Author: UllalaVani

Kannada News From Coastal Karnataka

ಮುನ್ನೂರು: ಮಕ್ಕಳ ಉತ್ತಮ ಶಿಕ್ಷಣ ಹಾಗೂ ಸುಗಮ ಕಲಿಕೆಗೆ ನೆರವಾಗುವ ಉದ್ದೇಶದಿಂದ ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಕುತ್ತಾರ್-ಮುನ್ನೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ, ಮುನ್ನೂರುಗೆ ಬೆಂಚ್ ಹಾಗೂ ಕುರ್ಚಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಸೌಕರ್ಯ ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟ್ರಸ್ಟ್ ಈ ಸಮಾಜಮುಖಿ ಸೇವಾ ಕಾರ್ಯವನ್ನು ಕೈಗೊಂಡಿದೆ. ಸಂಸ್ಥೆಯ ಈ ಕೊಡುಗೆಯನ್ನು ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿ, ಟ್ರಸ್ಟ್‌ನ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Read More

ಉಳ್ಳಾಲ, ಜೂನ್ 5: ಮಾರುತಿ ಯುವಕ ಮಂಡಲ (ರಿ.) ಹಾಗೂ ಮಾರುತಿ ಜನಸೇವಾ ಸಂಘ, ಮೊಗವೀರ ಪಟ್ನ, ಉಳ್ಳಾಲ ಇದರ 2025-26ನೇ ಸಾಲಿನ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಅನಿಲ್ ಚರಣ್ ಉಳ್ಳಾಲ ಆಯ್ಕೆಯಾಗಿದ್ದಾರೆ. ಪ್ರಧಾನ ಸಂಚಾಲಕರಾಗಿ ಸುಧೀರ್ ವಿ. ಅಮೀನ್, ಗೌರವ ಅಧ್ಯಕ್ಷರಾಗಿ ಕಿರಣ್ ಕುಮಾರ್, ಉಪಾಧ್ಯಕ್ಷರಾಗಿ ಪ್ರಶಾಂತ್ ಬಿ. ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಕಪಿಲ್ ಎಸ್. ಬಂಗೇರ, ಕೋಶಾಧಿಕಾರಿಯಾಗಿ ತಿಲಕ್ ಎಸ್. ಬಂಗೇರ, ಕ್ರೀಡಾ ಕಾರ್ಯದರ್ಶಿಯಾಗಿ ಮಹೇಶ್ ಸಾಲ್ಯಾನ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪವನ್ ಬಂಗೇರ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ವರದರಾಜ ಬಂಗೇರ, ಸಂದೀಪ್ ಪುತ್ರನ್, ಅಶ್ವಿನ್ ಕೋಟ್ಯಾನ್, ದಿನೇಶ್ ಕರ್ಕೇರ, ವಾಸುದೇವ ಕರ್ಕೇರ, ಅಜಿತ್ ಸುವರ್ಣ ಹಾಗೂ ಪ್ರಕಾಶ್ ತಿಂಗಳಾಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಲೋಕನಾಥ್ ಕೋಟ್ಯಾನ್, ಚೆನ್ನಪ್ಪ ಅಮೀನ್, ರಘವೀರ್ ಗುರಿಕಾರ, ರೂಪೇಶ್, ರಂಜಿತ್,…

Read More

ಮುಡಿಪು, ಜೂನ್ 5: ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೂ ಹಾಕುವ ಕಲ್ಲು ಪಿಎಂ ಶ್ರೀ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಜನ ಶಿಕ್ಷಣ ಟ್ರಸ್ಟ್ ದಾನಿಗಳ ನೆರವಿನಿಂದ ₹2.40 ಲಕ್ಷ ವೆಚ್ಚದಲ್ಲಿ ಅತ್ಯಾಧುನಿಕ STEM (Science, Technology, Engineering and Mathematics) ಪ್ರಯೋಗಾಲಯವನ್ನು ಒದಗಿಸಿದೆ. STEM ಲ್ಯಾಬ್ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಗಣಿತ ವಿಷಯಗಳನ್ನು ಪ್ರಾಯೋಗಿಕವಾಗಿ ಕಲಿಯಲು ನೆರವಾಗುವ ಆಧುನಿಕ ಕಲಿಕಾ ವ್ಯವಸ್ಥೆಯಾಗಿದೆ. ಇಲ್ಲಿ ವಿದ್ಯಾರ್ಥಿಗಳು ಸ್ವತಃ ಉಪಕರಣಗಳನ್ನು ಬಳಸಿ ವಿವಿಧ ಪ್ರಯೋಗಗಳನ್ನು ನಡೆಸುವ ಮೂಲಕ ಸಂಕೀರ್ಣವಾದ ಗಣಿತ ಮತ್ತು ವಿಜ್ಞಾನ ತತ್ವಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ದೊರೆತು ವೈಜ್ಞಾನಿಕ ಮನೋಭಾವ ಹಾಗೂ ಸೃಜನಶೀಲತೆ ಬೆಳೆಯಲು ಸಹಕಾರಿಯಾಗುತ್ತದೆ. ಎಲ್‌ಕೆಜಿ ಯಿಂದ 8ನೇ ತರಗತಿವರೆಗೆ ಒಟ್ಟು 586 ವಿದ್ಯಾರ್ಥಿಗಳಿರುವ ಈ ಶಾಲೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಹೊಸ STEM ಲ್ಯಾಬ್ ವಿಶೇಷವಾಗಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚು…

