Author: UllalaVani

Kannada News From Coastal Karnataka

ಮಂಗಳೂರು, ಜ. 29: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು 1.95 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಸೈಯದ್ ಅಲಿ (40), ಬಜ್ಪೆ ನಿವಾಸಿ ವಾಜಿದ್ ಜೆ ಅಲಿಯಾಸ್ ವಾಜಿ (27) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಳಾಯಿ ಗ್ರಾಮದ ಯಶೋದಾ ಕ್ಲಿನಿಕ್ ಬಳಿಯ ನಿವಾಸಿ ಸುರೇಶ್ ಅವರ ಪತ್ನಿ ಅಮಿತಾ (43) ದೂರು ದಾಖಲಿಸಿದ್ದಾರೆ. ದೈವ ವಿಗ್ರಹಗಳು ಮತ್ತು ಸಂಬಂಧಿತ ಪೂಜಾ ಸಾಮಗ್ರಿಗಳನ್ನು ತನ್ನ ತಾಯಿಯ ಮನೆಯಲ್ಲಿ ಇಡಲಾಗಿತ್ತು, ಅಲ್ಲಿ ಜನರು ವಾಸಿಸುತ್ತಿರಲಿಲ್ಲ ಪೂಜೆ ಮತ್ತು ದೀಪಗಳನ್ನು ಬೆಳಗಿಸಲು ಮಾತ್ರ ತೆರೆಯಲಾಗುತ್ತಿತ್ತು ಮತ್ತು ನಂತರ ಬೀಗ ಹಾಕಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.ಡಿಸೆಂಬರ್ 26, 2025 ರ ರಾತ್ರಿ, ಅಪರಿಚಿತ ವ್ಯಕ್ತಿಗಳು ಮನೆಯ ಛಾವಣಿಯ ಹಂಚುಗಳನ್ನು ತೆಗೆದು, ಮನೆಯೊಳಗೆ ನುಗ್ಗಿ ಪಸಪ್ಪ ದೈವದ ತಾಮ್ರದ ವಿಗ್ರಹ, ಮಂತ್ರದೇವತೆಯ…

Read More

ಮಂಗಳೂರು,ಜ.28;ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು‌. ಮಾಡಿ.ಮಾದಕ ದ್ರವ್ಯ ಸೇವನೆ ಒಂದು ಪಿಡುಗು.ಮಕ್ಕಳು ಮಾದಕ ದ್ರವ್ಯ ಸೇವನೆ ಮಾಡುವವರು ಬಂದರೆ ಅವರ ಮಾಹಿತಿ ಗೌಪ್ಯವಾಗಿಟ್ಟು ಅವರಿಗೆ ಚಿಕಿತ್ಸೆ ಗೆ ಸಹಾಯ ಮಾಡಲಾಗುವುದು.ನಗರದಲ್ಲಿಮಾದಕ ಪದಾರ್ಥಗಳ ಪೂರೈಕೆ ಮಾಡುವ ವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಕೈ ಗೊಳ್ಳಲಾಗುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜ ನಿಕರ ಸಹಕಾರ ಅಗತ್ಯ ಎಂದರು.ಜೊತೆಗೆ ಸೈಬರ್ ಕ್ರೈಮ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗುತ್ತಿದೆ.ಈ ಬಗ್ಗೆ ಸಾರ್ವಜನಿಕರುಭಯ ಪಡಬಾರದು ಧೈರ್ಯ ವಾಗಿ ಎದುರಿಸಬೇಕು.ಪೊಲೀಸರ ಸಹಾಯ ಪಡೆದುಕೊಳ್ಳಬೇಕು.ಇದುವರೆಗೆ…

