Author: UllalaVani

Kannada News From Coastal Karnataka

ಬಂಟ್ವಾಳ : ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ. 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ಮೊದಲ ಹಂತದ ಕಾಮಗಾರಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಇನ್ನು ಮೂರು, ನಾಲ್ಕು ತಿಂಗಳೊಳಗೆ ಯೋಜನೆಯ ಎಲ್ಲ ಕೆಲಸಗಳೂ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಸದ್ಯ 28.49 ಕೋಟಿ ರೂ. ವೆಚ್ಚದಲ್ಲಿ ಹತ್ತು ಹಲವು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದೆ. ಮುಂಗಡ ಬುಕ್ಕಿಂಗ್ ಸಹಿತ ಟಿಕೆಟ್ ಕೌಂಟರ್ ನಿರ್ಮಾಣವಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವೈಟಿಂಗ್ ರೂಮ್ ವ್ಯವಸ್ಥೆ, ಒಂದು ಕೆಫೆಟೀರಿಯಾ, ಪ್ರತಿಯೊಂದು ಪ್ಲಾಟ್ ಫಾರ್ಮ್ ಗಳಲ್ಲಿ ಸುಸಜ್ಜಿತ ಶೌಚಾಲಯ, ಸ್ಟೇಷನ್…

Read More

ಪುತ್ತೂರು: ಅಕ್ರಮ ಸಕ್ರಮ ಜಮೀನು ಪರಭಾರೆಗೆ ಎನ್‌ಓಸಿ ನೀಡಲು ಲಂಚ ಪಡೆದ ಆರೋಪದಲ್ಲಿ ತಾಲೂಕು ಕಚೇರಿ ಭೂಸುಧಾರಣೆ ಶಾಖೆ ಕೇಸ್ ವರ್ಕರ್ ಸುನಿಲ್ ಲೋಕಾಯುಕ್ತ ಪೊಲೀಸರಿಂದ ರೆಡ್ ಹ್ಯಾಂಡ್ ಆಗಿ ಬಂಧನಕ್ಕೊಳಗಾದ ಬಳಿಕ ಪುತ್ತೂರು ತಹಸೀಲ್ದಾರ್ ಎಸ್.ಬಿ.ಕೂಡಲಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲಿ ತಹಸಿಲ್ದಾರ್ ವಿರುದ್ಧವೂ ದೂರು ದಾಖಲಾಗಿದ್ದು, ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಲೋಕಾಯಕ್ತ ಪೊಲೀಸರು ತಿಳಿಸಿದ್ದರು. ಕೇಸ್ ವರ್ಕರ್ ಸುನಿಲ್ ಬಂಧನದ ಬಳಿಕ ತಹಸೀಲ್ದಾರ್ ಎಸ್.ಬಿ.ಕೂಡಲಗಿ ನಾಪತ್ತೆಯಾಗಿದ್ದು ಆ.29,30ರಂದು ಅವರು ಕಚೇರಿಗೆ ಬಂದಿರಲಿಲ್ಲ. ಅವರ ಕಚೇರಿಗೆ ಬೀಗ ಹಾಕಲಾಗಿದೆ. ಈ ನಡುವೆ ಅವರು ಎರಡು ದಿನದ ರಜೆ ಪಡೆಯಲು ಪ್ರಯತ್ನ ನಡೆಸಿದ್ದರೆಂದು ಮೂಲಗಳಿಂದ ತಿಳಿದು ಬಂದಿದೆ.ರಜೆ ಪಡೆಯುವ ಪ್ರಕ್ರಿಯೆಯನ್ನು ತಹಸೀಲ್ದಾರ್ ಆರಂಭಿಸಿದ್ದರು ಎಂದು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ತಿಳಿಸಿದ್ದಾರೆ.ಆದರೆ, ಪುತ್ತೂರು ತಹಸೀಲ್ದಾರ್‌ಗೆ ರಜೆ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ಸೂಚನೆ:ತಹಸೀಲ್ದಾ‌ರ್ ಕಚೇರಿಯ ಭೂಸುಧಾರಣೆ ಶಾಖೆಯ ಕೇಸ್ ವರ್ಕರ್ ಸುನಿಲ್ ಅವರನ್ನು ಬಂಧಿಸಿರುವ ಲೋಕಾಯುಕ್ತ…

