Author: UllalaVani

Kannada News From Coastal Karnataka

ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಲ್ಲಿ ಅವರ ತಾಯಿ ಬಂದು ‘ಬಿಹಾರದಲ್ಲಿ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದೀಯಾ’ ಎಂದು ಗದರಿಸುವಂತೆ ಸಾಮಾಜಿಕ ಮಾಧ್ಯಗಳಲ್ಲಿ ಹಂಚಿಕೊಂಡಿದ್ದ ಎಐ ಆಧಾರಿತ ವಿಡಿಯೊವನ್ನು ಕೂಡಲೇ ತೆಗೆಯುವಂತೆ ಕಾಂಗ್ರೆಸ್‌ನ ಬಿಹಾರ ಘಟಕಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ವಿವೇಕಾನಂದ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ಬೈಜಂತ್ರಿ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ. ಅರ್ಜಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪಕ್ಷಗಾರರನ್ನಾಗಿ ಮಾಡಲಾಗಿತ್ತು. ವಿಡಿಯೊ ತೆಗೆದುಹಾಕಲು ಸೂಚಿಸಿದ ಪೀಠವು ರಾಹುಲ್ ಗಾಂಧಿ, ಫೇಸ್‌ಬುಕ್, ಟ್ವಿಟರ್ ಮತ್ತು ಗೂಗಲ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯೋಗದ ಪರ ವಕೀಲ ಸಿದ್ದಾರ್ಥ ಪ್ರಸಾದ್‌ ತಿಳಿಸಿದ್ದಾರೆ. ಇದೇ ವರ್ಷಾಂತ್ಯದಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ರಾಜಕೀಯ ಸಂಚಲನ ಜೋರಾಗಿದ್ದು. ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಈ ವಿಡಿಯೊ ಹಂಚಿಕೊಂಡಿತ್ತು. ಕಾಂಗ್ರೆಸ್‌ನ…

Read More

ಮಂಗಳೂರು : ಕೈಯಲ್ಲೇ ಸಂಪೂರ್ಣ ಕುರ್‌ಆನ್‌ನ್ನು ಬರೆದು ಸಾಧನೆಗೈದ ಕುಂಬ್ರ ಮರ್ಕಝುಲ್ ಹುದಾ ವುಮನ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಜ್‌ಲಾ ಹಾಗೂ ಮಿತ್ತ್ ಬೈಲ್ ಕಾಲೇಜು ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅವರನ್ನು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್‌ಹಾಜ್ ಕೆ ಎಸ್ ಮುಹಮ್ಮದ್ ಮಸೂದ್‌ರ ಸೊಸೆ ಗುಲ್ಸನ್ ಫರ್ವಿನ್ ಅವರು ಸಾಧಕಿಯರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ವಹಿಸಿದ್ದರು. ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಹಾಜಿ ಸಿ ಮಹಮೂದ್, ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಮೂಸ ಮೊಯ್ದೀನ್, ಕಾರ್ಯದರ್ಶಿಗಳಾದ ಹಾಜಿ ಅಹ್ಮದ್ ಬಾವ ಪಡೀಲ್, ಡಿ.ಎಂ. ಅಸ್ಲಾಂ, ಡಾ. ಮುಹಮ್ಮದ್ ಆರಿಫ್ ಮಸೂದ್, ಸಿ.ಎಂ. ಹನೀಫ್, ಎಂ.ಎ. ಅಶ್ರಫ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹಾಜಿ ಬಿ ಅಬೂಬಕರ್, ಹಾಜಿ ರಿಯಾಝುದ್ದೀನ್, ಎನ್.ಕೆ. ಅಬೂಬಕರ್,…

Read More

ಮಂಗಳೂರು : ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್ ನಡೆಸುತ್ತಿದ್ದಾರೆ. ಬೆಳಿಗ್ಗೆ ದೇವಿಕಾ ನಾಪತ್ತೆಯಾದ ಹಿನ್ನಲೆಯಲ್ಲಿ ಸಹೋದರ ಶೋಧ ನಡೆಸಿದಾಗ ಸೀರೆಯಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ದೇವಿಕಾ ಬಾಲ ಸಂಘದ ಸದಸ್ಯೆಯಾಗಿದ್ದಳು. ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು. ಫಾರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