Read More

ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಣೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಫೆ.2ರಂದು ಬೆಳಗ್ಗೆ 8.00ಕ್ಕೆ ಆಚಾರ್ಯರ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ನಾನಾ ಧಾರ್ಮಿಕ ಕಾರ್ಯಕ್ರಮ. ರಾತ್ರಿ 7.00ರಿಂದ : ಸ್ಥಳಿಯ ಪ್ರತಿಭೆಗಳಿಂದ ಹಾಗೂ ನಾನಾ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ವೈಭವ. ಫೆ.3ರಂದು ಬೆಳಗ್ಗೆ 8.00ರಿಂದ ಮಹಾಮೃತ್ಯುಂಜಯ ಯಾಗ, ಸಂಜೆ 5.00ರಿಂದ ನಾಗಾಲಯ ವಸ್ತ್ವಾದಿ, ನಾಗ ಬಿಂಬಾಧಿವಾಸ, ಪ್ರೋಕ್ತಹೋಮ. ರಾತ್ರಿ 7.00ರಿಂದ ಕಲ್ಲಡ್ಕ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ. ಫೆ. 4ರಂದು ಬೆಳಗ್ಗೆ 8.00ರಿಂದ: ನವಗ್ರಹ ಶಾಂತಿ ಹೋಮ ಬಳಿಕ ನೂತನ ನಾಗಾಲಯದಲ್ಲಿ ಶ್ರೀ ನಾಗದೇವರ ಪ್ರತಿಷ್ಠೆ, ನಾಗದರ್ಶನ. 5.30ರಿಂದ : ಆಶ್ಲೇಷಾಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಬಿಂಬ…

Read More

ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ಹೃದಯ ಸಂಬಂದಿ ಕಾಯಿಲೆಯಿಂದ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಕೊಣಾಜೆಯ ಗ್ರೀನ್ ವ್ಯೂ ಪರಿಸರದಲ್ಲಿ ವಾಸವಾಗಿದ್ದರು.ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅನೇಕ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. 1976 ರಿಂದ 1981 ವರೆಗೆ ಮಂಗಳೂರಿನ ಸರಕಾರಿ ಕಾಲೇಜು (ಈಗಿನ ವಿ. ವಿ ಕಾಲೇಜು) ಅಲ್ಲಿ ಉಪಾನ್ಯಾಸಕರಾಗಿ ನಂತರ ಬೆಂಗಳೂರಿನ ಸರಕಾರಿ ಕಾಲೇಜಿನಲ್ಲಿ ಮತ್ತು ಪ್ರತಿಷ್ಠಿತ ಮಹಾರಾಣಿ ಕಾಲೇಜಿನಲ್ಲಿ ಸೇವೆಸಲ್ಲಿಸಿ ಬಳಿಕ ದಿನಗಳಲ್ಲಿ ಹೆಬ್ರಿಯ ಸರಕಾರಿ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿ, ಕೊನೆಗೆ ಬೆಂಗಳೂರಿನ ಪದವಿಕಾಲೇಜು ಪ್ರಿನ್ಸಿಪಾಲ್ ಆಗಿ ನಿವೃತ್ತಿ ಹೊಂದಿದ್ದರು. ಲೇಖಕರೂ ಕವಿಗಳು ಅದ ಇವರು ತಮ್ಮ ನಿವೃತ್ತಿ ನಂತರ ಕೂಡ ಹಲವು ಶಾಲಾ ಕಾಲೇಜು ಸಂಘ ಸಂಸ್ಥೆಗಳಿಗೆ ತೆರಲಿ ಸಂಖ್ಯಾ ಶಾಸ್ತ್ರದ ಬಗ್ಗೆ ಉಚಿತ ಶಿಕ್ಷಣ ನೀಡುತಿದ್ದರು.ಕಾಲೇಜಿನಲ್ಲಿ ರಾಂಕ್ ವಿದ್ಯಾರ್ಥಿಯಾಗಿದ್ದ ಅವರು…

