Author: UllalaVani

Kannada News From Coastal Karnataka

ಉಳ್ಳಾಲ: ಮೊಗವೀರಪಟ್ಣದ ಚೆನ್ನಮರಕಾಲ ರಸ್ತೆಯ ಶ್ರೀ ವೀರಮಾರುತಿ ದೇವಾಲಯ ಮತ್ತು ವ್ಯಾಯಾಮ ಶಾಲೆ (ರಿ.) ವತಿಯಿಂದ 25ನೇ ಹನುಮ ಜಯಂತಿ ಪೂಜೆಯನ್ನು ವೈಭವದಿಂದ ಆಚರಿಸಲಾಯಿತು. ತಂತ್ರಿವರ್ಯರಾದ ಶ್ರೀಕಾಂತ್ ಭಟ್ ಅವರ ನೇತೃತ್ವದಲ್ಲಿ ಪೂಜೆ ಕಾರ್ಯಕ್ರಮಗಳು ನೆರವೇರಿದವು. ಬೆಳಿಗ್ಗೆ 7:00 ಗಂಟೆಗೆ ಗಣಹೋಮ ಮಹಾಪೂಜೆ ನಡೆಯಿತು. ಸಂಜೆ ದೀಪ ಪ್ರಜ್ವಲನೆಯನ್ನು ಶ್ರೀಮತಿ ವಿಜೇತ ಕಿರಣ್ ಸಾಲ್ಯಾನ್ ದಂಪತಿ , ಕೃತಿನ್ ಕೆ. ಸಾಲ್ಯಾನ್, ಕ್ರಿಯಾನ್ ಕೆ. ಸಾಲ್ಯಾನ್ ಹಾಗೂ ಶ್ರೀ ಮತ್ತು ಶ್ರೀಮತಿ ರಶ್ಮಿಕ ಕೌಶಿಕ್ ಶಿವನಗರ, ಪಾಂಡೇಶ್ವರ ದಂಪತಿ ನೆರವೇರಿಸಿದರು.ಸಂಜೆ 4:30 ರಿಂದ 8:00ರವರೆಗೆ ಶ್ರೀ ವಿಠೋಭ ಭಜನಾ ಮಂದಿರ ಮತ್ತು ಶ್ರೀ ರಾಮ ಭಜನಾ ಮಂದಿರ ಮೊಗವೀರಪಟ್ಟ, ಉಳ್ಳಾಲ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.ಇದೇ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮವಾಗಿ ‘ನಮ್ಮ ಕಲಾವಿದೆರ್ ಬೆದ್ರ’ ಇವರಿಂದ ‘ವೈರಲ್ ವೈಶಾಲಿ’ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಕಿಶೋರ್ ಕಾಂಚನ್, ಅಧ್ಯಕ್ಷರಾದ…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ನಾಪತ್ತೆಯಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಳಿಗಾಗಿ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವತಿ ಶರಣ್ಯಾ ಪತ್ತೆಗಾಗಿ ಅರಣ್ಯ ಇಲಾಖೆಯ 50ಕ್ಕೂ ಅಧಿಕ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಇವರಿಗೆ ಪೊಲೀಸ್​​ ಸಿಬ್ಬಂದಿಯೂ ಸಾಥ್​​ ನೀಡಿದ್ದು, ತಡರಾತ್ರಿ 3 ಗಂಟೆಯವರೆಗೆ ಹುಡುಕಾಡಿದರೂ ನಾಪತ್ತೆಯಾದ ಯುವತಿಯ ಸುಳಿವು ಸಿಕ್ಕಿಲ್ಲ. ನಿನ್ನೆ ತಾನು ದಾರಿ ತಪ್ಪಿರುವುದಾಗಿ ತಮ್ಮ ಹೋಂಸ್ಟೇ ಮಾಲೀಕನಿಗೆ ಕರೆ ಮಾಡಿ ಶರಣ್ಯಾ ಹೇಳಿದ್ದಳು. ಅದಾದ ಬಳಿಕ ಶರಣ್ಯ ಮೊಬೈಲ್‌ ನಾಟ್ ರೀಚೇಬಲ್ ಆಗಿದೆ. ಕೇರಳದಿಂದ ಏಕಾಂಗಿಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ,…

Read More

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಫೌಂಡೇಶನ್ ಆಶ್ರಯದಲ್ಲಿ ವಿವಿಧ ದಾನಿಗಳ ನೆರವಿನಿಂದ ಯಕ್ಷಗಾನ ಕಲಾವಿದರಿಗಾಗಿ ವೈವಿಧ್ಯಮಯ ಸೇವಾಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕದ್ರಿಯ ಮೊಕ್ತೇಸರ ದಿಲ್ ರಾಜ್ ಆಳ್ವ ಅವರಿಗೆ ಯಕ್ಷಧ್ರುವ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಪಾವಂಜೆ ಮೇಳದ ಯುವ ಭಾಗವತ ಭರತ್ ರಾಜ್ ಶೆಟ್ಟಿ ಹಾಗೂ ಹಾಸ್ಯಗಾರ ಸಂದೇಶ್ ಮಂದಾರ ಅವರಿಗೆ ಯಕ್ಷ ಗೌರವ ನೀಡಿ ಸನ್ಮಾನಿಸಲಾಯಿತು.ಅತಿಥಿಗಳಾಗಿ ಉದ್ಯಮಿಗಳಾದ…

