Author: UllalaVani

Kannada News From Coastal Karnataka

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು. ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ…

Read More

ಜಿಲ್ಲಾ ಆರೋಗ್ಯ ಅಧಿಕಾರಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಕ್ರಮದ ಮಹತ್ವವನ್ನು ಒತ್ತಿ ಹೇಳಿದರು.ಮೇ ತಿಂಗಳೊಂದರಲ್ಲೇ 10 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಶಂಕಿತ ಪ್ರಕರಣಗಳು ಹರಡುವ ಲಕ್ಷಣಗಳನ್ನು ತೋರಿಸುತ್ತಿವೆ ಎಂದು ಡಾ. ತಿಮ್ಮಯ್ಯ ವರದಿ ಮಾಡಿದ್ದಾರೆ. ಬೆಳ್ತಂಗಡಿ, ಸುಳ್ಯ ಮತ್ತು ಬಂಟ್ವಾಳದಂತಹ ತಾಲ್ಲೂಕುಗಳಲ್ಲಿ ಪ್ರಸ್ತುತ ಸೋಂಕುಗಳು ಹೆಚ್ಚಾಗುತ್ತಿವೆ ಎಂದು ಅವರು ಗಮನಸೆಳೆದರು.ಈ ವರ್ಷದ ಜನವರಿ ಮತ್ತು ಮೇ ನಡುವೆ, ಜಿಲ್ಲೆಯಲ್ಲಿ 43 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಹೋಲಿಸಿದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 534 ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ, ಇತ್ತೀಚಿನ ನಿರಂತರ ಮಳೆಯಿಂದಾಗಿ ನೀರು ನಿಂತಿದೆ, ಇದು ಡೆಂಗ್ಯೂ ಹರಡುವಿಕೆಯನ್ನು ವೇಗಗೊಳಿಸಿದೆ ಎಂದು ಡಾ. ತಿಮ್ಮಯ್ಯ ಹೇಳಿದರು.…

Read More

ಥಾಣೆ: ಮುಂಬೈ: ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದು ತುಂಬಿದ್ದ ಲೋಕಲ್ ರೈಲಿನಿಂದ ಬಿದ್ದು ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಕಾಲಿಡಲು ಜಾಗವಿಲ್ಲದಷ್ಟು ಕಿಕ್ಕಿರಿದು ತುಂಬಿದ್ದ ರೈಲು ಕಾಸರ ಕಡೆಗೆ ಹೋಗುತ್ತಿದ್ದಾಗ ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿನ ಬಾಗಿಲಲ್ಲಿ ನಿಂತು ನೇತಾಡುತ್ತಿದ್ದ ಪ್ರಯಾಣಿಕರು: ಪೀಕ್ ಅವರ್‌ನಲ್ಲಿ ಹೆಚ್ಚಿನ ಪ್ರಯಾಣಿಕರಿಂದ ತುಂಬಿದ ರೈಲಿನಲ್ಲಿ ಅನೇಕ ಜನರು ಬಾಗಿಲುಗಳಲ್ಲಿ ನಿಂತು ನೇತಾಡುತ್ತಿದ್ದರು. ರೈಲು ಚಲಿಸುತ್ತಿದ್ದಂತೆಯೇ 10 ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಈ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಥಾಣೆಯ ದಿವಾದಲ್ಲಿ ಈ ದುರ್ಘಟನೆ ನಡೆದಿದೆ. ಪ್ರಯಾಣಿಕರು ಸ್ಥಳೀಯ ರೈಲಿನ ಬಾಗಿಲುಗಳ ಮೇಲೆ ನಿಂತಿದ್ದರು. ಮೃತರೆಲ್ಲರೂ 30 ರಿಂದ 35 ವರ್ಷ ವಯಸ್ಸಿನವರು ಎನ್ನಲಾಗಿದೆ. ಪ್ರಯಾಣಿಕರು ತಾವಾಗಿಯೇ ಕೆಳಗೆ ಬಿದ್ದಿದ್ದಾರೆಯೇ ಅಥವಾ ಬ್ಯಾಗ್‌ಗಳಿಂದಾಗಿ ಅಥವಾ ಯಾರಾದರೂ…

