Author: UllalaVani

Kannada News From Coastal Karnataka

ಉಪ್ಪಿನಂಗಡಿ: ಕೊಯಿಲದ ನಿವಾಸಿ ಝಮೀರ್ ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದು 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ ಜುಮೀರ್ ಅವರು ಉಪರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿದ್ದಾರೆ. ಝಮೀರ್ ಪ್ರಾಥಮಿಕ ಶಿಕ್ಷಣವನ್ನು ಅತೂರು ಬದ್ರಿಯಾ ಸ್ಕೂಲ್, ಪ್ರೌಢ ಶಿಕ್ಷಣವನ್ನು ಕಡಬದ ಜೋಕಿಂ ಪ್ರೌಢ ಶಾಲೆಯಲ್ಲಿ ದ್ವಿತೀಯ ಪಿಯುಸಿಯನ್ನು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಮಾಡಿದ್ದರು. ಝಮೀರ್ ಕೊಲ ನಿವಾಸಿ ಝಕರಿಯಾ ನೇರೆಂಕಿ ಮತ್ತು ತಾಹಿರಾ ಬಾನು ದಂಪತಿಯ ಪುತ್ರರಾಗಿದ್ದಾರೆ.

Read More

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‌ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದೆ. ಆನ್‌ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅವಶ್ಯಕವಾಗಿದೆ. ಹಾಗಾಗಿ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವಷರ್ದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೆ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸು ವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳ ತನಿಖೆ ನಡೆಸಿ ಉದ್ದಿಮೆ ಪರವಾನಿಗೆ ಇಲ್ಲದ ಹಾಗೂ ಈವರೆಗೂ ನವೀಕರಣ ಮಾಡದ ಉದ್ದಿಮೆದಾರರಿಗೆ ನಿಯಾಮಾನುಸಾರ ಹೆಚ್ಚುವರಿ ದಂಡ ವಿಧಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ: 6364016555 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ: ತರಗತಿಯಲ್ಲಿ ಕುಳಿತು ಅಧ್ಯಾಪಕರು ಹೇಳುವ‌ ಪಾಠ ಕೇಳಿದರೆ ಸಾಲದು, ಪ್ರಶ್ನಿಸುವ ಗುಣವೂ ಅಗತ್ಯ. ಸಕಾರಾತ್ಮಕ ಯೋಚನೆಗಳು, ಶಿಕ್ಷಣದ ಜೊತೆ ಆಟೋಟ ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಾಗ ಬುದ್ಧಿಮತ್ತೆ ಹೆಚ್ಚಾಗುತ್ತದೆ ಎಂದು ಮಂಗಳೂರು ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ ಅಭಿಪ್ರಾಯಪಟ್ಟರು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಶ್ರೀ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.ಮಂಗಳೂರು ತಾ.ಪಂ.ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಹರೇಕಳ ಮಾತನಾಡಿ, ಹರೇಕಳ ಅನುದಾನಿತ ಶಾಲೆ ಆರಂಭಗೊಂಡು ನೂರು ವರ್ಷ ದಾಟಿದ್ದರೂ ಪ್ರಸ್ತುತ ದಿನಗಳಲ್ಲಿ ಕನ್ನಡ ಶಾಲೆ ಉಳಿಸಲು ಅನಿವಾರ್ಯ ಎನಿಸಿದ್ದ ಆಂಗ್ಲಮಾಧ್ಯಮ ಆರಂಭ ಶ್ಲಾಘನೀಯ ಎಂದರು‌.ಅಧ್ಯಕ್ಷತೆ ವಹಿಸಿದ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಮಾತನಾಡಿ, ಆಂಗ್ಲಭಾಷೆ‌ ಕಲಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಲಭಿಸಿದರೂ ಈ ಭಾಷೆ ಕಲಿಕೆಗೆ ಮಾತ್ರ ಸೀಮಿತವಾಗಿರಲಿ, ಆದರೆ ಸಂಸ್ಕೃತಿ, ಸಂಸ್ಕಾರ ಕನ್ನಡದ್ದೇ ಇರಲಿ ಎಂದರು.ಕೈಗಾರಿಕೋದ್ಯಮಿ ಅಜಿತ್ ಚೌಟ ದೇವಸ್ಯ ಮತ್ತು ಉದ್ಯಮಿ ಸುರೇಂದ್ರ ಕಂಬಳಿ ಕ್ರೀಡಾ ಕೊಠಡಿ ಉದ್ಘಾಟಿಸಿದರು. ಮಂಗಳೂರು…

