Author: UllalaVani

Kannada News From Coastal Karnataka

ನರಿಂಗಾನ : ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿ ಇಲ್ಲಿ ಯೋಗ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನವಾಝ್.ಎಂ‌.ಬಿ ಅವರು ಉದ್ಘಾಟಿಸಿದರು. ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿಯ ಮುಖ್ಯ ಶಿಕ್ಷಕಿ ನಯನಕುಮಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೀರಾ ಎಂ.ವಿ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಸರ್ವ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಟೀಚರ್ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಯೋಗ ತರಗತಿಯನ್ನು ನಡೆಸಿಕೊಟ್ಟರು, ಪ್ರೌಢಶಾಲಾ ಹಿರಿಯ ಶಿಕ್ಷಕಿ ಸೀಮಾ ಮರಿಯಾ ಡಿಸೋಜ ಸ್ವಾಗತಿಸಿದರು, ಪ್ರಾಥಮಿಕ ಶಾಲಾ ಶಿಕ್ಷಕ ರಘು ವಂದಿಸಿದರು.

Read More

ಸೋಮೇಶ್ವರ: ಸೋಮೇಶ್ವರ ಪುರಸಭೆ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿ ಸುರೇಖಾ ಯೋಗಾಸನಗಳನ್ನು ಹೇಳಿಕೊಟ್ಟರು. ಸೋಮೇಶ್ವರ ಪುರಸಭಾ ಅಧ್ಯಕ್ಷೆ ಕಮಲಾ , ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಮುಖ್ಯಾಧಿಕಾರಿ ಮುತ್ತಡಿ, ಕಛೇರಿ ವ್ಯವಸ್ಥಾಪಕರು ಕೃಷ್ಣ ಆರ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳು , ಪೌರಕಾರ್ಮಿಕರು ಉಪಸ್ಥಿತರಿದ್ದುಕೊಂಡು ಯೋಗಾಸನದಲ್ಲಿ ಭಾಗಿಯಾದರು.

Read More

ಬೆಂಗಳೂರು: ಮಂಜನಾಡಿ ಉರುಮನೆಕೋಡಿ ಸೀತಾರಾಮ ಪೂಜಾರಿ ಅವರ ಇಬ್ಬರು ಮಕ್ಕಳು, ತಾಯಿ ಗುಡ್ಡ ಕುಸಿದು ಸಾವನ್ನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿ ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ‍್ಯದರ್ಶಿಗಳು ಸ್ಪಂಧಿಸಿ ತನಿಖೆಗೆ ಆದೇಶಿಸಿದ್ದಾರೆ.ಉಪನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ‍್ಯದರ್ಶಿ, ಪಂಚಾಯತ್ ರಾಜ್ ಇಲಾಖೆಯ ಎನ್ .ರವಿ ಕುಮಾರ್ ಇವರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮುಖ್ಯ ಅಭಿಯಂತರರಿಗೆ ಅಗತ್ಯ ಕ್ರಮಕ್ಕಾಗಿ ಆದೇಶ ಮಾಡಿದ್ದಾರೆ.ಮೇ. 30 ರಂದು ಸುರಿದ ಭಾರೀ ಮಳೆಯಿಂದಾಗಿ, ಇಂಜಿನಿಯರ್ ಗಳು ನಿರ್ಲಕ್ಷ್ಯದಿಂದ , ಜೆಸಿಬಿಯಿಂದ ಅಗೆದ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಯಿಂದ ಗುಡ್ಡದ ಮಣ್ಣು ಜರಿದು, ಮನೆ ಮೇಲೆ ಬಿದ್ದು, ಸಂಭವಿಸಿದ ಘಟನೆಯಿಂದ ತಮ್ಮ ಮಕ್ಕಳ, ತಾಯಿ ಸಾವು ಹಾಗೂ ಪತ್ನಿ ಹಾಗೂ ತಂದೆ ಕಾಲುಗಳನ್ನು ಕಳೆದುಕೊಳ್ಳುವಂತಾಗಿದ್ದು, ಇದರಿಂದ ಉಂಟಾದ ಹಾನಿಯಿಂದ ಇಂಜಿನಿಯರುಗಳ ಮೇಲೆ ತನಿಖೆ ನಡೆಸಿ ಕ್ರಮವಹಿಸಲು ಕೋರಿದ್ದರು.ರಸ್ತೆ ಕಾಮಗಾರಿ ನಡೆಸುವಾಗ…