Read More

ಕೊಣಾಜೆ: ಯುರೋಪಿಯನ್‌ ಒಕ್ಕೂಟವು ಭೌಗೋಳಿಕ ಪ್ರದೇಶದಲ್ಲಿ ಚಿಕ್ಕದಾಗಿದ್ದು, ಜಾಗತಿಕ ಜನಸಂಖ್ಯೆಯನ್ನು ಶೇ 5.9% ಹೊಂದಿದ್ದು, ಆರ್ಥಿಕವಾಗಿ ಜಾಗತಿಕ ಮಟ್ಟದಲ್ಲಿ ದ್ವೀತಿಯ ಸ್ಥಾನವನ್ನು ಹೊಂದುವುದರ ಮೂಲಕ ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳೊಂದಿಗೆ  ಉತ್ತಮ ಆರ್ಥಿಕತೆ ಸಹಕಾರ ಮತ್ತು ಸಹಭಾಗಿತ್ವವನ್ನು ಹೊಂದಿದೆ ಎಂದು ಸ್ಪೇನ್ ನ ಮಾಜಿ ಯುರೋಪಿಯನ್‌ ಪಾರ್ಲಿಮೆಂಟ್‌ ಸದಸ್ಯರಾದ ಜೋರ್ಡಿ ಸೋಲೆ ಫರ್ನಾಂಡೊ ಅವರು ಹೇಳಿದರು.ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದಲ್ಲಿ “ಭೌಗೋಳಿಕ ರಾಜಕೀಯ ವ್ಯವಸ್ಥೆಯಲ್ಲಿ ಯುರೋಪಿಯನ್‌ ಒಕ್ಕೂಟದ ಕ್ರಮ, ಸವಾಲುಗಳು, ಕಾರ್ಯತಂತ್ರಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.‌‌‌ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸುವಂತೆ ಸಂಘರ್ಷ ನಿವಾರಣೆಗೆ ಸಾಮಾನ್ಯ ವಿದೇಶಾಂಗ ಮತ್ತು ಭದ್ರತಾ ನೀತಿಯನ್ನು ರೂಪಿಸಿಕೊಂಡಿದೆ. ಇದರ ಮೂಲಕ ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಾಗುವ ಸಂಘರ್ಷಗಳನ್ನು ತಡೆದು ಶಾಂತಿಯನ್ನು ರೂಪಿಸುವುದರ ಮೂಲಕ ಮಾನವೀಯ ನೆರವನ್ನು ನೀಡುತ್ತಿದೆ. ಪ್ರಸ್ತುತದಲ್ಲಿ ಯುರೋಪಿಯನ್‌ ಒಕ್ಕೂಟವು 24 ಮಿಲಿಟರಿ ಮತ್ತು ನಾಗರಿಕ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಜಾಗತಿಕ ಮಟ್ಟದಲ್ಲಿ ಒಂದು ಮೌಲ್ಯಧಾರಿತ ಸಂಘಟನೆಯಾಗಿ ಹೊರಹೊಮ್ಮಿದೆ…

Read More

ಉಳ್ಳಾಲ ದರ್ಗಾ ದ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿಯವರ ಸಹೋದರ ಆಗಿದ್ದ ಅವರು ಮೀನು ವ್ಯಾಪಾರ ಮಾಡುತ್ತಿದ್ದರುಮೃತರು ಪತ್ನಿ ಮತ್ತು ಐದು ಗಂಡು-ಒಬ್ಬಳು ಪುತ್ರಿ ಸಹಿತ ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಕಾಂಗ್ರೆಸ್ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ್, ಉದ್ಯಮಿಗಳಾದ ಮುಹಮ್ಮದ್ ತ್ವಾಹ ಹಾಜಿ, ಯು.ಕೆ. ಇಲ್ಯಾಸ್, ಕಬೀರ್ ಚಾಯಬ್ಬ ಮುಹಿಯುದ್ದೀನ್ ಹಾಜಿ ಪೇಟೆ ಸಂತಾಪ ಸೂಚಿಸಿದ್ದಾರೆ.