Read More

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿರುವ 5 ಗ್ಯಾರಂಟಿಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದು ಸ್ವಾಗತಾರ್ಹ ಕ್ರಮ. ಆದರೆ ಕೇವಲ ಉಚಿತ ಬಸ್ ಪಾಸ್ ನೀಡುವುದರಿಂದ ಮಾತ್ರ ಸಮಾಜದ ಅಭಿವೃದ್ಧಿ ಸಂಪೂರ್ಣವಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ಕರ್ನಾಟಕದ ಪ್ರತಿಯೊಬ್ಬ ನಾಗರಿಕರಿಗೆ ಉಚಿತ ಮತ್ತು ಉತ್ತಮ ಆರೋಗ್ಯ ಸೇವೆ, ಹಾಗೂ ವಿದ್ಯಾವಂತರಿಗೆ ಉದ್ಯೋಗಾವಕಾಶಗಳ ಭರವಸೆ ನೀಡಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಎಂಬ ಮೂರು ಮೂಲಭೂತ ಹಕ್ಕುಗಳನ್ನು ಸರ್ಕಾರ ಪರಿಣಾಮಕಾರಿಯಾಗಿ ಒದಗಿಸಿದರೆ, ಗ್ಯಾರಂಟಿ ಯೋಜನೆಗಳ ಉದ್ದೇಶ ಮತ್ತಷ್ಟು ಸಾರ್ಥಕವಾಗಲಿದೆ. “ಉಚಿತ ಬಸ್ ಪಾಸ್ ವಿದ್ಯಾರ್ಥಿಯನ್ನು ಶಾಲೆಗೆ ತಲುಪಿಸುತ್ತದೆ; ಉಚಿತ ಶಿಕ್ಷಣ ಅವನ ಭವಿಷ್ಯವನ್ನು ರೂಪಿಸುತ್ತದೆ. ಉದ್ಯೋಗ ಅವನ ಜೀವನವನ್ನು ಕಟ್ಟಿಕೊಡುತ್ತದೆ.” ಉಸ್ಮಾನ್ ಅಲ್ತಾಫ್