Read More

ಸುಳ್ಯ:ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್‌ಒಪಿ) ಬಿಡುಗಡೆಯಾಗಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಕಳೆದ ಸಚಿವ ಸಂಪುಟ ಸಭೆಯಲ್ಲಿ, ಹಿಂದೆ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ, ದುರುಪಯೋಗ ಮತ್ತು ಪರಿಹರಿಸಲು ಶಾಶ್ವತ ಪರಿಹಾರವನ್ನು ರೂಪಿಸಲಾಗಿತ್ತು ಎಂದು ಹೇಳಿದರು. ಈಗ ಹೊಸ ಕಾನೂನು ಚೌಕಟ್ಟನ್ನು ಸ್ಥಾಪಿಸಲಾಗಿದ್ದು, ಕೆಂಪು ಕಲ್ಲು ಮಾರಾಟಗಾರರು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದೆ. ಇನ್ನೂ ಯಾರು ವ್ಯಾಪಾರ ಮಾಡಿದರು ಪರವಾನಿಗೆ ಪಡೆದು ಮಾಡಬೇಕು ಎಂದರು. ಹೊಸ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಖ್ಯಮಂತ್ರಿ ಕೂಡ ಒಪ್ಪಿಗೆ ನೀಡಿದ್ದಾರೆ. ಕೆಂಪು ಕಲ್ಲು ವ್ಯವಹಾರಕ್ಕಾಗಿ 53 ಅರ್ಜಿಗಳಲ್ಲಿ 25 ಅರ್ಜಿದಾರರಿಗೆ ಈಗಾಗಲೇ ಹೊಸ ಕಾನೂನು ಚೌಕಟ್ಟಿನಡಿಯಲ್ಲಿ ಪರವಾನಗಿ ನೀಡಲಾಗಿದೆ ಎಂದರು. ಕೆಂಪು ಕಲ್ಲು ದರ ನಿಗದಿ ಕೆಂಪು ಕಲ್ಲಿಗೆ ದರ ನಿಗದಿ ಬಗ್ಗೆ ಚರ್ಚೆ ನಡೆಸಲಾಗುವುದು. ಜನ ಸಾಮಾನ್ಯರಿಗೆ ಸುಲಭ ಮತ್ತು ಕಡಿಮೆ ದರದಲ್ಲಿ…

Read More

ಉಳ್ಳಾಲ:ಸೆ -15ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವನು ದಾರುಣ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್ ರವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ.ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ,ರಾತ್ರಿ ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು.ಜುಬೈಲ್ ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11 ರಂದು ಊರಿಗೆ ಬಂದಿದ್ದರು.ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು.ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ,ಮೂವರು ಸಹೋದರಿಯರು,ಓರ್ವ ಸಹೋದರನನ್ನ ಅಗಲಿದ್ದಾರೆ.

Read More

ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಲು ಮತ್ತು ಬೆಳ್ಮಣ್ ಪ್ರದೇಶದ ಸುತ್ತಮುತ್ತಲಿನ ಶಿಕ್ಷಕರ ಸಮರ್ಪಣೆ ಮತ್ತು ಸೇವೆಯನ್ನು ಗೌರವಿಸಲು ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಇತ್ತೀಚೆಗೆ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಮುಲ್ಲಡ್ಕ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲ ಫಾದರ್ ಮಿಲ್ಟನ್ ಫೆರ್ನಾಂಡಿಸ್, ನಿವೃತ್ತ ಶಿಕ್ಷಕಿ ಮತ್ತು ಸೈಂಟ್ ಜೋಸೆಫ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮಾಜಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಡ್ವಿನ್ ಅರಾನ್ಹಾ, ಮತ್ತು ಕುರ್ಕಿಲಬೆಟ್ಟು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗ್ರೆಟ್ಟಾ ಮಸ್ಕರೇನ್ಹಸ್ ಅವರು ಗೌರವ ಅತಿಥಿಗಳಾಗಿದ್ದರು.ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು, ಹೊಸದಾಗಿ ಸ್ಥಾಪನೆಯಾದ, ಬೆಳ್ಮಣ್ ಶಾಖೆಯು ಕೇವಲ ಆರು ತಿಂಗಳಲ್ಲಿ ₹ 6 ಕೋಟಿಗೂ ಮೀರಿದ ವಹಿವಾಟು ಸಾಧಿಸಿದೆ ಎಂದು ಹೇಳಿ, ಇದು ಸ್ಥಳೀಯ ಸಮುದಾಯದ ಬಲವಾದ ಬೆಂಬಲಕ್ಕೆ ಸಾಕ್ಷಿಯಾಗಿದೆ. ಯಾವುದೇ ಸಂಸ್ಥೆಯ ಬೆಳವಣಿಗೆಯಲ್ಲಿ ದೂರದೃಷ್ಟಿಯ ಮಹತ್ವವನ್ನು ಒತ್ತಿ ಹೇಳಿದ…