Read More

ಉಳ್ಳಾಲ : ಮಕ್ಕಳು ಪರೀಕ್ಷೆಗಳಿಗಾಗಿ ಓದದೇ ಬದುಕಿನ ಮೌಲ್ಯಗಳನ್ನು ತಿಳಿದುಕೊಳ್ಳುವ ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಲು ನಿರಂತರವಾಗಿ ಅಧ್ಯಯನಶೀಲರಾಗಬೇಕು. ಶಿಕ್ಷಕರು ಕೂಡ ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಲು ಹೆಚ್ಚಿನ ಒತ್ತನ್ನು ಕೊಡಬೇಕಾಗಿದೆ. ಇದರಿಂದ ಮುಂದೆ ಮಕ್ಕಳು ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗಿ ಮೂಡಿಬರಲು ಸಾಧ್ಯ.ಹಾಗಾಗಿ ಇಂದು ವಿಶ್ವ ವಿದ್ಯಾನಿಲಯ ಸರಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ, ಮೌಲ್ಯಾಧರಿತ ಶಿಕ್ಷಣವನ್ನು ನೀಡಲು ಪ್ರಯತ್ನಿಸುತ್ತಿದೆ. ಈ ದೃಷ್ಟಿಯಲ್ಲಿ ‘ ಬಾಲವಿಕಾಸ ‘ ಎನ್ನುವ ತರಬೇತಿ ಕಾರ್ಯಾಗಾರ ಒಂದು ಅರ್ಥಪೂರ್ಣವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ.ರಾಜು ಮೊಗವೀರ ಕೆ ಎ ಎಸ್ ಅವರು ಅಭಿಪ್ರಾಯ ಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, ನೆಹರು ಚಿಂತನ ಕೇಂದ್ರದ ವತಿಯಿಂದ ಸರಕಾರಿ ಶಾಲೆಗಳ ದತ್ತು ಸ್ವೀಕೃತ ಯೋಜನೆಗೆ ಒಳಪಡುವ ಶಾಲೆಗಳಿಗೆ ಹತ್ತು ದಿನಗಳ ಕಾಲ ನಡೆಯಲಿರುವ ವಿಷಯಾಧರಿತ ತರಬೇತಿ ಕಾರ್ಯಗಾರ ಬಾಲವಿಕಾಸ 2025ನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಡೆಂಜ ಸೋಮಶೇಖರ್…

Read More

ವಿದ್ಯಾರ್ಥಿಗಳು ವೇದಿಕೆಯಲ್ಲಿ ನಿಂತು ಮಾತನಾಡಲು, ಭಾಷಾ ಉಚ್ಛಾರ ಸರಿಪಡಿಸಲು ನಿವೃತ್ತ ಶಿಕ್ಷಕಿಯರ ಪರಿಶ್ರಮ, ನಿರಂತರ ಪ್ರೋತ್ಸಾಹ ಕಾರಣ ಎಂದು ಉಳ್ಳಾಲ‌ ತಾಲೂಕು ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಫಾತಿಮತ್ ರಫೀದಾ ಹೇಳಿದರು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ವತಿಯಿಂದ ಹರೇಕಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಿವೃತ್ತ ಶಿಕ್ಷಕರಿಗೆ ನಡೆದ ವಿದಾಯ ಸಮಾರಂಭದಲ್ಲಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾತನಾಡಿ, ಶಿಕ್ಷಕಿಯರು ವೃತ್ತಿಯಿಂದ ನಿವೃತ್ತರಾದ ಬಳಿಕ ಮನೆಗೇ ಸೀಮಿತರಾದರೆ ಆರೋಗ್ಯ ಹದಗೆಡುತ್ತದೆ, ಪ್ರತಿದಿನ ಯಾವುದೇ ಸಮಯದಲ್ಲೂ ಶಾಲೆಗೆ ಬಂದು ಕನಿಷ್ಟ ಒಂದು ಗಂಟೆ ಪಾಠ ಮಾಡಿದರೆ ಆರೋಗ್ಯವೂ ಚೆನ್ನಾಗಿರುತ್ತದೆ ಎಂದರು.ಈ ಸಂದರ್ಭ ನಿವೃತ್ತ ಶಿಕ್ಷಕಿಯರಾದ ಸುಮಲತಾ ಸುರೇಂದ್ರ ಕಂಬಳಿ ಮತ್ತು ಲಕ್ಷ್ಮೀ ಶ್ರೀನಿವಾಸ ಮೂರ್ತಿ ಇವರಿಗೆ ಸನ್ಮಾನಿಸಿ ವಿದಾಯ ಕೋರಲಾಯಿತು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಶಾಲೆಗಳ ಸಂಚಾಲಕ ಕಡೆಂಜ ಸೋಮಶೇಖರ್ ಚೌಟ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಅನುದಾನಿತ…

