ನರಿಂಗಾನ: ಇಲ್ಲಿನ ಕಲ್ಲರಕೋಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಚೇತನ ಮಕ್ಕಳ ಜತೆಗೆ ವಿದ್ಯಾರ್ಥಿಗಳು ಯಾವ ರೀತಿ ವರ್ತಿಸಬೇಕು ಅನ್ನುವ ಕುರಿತ ಕರ್ಯಗಾರ ನಡೆಯಿತು. ನಿಟ್ಟೆ ಸ್ಪೆಷಲ್ ಚೈಲ್ಡ್ ಕೇರ್ ಸೆಂಟರ್ ನ ವಿಭಾಗ ಮುಖ್ಯಸ್ಥೆ ಡಾ. ಅಮರಶ್ರೀ ಶೆಟ್ಟಿ ಅವರು ವಿಶೇಷ ಚೇತನ ಮಕ್ಕಳೊಂದಿಗೆ ಹೇಗೆ ವ್ಯವಹರಿಸಬೇಕು, ಅವರ ಶಿಕ್ಷಣಕ್ರಮ, ಊಟೋಪಚಾರ ಹಾಗೂ ಅವರನ್ನು ಹೇಗೆ ಆದರಿಸಬೇಕು ಎಂಬುದನ್ನು ವಿಡಿಯೋ ಮೂಲಕ ತೋರಿಸಿ ವಿವರಿಸಿದರು. ಸ್ಪೆಷಲ್ ಎಜುಕೇಟರ್ ಸಿಂಥಿಯಾ ಡಿಸೋಜ ಉಪಸ್ಥಿತರಿದ್ದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ನಯನ ಕುಮಾರಿ.ಕೆ ವಹಿಸಿದ್ದರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಸ್ವಾಗತಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು, ಕನ್ನಡ ಶಿಕ್ಷಕಿ ಜಯಲಕ್ಷ್ಮೀ.ಜಿ. ವಂದಿಸಿದರು.
Author: UllalaVani
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ “ಆತ್ಮಶಕ್ತಿ ಸೌಧ”, ಪಡೀಲ್ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ , ನಿರ್ದೇಶಕರಾದ ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್,…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಅಗೆಯಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಗುಡ್ಡವನ್ನು ನೇರವಾಗಿ ಅಗೆದಿರುವುದರಿಂದ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ರಸ್ತೆಗೆ ಜರಿಯುತ್ತಿದೆ. ಪರಿಣಾಮ ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಕೇವಲ ಕಿರಿದಾದ ಜಾಗದಲ್ಲಿ ವಾಹನಗಳು ಸಂಚರಿಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಈ ರಸ್ತೆ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಈ ಮಾರ್ಗದಲ್ಲಿ ನಿರಂತರವಾಗಿ ಅನಾಹುತಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ. ಕಾಮಗಾರಿ ಗುಣಮಟ್ಟ, ಸುರಕ್ಷತಾ ಕ್ರಮಗಳ ಅವ್ಯವಸ್ಥೆ, ಹಾಗೂ ಗುತ್ತಿಗೆದಾರರ…
ಉಳ್ಳಾಲ : ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಬೆಂದೂರ್ವೆಲ್ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಲಪಾಡಿ ನಾರ್ಲ ನಿವಾಸಿ ಕುಟುಂಬ ಖಾಸಗಿ ಸಂಸ್ಥೆಯ ವಸತಿಗೃಹದಲ್ಲಿ ನೆಲೆಸಿದ್ದರು. ಅಲ್ಲಿಯೇ ಶ್ರೇಯಾ ಮನೆಯ ಬೆಡ್ ರೂಮಿನ ಕಿಟಕಿಗೆ ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಓದಿನಲ್ಲಿ ಒತ್ತಡ, ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿರುವುದನ್ನು ಡೆತ್ನೋಟಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ತೊಕ್ಕೊಟ್ಟು : ಕಾನೂನು ಪ್ರಕಾರ ಮಾದಕ ವ್ಯಸನಗಳ ಸೇವನೆ ಅಪರಾಧ, ಅದರಲ್ಲಿ ಕಮರ್ಷಿಯಲ್ ಪ್ರಮಾಣದಲ್ಲಿದ್ದರೆ 10 ವರ್ಷಗಳಿಗಿಂತ ಅಧಿಕ ಶಿಕ್ಷೆ ಹಾಗೂ ಮನೆ ಆಸ್ತಿ ಎಲ್ಲವನ್ನೂ ಸೀಝ್ ಮಾಡುವ ಆದೇಶವೂ ನ್ಯಾಯಾಲಯದಿಂದ ಬರುವ ಸಾಧ್ಯತೆಗಳು ಹೆಚ್ಚಿದೆ. ಕಮರ್ಷಿಯಲ್ ಪ್ರಮಾಣಕ್ಕಿಂತ ಕಡಿಮೆಯಿದ್ದಲ್ಲಿಯೂ ಶಿಕ್ಷೆ ಖಚಿತ ಆದರೆ ವರ್ಷಗಳಲ್ಲಿ ಬದಲಾವಣೆಗಳಿರಬಹುದು ಎಂದು ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತ ಪ್ರಕಾಶ್ ಹೇಳಿದ್ದಾರೆ.ನಗರ ಪೊಲೀಸ್ ಎಸಿಪಿ ಮಂಗಳೂರು ದಕ್ಷಿಣ ವಿಭಾಗದ ಆಶ್ರಯದಲ್ಲಿ ತೊಕ್ಕೊಟ್ಟುವಿನ ಯುನಿಟಿ ಸಭಾಂಗಣದಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.ಮಾದಕ ವ್ಯಸನಗಳ ಕುರಿತಾಗಿ ಜಾಗೃತಿ ಕಾರ್ಯಗಾರಗಳು ನಿರಂತರವಾಗಿ ಆಗಬೇಕಿದೆ. ಮನೋವೈದ್ಯರನ್ನು ಸೇರಿಸಿಕೊಂಡು ಕೌನ್ಸಿಲಿಂಗ್ ಕೂಡಾ ಪರಿಣಾಮಕಾರಿಯಾಗಿ ಜಾರಿಯಾದಾಗ ಒಂದು ಹಂತದಲ್ಲಿ ನಿಯಂತ್ರಣ ಸಾಧ್ಯ ಎಂದರು.ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ಮಾತನಾಡಿ, ಮಕ್ಕಳ ಮಾನಸಿಕ ಅಸಮತೋಲನ ಸರಿದೂಗಿಸಲು ಶಿಕ್ಷಕ ವರ್ಗವೂ ಕೈಜೋಡಿಸಬೇಕಿದೆ. ವಿದ್ಯಾರ್ಥಿಗಳು ತಪ್ಪು ಎಸಗುತ್ತಾರೆಂದಲ್ಲಿ ಪೊಲೀಸರು ಮತ್ತು ಉಪನ್ಯಾಸಕ ವರ್ಗವೂ ಹೊಣೆಯಾಗಿರುತ್ತಾರೆ. ಶಾಲೆಗಳು, ಕಾಲೇಜುಗಳು,…
ಹಿಂದು ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೆ ಸಂಬಂಧ ಇಲ್ಲ. ಹಿಂದುತ್ವವು ಸಂಘಪರಿವಾರದ ಸುಳ್ಳು, ಹಿಂಸೆಗಳನ್ನು ಒಳಗೊಂಡ ರಾಜಕೀಯ ಅಜೆಂಡಾ ಮಾತ್ರ. ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಆ ಮೂಲಕ ಹಿಂದುಗಳಲ್ಲಿ ಭಯ ಮೂಡಿಸಿ ತನ್ನ ಹಿಂದುತ್ವದ ಜಾಲದೊಳಗಡೆ ಕೆಡವುವ ಕೆಲಸ ಮಾಡುತ್ತಿದೆ ಎಂದು ಸಿಪಿಐ ಎಂ ರಾಜ್ಯ ಕಾರ್ಯದರ್ಶಿ ಡಾ. ಕೆ ಪ್ರಕಾಶ್ ಆರೋಪಿಸಿದರು. ಅವರು ಸಿಪಿಐಎಂ ದ.ಕ ಜಿಲ್ಲಾ ಸಮಿತಿ, ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ದ್ವೇಷದ ಕೊಲೆ, ಪ್ರತಿಕೊಲೆಗಳ ಸಮಗ್ರ ತನಿಖೆಗೆ ಒತ್ತಾಯಿಸಿ, ಮೂರು ದಶಕದ ಅವಧಿಯಲ್ಲಿ ನಡೆದಿರುವ ಕೋಮುವಾದಿ ಕೊಲೆಗಳನ್ನು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಲು ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮುಂದುವರಿದು ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದ್ವೇಷದ ಸರಣಿ ಕೊಲೆಗಳು ನಡೆಯಲು ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿತನ, ಕೋಮುವಾದಿ ಶಕ್ತಿಗಳ ಜೊತೆಗಿನ ಒಡನಾಟವೇ ನೇರ ಕಾರಣ. ಸಿಪಿಐಎಂ ಪಕ್ಷದ ಸತತ ಎಚ್ಚರಿಕೆಯನ್ನು ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಅಂದು…
