ಪುತ್ತೂರು : ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು. 65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದ್ದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ…
Author: UllalaVani
ಮಂಗಳೂರು : ಸ್ಪ್ರಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸ್ಟೊಲೆಕ್ಸ್, ಮಂಗಳೂರಿನ ಬಲ್ಲಾಳ್ ಬಾಗ್ನಲ್ಲಿ ತನ್ನ ಹೊಸ ವಿಶೇಷ ಫ್ರಾಂಚೈಸಿ ಮಳಿಗೆಗೆ ಶುಕ್ರವಾರ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ ಎಂದು ಸಂಸ್ಥೆಯ ಪಾಲುದಾರರಾದ ವಿಜಯ ಕಾಮತ್ ಹೇಳಿದರು. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ ಮಳಿಗೆಯು ರೆಸ್ಟೊಲೆಕ್ಸ್ ನ ಸಂಪೂರ್ಣ ಶ್ರೇಣಿಯ ಕೊಡುಗೆಗಳನ್ನು ಒಳಗೊಂಡಿದೆ. ಇದರಲ್ಲಿ ಹಾಸಿಗೆಗಳು, ದಿಂಬುಗಳು, ಬೆಡ್ಶೀಟ್ಗಳು, ಕಂಫರ್ಟರ್ ಗಳು, ಹಾಸಿಗೆ ಕವರ್ಗಳು, ದಿಂಬು ಮತ್ತಿತರ ಉತ್ಪನ್ನಗಳು ಸೇರಿವೆ. ರೆಸ್ಟೊಲೆಕ್ಸ್ ಕಾಯಿರ್ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಡೇವಿಡ್ ಕುರುವಿಲ್ಲಾ ನೂತನ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಅವರು, ʻರೆಸ್ಟೊಲೆಕ್ಸ್ ನಾಲ್ಕು ದಶಕಗಳಿಂದ ಗ್ರಾಹಕರ ಅನುಭವಗಳನ್ನು ಹೆಚ್ಚಿಸುವುದು ಮತ್ತು ಸೂಕ್ತ ಆಯ್ಕೆಗಳನ್ನು ಬೆಂಬಲಿಸುವತ್ತ ಗಮನಹರಿಸಿದೆ.…
ಉಳ್ಳಾಲ : ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ (402) ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ) ರವರ ಜನ್ಮ ದಿನ ಪ್ರಯುಕ್ತ ಬೃಹತ್ ಮೀಲಾದು ನ್ನಬಿ ರ್ಯಾಲಿ ಶುಕ್ರವಾರ ನಡೆಯಿತುಕೋಡಿ ಜುಮಾ ಮಸೀದಿ ಖತೀಬ್ ಇರ್ಶಾದ್ ಸಖಾಫಿ ದುಆ ನೆರವೇರಿಸಿದರು. ರ್ಯಾಲಿ ಉದ್ಘಾಟಿಸಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್ ಅವರು, ಶಾಂತಿ ಸೌಹಾರ್ದತೆಯನ್ನು ಸಾರಿದ ಪ್ರವಾದಿ ಮುಹಮ್ಮದ್ ( ಸ) ರವರ ಜೀವನ ನಮಗೆ ಮಾರ್ಗದರ್ಶನ ಆಗಿದೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು, ಸಮಾಜ ನಿರ್ಮಾಣ ಮಾಡಬೇಕು ಎಂದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಟೆಪುರ ಮಸೀದಿಯಿಂದ ಉಳ್ಳಾಲ ದರ್ಗಾವರೆಗೆ ಕಾಲ್ನಡಿಗೆಯಲ್ಲಿ ಶಾಂತಿಯುತ ಮೀಲಾದ್ ರ್ಯಾಲಿ ನಡೆಯಿತು. ಐದು ಕರಿಯದ 28 ಮೊಹಲ್ಲಾ ಗಳ ವಿದ್ಯಾರ್ಥಿಗಳ ರ್ಯಾಲಿಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ,ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ…