Read More

ತೊಕ್ಕೊಟ್ಟು : ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್ ಫೋನ್ ಕೇವಲ ಸಂವಹನ ಸಾಧನವಾಗಿಲ್ಲ, ಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಕುಟುಂಬದ ನೆನಪುಗಳು, ಸ್ನೇಹಿತರ ಸಂಪರ್ಕ, ಜೀವನದ ಪ್ರಮುಖ ಕ್ಷಣಗಳನ್ನು ಸಂಗ್ರಹಿಸುವ ಸಾಧನವೇ ಮೊಬೈಲ್.ಈ ಹಿನ್ನೆಲೆದಲ್ಲಿ, ತೊಕ್ಕೊಟ್ಟು ಭಾಗದಲ್ಲಿ ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಅನು ಮೊಬೈಲ್ಸ್ ಗ್ರಾಹಕರೊಂದಿಗೆ ಭಾವನಾತ್ಮಕ ಬಂಧವನ್ನು ನಿರ್ಮಿಸಿಕೊಂಡಿರುವ ಜನಸ್ನೇಹಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಸಂಸ್ಥೆಯ ಮಾಲೀಕರು ಸೌಮ್ಯ ಸ್ವಭಾವದವರಾಗಿದ್ದು, ಧಾರ್ಮಿಕ, ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಯಾವುದೇ ಪ್ರಚಾರ ಬಯಸದೆ ಮೌನವಾಗಿ ಸಹಕರಿಸುತ್ತಾ ಬಂದಿರುವುದು ವಿಶೇಷವಾಗಿದೆ. ಈ ಮಾನವೀಯ ಮೌಲ್ಯಗಳು ಸಂಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಿವೆ.ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೂ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಹೊಂದಿದ್ದು, ಗ್ರಾಹಕರ ಅಗತ್ಯಗಳನ್ನು ಮನಗಂಡು ಸ್ನೇಹಪೂರ್ಣವಾಗಿ ಸೇವೆ ಸಲ್ಲಿಸುತ್ತಾರೆ. ಮೊಬೈಲ್ ಮಾರಾಟ ಮಾತ್ರವಲ್ಲದೆ, ಎಲ್ಲಾ ರೀತಿಯ ಮೊಬೈಲ್ ಸರ್ವಿಸ್‌ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಆಧುನಿಕ ಶೈಲಿಯ ಮೊಬೈಲ್‌ಗಳ ಕುರಿತು ಗ್ರಾಹಕರಿಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ.ಗ್ರಾಹಕರ ಅಗತ್ಯ, ಬಜೆಟ್ ಹಾಗೂ ಉಪಯೋಗವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸೂಕ್ತವಾದ ಮೊಬೈಲ್…

Read More

ಕೊಣಾಜೆ; ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.ಡಿಕ್ಕಿ‌ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ತಲೆಗೆ ಗಂಭೀರವಾದ ಗಾಯವಾಗಿದ್ದು ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಟ್ ಆಂಡ್ ರನ್; ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಪರಿಸರ ನಿವಾಸಿಗಳು ಆಕ್ರೋಶಗೊಂಡಿದ್ದರು. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Read More

ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಎಂಬಾತನನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯನ್ವಯ ಆರೋಪಿಯನ್ನು ಬಂಧಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್.‌ ಐ ನಾಗರಾಜ್‌ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ, ಏ. 02 ; ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮೂಲಕ ಹೊರಬಂದಿರುವ ಆರೋಪಿಗಳ ಜಾಮೀನು ರದ್ದುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 29ರಂದು ಮಧ್ಯರಾತ್ರಿ ಸುಮಾರು 2:15 ಗಂಟೆಗೆ, ಆರೋಪಿಗಳು ಹಾಡಿಯಂಗಡಿಯ ಜಯಶ್ರೀ ಪೂಜಾರಿ ಎಂಬುವವರ ಮನೆಗೆ ನುಗ್ಗಿದ್ದರು. ಜಯಶ್ರೀ ಅವರಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿದ ಆರೋಪಿಗಳು, ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳನ್ನು ಕಳ್ಳತನ ಮಾಡಿ ಬಳಿಕ ಅವುಗಳನ್ನು ಹತ್ಯೆಗೈದಿದ್ದರು ಎನ್ನಲಾಗಿದೆ.ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಪೊಲೀಸರು ಮೊಹಮ್ಮದ್ ಯೂನಿಸ್ (31), ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (29) ಮತ್ತು ಮೊಹಮ್ಮದ್ ನಾಸಿರ್ (28) ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ನಂತರ ಈ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.ತನಿಖೆಯ ವೇಳೆ ಆರೋಪಿಗಳು ಈ ಕೃತ್ಯವನ್ನು ಸಂಘಟಿತ ರೀತಿಯಲ್ಲಿ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪೊಲೀಸರು ಅವರ ವಿರುದ್ಧ ‘ಕೋಕಾ’ ಕಾಯ್ದೆಯಡಿ ಕ್ರಮಕೈಗೊಂಡಿದ್ದಾರೆ. ಜೊತೆಗೆ…