Read More

ಸುರತ್ಕಲ್ : ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದು ದ್ವಿಚಕ್ರ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61) ಮೂಲತಃ ಉತ್ತರ ಕರ್ನಾಟದ ಸದ್ಯ ಚೇಳಾಯರಿನಲ್ಲಿ ವಾಸ ವಿರುವ ಹನುಮಂತ ಎಂಬವರ ಮಗ ವಿಶ್ವನಾಥ (16) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕರುಣಾಕರ ಶೆಟ್ಟಿ ಅವರು ಮುಕ್ಕದಲ್ಲಿನ ಅಂಗಡಿ ಮುಚ್ಚಿ ಹಾಲಿಗೆ ಬಂದಿದ್ದ ನೆರೆ ಮನೆಯ ವಿಶ್ವಾನಾಥ ಅವರನ್ನು ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ತನ್ನ ದ್ವಿಚಕ್ರ ವಾಹನದಲ್ಲಿ ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಸುರತ್ಕಲ್ ಕಡೆ ತೆರಳುತ್ತಿದ್ದ ಕಾರು ಡಿಕ್ಕಿಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ಕರುಣಾಕರ ಶೆಟ್ಟಿ ಅವರು ಸುಮಾರು 50ಮೀಟರ್ ದೂರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದು, ತಲೆಗೆ ಬಲವಾದ ಹೊಡೆತ ಬಿದ್ದು,…

Read More

ಮಂಗಳೂರು : ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25 ಪ್ರಶಸ್ತಿಯನ್ನು ಇತ್ತೀಚೆಗೆ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25,749.48ಲಕ್ಷ ಹೊಂದಿದ್ದು, ರೂ. 3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.ಈ ಕಾರ್ಯಕ್ರಮದಲ್ಲಿ…

Read More

ದೇರಳಕಟ್ಟೆ : ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ರವಿವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ದಾಳಿ ಸಂದರ್ಭ ತೋಮಸ್ ಮತ್ತು ಮಣಿಕುಟ್ಟನ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ ಸುಮಾರು 1,15,110-00 ಮೌಲ್ಯ ದ ಅಕ್ರಮ ಮದ್ಯ ತಯಾರಿಕೆಯ ಮೂರು ಮೆಷಿನ್ ಗಳು, ಮಿಕ್ಸರ್ ಮೆಷಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 ಮನ್ಶನ್ ಹೌಝ್…

Read More

ಕಾವೂರು : ವೀಣಾ ಡೆಕೋರ್ ಮತ್ತು ಈವೆಂಟ್ಸ್ ಮಾಲಕರಾದ ನವೀನ್ ಚಂದ್ರ ಸಾಲ್ಯಾನ್ ಮಾಲಕತ್ವದ ವಿ.ಡಿ. ಟ್ರೋಫಿ-2025ನ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಕರಂಬಾರು ಕೊಪ್ಪಲ ಕ್ರಿಡಾಂಗಣದಲ್ಲಿ ನಡೆಯಿತು.ಕ್ರಿಕೆಟ್ ಪಂದ್ಯಾಟ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ ಅಧ್ಯಕ್ಷರಾದ ತುಷಾರ್ ಸುರೇಶ್ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹ್ಯಾರೆಸಿದರು.ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಪ್ಲವರ್ ಡೆಕೋರೇಶನ್ ಯುನಿಯನ್ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಕೊಪ್ಪಲ, ಗಣೇಶ್ ಅರ್ಬಿ , ಕಾವೂರು ಕಚ್ಚೂರ ಮಾಲ್ದಿ ಕ್ಯಾಂಟೀನ್ ಮಾಲಕರಾದ ಶ್ರೀನಿವಾಸ , ಸುರೇಂದ್ರ ಕಾಮತ್ ಕೆಂಜಾರು, ಪ್ಲವರ್ ಡೇಕೋರೇಶನ್ ಮಾಲಕರಾದ ಸ್ಟಾನಿ ಅಂಚನ್ ಮುಂತಾದವರು ಉಪಸ್ಥಿತಿರಿದ್ದರು. ರಾಕೇಶ್ ಕುಂದರ್ ನಿರೂಪಿಸಿದರು. ವಿನಯ್ ಸಾಲ್ಯಾನ್ ವಂದಿಸಿದರು.