Read More

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ತನ್ನ ವಿದ್ಯುತ್ ಬಿಲ್‌ಗಳಲ್ಲಿ ಸೇರಿಸಿರುವ ಹೆಚ್ಚುವರಿ ಭದ್ರತಾ ಠೇವಣಿ (ASD – Additional Security Deposit) ಬಗ್ಗೆ ಗ್ರಾಹಕರಲ್ಲಿ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಉಳ್ಳಾಲ ತಾಲೂಕಿನ ನಾಟೆಕಲ್ ನಿವಾಸಿ ಇಬ್ರಾಹಿಂ ನಾಟೆಕಲ್ ಸೇರಿದಂತೆ ಹಲವು ಗ್ರಾಹಕರು ಈ ಕ್ರಮವನ್ನು ಖಂಡಿಸಿದ್ದಾರೆ. ಇಬ್ರಾಹಿಂ ನಾಟೆಕಲ್ ತಮ್ಮ ಕೋಪವನ್ನು ವ್ಯಕ್ತಪಡಿಸುತ್ತಾ, “ಗೃಹ ಜ್ಯೋತಿ ಯೋಜನೆಯಂತಹ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ಪಡೆಯುವುದು ಅಕ್ಷಮ್ಯ ಅಪರಾಧ. ಇದರಿಂದ ಗ್ರಾಹಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಉಳ್ಳಾಲವಾಣಿಯು ಮೆಸ್ಕಾಂನ ಕೇಂದ್ರ ಕಛೇರಿಯನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಈ ಕ್ರಮವು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿರ್ದೇಶನದಂತೆ ಜಾರಿಗೆ ತರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. “ಹಳೆಯ ಭದ್ರತಾ ಠೇವಣಿಯು ಆ ಸಮಯದ ಕಿಲೋವ್ಯಾಟ್ ಶುಲ್ಕಕ್ಕೆ ಸಂಬಂಧಿಸಿದ್ದಾಗಿದೆ. ಆದರೆ, ಈಗಿನ ಹೊಸ ಶುಲ್ಕ ದರದ ಅನುಗುಣವಾಗಿ ಆಯೋಗದ ನಿರ್ದೇಶನದಂತೆ ASDಯನ್ನು ಬಿಲ್‌ನಲ್ಲಿ ಸೇರಿಸಲಾಗಿದೆ,” ಎಂದು…