ಮಂಗಳೂರು : ಉದ್ಯಮಿ, ಕೃಷಿಕರು ಮತ್ತು ವೃತ್ತಿಪರರಿಗೆ ಕ್ಯಾಥೋಲಿಕ್ ವೇದಿಕೆ ರಚನಾ ನೀಡುವ ರಚನಾ ಪುರಸ್ಕಾರ 2023–2025ರ ಘೋಷಿಸಿದ್ದು, ಈ ಬಾರಿ ಉದ್ಯಮ ಕ್ಷೇತ್ರದಲ್ಲಿ ಆಸ್ಟಿನ್ ರೋಚ್, ವೃತ್ತಿಪರ ಕ್ಷೇತ್ರದಲ್ಲಿ ಜಾನ್ ರಿಚರ್ಡ್ ಲೋಬೊ (ಕೆಎಎಸ್)ಬೆಂಗಳೂರು, ಕೃಷಿಕರ ಕ್ಷೇತ್ರದಲ್ಲಿ ಡಾ. ಗಾಡ್ವಿನ್ ರೋಡ್ರಿಗಸ್ ಬೆಳ್ವೈ, ಎನ್ಆರ್ಐ ಉದ್ಯಮ ಕ್ಷೇತ್ರಕ್ಕೆ ಪ್ರತಾಪ್ ಮೆಂಡೋನ್ಸಾ, ಹಾಗೂ ಶ್ರೇಷ್ಠ ಮಹಿಳೆ ಸಾಧಕಿ ಶೋಭಾ ಮೆಂಡೋನ್ಸಾ, ದುಬೈ ಇವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ರಚನಾ ಅಧ್ಯಕ್ಷ ಜಾನ್ ಬಿ. ಮೊಂಟೇರಿಯೋ ಹೇಳಿದರು. ಮಂಗಳೂರಿನ ಉರ್ವ ಪ್ರೆಸ್ಕ್ಲಬ್ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಪ್ರಶಸ್ತಿ ಪ್ರಧಾನ ಸಮಾರಂಭವು 2025ರ ಅಕ್ಟೋಬರ್ 5ರಂದು, ಭಾನುವಾರ ಸಂಜೆ 6 ಗಂಟೆಗೆ ಮಂಗಳೂರು ಮಿಲಾಗ್ರಿಸ್ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಮಿ. ರೆ. ಡಾ. ಪೀಟರ್ ಪಾಲ್ ಸಲ್ದಾನ್ಹಾ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಇಂಧನ ಸಚಿವ ಕೆ. ಜೆ. ಜಾರ್ಜ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ…
ಉಳ್ಳಾಲ : ತಡರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು ಬಳಸಿ ಕ್ಯಾಶ್ ಬಾಕ್ಸ್ ಅನ್ನು ಹಾನಿಗೊಳಿಸಿದ್ದಾನೆ. ದೆಹಲಿಯಿಂದ ಹಿಡಿದು ವಿವಿಧ ಜಿಲ್ಲೆಗಳ ಎಟಿಎಂಗಳ ಮೇಲೆ ನಿಗಾ ಇಡುವ ದೆಹಲಿಯ ಕಣ್ಗಾವಲು ವ್ಯವಸ್ಥೆಯು ಈ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿದೆ. ಬಳಿಕ ಕಣ್ಗಾವಲು ಸಿಬ್ಬಂದಿ ರಂಜಿತ್ ಅವರು ಬೀರಿ ಎಟಿಎಂ ನೋಡಿಕೊಳ್ಳುವ ದೀಪಕ್ ಅಮಿನ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ 112 ಗೆ ಕರೆ ಮಾಡಿದ್ದಾರೆ. ಈ ಮಾಹಿತಿಯನ್ನು ಉಳ್ಳಾಲ ಪೊಲೀಸರಿಗೆ ರವಾನಿಸಿದ್ದು,…
ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಇದರ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರಿನ ಹಂಪನ್ಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದ. ಕ. ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಉಳ್ಳಾಲ: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಗಡಿನಾಡು ಕೂಳೂರು ಎಲಿಯಾಣದ ನಿವಾಸಿ ಜಗದೀಶ್ ಶೆಟ್ಟಿ ಎ. ಇವರು ಆಯ್ಕೆಯಾಗಿದ್ದಾರೆ. 