Read More

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ, ನೀರುಮಾರ್ಗ ಇವರುಗಳ ಜಂಟಿ ಸಹಯೋಗದೊಂದಿಗೆ ಆಗಸ್ಟ್‌ 31ರಂದು ಆದಿತ್ಯವಾರ ಬೆಳಿಗ್ಗೆ 9.30 ರಿಂದ 12.30ರ ವರೆಗೆ ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ ಈ ವೈದ್ಯಕೀಯ ಶಿಬಿರದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ. ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳ ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹಾಗೂ ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ…

Read More

ಮಂಗಳೂರು : ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಅವರು ಬ್ರೇಕ್ ಹಾಕಿದ್ದಾರೆ, ಆದರೆ ಬಸ್ ಆಟೋಗೆ ಡಿಕ್ಕಿ ಹೊಡೆದು, ಜಾರಿ ಪಲ್ಟಿಯಾಗಿದೆ.ಗಾಬರಿಗೊಂಡ ಚಾಲಕ ವಾಹನವನ್ನು ತೊರೆದು ಪರಾರಿಯಾಗಿದ್ದಾನೆ. ಪರಿಣಾಮವಾಗಿ, ಚಾಲಕನಿಲ್ಲದ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಉರುಳಿ, ನಿಲ್ಲಿಸಿದ್ದ ಆಟೋರಿಕ್ಷಾ ಮತ್ತು ಬಸ್‌ಗಾಗಿ ಕಾಯುತ್ತಿದ್ದ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸಾಮಾಜಿಕ ಜಾಲತಾಣ ಮತ್ತು ಕೆಲವು ಮಾಧ್ಯಮಗಳಲ್ಲಿ ಕಳಪೆ ವಾಹನ ನಿರ್ವಹಣೆಯ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿರುವ ಕೆಎಸ್‌ಆರ್‌ಟಿಸಿ, ವಾಹನಕ್ಕೆ ಬ್ರೇಕ್ ವೈಫಲ್ಯ ಅಥವಾ…

Read More

ಮಂಗಳೂರು : ಭಾರತ ಸರಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು , ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ. ಇತ್ತೀಚೆಗೆ ನಡೆದ ಎಪಿವೈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಕುಮಾರ್ ಹೊಳ್ಳ ಹಾಗೂ ಸಹಾಯಕ ಮಹಾಪ್ರಬಂಧಕರಾದ ರಾಜೇಶ್ ಶೆಟ್ಟಿ ಅವರು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಮಮತಾ ಶಂಕರ್ ಅವರಿಂದ ಸ್ವೀಕರಿಸಿದ್ದರು. ಭಾರತ ಸರಕಾರದ ಹಣಕಾಸು ಸೇವೆಗಳ ಜಂಟಿ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಗೋಯಲ್ , ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಎಸ್.ರಾಮನ್, ಮುಖ್ಯ ಮಹಾಪ್ರಬಂಧಕರಾದ ಪ್ರವೇಶ್ ಕುಮಾರ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಪ್ರಶಸ್ತಿಯನ್ನು ಶುಕ್ರವಾರ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರಿಗೆ…

Read More