Read More

ಮಂಗಳೂರು :  ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹಾಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಡಗು ಸೋಮವಾರ ರಾತ್ರಿ 10:45 ಕ್ಕೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್‌ಎಂಪಿಎ) ಆಗಮಿಸಿದೆ. ಎಂ.ವಿ. ವಾನ್ ಹಾಯ್ 503 ಹಡಗು ಕೊಲೊಂಬೋದಿಂದ ಮುಂಬೈಯ ನ್ಹಾವಾ ಶೇವಾ ಕಂಟೈನರ್ ಟರ್ಮಿನಲ್‌ಗೆ ಪ್ರಯಾಣಿಸುತ್ತಿತ್ತು. ಆದರೆ ಜೂನ್ 9 ರಂದು ಕೇರಳದ ಬೇಪೂರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳ ದೂರದಲ್ಲಿ ಈ ಹಡಗು ಸಾಗುವ ವೇಳೆ ಸ್ಫೋಟ ಉಂಟಾಗಿತ್ತು. ತಕ್ಷಣ ಭಾರತೀಯ ನೌಕಾಪಡೆಗೆ ಮಾಹಿತಿಯನ್ನು ರವಾನಿಸಲಾಯಿತು. ಕೂಡಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಡಗು ಹಾಗೂ ಕೋಸ್ಟ್ ಗಾರ್ಡ್ ನ ಮೂರು ನೌಕೆಗಳು ಹಡಗಿನಲ್ಲಿದ್ದ 22 ಸಿಬ್ಬಂದಿಯಲ್ಲಿ 18 ಜನರನ್ನು ರಕ್ಷಣೆ ಮಾಡಿದೆ. ಲೂಯನ್ಲಿ ಮತ್ತು ಸೋನಿಟೂರ್ ಹೆನಿ ಎಂಬ…

Read More

ಬೆಂಗಳೂರು/ರಾಮನಗರ: ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್) ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆಯನ್ನು ಬಮೂಲ್ ಆರಂಭಿಸಿದೆ. ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿರುವ ಬಮೂಲ್‌ನ ಮೆಗಾ ಡೇರಿ ಘಟಕವು ಇಂತಹದ್ದೊಂದು ಪ್ರಯೋಗಕ್ಕೆ ಸಾಕ್ಷಿಯಾಗಿದ್ದು, ಇದು ದೇಶದಲ್ಲೇ ಮೊದಲು ಎನಿಸಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗಲು ಕನಿಷ್ಠ 500 ವರ್ಷ ಬೇಕು. ಆದರೆ, ಬಮೂಲ್ ಬಳಸಲು ಮುಂದಾಗಿರುವ ಬಯೋಡಿಗ್ರೇಡೆಬಲ್ ಪ್ಲಾಸ್ಟಿಕ್ ಕೇವಲ 6 ತಿಂಗಳಲ್ಲಿ ಕರಗಲಿದೆ. ಮಾತ್ರವಲ್ಲ, ಜೈವಿಕ ಗೊಬ್ಬರವಾಗಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತವೆ ಎಂದು ಬಮೂಲ್‌ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ವಿದೇಶಿ ತಂತ್ರಜ್ಞಾನ : ‘ಪಾಲಿಥಿನ್ ಹಾಲಿನ ಕವರ್‌ಗಳಿಗೆ ಪರ್ಯಾಯವಾಗಿ ಬಮೂಲ್ ಬಳಸುತ್ತಿರುವ ಬಯೋಡಿಗ್ರೇಡೆಬಲ್ ಪೊಟ್ಟಣಗಳು ವಿದೇಶಿ ತಂತ್ರಜ್ಞಾನ ಆಧರಿಸಿದ್ದು, ಜೋಳದ ಗಂಜಿಯಿಂದ(ಕಾರನ್ ಸ್ಟಾರ್ಚ್) ತಯಾರಾಗಿವೆ. ಸ್ಥಳೀಯ ಕಂಪನಿಯೇ ಕವರ್‌ಗಳನ್ನು ತಯಾರಿಸಿ ಒದಗಿಸಿದೆ’…

