ಮಂಗಳೂರು : ಇನ್ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡದ ಮಾಲವಂತಿಗೆ, ಕಿಲ್ಲೂರು ಮನೆ ನಿವಾಸಿ ಮೊಹಮ್ಮದ್ ಕೈಫ್(22) ಬಂಧಿತ ಆರೋಪಿ. ಕರಾವಳಿ ಟೈರ್ಸ್ ಎಂಬ ಇನ್ಸ್ಟಾಗ್ರಾಂ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಕರಾವಳಿ ಟೈರ್ಸ್ ಎಂಬ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿತನು ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಬಳಿಕ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ದಸ್ತಗಿರಿ ಕ್ರಮ ಕೈಗೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿರುತ್ತದೆ. ಅಲ್ಲದೇ ಕರಾವಳಿ ಟೈರ್ಸ್ ಎಂಬ ಪೇಜ್ ವಿರುದ್ಧ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ…
Author: UllalaVani
ಉಳ್ಳಾಲ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರ ಕೆಲವು ಪ್ರಮುಖ ಬೇಡಿಕೆಯ ಅಂಶಗಳನ್ನು ಪರಿಗಣಿಸುವಂತೆ ಹಾಗೂ ಬಿ.ಎಲ್.ಒ ಕರ್ತವ್ಯದಿಂದ ಶಿಕ್ಷಕರನ್ನು ಬಿಡುಗಡೆಗೊಳಿಸುವ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಉಚ್ಚಿಲದಲ್ಲಿ ಸಂಘದ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ನಿಯೋಗದಿಂದ ಮನವಿ ಸಲ್ಲಿಸಲಾಯಿತು. ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ, ಗ್ರಾಮ ವ್ಯಾಪ್ತಿಯಲ್ಲೇ ನೇಮಿಸುವುದು, ಪ್ರಾಥಮಿಕ ಶಾಲಾ ಶಿಕ್ಷಕ ಗಣತಿದಾರರಿಗೆ ಪ್ರಾ ಥಮಿಕ ಶಾಲಾ ಮುಖ್ಯ ಶಿಕ್ಷಕರನ್ನೇ ಮೇಲ್ವಿಚಾರಕರಾಗಿ ನೇಮಿಸುವುದು, ತೀವ್ರ ಕಾಯಿಲೆ, ಗರ್ಭಿಣಿ ಶಿಕ್ಷಕಿಯರು, ಒಂದು ವರ್ಷದೊಳಗಿನ ಮಗುವಿರುವ ಶಿಕ್ಷಕಿಯರುಗಳಿಗೆ ಕಾರ್ಯದಿಂದ ವಿನಾಯಿತಿ ನೀಡುವುದು. ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ನೀಡುವುದು, ನವರಾತ್ರಿ ಹಬ್ಬ ಆಚರಣೆಗೆ ಶಿಕ್ಷಕರಿಗೂ ಅವಕಾಶ ಮಾಡಿಕೊಟ್ಟು ನವರಾತ್ರಿಯ ನಂತರ ಸಮೀಕ್ಷಾ ಕಾರ್ಯಕ್ಕೆ ಅವಕಾಶ ಮಾಡುವುದು, ಗಣತಿ ಕಾರ್ಯದಲ್ಲಿ ನೇಮಕವಾಗಿರುವ ಶಿಕ್ಷಕರನ್ನು ಗಣತಿ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದು, ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವ…
ಮಂಗಳೂರು : ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮುಲ್ಕಿ…
ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ಸಾಹಿತಿ, ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : 1565-1763 ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದರು. ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ 32 ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು, ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ.…
