ಹಿನ್ನಲೆಯಲ್ಲಿ ಸ್ಕೂಟರ್ ಸವಾರನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ನಿಂದನೆ ಪ್ರಕರಣ…
ಕೊಣಾಜೆ : ಕೊಲೆ, ಸುಲಿಗೆ, ದಾಳಿ, ಎನ್ ಡಿಪಿಎಸ್ ಸೇರಿದಂತೆ ಎಂಟು ಪ್ರಕರಣಗಳ ಆರೋಪಿ ಕೊಣಾಜೆ ಠಾಣೆಯ ರೌಡಿಶೀಟರ್ ನಜೀಮ್ ಯಾನೆ ನಜ್ಜು (30) ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ನರಿಂಗಾನದ ಪೊಟ್ಟೊಳಿಕೆ ನಿವಾಸಿ ನಜೀಮ್ ಯಾನೆ ನಜ್ಜು(30) ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಬೇಗೂರು, ಬೆಂಗಳೂರು ನಗರ, ಭಟ್ಕಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. ಆರೋಪಿ ವಿರುದ್ಧ ಹೊರಡಿಸಲಾದ ವಾರಂಟ್ ಹಾಗೂ ಪ್ರೊಕ್ಷಮೇಷನ್ ಬಾಕಿಯಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬೆಂಗಳೂರು ನಗರದಿಂದ ಪತ್ತೆಹಚ್ಚಿ ಬಂಧಿಸಲಾಗಿದೆ.ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೊಣಾಜೆ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ವಿರೂಪಾಕ್ಷ ಸ್ವಾಮಿ ಮಾರ್ಗದರ್ಶನದಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್ ಹಾಗೂ ನಾಗರಾಜ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಗಳಾದ ದಿನೇಶ್, ಮೊಹಮ್ಮದ್ ಶರೀಫ್, ರಮೇಶ್ ಸಹಕರಿಸಿದ್ದಾರೆ.
ಬಂಟ್ವಾಳ : ದುಬಾರಿ ಬೆಲೆಯ ಸಾಕು ನಾಯಿಯನ್ನು ನೆರೆಯ ವ್ಯಕ್ತಿಗಳಿಬ್ಬರು ಬಡಿದು ಕೊಂದು ಹಾಕಿದ್ದಾರೆ ಎಂಬ ಹೊಸದಾದ ದೂರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಳ್ಳಿಗೆ ಗ್ರಾಮದ ನೆತ್ತರಕೆರೆ ನಿವಾಸಿ ಡೋಲ್ಪಿ ಡಿ.ಸೋಜ ಎಂಬವರು ದೂರು ನೀಡಿರುವ ವ್ಯಕ್ತಿಯಾಗಿದ್ದಾರೆ. ಅದೇ ಗ್ರಾಮದ ಮತ್ತು ದೂರುದಾರರ ನೆರೆಯವರಾದ ಯತಿನ್ ಪೂಜಾರಿ ಹಾಗೂ ಯಶಿನ್ ಪೂಜಾರಿ ಎಂಬವರು ಬಡಿದು ಕೊಂದಿರುವ ಬಗ್ಗೆ ಇವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ದೂರಿನಲ್ಲೇನಿದೆ?ನಮ್ಮ ಮನೆಯಲ್ಲಿ ನಾವು ಸಾಕುತ್ತಿದ್ದ ಸಾಕು ನಾಯಿ ದಾರಿ ತಪ್ಪಿ ಹೋಗಿದ್ದು ನಮ್ಮ ಮನೆಯ ನೆರೆಯವರಾದ (ಎದ್ರಿದಾರರು) ಮೊನ್ನೆ ದಿನ ಅಂದರೆ ಸೆ. 17 ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ ನಾಯಿಗೆ “ದೊಣ್ಣೆಯಿಂದ ಬಡಿದು (ಓಡೆದು) ಸಾಯಿಸಿ ಅಲ್ಲಿಯೇ ಗುಂಡಿ ಅಗೆದು ಹೂತು ಹಾಕಿರುತ್ತಾರೆ.” ಇದು ನಮ್ಮ ಗಮನಕ್ಕೆ ಬಾರದೆ ಸೆ. 18ರಂದು ಬೆಳಿಗ್ಗೆ ನಾಯಿಯನ್ನು ಹುಡುಕಿಕೊಂಡು ಹೋದಾಗ ಪಕ್ಕದ ಮನೆಯವರು ನಮಗೆ ಎದ್ರಿದಾರರು ನಾಯಿಯನ್ನು ಒಡೆದು ಸಾಯಿಸಿರುವ ಬಗ್ಗೆ ತಿಳಿಸಿರುತ್ತಾರೆ.ಇದು ಭಾರತೀಯ ದಂಡ…

