Author: UllalaVani

Kannada News From Coastal Karnataka

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಂಪನಕಟ್ಟ ಶಾಖೆ ಮತ್ತು ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.ಈ ಕಾರ್ಯಕ್ರಮವನ್ನು ನಿವೃತ್ತ ಸಹಕಾರಿ ಸಂಘಗಳ ಉಪ ನಿಬಂಧಕರಾದ ಚಂದ್ರಶೇಖರ್ ಸುವರ್ಣ ರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ಲಯನ್ಸ್ ಕ್ಲಬ್ ಮಂಗಳೂರು, ಆದಿತ್ಯ ಇದರ ಅಧ್ಯಕ್ಷರಾದ ಲಯನ್ ನರಸಿಂಹ ಪೈ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು…

Read More

ಹಾಸನ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಶುಕ್ರವಾರ ನಡೆದ ಟ್ರಕ್ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಈ ಹಿನ್ನೆಲೆ ಶುಕ್ರವಾರ ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಟ್ರಕ್ ಹರಿದು ಈ ಅವಘಡ ನಡೆದಿದೆ. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಮಂದಿ ಗಾಯಾಳುಗಳ ಪೈಕಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ…

Read More

ಮಂಗಳೂರು : ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಅಂದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ 60 ವರುಷದ ಒಳಗಿರಬೇಕು ಮತ್ತು ನಿಮ್ಮದೇ ಕಾಮಿಡಿ ಸ್ಕಿಟ್ ಇರಬೇಕು. ರೀಲ್ಸ್ ವಿಡಿಯೋಗಳಿಗೆ ಅವಕಾಶವಿಲ್ಲ. ಸೆಪ್ಟೆಂಬರ್ 15 ಸೋಮವಾರದಂದು ಬೆಳಗ್ಗೆ 9 ಗಂಟೆಗೆ, ಮಂಗಳೂರಿನ ಕೊಡಿಯಾಲಬೈಲ್ ನ ಶಾರದ ವಿದ್ಯಾಲಯ(ಕೇಂದ್ರ ಪಠ್ಯಕ್ರಮ ಆಧಾರಿತ)ದಲ್ಲಿ ಆಡಿಷನ್ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಪಾಸ್ಪೋರ್ಟ್…

Read More

ಮಂಗಳೂರು : ದ.ಕ. ಜಿಲ್ಲೆಯ ಟೈಕ್ವಾಂಡೋ ತಂಡಕ್ಕೆ ಮೈಸೂರು ವಿಭಾಗ ಮಟ್ಟದ ಟೈಕ್ವಾಂಡೋ ಚಾಂಪಿಯನ್ ಶಿಪ್- 2025ರಲ್ಲಿ 2 ಪದಕಗಳು ದೊರೆತಿವೆ. ಚಿಕ್ಕಮಗಳೂರು ಶತಮಾನೋತ್ಸವ ಒಳಾಂಗಣ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಟೈಕ್ವಾಂಡೋ ಚಾಂಪಿಯನ್ ಶಿಪ್-2025ರಲ್ಲಿ ದ.ಕ. ಜಿಲ್ಲೆಯ ಟೈಕ್ವಾಂಡೋ ತಂಡವು ಉತ್ತಮ ಪ್ರದರ್ಶನ ನೀಡಿದೆ. ಕ್ರೀಡಾಪಟುಗಳು 1 ಚಿನ್ನ ಹಾಗೂ 1 ಬೆಳ್ಳಿ ಸಹಿತ 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಹಮ್ಮದ್ ನಿಹಾಲ್ ನಝೀರ್ 69 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಮುಹಮ್ಮದ್ ಅಯಾನ್ 82 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಇಬ್ಬರು ಕ್ರೀಡಾಪಟುಗಳು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ – 2025ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಚಿನ್ನದ ಪದಕ ಗೆದ್ದ ಮುಹಮ್ಮದ್ ನಿಹಾಲ್ ನಝೀರ್ ಮಂಗಳೂರಿನ ಯೆನಪೋಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಪಿಸಿಎಂಸಿ ವಿಭಾಗದ ವಿದ್ಯಾರ್ಥಿಯಾಗಿದ್ದು, ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ದಿ.ಅಬ್ದುಲ್ ನಝೀರ್…