Read More

ಬೆಂಗಳೂರು, ಏ. 02 : ಬೆಂಗಳೂರಿನಲ್ಲಿನ ಕೆಲವೊಂದು ಪಬ್ ತುಂಬಾ ದುಬಾರಿಯಾಗಿರುತ್ತದೆ. ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಪಬ್‌ವೊಂದರಲ್ಲಿ 150 ರೂ. ಪಾವತಿಸಿರುವ ಬಗ್ಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ವೊಂದನ್ನ ಹಂಚಿಕೊಂಡಿದ್ದಾರೆ. ಇದೀಗ ಈ ದುಬಾರಿ ಪಬ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅರುಣ್‌ರಾಜ್ ಪತ್ತಾರ್ ಅವರು, “ಇದನ್ನು ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್ ಎಂದು ಕರೆಯಲಾಗುತ್ತಿತ್ತು. ನಾನು ಇದನ್ನು ಆರ್ಡರ್ ಮಾಡಿದಾಗ ಅವರು ನನಗೆ ತಂದಿದ್ದು ಇದನ್ನೇ. ಪ್ರಪಂಚದಲ್ಲಿ ಹಾಗೂ ನಮ್ಮ ರಕ್ತ ಸಂಬಂಧದಲ್ಲಿ ಇದಕ್ಕೆ 150 ಪಾವತಿಸಿ ಮೊದಲಿಗ” ಎಂದು ತಿಳಿಸಿದ್ದಾರೆ.ಸದ್ಯ ಇವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ನೆಟ್ಟಿಗರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ‘ಅಬ್ಬಾ ನಾನು ಒಬ್ಬನೇ ಇಂತಹ ವಂಚನೆಗೆ ಒಳಾಗಾಗಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದರೆ, ‘ಉತ್ತಮ ಮಾರ್ಕೆಟಿಂಗ್‌ನೊಂದಿಗೆ ಸರಳವಾದ ವಸ್ತುಗಳನ್ನು ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಎಂದು ಹೇಳುತ್ತಾರೆ’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.’ಕೊನೆಗೂ ನನ್ನಂತೆಯೇ…

Read More

ದೇರಳಕಟ್ಟೆ; ಶಿಶು ಮರಣ ಪ್ರಮಾಣ ಹಾಗೂ ತಾಯಿ ಮರಣ ಪ್ರಮಾಣ ಕಡಿಮೆ ಇರುವ ಸಮಾಜವೇ ನಿಜವಾದ ಆರೋಗ್ಯವಂತ ಸಮಾಜ. ಗರ್ಭಿಣಿಯರ ಸಮರ್ಪಕ ಆರೈಕೆ, ಸರಿಯಾದ ಪೌಷ್ಠಿಕ ಆಹಾರ, ರಕ್ತಹೀನತೆ ಹಾಗೂ ಸೋಂಕುಗಳನ್ನು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ಬುಧವಾರ ನಡೆದ “ಆಶಾ ಸಬಲೀಕರಣ : ಸುರಕ್ಷಿತ ತಾಯಂದಿರು, ಆರೋಗ್ಯವಾದ ಶಿಶುಗಳು” ಎಂಬ ಶೀರ್ಷಿಕೆಯ ಆಶಾ ಕಾರ್ಯಕರ್ತೆಯರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗರ್ಭಧಾರಣೆಯ ಆರಂಭಿಕ ಹಂತದಲ್ಲೇ ನೋಂದಣಿ ಅತ್ಯಂತ ಅಗತ್ಯವಾಗಿದ್ದು, ಮೊದಲ 12 ವಾರಗಳೊಳಗೆ ನೋಂದಣಿ ಮಾಡಿಸಬೇಕು ಎಂಬ ನಿಯಮವಿತ್ತು ಆದರೆ ಈಗ 10 ವಾರಗಳೊಳಗೆ ನೋಂದಣಿ ಪ್ರಕ್ರಿಯೆ ಆಗಬೇಕು ಎಂಬ ನಿಯವಿದ್ದು ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.ಗರ್ಭಿಣಿಯರಿಗೆ ಸರಿಯಾದ ಸಮಯದಲ್ಲಿ ಆರೋಗ್ಯ ತಪಾಸಣೆ, ಪೌಷ್ಠಿಕ ಆಹಾರ ಹಾಗೂ…

Read More

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ.ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮಾರಿಪಳ್ಳ ಎಂಬಲ್ಲಿ ಡಿವೈಡರ್ ಮೇಲೆ ಹತ್ತಿ ಅಲ್ಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಂಬವು ಮುರಿದು ಬಿದ್ದಿದ್ದು, ಕಾರು ಪಲ್ಟಿಯಾಗಿದೆ.ಕಾರಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳಿದ್ದರು. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಪಲ್ಟಿಯಾಗಿದ್ದ ಕಾರನ್ನು ಎತ್ತಿ ಗಾಯಗೊಂಡವರನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ.ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More