1988ರ ನವೆಂಬರ್ 30ರಂದು ಶಿಕ್ಷಕ ವೃತ್ತಿಗೆ ಕಾಲಿಟ್ಟ ಜಗದೀಶ್ ಶೆಟ್ಟಿ, ಒಟ್ಟು 37 ವರ್ಷಗಳ ಸೇವಾ ಅವಧಿಯಲ್ಲಿ 13 ವರ್ಷಗಳ ಕಾಲ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ಬಂಟ್ವಾಳದ ಇರಾ ಬಾಳೆಪುಣಿ ಶಾಲೆಯಿಂದ ವೃತ್ತಿ ಆರಂಭಿಸಿದ ಅವರು, ಅಂಬ್ಲಮೊಗರು ಶಾಲೆಯಲ್ಲಿ ಪ್ರಗತಿಪರ ಶಿಕ್ಷಣ ವಾತಾವರಣ ನಿರ್ಮಿಸಲು ಶ್ರಮಿಸಿದ್ದಾರೆ. ಅವರ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳು ವಿಶಿಷ್ಟ ರೂಪ ಪಡೆದಿವೆ. ಸ್ಥಳೀಯ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಪ್ರೌಢಶಾಲೆ ಸ್ಥಾಪನೆ ಮತ್ತು 1.28 ಕೋಟಿ ರೂ. ವೆಚ್ಚದ ಕಟ್ಟಡ ನಿರ್ಮಾಣ, ಶಾಲಾ ದಾಖಲಾತಿಯನ್ನು 106ರಿಂದ 217ಕ್ಕೆ ಏರಿಕೆ, ಉಚಿತ ಬಸ್ ವ್ಯವಸ್ಥೆ, ಎಲ್ಕೆಜಿ–ಯುಕೇಜಿ ತರಗತಿಗಳ ಸ್ಥಾಪನೆ, ದ್ವಿಭಾಷಾ (ಕನ್ನಡ–ಆಂಗ್ಲ) ಮಾಧ್ಯಮ ತರಗತಿಗಳು, ಸ್ಮಾರ್ಟ್ ಟಿವಿ ಹಾಗೂ ಕಂಪ್ಯೂಟರ್ ಮೂಲಕ ಬೋಧನೆ,…
ಮಂಗಳೂರು : ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅ. 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಆಗ ದಕ್ಷಿಣ ಕನ್ನಡ ನ್ಯಾಯಾಲಯ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಿಗೆ ಉಭಯ ಪಕ್ಷದವರನ್ನು ಕರೆಯಿಸಲಿದ್ದು, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬಹುದು. ಹೈಕೋರ್ಟ್ಗಳಲ್ಲಿ…
ನವದೆಹಲಿ : ಜಿಎಸ್ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತ ದೊರೆತಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್ಟಿಯ ಸ್ಲ್ಯಾಬ್ ಅನ್ವಯವಾಗಲಿದೆ. ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಮೊದಲ ದಿನದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಜಿಎಸ್ಟಿ ಸ್ಲ್ಯಾಬ್ ಬದಲಾವಣೆ ಮಾಡಲಾಗಿದೆ. ದಿನ ಬಳಕೆ ವಸ್ತುಗಳು, ಆರೋಗ್ಯ ವಲಯ ಸೇರಿ ಹಲವು ವಲಯಗಳಿಗೆ ಅನುಕೂಲವಾಗಲಿದೆ. ಸಾಕಷ್ಟು ಚರ್ಚೆ ಬಳಿಕ ನಿರ್ಧಾರಕ್ಕೆ ಬರಲಾಗಿದ್ದು ಎಲ್ಲರೂ ಒಮ್ಮತದಿಂದ ಬೆಂಬಲವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಜಿಎಸ್ಟಿ ಕೌನ್ಸಿಲ್ ನ ಎಲ್ಲ ಸದಸ್ಯರಿಗೂ ಅಭಾರಿಯಾಗಿದ್ದಾನೆ” ಎಂದು ಹೇಳಿದರು. ಯಾವ ವಸ್ತುಗಳು…
ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಬಿ.ದಾಮೋದರ ನಿಸರ್ಗ ಸಂಸ್ಮರಣ ಸಮಿತಿ ವತಿಯಿಂದ ಆ.31ರಂದು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರಗಿದ ದ್ವಿತೀಯ ಸಂಸ್ಮರಣ ಸಮಾರಂಭದಲ್ಲಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಮಂಗಳಾದೇವಿ ದೇವಸ್ಥಾನದ ಮೊಕ್ತೇಸರ ಅರುಣ್ ಕುಮಾರ್ ಐತಾಳ್ ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ದಿ.ನಿಸರ್ಗ ಅವರ ಪತ್ನಿ ಹೇಮಾ ದಾಮೋದರ ನಿಸರ್ಗ ಮತ್ತು ಮಕ್ಕಳು ಸ್ಥಾಪಿಸಿದ ಎರಡನೇ ವರ್ಷದ ‘ಬಿ.ದಾಮೋದರ ನಿಸರ್ಗ ಪ್ರಶಸ್ತಿ’ಯನ್ನು ಕ.ಸಾ.ಪ ಮಾಜಿ…