Read More

ಮಂಗಳೂರು : ಮಂಗಳೂರು ಮಹಾನಗರ ಪಾಲಿಕಾ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಇರುವ ಕಾರಣ ಸೆ.16ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ. ಹಾಗಾಗಿ ಸೆ.16ರಂದು ನಗರದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್ ಬೇಕರಿ ಬಳಿ ನಿಂತಿದ್ದರು. ಆ ಸಂದರ್ಭದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಭಿಸಿದ ಮಾಹಿತಿ ಮೇರೆಗೆ, ಪೊಲೀಸರು ಸೆಪ್ಟೆಂಬರ್ 12 ರಂದು ಮಿನ್ನತ್ ಅವರನ್ನು ಬಂಧಿಸಿ ಕದ್ದ ಸರವನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ, ಜುಲೈ 9 ರಂದು ಕೆಎಂಎಸ್ ಕನ್ವೆನ್ಷನ್…

Read More

ಕಣ್ಣೂರು: ಹೆಬ್ಬಾವು ಕೊಂದು ಪದಾರ್ಥ ಮಾಡಿ ತಿಂದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಮಾದಮಂಗಲ ಮುಂಡಕ್ಕೆ ನಿವಾಸಿಗಳಾದ ಯು.ಪ್ರಮೋದ್(40), ಬಿನೀಶ್ (37) ಬಂಧಿತರು. ರಹಸ್ಯ ಮಾಹಿತಿಯನ್ವಯ ಅರಣ್ಯ ಅಧಿಕಾರಿಗಳು ಪ್ರಮೋದ್‌ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಹೆಬ್ಬಾವು ಪದಾರ್ಥ, ಅದರ ಮೂಳೆಗಳು, ಪಾತ್ರೆಗಳು ಲಭಿಸಿತ್ತು. ಪ್ರಮೋದ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಲಭಿಸಿದ ಮಾಹಿತಿಯಂತೆ ಬಿನೀಶ್ ಸೆರೆಯಾಗಿದ್ದಾನೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸಲಾಗಿದ್ದು ರಿಮಾಂಡ್ ವಿಧಿಸಲಾಗಿದೆ.

Read More

ತೊಕ್ಕೊಟ್ಟು: ಕುಸ್ತಿ, ಪವರ್ ಲಿಫ್ಟಿಂಗ್, ದೇಹರ್ದಾರ್ಢ್ಯ, ಕಬಡ್ಡಿ ಮತ್ತು ಹಗ್ಗಜಗ್ಗಾಟ ಕ್ರೀಡೆಯಲ್ಲಿ ಮುಂಚೂಣಿಯಲ್ಲಿರುವ ತೊಕ್ಕೊಟ್ಟು ಭಟ್ನಗರದ ಶ್ರೀ ಶಕ್ತಿಭಾರತ್ ವ್ಯಾಯಾಮ ಶಾಲೆಗೆ ಸುವರ್ಣ ಸಂಭ್ರಮ, ಆ ಪ್ರಯುಕ್ತದ.ಕ. ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ಮತ್ತು ದ.ಕ. ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ದ.ಕ. ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಪುರುಷರ ಮತ್ತು ಮಹಿಳೆಯರ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್-2025 (CLASSIC & EQUIPPED) (ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಮಾಸ್ಟರ್ಸ್) ಅ.24, 25, 26 ರಂದು ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ಜರಗಲಿದ್ದು, ಇದರ ವಿಜ್ಞಾಪನಾ ಪತ್ರವನ್ನು ಹಿರಿಯ ಮುಖಂಡ ಸೀತಾರಾಮ ಬಂಗೇರ ಬಿಡುಗಡೆಗೊಳಿಸಿದರು.ಈ ಸ್ಪರ್ಧಾಕೂಟಕ್ಕೆ ರಾಜ್ಯದಿಂದ ಸುಮಾರು 1600 ಕ್ರೀಡಾಪಟುಗಳು ಆಗಮಿಸಲಿದ್ದಾರೆ. ದ.ಕ ಜಿಲ್ಲೆಯ ಉಳ್ಳಾಲದ ರಾಣಿ ಅಬ್ಬಕ್ಕನ ಐತಿಹಾಸಿಕ ಪ್ರದೇಶದಲ್ಲಿ 1976ರಲ್ಲಿ ದಿ. ಶೇಖರ್ ಬಂಗೇರ ಭಟ್ನಗರ ತೊಕ್ಕೊಟ್ಟು ಇವರ ಮಾರ್ಗದರ್ಶನದಲ್ಲಿ ಪ್ರಾರಂಭಗೊಂಡ ಶ್ರೀ ಶಕ್ತಿಭಾರತ್ ವ್ಯಾಯಾಮ ಶಾಲೆ (ಭಟ್ನಗರ) ಉಳ್ಳಾಲಬೈಲ್, ತೊಕ್ಕೊಟ್ಟು ಭಾಗದಲ್ಲಿ…