Read More

ಉಳ್ಳಾಲ: ತಾಲೂಕು ಆಶಾಮೆಂಟರನ್ನು ಕರ್ತವ್ಯದಲ್ಲಿ ಮುಂದುವರೆಸಲು ಒತ್ತಾಯಿಸಿ ಮಂಗಳೂರು ನಗರ ಆಶಾ ಕಾರ‍್ಯಕರ್ತೆಯರಿಂದ ತೊಕ್ಕೊಟ್ಟು ಕಲ್ಲಾಪುವಿನಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.2009ನೇ ಸಾಲಿನಿಂದ ಆಶಾ ಕಾರ‍್ಯಕರ್ತೆಯರಿಗೆ ಮೂಲಭೂತ ತರಬೇತಿಯನ್ನು ನೀಡಿದ ದಿನದಿಂದ 2025ರ ವರೆಗೆ ಎಲ್ಲಾ ಕೆಲಸ ಕಾರ್ಯಗಳ ಮೇಲ್ವಿಚಾರಣೆಯನ್ನು ಆಶಾ ಮೆಂಟರ್ ಅವರ ಪ್ರೋತ್ಸಾಹದಿಂದ ಕರ್ತವ್ಯ ನಿರ್ವಹಿಸಿದ್ದೇವೆ. ಆದರೆ ಈಗ ಸರಕಾರದಿಂದ ಆಶಾ ಮೆಂಟರ್ ಇವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂಬ ಆದೇಶ ಬಂದಿದೆ. ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದರೆ ಮುಂದೆ ಆಶಾ ಕಾರ‍್ಯಕರ್ತರನ್ನು ಕೇಳುವವರಿಲ್ಲ ಮತ್ತು ಮುಂದಿನ ದಿನಗಳಲ್ಲಿ ಆಶಾ ಪ್ರೋಗ್ರಾಮ್ ಅನ್ನೇ ತೆಗೆಯಲಾಗುವುದು ಅನ್ನುವ ಮಾತುಗಳಿವೆ. ಆದುದರಿಂದ ಯಾವುದೇ ಕಾರಣಕ್ಕೂ ಆಶಾ ಮೆಂಟರವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದೇ ಕರ್ತವ್ಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ನಿಯೋಗದಲ್ಲಿ ಆಶಾ ಕಾರ‍್ಯಕರ್ತರ ಜಿಲ್ಲಾ ಅಧ್ಯಕ್ಷೆ ಗಾಯತ್ರಿ ವಿ ಶೆಟ್ಟಿ, ತಾಲೂಕು ಅಧ್ಯಕ್ಷೆ ಲತಾ, ಕಾರ‍್ಯದರ್ಶಿ ವಿಶಾಲಾಕ್ಷಿ, ಸುಚಿತ್ರಾ, ಸುಜಾತಾ ಎಸ್, ಆಶಾಲತಾ ಮುಂತಾದವರು ಉಪಸ್ಥಿತರಿದ್ದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ…