Read More

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಅನ್ನು ಸೆಪ್ಟೆಂಬರ್ 13, ರಂದು ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು.ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿಂಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಎನ್‌ಅರ್‌ಐ, ಕಥೋಲಿಕ್ ಸಭಾ ಕಿನ್ನಿಗೋಳಿಯ ಕಾರ್ಯದರ್ಶಿ ಹಾಗೂ ವಿನ್ಸೆಂಟ್ ಡಿ ಪಾಲ್ ಲೆಕ್ಕಪರಿಶೋಧಕ ಜೆರೋಮ್ ಡಿ’ಅಲ್ಮೇಡಾ ಮತ್ತು ಕಿನ್ನಿಗೋಳಿಯ ಮೆಸ್ಸರ್ಸ್ ಚೈತನ್ಯ ಮೆಡಿಕಲ್ಸ್ ಮತ್ತು ಸಾಗರಿಕಾ ಅರೇಂಜರ್ಸ್ನ ಮಾಲೀಕ ಧನಂಜಯ ಪಿ. ಶೆಟ್ಟಿಗಾರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್ ಮತ್ತು ಶಾಖಾ ವ್ಯವಸ್ಥಾಪಕ ಅನಿಲ್ ಆರ್.…

Read More

ಉಳ್ಳಾಲ :  ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ  ಮೀನುಗಾರಿಕಾ ಟ್ರಾಲರ್‌ ಬೋಟ್‌  ಆಳಸಮುದ್ರದಲ್ಲಿ ಎಂಜಿನ್‌ ವೈಫಲ್ಯದಿಂದ ಕೆಟ್ಟು ನಿಂತಿದ್ದು, ಪವಾಡಸದೃಶವಾಗಿ  ಸಮುದ್ರದ ಅಲೆಗಳಿಂದಾಗಿ  ತೇಲುತ್ತಾ  ಉಳ್ಳಾಲದ ಸೀಗ್ರೌಂಡ್‌ ದಡಕ್ಕೆ ಬಂದು ಅಪ್ಪಳಿಸಿದೆ. ಬೋಟಿನಲ್ಲಿದ್ದ 13 ಮಂದಿ ಮೀನುಗಾರರು ಬಹುದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್‌ ಅಶ್ಫಾಕ್‌ ಎಂಬವರಿಗೆ ಸೇರಿದ ಬುರಾಕ್‌ ಟ್ರೋಲರ್‌ ಬೋಟ್‌ ಕೆಟ್ಟು ನಿಂತಿದೆ. ಮಂಗಳೂರಿನ ಧಕ್ಕೆಯಿಂದ ಕೇರಳ ಭಾಗಕ್ಕೆ ನಿನ್ನೆ ರಾತ್ರಿ ಆಳಸಮುದ್ರ ಮೀನುಗಾರಿಕೆಗೆಂದು ಬೋಟ್‌ ತೆರಳುತ್ತಿತ್ತು. ಈ ನಡುವೆ ಆಳಸಮುದ್ರದಲ್ಲಿ  ಬೋಟ್‌ ಎಂಜಿನ್‌ ವೈಫಲ್ಯ ಉಂಟಾಗಿದ್ದು, ಮುಂದೆ ಸಾಗಲು ಅಸಾಧ್ಯವಾಗಿತ್ತು. ಮಧ್ಯರಾತ್ರಿಯಲ್ಲಿ ಬೋಟ್‌ ಕೆಟ್ಟು ನಿಂತ ಕುರಿತು ಉಳಿದ ಮೀನುಗಾರಿಗಾ ಬೋಟಿನವರ ಗಮನಕ್ಕೆ ಬಾರದೇ 13 ಮಂದಿ ಮೀನುಗಾರರು ಜೀವ ಕೈಯಲ್ಲಿಟ್ಟುಕೊಂಡು ಬೋಟಿನೊಳಕ್ಕೆ ಉಳಿದಿದ್ದರು. ಅಲೆಗಳಿಂದಾಗಿ ತೇಲುತ್ತಾ ಬಂದ  ಬೋಟ್‌ ಇಂದು ನಸುಕಿನ ಜಾವ ಸೀಗ್ರೌಂಡ್‌ ಸಮುದ್ರತೀರಕ್ಕೆ ಬಂದು ಅಪ್ಪಳಿಸಿದೆ.ಘಟನೆಯಿಂದಾಗಿ ಬೋಟ್‌ ಮಾಲೀಕರಿಗೆ ಲಕ್ಷಾಂತರ ನಷ್ಟವುಂಟಾಗಿದೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Read More