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇದರ ವತಿಯಿಂದ ಸೆ.19 ಹಾಗೂ 20 ರಂದು ದಾವಣಗೆರೆ ಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ (ಪದವಿ ಪೂರ್ವ) ಟೂರ್ನಮೆಂಟ್ ನಲ್ಲಿ ಆಡುವ ಜಿಲ್ಲಾ ತಂಡದಲ್ಲಿ ಉಳ್ಳಾಲದ ಪ್ರತಿಷ್ಠಿತ ಪಾಂಡ್ಯ ರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜ್ ಇಲ್ಲಿನ ನಾಲ್ಕು ಗ್ರೇಟ್ ಆಟಗಾರರಾದ 1. ಮೊಹಮ್ಮದ್ ಆನಸ್ 2. ಸುಹೈಲ್ ಅಹ್ಮದ್ ಫಾರಿಸ್ 3. ಮೊಹಮ್ಮದ್ ಉನೈನ್ 4.ಅಫ್ನಾನ್ ರೆಹಮಾನ್ ಅಬ್ಬಾಸ್ ಇವರುಗಳು ಸ್ಥಾನ ಪಡೆಯುವ ಮೂಲಕ ಕಾಲೇಜು ಹಾಗೂ ಉಳ್ಳಾಲಕ್ಕೆ ಕೀರ್ತಿ ತಂದಿದ್ದಾರೆ. ಈ ಆಟಗಾರರು ಕಾಲೇಜು ಕೋಚ್ ತಮೀಮ್ ಉಳ್ಳಾಲ್ ರಿಂದ ತರಬೇತಿ ಪಡೆದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇದರ ವತಿಯಿಂದ ಸೆ.19 ಹಾಗೂ 20 ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಗರ್ಲ್ಸ್ ವಿಭಾಗದ ಫುಟ್ಬಾಲ್ (ಪದವಿ ಪೂರ್ವ) ಟೂರ್ನಮೆಂಟ್ ನಲ್ಲಿ ಆಡುವ ಜಿಲ್ಲಾ ಟೀಮ್ ನಲ್ಲಿ ಉಳ್ಳಾಲದ ಪ್ರತಿಷ್ಠಿತ ಪಾಂಡ್ಯ ರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜ್ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ , ಪ್ರತಿಭಾವಂತ ಯುವ ಆಟಗಾರ್ತಿ “ಮೆಯ್ಸಾ ಮರಿಯಮ್ ” ಸ್ಥಾನ ಪಡೆದಿದ್ದಾರೆ. ಇವರು ಕಾಲೇಜು ಕೋಚ್ ತಮೀಮ್ ಉಳ್ಳಾಲ್ ರಿಂದ ತರಬೇತಿ ಪಡೆದಿದ್ದಾರೆ .
ಮಂಗಳೂರು : ಪ್ರಪಂಚದಾದ್ಯಂತದ ತುಳು ನಾಯಕರನ್ನು ಒಟ್ಟುಗೂಡಿಸುವ ಸಂಘಟನೆಯಾದ ಗ್ಲೋಬಲ್ ಅಲೈಯನ್ಸ್ ಆಫ್ ತುಳು ಅಸೋಸಿಯೇಷನ್ (GATA), ಸೆಪ್ಟೆಂಬರ್ 21 ರಂದು ತನ್ನ ಮೊದಲ ತುಳು ಲಿಪಿ ಕಲಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಉದ್ಘಾಟನಾ ಅಧಿವೇಶನವು ಸಂಜೆ 7 ಗಂಟೆಗೆ ಜೂಮ್ ವೇದಿಕೆಯಲ್ಲಿ ವರ್ಚುವಲ್ ಆಗಿ ನಡೆಯಲಿದೆ. ಈ ಸಂದರ್ಭದಲ್ಲಿ ಒಡಿಯೂರು ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಹಿರಿಯ ನಾಯಕರಾದ ಡಿ.ಕೆ. ಶೆಟ್ಟಿ ಮತ್ತು ಸರ್ವೋತ್ತಮ ಶೆಟ್ಟಿ (ಅಬುಧಾಬಿ) ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ತರಗತಿಗಳನ್ನು ಅಮೆರಿಕದ ಫ್ಲೋರಿಡಾದ ಶ್ರೀವಲ್ಲಿ ರೈ ಮಾರ್ಟೆಲ್ ನಡೆಸಿಕೊಡಲಿದ್ದು, ಅವರಿಗೆ ಪ್ರಭಾಕರ್ ಭಟ್ (ಯುಎಸ್ಎ), ಸುರೇಶ್ ಪೂಂಜಾ (ಆಸ್ಟ್ರೇಲಿಯಾ), ಶುಭಶ್ರೀ ಕೆಎಂ (ಭಾರತ), ಸರಿತಾ ಅರುಣ್ ಶೆಟ್ಟಿ (ಯುಕೆ), ಶ್ರುತಾ ಶೆಟ್ಟಿ (ಯುಕೆ), ಮತ್ತು ಚಂದ್ರಹಾಸ ಶೆಟ್ಟಿ (ಮಸ್ಕತ್) ಬೆಂಬಲ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ತಾಂತ್ರಿಕ ಬೆಂಬಲವನ್ನು ಟೀಮ್ ಇಲೇಸಾ ಒದಗಿಸಲಿದೆ. ತುಳು ಲಿಪಿ ಕಲಿಯಲು ಆಸಕ್ತಿ ಇರುವವರು ಫಾರ್ಮ್ ಅನ್ನು ಭರ್ತಿ ಮಾಡಲು ಸಹಾಯಕ್ಕಾಗಿ, ಭಾಗವಹಿಸುವವರು ಸೂರಿ ಮಾರ್ನಾಡ್ ಅವರನ್ನು…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ವರ್ಷಧಾರೆ ಮುಂದುವರೆದಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವ ಮಾಹಿತಿ ಇಲ್ಲಿದೆ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ : ಕ್ಯಾಸಲ್ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ,…
ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ವಿವಾಹ ಪ್ರೋತ್ಸಾಹ ಧನ ಯೋಜನೆ ಜಾರಿಗೆ ತಂದಿದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದವರನ್ನು ಬೇರೆ ವರ್ಗದ ವ್ಯಕ್ತಿ ವಿವಾಹವಾದರೆ ಆ ದಂಪತಿಗಳಿಗೆ ₹5.50 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು. ವಧುವಿಗೆ ₹3ಲಕ್ಷ ಹಾಗೂ ವರನಿಗೆ ₹2.5ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಹತೆಗಳು ದಂಪತಿಗಳು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. ಜೋಡಿಗಳು ಹಿಂದೂ ಧರ್ಮದವರಾಗಿರಬೇಕು. ಒಬ್ಬ ಸಂಗಾತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದರೆ, ಇನ್ನೊಬ್ಬರು ಬೇರೆ ಸಮುದಾಯಕ್ಕೆ ಸೇರಿರಬೇಕು. ದಂಪತಿಗಳ ಒಟ್ಟು ವಾರ್ಷಿಕ ಆದಾಯ ₹5ಲಕ್ಷಕ್ಕಿಂತ ಕಡಿಮೆ ಇರಬೇಕು. ವಿವಾಹವಾಗಿ 18 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಗೆ ಅರ್ಹರು. ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಹಂತ 1: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.https://swdservices.karnataka.gov.in/SWIncentive/ICM/ICMHome.aspx ಹಂತ 2: ‘ವಿವಾಹಕ್ಕೆ ಪ್ರೋತ್ಸಾಹ ಧನ’ ಎಂಬ ಗುಂಡಿಯನ್ನು ಒತ್ತಿ. ನಂತರ ‘ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ’ ಯೋಜನೆಯನ್ನು ಆಯ್ಕೆಮಾಡಿ. ಹಂತ…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ತೆರೆಗೆ ಬರಲಿದೆ. ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೀರ್ ರೆಡ್ಡಿ ಎಂ. ನಿರ್ಮಿಸುತ್ತಿರುವ ಈ ಚಿತ್ರಕ್ಕೆ ‘ಮಾ ವಂದೇ’ ಎಂದು ಹೆಸರಿಡಲಾಗಿದೆ. ಅವರ ಜನ್ಮ ದಿನದ ಅಂಗವಾಗಿ ಸಿನಿಮಾದ ಪೋಸ್ಟರ್ ಅನ್ನು ರಿವೀಲ್ ಮಾಡಲಾಗಿದೆ. ಚಿತ್ರದಲ್ಲಿ ಮಲಯಾಳದ ನಟ ಉಣ್ಣಿ ಮುಕುಂದನ್ ನರೇಂದ್ರ ಮೋದಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ನಟ ಉಣ್ಣೆ ಮುಕುಂದನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕ್ರಾಂತಿ ಕುಮಾರ್ ನಿರ್ದೇಶನದ ‘ಮಾ ವಂದೇ’ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ನಾನು ನಿರ್ವಹಿಸುತ್ತಿದ್ದೇನೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಹರ್ಷವಾಗುತ್ತಿದೆ. ಅಹಮದಾಬಾದ್ನಲ್ಲಿ ಬೆಳೆದ ನನಗೆ, ಬಾಲ್ಯದಲ್ಲಿ ಅವರು(ಮೋದಿ) ನಮ್ಮ ಮುಖ್ಯಮಂತ್ರಿ ಎಂದು ತಿಳಿದಿತ್ತು. ವರ್ಷಗಳ ನಂತರ, 2023ರ ಏಪ್ರಿಲ್ನಲ್ಲಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅದು ನನ್ನ ಪಾಲಿಗೆ ಮರೆಯಲಾಗದ ಕ್ಷಣ ಎಂದಿದ್ದಾರೆ. ಒಬ್ಬ ನಟನಾಗಿ, ಈ ಪಾತ್ರವನ್ನು…