Read More

ಸುರತ್ಕಲ್: ಸುರತ್ಕಲ್ ಪೂರ್ವ ಆರ್ಕೇಡ್ ನಲ್ಲಿ 2013 ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯನ್ನು ಶುಕ್ರವಾರ ಸುರತ್ಕಲ್ ಮುಖ್ಯ ರಸ್ತೆಯಲ್ಲಿರುವ ವಿಜಯ ಮಹಲ್ ಕಾಂಪ್ಲೆಕ್ಸ್‌ ನ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳಿಸಲಾಯಿತು.ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಅಧ್ಯಕ್ಷರಾದ ಕೆ. ಚಿತ್ತರಂಜನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸುರತ್ಕಲ್ ಶಾಖೆ ಸುಸಜ್ಜಿತ ಸ್ಥಳಕ್ಕೆ ಸ್ಥಳಾಂತರ ಆಗಿರುವುದು ತುಂಬಾ ಸಂತೋಷದ ವಿಷಯ. ನಮ್ಮದೇ ಸೊಸೈಟಿ ಆಗಬೇಕೆಂಬ ನಮ್ಮ ಮಹದಾಸೆಗೆ ಆತ್ಮಶಕ್ತಿ ಸಹಕಾರ ಶಕ್ತಿ ನೀಡಿದೆ. ಈ ಸಂಸ್ಥೆಯು ಇಷ್ಟು ವೇಗವಾಗಿ 33 ಶಾಖೆಗಳನ್ನು ಮಾಡಿರುವುದು ಅಸಾಮಾನ್ಯ ಸಾಧನೆ. ಇದರಲ್ಲಿ ಚಿತ್ತರಂಜನ್ ಬೋಳಾರ್ ಅವರ ಕ್ರಿಯಾಶೀಲ ನಾಯಕತ್ವ ಎಲ್ಲಾ ಸಿಬ್ಬಂದಿಗಳ ಅವಿರತವಾದ ಶ್ರಮ ಮತ್ತು ಆಡಳಿತ ಮಂಡಳಿಯವರ ಸಹಕಾರ ಇದೆ ಎಂದು ಶ್ಲಾಘಿಸಿದರು.ಗಣಕೀಕೃತ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಚಿತ್ತರಂಜನ್ ಬೋಳಾರ್ ಅವರು ಆತ್ಮಶಕ್ತಿ ಸಹಕಾರಿಯನ್ನು ಅಭೂತಪೂರ್ವವಾಗಿ ಮತ್ತು ಶಿಸ್ತು ಬದ್ಧವಾಗಿ ಬೆಳೆಸಿದ್ದಾರೆ.…

Read More

ಉಳ್ಳಾಲ: ಮಾದಕ ವಸ್ತು ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಿಂದ ಬಂಧಿಸಿದ್ದಾರೆ.ಮೂಲತ: ಬೈಲುಕುಪ್ಪೆಯ ,ಹಾಲಿ ಕಾರವಾರ ಮುಂಡಗೋಡು 8ನೇ ಕ್ಯಾಂಪ್ ನ ನಿವಾಸಿ ತೆನ್ಝಿನ್ ಥಿನ್ಲೆಯ್ (30) ಬಂಧಿತ. ಈತ ಜೂ.20 ರಂದು ಸೋಮೇಶ್ವರ ಗ್ರಾಮದ ಸೋಮೇಶ್ವರ ಬೀಚ್ ಪರಿಸರದಲ್ಲಿ ಆರೋಪಿ ತೆನ್ಸಿನ್ ಥಿನ್ಲೆಯ್ ಎಂಬಾತನು ಅಲ್ಲಿನ ಪರಿಸರದಲ್ಲಿ ಓಡಾಡುವ ಸಾರ್ವಜನಿಕರನ್ನು ಗುಪ್ತವಾಗಿ ಆತನ ಬಳಿಗೆ ಕರೆದು ಆತನು ಕೈಯಲ್ಲಿ ಹಿಡಿದುಕೊಂಡಿದ್ದ ಪ್ಲಾಸ್ಟಿಕ್ ಕಟ್ಟೊಂದರಲ್ಲಿ ತುಂಬಿಸಿದ್ದ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದುದನ್ನು ಖಚಿತಪಡಿಸಿಕೊಂಡು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಬಂಧಿತನಿAದ ರೂ.7,000 ಮೌಲ್ಯದ ಸುಮಾರು 290 ಗ್ರಾಂ ತೂಕದ ನಿಷೇಧಿತ ಗಾಂಜಾ , 22 ಝಿಪ್‌ಲಾಕ್ ಟ್ರಾನ್ಪರೆಂಟ್ ಖಾಲಿ ಕವರುಗಳು, ಇಲೆಕ್ಟಾçನಿಕ್ ತೂಕ ಮಾಪನ ಹಾಗೂ ಒಂದು ಮೊಬೈಲ್ ಒಟ್ಟು ರೂ.22,510 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿ ವಿರುದ್ಧ ಎನ್ ಡಿಪಿಎಸ್ ಕಾಯಿದೆ 1985 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಪೊಲೀಸ್ ಆಯುಕ್ತ ಸುಧೀರ್ ಕುಮಾರ್…