Read More

ಮಂಗಳೂರು : ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿರುವುದಕ್ಕೆ ದ.ಕ. ಸಂಸದ ಬ್ರಿಜೇಶ್ ಚೌಟ ಸ್ವಾಗತಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಬಜೆಯಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಚೌಟ ಅವರು ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು ಅದನ್ನು ಎನ್‌ಐಎ ಸಂಸ್ಥೆಗೆ ವಹಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಸುಹಾಸ್ ಶೆಟ್ಟಿ ಹತ್ಯೆಯ ಗಂಭೀರತೆ ಹಾಗೂ ಅದರ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡವಿರುವ ಅನುಮಾನ ಇದೆ ಎಂದು ಹೇಳಿದ್ದರು ಸುಹಾಸ್ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಚೌಟ ಅವರು, ಸುಹಾಸ್ ಶೆಟ್ಟಿ ಹತ್ಯೆಯಾದ ಬೆನ್ನಲ್ಲೇ ಈ ಪ್ರಕರಣವನ್ನು ಎನ್‌ಐಎ ತನಿಖಾ ಸಂಸ್ಥೆಗೇ ವಹಿಸಬೇಕೆಂದು ನಾನು ಒತ್ತಾಯಿಸಿದ್ದೆ ಆ ಕೂಡಲೇ ಗೃಹ ಸಚಿವರಾದ ಅಮಿತ ಷಾ ಅವರಿಗೂ ಪತ್ರ ಬರೆದು, ಸುಹಾಸ್ ಹತ್ಯೆಯಲ್ಲಿ ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ…

Read More

ಬಂಟ್ವಾಳ: ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ.ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್‌ಐಎ ತನಿಖೆಯಲ್ಲಿ ನ್ಯಾಯ ಸಿಗಲಿದೆ ಅಂತ ಎನ್‌ಐಎಗೆ ಕೊಡಲು ಹೋರಾಟ ಮಾಡಿದ್ದೆವು. ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಹಿಂದೂ ಸಂಘಟನೆಗಳು, ಮಾತ್ರವಲ್ಲದೆ ನಮ್ಮ ಗ್ರಾಮದ ಬಿಜೆಪಿನಾಯಕರೂ ನಮಗೆ ಸಹಕಾರ ನೀಡಿದ್ದರು. ಬೆಂಗಳೂರಿಗೆ ಹೋಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ, ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯನ್ನು ನಿಜ ಮಾಡಿದೆ. ಇದಕ್ಕಾಗಿ ನಾವು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇವೆ ಎಂದರು.

Read More

ಮಂಗಳೂರು: ಪವಿತ್ರ ಹಜ್ ಯಾತ್ರೆಯಲ್ಲಿರುವ ಸ್ಪೀಕರ್ ಯು.ಟಿ.ಖಾದರ್ ಜೂ.11ರಂದು ದ.ಕ.ಜಿಲ್ಲೆಗೆ ಮರಳಲಿದ್ದಾರೆ.ಮಕ್ಕಾದಿಂದ ನೇರ ಮಂಗಳೂರಿಗೆ ಆಗಮಿಸಲಿರುವ ಅವರು ಜೂ.11ರಂದು ಬೆಳಗ್ಗೆ 9ಕ್ಕೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ  ಸಾರ್ವಜನಿಕರ ಭೇಟಿಗೆ ಸಿಗಲಿದ್ದಾರೆ. ಬೆಳಗ್ಗೆ 10ಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹ್ಮಾನ್‌ರ ಮನೆಗೆ ಮತ್ತು ಮಧ್ಯಾಹ್ನ 12ಕ್ಕೆ ದೇರಳಕಟ್ಟೆ ಮತ್ತು ಮಂಜನಾಡಿಯಲ್ಲಿ ಪ್ರಕೃತಿ ವಿಕೋಪದಿಂದ ದುರಂತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡುವರು.  ಅಂದು ಸಂಜೆ 4.30ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ಮತ್ತೆ ಸಾರ್ವಜನಿಕರ ಭೇಟಿಗೆ ಸಿಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.  