Read More

ಮಂಗಳೂರು, ಜ. 28: ಸ್ವತಂತ್ರ್ಯ ಹೋರಾಟದಲ್ಲಿ ಮೂಡಿ ಬಂದ ಕಾರ್ಮಿಕ ಚಳುವಳಿ ಬ್ರೀಟೀಷರ ವಿರುದ್ಧ ಪ್ರಬಲ ಹೋರಾಟ,ತ್ಯಾಗ ಬಲಿದಾನದ ಪರಂಪರೆಯಿಂದಾಗಿ ಕಾರ್ಮಿಕ ಕಾನೂನುಗಳು ಅಸ್ಥಿತ್ವಕ್ಕೆ ಬಂದಿದೆ. ಸಂವಿಧಾನದಲ್ಲಿ ಕೂಡಾ ಈ ಎಲ್ಲಾ ಆಶಯಗಳು ಪ್ರತಿಫಲನಗೊಂಡಿದೆ.ಮೂಲಭೂತ ಹಕ್ಕುಗಳು,ರಾಜ್ಯ ಸರಕಾರಗಳ ನಿರ್ಧೇಶಕ ಸೂತ್ರಗಳು ಕಾರ್ಮಿಕ ಹೋರಾಟದ ಬಳುವಳಿಗಳು. ಆದರೆ ದೇಶವನ್ನಾಳುವ ಕೇಂದ್ರ ಸರ್ಕಾರ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಕಾರ್ಮಿಕ ಕಾನೂನುಗಳನ್ನು ಬಲಿ‌ತೆಗೆದುಕೊಂಡಿದೆ ಎಂದು CITU ದ.ಕ ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಹೇಳಿದರು. ಅವರು ಕಾರ್ಮಿಕ ಸಂಹಿತೆಗಳ ವಿರುದ್ದ ಮೂಡಬಿದ್ರೆಯಿಂದ ಮಂಗಳೂರಿಗೆ ಸಂಚರಿಸಲಿರುವ ಪಾದಯಾತ್ರೆಯನ್ನು‌ ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.1990ರಲ್ಲಿ ಕಾಂಗ್ರೆಸ್ಸು ಸರಕಾರ ಉದಾರೀಕರಣ , ಖಾಸಗೀಕರಣ, ಜಾಗತೀಕರಣ ನೀತಿಗಳನ್ನು ಜಾರಿಗೆ ತಂದು ಖಾಸಗೀಕರಣ ನೀತಿಗೆ ನಾಂದಿ ಹಾಡಿತು.ಈಗಿನ ನರೇಂದ್ರ ಮೋದಿ ಸರಕಾರ ಸರಕಾರಿ ಬಂಡವಾಳ, ಸಾರ್ವತ್ರಿಕ ರಂಗಗಳು, ವಿಮಾರಂಗ ಎಲ್ಲಾವನ್ನು ಖಾಸಗೀ ಕಂಪನಿಗಳಿಗೆ ಮಾರಾಟ ಮಾಡಿದೆ.ಕಾರ್ಪೋರೇಟ್ ಸಂಸ್ಥೆಗಳಿಗಾಗಿ ದೇಶದ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಸಂಹಿತೆಗಳನ್ನಾಗಿ ರೂಪಿಸುವ ಮೂಲಕ ಕಾರ್ಮಿಕರನ್ನು…

Read More

ಉಡುಪಿ, ಜ. 28 : ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ.ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಸಾವಿನ ಸಂಖ್ಯೆ ಈಗ ಮೂರಕ್ಕೆ ಏರಿದೆ. ಉಳಿದ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Read More