Read More

ಬೆಂಗಳೂರು : ತನ್ನಿಂದ ಅಂತರ ಕಾಪಾಡಿಕೊಳ್ಳಲು ಯತ್ನಿಸಿದ ಗೃಹಿಣಿಯನ್ನು ಯುವಕನೊಬ್ಬ ಹೋಟೆಲ್‌ಗೆ ಕರೆದೊಯ್ದು 17 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಆರೋಪಿಯನ್ನು ದಕ್ಷಿಣ ವಿಭಾಗದ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಹರಿಣಿ (33) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಆರೋಪದ ಅಡಿ ಟೆಕಿ ಯಶಸ್ (25) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜೂನ್ 7ರಂದು ರಾತ್ರಿ ಠಾಣಾ ವ್ಯಾಪ್ತಿಯ ಪೂರ್ಣಪ್ರಜ್ಞಾ ಲೇಔಟ್‌ನ ಖಾಸಗಿ ಹೋಟೆಲ್‌ವೊಂದರಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದ. ವೈದ್ಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ‘ಹರಿಣಿ ಅವರು ದಾಸೇಗೌಡ ಎಂಬುವವರನ್ನು 2012ರಲ್ಲಿ ಮದುವೆ ಆಗಿದ್ದರು. ದಂಪತಿ ಕೆಂಗೇರಿಯಲ್ಲಿ ವಾಸವಿದ್ದರು. ದಂಪತಿಗೆ 13 ಹಾಗೂ 10 ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಜಾತ್ರೆಯಲ್ಲಿ ಹರಿಣಿ ಅವರು ತಲಘಟ್ಟಪುರದ ನಿವಾಸಿ ಯಶಸ್‌ಗೆ ಪರಿಚಯವಾಗಿದ್ದರು. ಇಬ್ಬರೂ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು…

Read More

ಪರಿಸರಸ್ನೇಹಿ ಎಂದು ಕರೆಯಲಾಗುತ್ತಿದ್ದ ಅಡಿಕೆ ಹಾಳೆ ತಟ್ಟೆ, ಲೋಟಗಳ ತಯಾರಿಕಾ ಉದ್ಯಮಕ್ಕೆ ಈಗ ಸಂಕಷ್ಟ ಎದುರಾಗಿದೆ. ಅಮೆರಿಕದ ಆಹಾರ ಮತ್ತು ಔಷಧ ಸಂಸ್ಥೆಯು ಅಡಿಕೆ ಹಾಳೆಯಿಂದ ಮಾಡಿದ ತಟ್ಟೆ ಸೇರಿದಂತೆ ಇನ್ನಿತರ ಉತ್ಪನ್ನಗಳ ಆಮದಿಗೆ ನಿರ್ಬಂಧ ವಿಧಿಸಿದೆ. ಇದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳ ಸಾವಿರಾರು ರೈತರ ಆದಾಯಕ್ಕೆ ಪೆಟ್ಟು ಬಿದ್ದಿದೆ. ಅಲ್ಲದೇ, ಸಾವಿರಾರು ಸಣ್ಣ ಉದ್ಯಮಿಗಳು, ಕಾರ್ಮಿಕರಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಇವರೆಲ್ಲರೂ ಈಗ ತಮಗೊದಗಿರುವ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಸರ್ಕಾರದತ್ತ ನೋಡುತ್ತಿದ್ದಾರೆ. ಏಕಬಳಕೆಯ ಅಡಿಕೆ ಹಾಳೆಯ ತಟ್ಟೆ ಹಾಗೂ ಲೋಟಗಳನ್ನು ಪರಿಸರ ಸಂರಕ್ಷಣೆಯ ದೃಷ್ಟಿಯಿಂದಲೂ, ಜನರ ಆರೋಗ್ಯದ ದೃಷ್ಟಿಯಿಂದಲೂ ಪ್ಲಾಸ್ಟಿಕ್‌ಗೆ ಅತ್ಯುತ್ತಮ ಪರ್ಯಾಯ ಎಂದೇ ಪರಿಗಣಿಸಲಾಗುತ್ತಿದೆ. ಬಳಸಿ ಬಿಸಾಡಿದ ನಂತರ ಮಣ್ಣಿನಲ್ಲಿ ಕೊಳೆತು ಗೊಬ್ಬರವಾಗುತ್ತಿದ್ದ ಇವುಗಳ ಬಳಕೆ ದೇಶದಲ್ಲಿ ಹೆಚ್ಚುತ್ತಿದ್ದು, ವಿದೇಶಗಳಲ್ಲೂ ಜನಪ್ರಿಯವಾಗಿವೆ. ಕರ್ನಾಟಕದ ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳ ಸಾವಿರಾರು ಮಂದಿ ಅಡಿಕೆ ಹಾಳೆಗಳಿಂದ ತಟ್ಟೆ, ಲೋಟ, ಬಟ್ಟಲುಗಳನ್ನು ತಯಾರಿಸುವ…

Read More