Read More

ಉಳ್ಳಾಲ: ಉಳ್ಳಾಲಿಗರಿಗೆ ಮಂಗಳೂರೇ ಅನುಕೂಲಕರವಾಗಿತ್ತು. ಸ್ಥಳೀಯ ಶಾಸಕರ ಒಣಪ್ರತಿಷ್ಠೆಗೆ ಬೇಕಾಗಿ ಉಳ್ಳಾಲ ತಾಲೂಕು ರಚನೆಯಾಯಿತು. 2019ರಲ್ಲಿ ಸರಕಾರದ ಆದೇಶದಂತೆ ಮುಲ್ಕಿ ಹಾಗೂ ಉಳ್ಳಾಲ ತಾಲೂಕು ರಚನೆಯಾಗಿ ಮುಲ್ಕಿಯಲ್ಲಿ ನೂತನ ತಾಲೂಕು ಕಚೇರಿ (ಪ್ರಜಾಸೌಧ) ತಲೆಎತ್ತಿ ನಿಂತಿದೆ. ಆದರೆ ಉಳ್ಳಾಲದಲ್ಲಿ ನೂತನ ಕಟ್ಟಡದ ಪ್ರಸ್ತಾಪವೇ ಇಲ್ಲದಿರುವುದು ದುರದೃಷ್ಟಕರ ಎಂದು ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ. 2019ರ ಪ್ರಾರಂಭದಲ್ಲೇ ಕರ್ನಾಟಕ ರಾಜ್ಯ ಸರಕಾರದ ಆದೇಶದಂತೆ ಉಳ್ಳಾಲ ಹಾಗೂ ಮುಲ್ಕಿ ತಾಲೂಕುಗಳು ರಚನೆಯಾಗಿದೆ. ಇಲ್ಲಿ ಮುಲ್ಕಿ ತಾಲೂಕು ರಚನೆಯಾಗುವಲ್ಲಿ ಅಲ್ಲಿನ ಜನತೆಯ ಧ್ವನಿ ಪ್ರಬಲವಾಗಿತ್ತು. ಇದರಿಂದಾಗಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರವೂ ಕೂಡ ಮುಂದಡಿ ಇಟ್ಟಿತು. ಆದರೆ ಉಳ್ಳಾಲ ತಾಲೂಕು ರಚನೆಯಾಗಬೇಕೆಂದು ಸ್ಥಳೀಯರ ಕೂಗೇ ಇರಲಿಲ್ಲ. ಯಾಕೆಂದರೆ ಎಲ್ಲರಿಗೂ ಮಂಗಳೂರೇ ತುಂಬಾ ಅನುಕೂಲಕರವಾಗಿತ್ತು. ಆದರೆ ಆರು ವರ್ಷಗಳು ಕಳೆದರೂ ಇನ್ನೂ ಕೂಡ 32 ವಿವಿಧ ಇಲಾಖೆಗಳನ್ನು ಒಳಗೊಂಡ ತಾಲೂಕು ಕಚೇರಿ ನಿರ್ಮಾಣವಾಗಿಲ್ಲ. ಆರು ಬಾರಿ ಮಂಡನೆಯಾದ ಬಜೆಟ್ ನಲ್ಲಿ ನೂತನ ಕಟ್ಟಡದ…

Read More

ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಅವರ ನಿವಾಸಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಇಂದು ಭೇಟಿ ನೀಡಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿತು. ಈ ವೇಳೆ ಹತ್ಯೆ ನಡೆದ ಬಗ್ಗೆ ಹಾಗೂ ನಂತರದ ಪರಿಸ್ಥಿತಿಗಳ ಬಗ್ಗೆ ಮನೆಯವರೊಂದಿಗೆ ಸಮಾಲೋಚನೆ ನಡೆಸಿ. ತಮ್ಮ ನೋವಿನಲ್ಲಿ ಭಾಗಿಯಾಗುವುದರ ಜೊತೆಗೆ ಅಮಾಯಕ ಅಬ್ದುಲ್ ರಹ್ಮಾನ್ ಕೊಲೆ ಆರೋಪದಲ್ಲಿ ನೇರವಾಗಿ ಭಾಗಿಯಾದ ಹಾಗೂ ಸೂತ್ರಧಾರರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಅಬ್ದುಲ್ ರಹ್ಮಾನ್ ಮನೆಯವರಿಗೆ ಗರಿಷ್ಠ ಪ್ರಮಾಣದಲ್ಲಿ ಆರ್ಥಿಕ ಪರಿಹಾರ ನೀಡುವಂತೆ ಸರಕಾರ ಹಾಗೂ ಪೊಲೀಸು ಇಲಾಖೆಗೆ ಒತ್ತಾಯಿಸುವುದಾಗಿ ತಿಳಿಸಲಾಯಿತು. ಅಲ್ಲದೆ ಮುಂದಿನ ಎಲ್ಲಾ ಕಾನೂನು ಹೋರಾಟಗಳಲ್ಲೂ ಸಂಘಟನೆಯು ತಮ್ಮ ಜೊತೆ ನಿಲ್ಲುವ ಭರವಸೆಯನ್ನು ನೀಡಿ, ಮನೆಯವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು. ನಿಯೋಗದಲ್ಲಿ ಜಿಲ್ಲಾ ಸಂಚಾಲಕರಾದ ಸದಾಶಿವ…

Read More