ಉಳ್ಳಾಲ: ಶಿಕ್ಷಕರು ಮಕ್ಕಳಿಗೆ ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಬೆಳೆಸುವ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಿದ್ದಾರೆ. ಅಂಬ್ಲಮೊಗರು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಮಸ್ತ ಸಿಬ್ಬಂದಿ ಪ್ರಾಮಾಣಿಕತೆ, ನಿಷ್ಠೆ ಮತ್ತು ಸೇವಾಭಾವದಿಂದ ನಿರ್ವಹಿಸುತ್ತಿರುವ ಕಾರ್ಯದಿಂದಾಗಿ, ಈ ಶಾಲೆ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸ್ಥಾನಕ್ಕೆ ಏರುವುದು ನಿಶ್ಚಿತ ಎಂದು ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ . ಆರ್ ಈಶ್ವರ್ ಅಭಿಪ್ರಾಯಪಟ್ಟರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬ್ಲಮೊಗರು ಇಲ್ಲಿ ಜರಗಿದ ಶಾಲಾ ಮಕ್ಕಳ ಪ್ರತಿಭಾ ಸಿಂಚನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲೆಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಕ್ರಿಯಾಶೀಲರಾಗಿ, ಸಂಸ್ಥೆಯ ಪ್ರಗತಿಗಾಗಿ ಏಕಮನಸ್ಸಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಣ್ಣ ಶಿಕ್ಷಕನಿಗೆ ಆಗುವ ತೊಂದರೆಯನ್ನೂ ಸಹ ನ್ಯಾಯಯುತವಾಗಿ, ಸಮಯಕ್ಕೆ ಸರಿಯಾಗಿ ಪರಿಹರಿಸುವಂತಹ ಮಾನವೀಯ ವ್ಯಕ್ತಿತ್ವದ ಮುಖ್ಯೋಪಾಧ್ಯಾಯರು ಶಾಲೆಗೆ ದಿಕ್ಕು ತೋರಿಸುತ್ತಿದ್ದಾರೆ. ಸ್ಪೀಕರ್‌ ಯು.ಟಿ.ಖಾದರ್‌ ಅವರ ಪ್ರೇರಣಾದಾಯಕ ಮಾತುಗಳನ್ನು ಪ್ರೇರಣೆಯಾಗಿಸಿದ ಅಂಬ್ಲಮೊಗರು ಶಾಲೆಯ ವಿದ್ಯಾರ್ಥಿನಿ ಹನ್ನತ್‌ ಮತ್ತು ಕೊಣಾಜೆ ಶಾಲೆಯ…

Read More

ಉಳ್ಳಾಲ;ಕ್ರೀಡಾ ಭಾರತಿ ಮಂಗಳೂರು ಇದರ ಉಳ್ಳಾಲ ತಾಲೂಕು ಘಟಕ ಜ.23,2026 ರಂದು ರಚನೆಗೊಂಡಿದೆ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ ಚೌಧರಿಯವರು ನೂತನ ಪದಾಧಿಕಾರಿಗಳನ್ನು ಸಂಘನಿಕೇತನದಲ್ಲಿ ನಡೆದ ಮಂಗಳೂರು ವಿಭಾಗ ಬೈಠಕ್‌ನಲ್ಲಿ ಘೋಷಿಸಿದರು. ಕ್ರೀಡೆಯಿಂದ ಚಾರಿತ್ರ‍್ಯ ನಿರ್ಮಾಣ, ಚಾರಿತ್ರ‍್ಯದಿಂದ ರಾಷ್ಟ್ರ ನಿರ್ಮಾಣದ ಉದ್ದೆ?ಶವನ್ನು ಇಟ್ಟುಕೊಂಡು ರಾಷ್ಟ್ರ ಮಟ್ಟದಲ್ಲಿ ಕ್ರೀಡಾಭಾರತಿಯ ಸಂಘಟನೆಯು ೧೯೯೨ರಲ್ಲಿ ಆರಂಭವಾಗಿದ್ದು, ಮಂಗಳೂರು ಜಿಲ್ಲೆಯಲ್ಲಿ ೨೦೧೪ ರಂದು ಪ್ರಾರಂಭಿಸಲಾಗಿತ್ತು. ಆ ನಂತರ ಜಿಲ್ಲೆಯ ೬ ತಾಲೂಕುಗಳಲ್ಲಿ ಈಗಾಗಲೇ ಕ್ರೀಡಾಭಾರತಿ ಘಟಕಗಳನ್ನು ಆರಂಭಿಸಲಾಗಿದೆ. ಇದೀಗ ಉಳ್ಳಾಲದಲ್ಲಿ ಕ್ರೀಡಾ ಭಾರತಿ ಉಳ್ಳಾಲ ತಾಲೂಕು ಘಟಕ ರಚನೆಯಾಗಿದೆ. ಅಧ್ಯಕ್ಷರಾಗಿ ನವೀನ್ ಆಳ್ವ ದೇವಿನಗರ, ಉಪಾಧ್ಯಕ್ಷರಾಗಿ ದಿನಕರ್ ಬಗಂಬಿಲ, ಮಾಧವ ಕಟ್ಟಜೆ ಹಾಗೂ ಸೂರಜ್ ದೇವಿನಗರ, ಕಾರ್ಯದರ್ಶಿಯಾಗಿ ನಿತಿನ್ ಉಳ್ಳಾಲ್,ಸಹ ಕಾರ್ಯದರ್ಶಿಯಾಗಿ ಪ್ರೀತಮ್ ಬಗಂಬಿಲ ಹಾಗೂ ಅಶ್ವಿತ್ ಪಕಳ, ಖಜಾಂಚಿಯಾಗಿ ರಾಜೇಶ್ ಕುಲಾಲ್, ಮಹಿಳಾ ಪ್ರಮುಖ್ ಡಾ.ಶಿಲ್ಪಾಶ್ರೀ, ಕ್ರೀಡಾ ಕೇಂದ್ರ ಪ್ರಮುಖ್ ಅವಿನಾಶ್ ಆಳ್ವ ಕೊಲ್ಯ ಇವರುಗಳನ್ನು ಘೋಷಿಸಲಾಯಿತು.