Read More

ಜಾಗತಿಕ ಯುಧ್ಧ ಪರಿಣಾಮ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಾಗಿ ಕೃಷಿ ವಲಯಕ್ಕೆ ದೊಡ್ಡ ಹೊಡೆತ ಉಂಟಾಗಿದೆ. ಈಗಾಗಲೆ ಗದ್ದೆ ಉಳುಮೆ,ಅಡಿಕೆ ತೋಟಗಳಿಗೆ ಮದ್ದು ಸಿಂಪಡಣೆ,ಅಡಿಕೆ ತೋಟಗಳಲ್ಲಿ ಹಾಗೂ ಇತರ ಕಡೆ ಕಳೆನಾಶ ಸಿಂಪಡಣೆ ಹಾಗೂ ಇತರ ಕೆಲಸಗಳು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಅವಲಂಬಿತವಾಗಿದ್ದು ತೈಲ ಬೆಲೆ ಏರಿಕೆಯಿಂದಾಗಿ ರೈತರಿಗೆ ಹಾಗೂ ಕೃಷಿವಲಯಕ್ಕೆ ನಷ್ಟ ಉಂಟಾಗಿದೆ.ಕೂಲಿಯಾಳುಗಳ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಿನ್ನಡೆಗೊಂಡಿದ್ದರೂ ರೈತರು ಯಾಂತ್ರಿಕ ಕೃಷಿ ಚಟುವಟಿಕೆಯತ್ತ ಗಮನ ಹರಿಸಿದ್ದರು.ಕೃಷಿ ಸರಕು ಸಾಗಣೆಯ ವಾಹನಗಳಿಗೆ ದುಬಾರಿ ಖರ್ಚು ತಗುಲಿದ್ದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ‌.ಆದ್ದರಿಂದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಕೃಷಿ ಯಂತ್ರೋಪಕರಣ ಹಾಗೂ ವಾಹನಗಳಿಗೆ ಡಿಸೇಲ್ ಸಬ್ಸಿಡಿ ನೀಡಬೇಕೆಂದು ದ.ಕ ಜಿಲ್ಲೆಯ ಸಂಸದರು ಹಾಗೂ ಶಾಸಕರಿಗೆ ಮನವಿ ಮಾಡುತ್ತ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಇವರಲ್ಲಿ ಮನವಿ ಮಾಡಲಾಗುವುದು ಎಂದು ಕ.ರಾ.ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ ನಡಿಕಂಬಳಗುತ್ತು ಹಾಗೂ ಕ.ರಾ.ರೈತ ಸಂಘ ದ.ಕ ಜಿಲ್ಲಾಧ್ಯಕ್ಷರಾದ ಶ್ರೀಧರ…

Read More

ಬೆಂಗಳೂರು, ಜೂನ್​​ 04: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ​​ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸು ಪಡೆದುಕೊಂಡಿವೆ. ಸಿಎಂ ಡಿಕೆಶಿ ಜೊತೆ ನಿನ್ನೆ (ಜೂನ್​ 03) ಡಿಸಿಎಂ ಆಗಿ ಡಾ.ಜಿ. ಪರಮೇಶ್ವರ್​​ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದಲ್ಲಿ ಕೆಲ ನಾಯಕರಷ್ಟೇ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಸಾಕಷ್ಟು ಚರ್ಚೆ ಬಳಿಕ ಈ ನಿರ್ಧಾರಕ್ಕೆ ಕಾಂಗ್ರೆಸ್​​ ಹೈಕಮಾಂಡ್​​ ಬಂದಿತ್ತು. ಹೀಗಾಗಿ ರಾಜ್ಯ ಕಾಂಗ್ರೆಸ್​​ ನಾಯಕರ ನಡುವೆಯೇ ಹತ್ತು ಹಲವು ಲೆಕ್ಕಾಚಾರಗಳು ಶುರುವಾಗಿವೆ. ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಹೀಗಾಗಿ ಸಂಭವನೀಯ ಖಾತೆಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರು ಸಚಿವ ಎಂ.ಬಿ.ಪಾಟೀಲ್, ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ. ಹೈಕಮಾಂಡ್ ಹೇಳಿದ್ದನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇವೆ ಎಂದಿದ್ದಾರೆ. ಯಾವುದೇ ಖಾತೆಯನ್ನು ಕೊಟ್ಟರೂ ನಾನು ನಿಭಾಯಿಸುತ್ತೇನೆ. ಖಾತೆ ಯಾವುದು ಅನ್ನೋದು ಮುಖ್ಯವಲ್ಲ, ಕೆಲಸ…