ಪೋಷಕರು ಮತ್ತು ಶಿಕ್ಷಕರ ನಡುವಿನ ಉತ್ತಮ ಸಂಬಂಧವು ಮಗುವಿನ ಶಾಲಾ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಮಕ್ಕಳನ್ನು ಕೇವಲ ನಾಲ್ಕು ಗೋಡೆಯ ಮಧ್ಯೆ ಕಲಿಯುತ್ತಿರುವ ಪಠ್ಯಕ್ಕೆ ಸೀಮಿತ ಗೊಳಿಸದೇ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪುಗೊಳ್ಳ ಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಬಾಂಧವ್ಯ ವನ್ನು ಇಟ್ಟುಕೊಳ್ಳಬೇಕು ಅದರಿಂದ ನಿಮ್ಮ ಮಕ್ಕಳು ಉತ್ತಮ ವಿದ್ಯಾರ್ಥಿಗಳಾಗಿ ಮೂಡಿ ಬರಲು ಸಾಧ್ಯ. ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಪೋಡಾರು ಜಯರಾಮ ಆಳ್ವ ಅಭಿಪ್ರಾಯ ಪಟ್ಟರು. ಇವರು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾವೂರು ಹರೇಕಳ ವತಿಯಿಂದ ನಡೆದ ಶಾಲಾ ಪೋಷಕರು ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಪೋಷಕರ ಸಭೆಯ ಅಧ್ಯಕ್ಷತೆಯನ್ನು ಕಡೆಂಜ ಸೋಮಶೇಖರ ಚೌಟ ವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕಗಳನ್ನು ಪಡೆದ ಪ್ರಜನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ ಲಾವಣ್ಯ, ಜಯರಾಜ, ದೀಕ್ಷಿತ, ಅನುಷಾ ಮುಂತಾದವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಹಾಗು…
ಯೋಗದಲ್ಲಿ ಧ್ಯಾನವು ಪ್ರಮುಖ ಪಾತ್ರ ವಹಿಸುತ್ತದೆ ಧ್ಯಾನವು ಮನಸ್ಸನ್ನು ಶಾಂತಗೊಳಿಸಿ , ಮಾನಸಿಕ ಒತ್ತಡವನ್ನು ಕಡಿಮೆಗೊಳಿಸಿ, ಏಕಾಗ್ರತೆ ಹೆಚ್ಚಿಸುವ ಕೆಲಸವನ್ನು ಮಾಡುತ್ತದೆ ಹಾಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಯೋಗದಿಂದ ಹೆಚ್ಚಿನ ಲಾಭ ಸಿಗುತ್ತದೆ. ಯೋಗವಾಗಲಿ, ಧ್ಯಾನವಾಗಲಿ ಆಸನಗಳ ಅಭ್ಯಾಸವಾಗಲಿ ಅವುಗಳನ್ನು ನಿರಂತರವಾಗಿ ಮಾಡುವುದರಿಂದ ಮಾತ್ರ ಯೋಗದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗದ ಉಪನ್ಯಾಸಕರಾದ ತಿರುಮಲೇಶ್ವರ ಪ್ರಸಾದ ಇವರು ಅಭಿಪ್ರಾಯಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆ ಮತ್ತು ಮಾನವ ಪ್ರಜ್ಞೆ ಹಾಗು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮ ನಿಧಿ ಯೋಗಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಸಹಯೋಗದಲ್ಲಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಯೋಗಪಟುಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳಾದ ಕುಮಾರಿ ಪ್ರಣಮ್ಯ ಮತ್ತು ಕಾರ್ತಿಕ್ ಹಾಗು ಯೋಗ ಶಿಕ್ಷಕ ಮೋಹನ್ ಇವರುಗಳು ಯೋಗ ಪ್ರದರ್ಶನವನ್ನು ಮತ್ತು ಯೋಗ ತರಬೇತಿಯನ್ನು ನಡೆಸಿಕೊಟ್ಟರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ…