Read More

ಉಳ್ಳಾಲ: ಕಾರ್ಮಿಕರು ದೈನಂದಿನ ಕೂಲಿಯ ಮೇಲೆ ಅವಲಂಬಿತರಾಗಿದ್ದು, ಕಾಮಗಾರಿ ನಿಲ್ಲುವುದರಿಂದ ಆರ್ಥಿಕವಾಗಿ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಕೆಲವರು ಊರಿಗೆ ಹಿಂತಿರುಗುವ ಪರಿಸ್ಥಿತಿಯಲ್ಲಿದ್ದಾರೆ. ನಿರ್ಮಾಣ ಉದ್ಯಮದ ಪುನಶ್ಚೇತನಕ್ಕಾಗಿ ಸರ್ಕಾರ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಕಾರ‍್ಯದರ್ಶಿ ಚಂದ್ರಹಾಸ್ ಪಿಲಾರ್ ಆಗ್ರಹಿಸಿದ್ದಾರೆ.ಅವರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಪ್ರಾರಂಭಿಸುವ ಬಗ್ಗೆ ತಾಲೂಕು ಉಪತಹಶೀಲ್ದಾರರಾದ ವಿನಯ ಎಸ್. ರಾವ್ ಇವರಿಗೆ ನಾಟೆಕಲ್ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿ ಬಳಿಕ ಮಾತನಾಡಿದರು.ಕೆಂಪು ಕಲ್ಲು ಮತ್ತು ಮರಳಿನ ಕೊರತೆಯು ಇದೀಗ ಕಟ್ಟಡ ಕಾರ್ಯಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಮಹತ್ತರವಾದ ತೊಂದರೆಯನ್ನು ಉಂಟುಮಾಡುತ್ತಿದೆ. ನಿರ್ಮಾಣ ಸಾಮಗ್ರಿಗಳ ಲಭ್ಯತೆ ಕಡಿಮೆಯಾದ ಹಿನ್ನೆಲೆಯಲ್ಲಿ, ಅನೇಕ ಕಟ್ಟಡ ಕಾಮಗಾರಿ ಸ್ತಬ್ಧಗೊಂಡಿವೆ. ಇದರಿಂದ ಕೆಲಸವಿಲ್ಲದೇ ನಿರುದ್ಯೋಗ ಸ್ಥಿತಿಗೆ ತಲುಪಿದ ಕಾರ್ಮಿಕರು ದಿನಸಿ ಖರ್ಚುಗಳನ್ನೂ ಕೊಳ್ಳಲಾಗದೆ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ಒದಗಿಸಬೇಕಿದೆ. ಈ…