Read More

ಬೆಂಗಳೂರು : ರಾಜ್ಯ ರಾಜಕಾರಣದ ಪ್ರಮುಖ ಸ್ಥಿತ್ಯಂತರದಲ್ಲಿ, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಲಂಕರಿಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವಕುಮಾರ್ ಅವರ ಹೊಸ ಸಂಪುಟಕ್ಕೆ ಕರಾವಳಿಯ ಪ್ರಭಾವಿ ನಾಯಕ ಹಾಗೂ ಮಾಜಿ ಸ್ಪೀಕರ್ ಯು.ಟಿ.ಖಾದರ್ ಅವರು ಸಚಿವರಾಗಿ ಸೇರ್ಪಡೆಗೊಳ್ಳುವ ಮೂಲಕ ಬಲ ತುಂಬಿದ್ದಾರೆ. ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಳ್ಳಾಲ ಕ್ಷೇತ್ರವಾಗಿ ಪ್ರಚಲಿತವಾಗಿದ್ದ, ಈಗಿನ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2007ರಲ್ಲಿ ಶಾಸಕರಾಗಿದ್ದ ಯು.ಟಿ. ಫರೀದ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ದಿವಂಗತ ಫರೀದ್ ಅವರ ಪುತ್ರ ಯು.ಟಿ.ಖಾದ‌ರ್ ಅವರು ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದವರು. ಅಲ್ಲಿಂದ ಇಲ್ಲಿಯವರೆಗೆ ಅಂದರೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರನಾಗಿ ಮಂಗಳೂರು ಕ್ಷೇತ್ರವನ್ನು ಯು.ಟಿ.ಖಾದ‌ರ್ ಪ್ರತಿನಿಧಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಆಡಳಿತದಲ್ಲಿ ಹಲವು ಮಂತ್ರಿಗಿರಿಯ ಜತೆಗೆ ಅತ್ಯುನ್ನತ ಸ್ಥಾನವಾದ ವಿಧಾನಸಭಾ ಸ್ಪೀಕ‌ರ್ ಹುದ್ದೆಯನ್ನು ಸುಮಾರು…

Read More

ದುಬೈ,ಜೂ. 04: ಮೇ 30 ರ ಮಧ್ಯಾಹ್ನ ದುಬೈ ನ ಫಿಶೇರ್ ಮನ್ಸ್ ಹಬ್ ನಲ್ಲಿ ಹೊಸ ತುಳು ಚಿತ್ರ ‘ಕಜ್ಜ’ದ ಆಡಿಯೋ, ಟ್ರೇಲರ್ ಮತ್ತು ಸಂಗೀತ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಹೆಚ್ಚು ನಿರೀಕ್ಷಿತ ತುಳು ವೈಶಿಷ್ಟ್ಯಪೂರ್ಣ ಚಿತ್ರ ‘ಕಜ್ಜ’ ತನ್ನ ಆಡಿಯೋ, ಟ್ರೇಲರ್ ಮತ್ತು ಸಂಗೀತದ ಅದ್ದೂರಿ ಬಿಡುಗಡೆಯನ್ನು ದುಬೈನಲ್ಲಿ ಏಕಾಲದಲ್ಲಿ ನೆರವೇರಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಸಮಾರಂಭದಲ್ಲಿ ಪ್ರಮುಖ ಉದ್ಯಮಿಗಳು, ಸಮುದಾಯದ ಗಣ್ಯರು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.ಈ ಚಿತ್ರವನ್ನು ನಿರ್ಮಾಪಕ ವಿಶಾಂತ್ ಮೆನೇಜಸ್ ನಿರ್ಮಿಸಿದ್ದು, ಜಿಷ್ಣು ಮೆನನ್ ಮತ್ತು ಸಿದ್ಧಾರ್ಥ್ ಶೆಟ್ಟಿ ಅವರ ನಿರ್ದೇಶಕ ದ್ವಯರು ನಿರ್ದೇಶಿಸಿದ್ದಾರೆ.ಗಣ್ಯರ ಸಮ್ಮಿಲನಸಮಾರಂಭಕ್ಕೆ ಮುಖ್ಯ ಅತಿಥಿಗಳು ಮತ್ತು ಗೌರವಾನ್ವಿತ ಆಹ್ವಾನಿತರ ಅದ್ದೂರಿ ಸಮೂಹವು ಕಳೆ ತಂದಿತು. ಪ್ರಮುಖ ವ್ಯಕ್ತಿಗಳಾದ ಡಾ. ಬಿ.ಆರ್. ಶೆಟ್ಟಿ, ಸರ್ವೋತ್ತಮ ಶೆಟ್ಟಿ, ಜೇಮ್ಸ್ ಮೆಂಡೋನ್ಸಾ, ವಿನೋದ್ ಶೆಟ್ಟಿ, ದಿವಾಕರ್ ಶೆಟ್ಟಿ, ಓಸ್ವಾಲ್ಡ್ ರೋಡ್ರಿಗಸ್ – ಸಿಇಒ, ಅಸೈಡ್ ಲಾಜಿಸ್ಟಿಕ್ಸ್, ಆದಿತ್…

Read More

ಬೆಂಗಳೂರು, ಜೂ. 04;  ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ ಆಶಿರ್ವಾದ ಪಡೆದು ತೆರಳಿದರು.ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್‌ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

Read More

ಉಡುಪಿ, ಜೂ. 04: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ. ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Read More