Read More

ತಲಪಾಡಿ:ತಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪವತಿ ಶೆಟ್ಟಿ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸೀತಾ ಭಾಸ್ಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಗೊಂಡ ಸೀತಾ ಭಾಸ್ಕರ್ ಅವರಿಗೆ ಹೂವಿನ ಹಾರ ಹಾಕಿ ಬಿಜೆಪಿ ಮಂಗಳೂರು ಮಂಡಲ ಸಂತಸ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಬಿಜೆಪಿ ಮಂಗಳೂರು ಮಂಡಲದ ಪ್ರಭಾರಿ ಮತ್ತು ಜಿಲ್ಲಾ ಉಪಾಧ್ಯಕ್ಷರು ಪೂಜಾ ಪೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ರವೀಂದ್ರ ಶೆಟ್ಟಿ ಉಳಿದೋಟ್ಟು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ, ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ ಆರ್. ದಯಾನಂದ ತೊಕ್ಕೊಟ್ಟು, ಜಿಲ್ಲಾ ಫಲಾನುಭವಿಗಳ ಸಂಪರ್ಕ ಸಹಸಯೋಜಕ ಜಿತೇಂದ್ರ ಶೆಟ್ಟಿ ತಲಪಾಡಿ, ತಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಸಾಂತ್ಯ, ಮಂಡಲ ಉಪಾಧ್ಯಕ್ಷರು ಮತ್ತು ತಲಪಾಡಿ ಗ್ರಾಮ ಸದಸ್ಯರಾದ ಶೈಲೇಶ್ ಶೆಟ್ಟಿ, ಮಂಡಲ ಕಾರ್ಯದರ್ಶಿ ರಮೇಶ್ ಬೆಂದ್ರೋಳಿಕೆ, ಬಿಜೆಪಿ…

Read More

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ “ನಾನ್‌ವೆಜ್‌” ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ. “ಸು ಫ್ರಂ ಸೋ” ಸಿನಿಮಾದಲ್ಲಿ ನಟಿಸಿರುವ ಹೆಚ್ಚಿನ ಕಲಾವಿದರು “ನಾನ್‌ವೆಜ್‌” ಸಿನಿಮಾದಲ್ಲೂ ಇದ್ದಾರೆ. ಪ್ರಕಾಶ್ ತೂಮಿನಾಡು, ಬಂದರೊ ಬಂದರು ಬಾವಾ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್‌ ರೈ ಪಾಣಾಜೆ, ಮೈಮ್‌ ರಾಮದಾಸ್‌, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ ಅವರು ನಾನ್‌ವೆಜ್‌ ಸಿನಿಮಾದಲ್ಲೂ ನಟಿಸಿದ್ದಾರೆ. ನಾಯಕಿಯಾಗಿ ಪುಟ್ಟಕ್ಕನ ಮಕ್ಕಳು ದಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ತಮ್ಮ ಅದ್ಭುತ ನಟನಾ ಕೌಶಲವನ್ನು ಪ್ರದರ್ಶಿಸಿ ದ್ದಾರೆ. ಜತೆಗೆ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಅವರೂ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ…

Read More