Read More

ಮಂಗಳೂರು : ಆರ್ಥಿಕವಾಗಿ ಹಿಂದುಳಿದ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರತಿಷ್ಠಿತ ನರ್ಸಿಂಗ್‌ ಮತ್ತು ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿ ಮೀಫ್ ಮೂಲಕ ನೀಡಲಾಗುವ ವಿವಿಧ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್‌ ವಿವಿಧ ಕೋರ್ಸ್‌ಗಳ 60 ಉಚಿತ ಸೀಟ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್‌ಗಳ ವಿವರ : ಫಾರ್ಮಸಿ, ನರ್ಸಿಂಗ್, ಫಿಸಿಯೊಥೆರಪಿ, ಅಲೈಡ್ (ಬಿ.ಎಸ್ಸಿ-ಎಂಎಲ್‌ಟಿ ಎಂಐಟಿ, ಟ್ರಾಮಾ ಆಂಡ್ ರೆಸ್ಪಿರೇಟರಿ), ಪ್ಯಾರಾ ಮೆಡಿಕಲ್ (ಡಿಪ್ಲೊಮಾ-ಎಂಎಲ್‌ಟಿ, ಎಂಐಟಿ, ಒಟಿ, ಡಯಾಲಿಸಿಸ್, ಅಪ್ತಮಾಲಜಿ) ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಜೂನ್ 30ರ ಒಳಗಾಗಿ ಮೀಫ್ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳು ಮೀಫ್ ಕಚೇರಿಯಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಅಶ್ರಫ್ ಬಾವ (8792115666) ಮತ್ತು ಹೈದರ್ ಮರ್ಧಾಳ (88842 02361) ಇವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ತೊಕ್ಕೊಟಿನ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಭಾರತೀಯ ಸೇನೆಯ ಶೌರ್ಯದ ಅಪರೇಷನ್ ಸಿಂಧೂರದ ಸಂಭ್ರಮಕ್ಕಾಗಿ ವಿಜಯ ಸಿಂಧೂರ ಸಾಹಸ ಕಾರ್ಯಕ್ರಮವು ಜುಲೈ 6 ಆದಿತ್ಯವಾರದಂದು ಮಧ್ಯಾಹ್ನ 1.00 ಘಂಟೆಗೆ ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯಲಿದೆ.ಈ ಸಂಧರ್ಭದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ದೇಶಭಕ್ತಿ ಗೀತೆ, 5 ರಿಂದ 7 ತರಗತಿ ಸಬ್ ಜೂನಿಯರ್ ವಿಭಾಗ (9632097959), 8 ರಿಂದ 10 ನೇ ತರಗತಿ ಜೂನಿಯರ್ ವಿಭಾಗ ( 9880043406), ಪಿ.ಯು.ಸಿ., ಡಿಗ್ರಿ ಸೀನಿಯರ್ ( 9663106817), ಭಾಷಣ ಸ್ಪರ್ಧೆ, ವಿಷಯ: ಆಪರೇಷನ್ ಸಿಂಧೂರ ಸೇನೆಯ ವೀರ ಸಾಹಸ ಇದರ ಬಗ್ಗೆ, 5 ರಿಂದ 7 ನೇ ತರಗತಿ ಜೂನಿಯರ್ ವಿಭಾಗ (8123373042), 8 ರಿಂದ 10 ನೇ ತರಗತಿ ಸೀನಿಯರ್ ವಿಭಾಗ (9972562858) ಸಂಗೀತ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಒಂದು ನಿಮಿಷದ ವಿಡಿಯೋ ವನ್ನು ಪ್ರತೀ ವಿಭಾಗದಲ್ಲಿರುವ ನಂಬರ್ ಗೆ ವ್ಯಾಟ್ಸ್‌ಪ್ ಮೂಲಕ ಕಳುಹಿಸಬೇಕು. ಉತ್ತಮವಾಗಿರುವ…

Read More

ಉಳ್ಳಾಲ : ಕಾರಿನಲ್ಲಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ರಶೀದ್ ಮೊಯುದ್ದೀನ್ ಎಂದು ಗುರುತಿಸಲಾಗಿದೆ. ಅಬ್ದುಲ್ ರಶೀದ್ ಮೊಯುದ್ದೀನ್ ದೇರಳಕಟ್ಟೆಯ ಪನೀರ್ ನಿವಾಸಿಗಳಾದ ಇಲ್ಯಾಸ್ ಯಾನೆ ಎರಿಟಿಗಾ ಇಲ್ಯಾಸ್ ಹಾಗೂ ಅಟೋ ಅಬ್ಬಾಸ್ ಅವರಿಂದ ಮಾದಕವನ್ನು ಖರೀದಿ ಮಾಡಿ ಅದನ್ನು ಕಾರ್ ನಲ್ಲಿ ಸೋಮೇಶ್ವರ ರೆಸಾರ್ಟ್ ಒಂದರ ಬಳಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಎನ್ನಲಾಗಿದ್ದು ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಸಾರ್ಟ್ ಗೆ ದಾಳಿ ಮಾಡಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆರೋಪಿ ಅಬ್ದುಲ್ ರಶೀದ್ ಪರಾರಿ ಆಗಲು ಯತ್ನಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಕಾರಿನಲ್ಲಿದ್ದ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More