Read More

ಮಂಗಳೂರು: ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತ, ಬಲ್ಮಠ, ಮಂಗಳೂರು ತನ್ನ 50ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುವರ್ಣ ಮಹೋತ್ಸವದ ಅಂಗವಾಗಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದೆ.ಸಂಘದ ವಾರ್ಷಿಕ ಮಹಾಸಭೆಯ ಅಂಗವಾಗಿ ಸೆಪ್ಟೆಂಬರ್ 21, 2025ರಂದು ಬೆಳಿಗ್ಗೆ 8.00ರಿಂದ ಮಧ್ಯಾಹ್ನ 12.30ರವರೆಗೆ ಜಪ್ಪು ಸೈಂಟ್ ಜೋಸೇಫ್ ಸೆಂಟಿನರಿ ಮೆಮೋರಿಯಲ್ ಹಾಲ್‌ನಲ್ಲಿ ಈ ಶಿಬಿರ ನಡೆಯಲಿದೆ.ಡಾ. ಕವಿತ ಡಿ’ಸೋಜ, ತಜ್ಞರು, ಪ್ರಸೂತಿ ಮತ್ತು ಹೆರಿಗೆ ವಿಭಾಗ, ಎ.ಜೆ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಅವರ ನೇತೃತ್ವದಲ್ಲಿ, ಹಾಗೂ ಎ.ಜೆ. ಕಣ್ಣಿನ ವಿಭಾಗದ ಸಹಕಾರದೊಂದಿಗೆ ಉಚಿತ ಕಣ್ಣಿನ ಪರೀಕ್ಷೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ನಡೆಯಲಿದೆ.ಕಾರ್ಯಕ್ರಮವನ್ನು ಬೆಳಿಗ್ಗೆ 8.30ಕ್ಕೆ ಸಂಘದ ಅಧ್ಯಕ್ಷರಾದ ವಿಧಾನಪರಿಷತ್‌ ಸದಸ್ಯ ಐವನ್ ಡಿಸೋಜ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ಆಸ್ಪತ್ರೆಯ ಕಣ್ಣಿನ ವಿಭಾಗದ ಮುಖ್ಯಸ್ಥರು ಭಾಗವಹಿಸಲಿದ್ದಾರೆ.ಬೆಳಿಗ್ಗೆ 8.00ರಿಂದ ನೋಂದಣಿ ಪ್ರಾರಂಭವಾಗಲಿದ್ದು, ಆಗಮಿಸುವ ಪ್ರತಿಯೊಬ್ಬರಿಗೂ ನೋಂದಣಿ ಕಾರ್ಡ್ ನೀಡಲಾಗುವುದು. ನೋಂದಣಿಗೆ ಆಧಾರ್ ಕಾರ್ಡ್…

Read More

ಮುಡಿಪು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ಸಹಯೋಗದಲ್ಲಿ ರಾಣಿ ಅಬ್ಬಕ್ಕಳ 500ನೇ ಜಯಂತಿಯ ಪ್ರಯುಕ್ತ ‘ಅಬ್ಬಕ್ಕ 500 ವರ್ಷದ 51ನೇ ಎಸಳು’ ಕಾರ್ಯಕ್ರಮವು ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಿತು. ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಮನೋಹರ್ ಕುರ್ನಾಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.ಮೈತ್ರಿ ಭಟ್ ಅಬ್ಬಕ್ಕನ ಜೀವನ ಚರಿತ್ರೆಯನ್ನು, ಅವಳ ಸಾಧನೆಯನ್ನು ವಿಶ್ಲೇಷಿಸಿದರು. ಹಾಗೂ ಅಂತಹ ವ್ಯಕ್ತಿತ್ವ ನಮಗೆ ಮಾರ್ಗದರ್ಶನವನ್ನು ಆದರ್ಶವನ್ನು ನೀಡುತ್ತದೆ ನಾವು ಅವಳನ್ನು ಅನುಸರಿಸಬೇಕು ಹಾಗೂ ತುಳುನಾಡಿನ ವೀರರಾಣಿಯಾದ ಅಬ್ಬಕ್ಕಳ ಚರಿತ್ರೆಯನ್ನು ಅಜರಾಮರವಾಗಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಕವಿತಾ ಎಂ.ಎಲ್. ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಡಾ. ಶೇಷಪ್ಪ ಕೆ., ಕಾರ್ಯಕ್ರಮದ ಸಂಯೋಜಕರಾದ ಕಾಜಲ್ ಹಾಗೂ ತನುಜ ಎಂ. ಉಪಸ್ಥಿತರಿದ್ದರು. ಚೈತ್ರಾ ಕಾರ್ಯಕ್ರಮ ನಿರೂಪಿಸಿದರು. ಕಾಜಲ್ ಸ್ವಾಗತಿಸಿ,…

Read More