ಉಳ್ಳಾಲ: ವ್ಯಕ್ತಿ ಶಿಕ್ಷಣ ಪಡೆದರೆ ಆರೋಗ್ಯವೂ ಚೆನ್ನಾಗಿರುತ್ತದೆ, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಮಾಜಕ್ಕೆ ಆಧಾರಸ್ತಂಭ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಸ್ವಸಮೀಕ್ಷೆ ವಿಭಾಗಗಳ ಉಪಾಧ್ಯಕ್ಷ ಪ್ರೊ.ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು.ಹರೇಕಳ ಅನುದಾನಿತ ಶ್ರೀ ರಾಮಕೃಷ್ಣ ಪ್ರೌಡಶಾಲೆಗೆ ನಿಟ್ಟೆ ಎಜುಕೇಶನ್ ಟ್ರಸ್ಟ್ ವತಿಯಿಂದ ನೀಡಲ್ಪಟ್ಟ ಉಚಿತ ಬಸ್ ಸೇವೆಗೆ ಸೋಮವಾರ ನಡೆದ ಚಾಲನೆ ನೀಡಿ ಮಾತನಾಡಿದರು.ನಿಟ್ಟೆ ವಿಶ್ವವಿದ್ಯಾಲಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡಿದೆ. 22 ಗ್ರಾಮೀಣ ಆರೋಗ್ಯ ಕೇಂದ್ರಗಳು, 22 ಆರೋಗ್ಯ ಕೇಂದ್ರಗಳಲ್ಲಿ ಪ್ರತಿವರ್ಷ ಎರಡು ಲಕ್ಷ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿದೆ. 20ರಿಂದ 25 ಸಾವಿರ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಶಿಕ್ಷಣ ನೀಡಿ ಸಮಾಜಕ್ಕೆ ಸಮರ್ಪಿಸುತ್ತಿದೆ. ಏಳು ಬಸ್ಸುಗಳನ್ನು ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಮೀಸಲಿಡಲಾಗಿದೆ ಎಂದು ತಿಳಿಸಿದರು.ಸಮಾಜ ಸೇವಕ ಹೈದರ್ ಪರ್ತಿಪ್ಪಾಡಿ ಮಾತನಾಡಿ, ಶಿಕ್ಷಣದ ವಿಚಾರ ಬಂದಾಗ ವಿನಯ್ ಹೆಗ್ಡೆ ಉಚಿತ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ. ಈ…
ಟೆಹರಾನ್ : ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಕುರಿತ ಯಾವುದೇ ಒಪ್ಪಂದ ನಡೆದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಇಸ್ರೇಲ್ ಆಡಳಿತವು ಇರಾನ್ ಜನರ ವಿರುದ್ಧ ತನ್ನ ಕಾನೂನುಬಾಹಿರ ಆಕ್ರಮಣವನ್ನು ಟೆಹ್ರಾನ್ ನ ಸ್ಥಳೀಯ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ನಿಲ್ಲಿಸಿದರೆ, ನಮ್ಮ ಪ್ರತಿಕ್ರಿಯೆಯನ್ನು ಮುಂದುವರಿಸುವ ಉದ್ದೇಶ ನಮಗಿಲ್ಲ’ ಎಂದು ತಿಳಿಸಿದ್ದಾರೆ. ‘ಆ ಬಳಿಕವಷ್ಟೇ ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯ ಕುರಿತು ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು” ಎಂದು ಅವರು ಇಸ್ರೇಲ್ ಗೆ ಪರೋಕ್ಷ ಸಂದೇಶ ನೀಡಿದ್ದಾರೆ.

