Author: UllalaVani

Kannada News From Coastal Karnataka

ಉಳ್ಳಾಲ : ಮರಣವನ್ನು ಪ್ರಾಮಾಣಿಕವಾಗಿ ಎದುರಿಸುವ ಮನೋಬಲವೇ ಮಾನವನ ಸತ್ಯ ಪರೀಕ್ಷೆ. ರಹಸ್ಯಗಳನ್ನು ಬೇಧಿಸಿ ಅರಿಯುವುದೇ ವಿಜ್ಞಾನ, ಆದರೆ ಅದರ ಪಾರಮಾರ್ಥಿಕ ವ್ಯವಸ್ಥೆಯನ್ನು ನಿರ್ಮಿಸಿರುವುದು ದೇವರು. ಬ್ರಹ್ಮಾಂಡದ ಸೂಕ್ಷ್ಮ ನಿಯಮಗಳನ್ನು ರೂಪಿಸಿದ ಶಕ್ತಿ ದೇವರದೇ. ಭಾರತವು ಹಿಂದೂ ಧರ್ಮದ ಆಳವಾದ ತತ್ವಗಳಿಂದ ಜಗತ್ತಿಗೆ ಗುರುವಾಗಿದ್ದ ದೇಶ. ಈ ಧರ್ಮವು ಮನುಕುಲಕ್ಕೆ ಜ್ಞಾನ, ಶಕ್ತಿ ಮತ್ತು ಆಧ್ಯಾತ್ಮಿಕ ದಾರಿ ತೋರಿಸಿತು. ಎಲ್ಲರಿಗೂ ಶಕ್ತಿ ನೀಡುವ, ಸತ್ಯದತ್ತ ಸಾಗುವ ಪ್ರೇರಣೆಯಾದ ಕೇಂದ್ರವೇ ಧರ್ಮ. ಅದನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕುತ್ತಾರು ಕ್ಷೇತ್ರದ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಕುತ್ತಾರಗುತ್ತು ಹೇಳಿದರು. ಅವರು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಶ್ರೀ ಕ್ಷೇತ್ರ ಕುತ್ತಾರು ಇಲ್ಲಿ ಜರಗಿದ 39 ನೇ ವರ್ಷದ ಸಾರ್ವಜನಿಕ ಕುತ್ತಾರು ಗಣೇಶೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ವೇದಿಕೆಯಲ್ಲಿ ಜರಗಿದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಮಂಗಳೂರು ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಮಾತನಾಡಿ, ದೇವಾಲಯವು…

Read More

ಕೋಟೆಕಾರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇವರ ನೇತೃತ್ವದಲ್ಲಿ ಕೃಷಿ ಇಲಾಖೆ ಮಂಗಳೂರು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ತಾಂತ್ರಿಕ ಮಾರ್ಗದರ್ಶನದೊಂದಿಗೆ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನತೆಯ ನಡೆ – ಕೃಷಿ ಅಧ್ಯಯನ ಹಾಗೂ ಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮ ಆ.30ರಂದು ಬೆಳಗ್ಗೆ 9ರಿಂದ ಸೋಮೇಶ್ವರ ಗ್ರಾಮದ ಪಿಲಾರು ಬೈಲು ಗದ್ದೆಯಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ದರ್ಶನ್‌ ಕೆ.ವಿ., ಜಿಲ್ಲಾ ಪಂಚಾಯತ್‌ ಮುಖ್ಯಾಧಿಕಾರಿ ನರ್ವಾಡೆ ವಿನಾಯಕ, ಜಂಟಿ ಕೃಷಿ ನಿರ್ದೇಶಕ ಡಾ| ಹೊನ್ನಪ್ಪ ಗೋವಿಂದ…

Read More

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳ್ಳೆಯದಾಗಲಿ. ಬಂಟರ ಯಾನೆ ನಾಡವರ ಮಾತೃ ಸಂಘ ನಡೆಸುತ್ತಿರುವ ಈ ಕಾರ್ಯಕ್ರಮ ಲೋಕಕ್ಕೆ ಮಾದರಿಯಾದುದು. ನಮ್ಮೆಲ್ಲರ ಮೇಲೆ ಗಣೇಶನ ಕೃಪೆ ಸದಾ ಇರಲಿ” ಎಂದರು. ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಮ ಭಟ್ ಮಾತನಾಡಿ, “ಈ ಜಗತ್ತು ಸರ್ವೋಚ್ಛ ಶಕ್ತಿಯಿಂದ ಮುನ್ನಡೆಯಲ್ಪಡುತ್ತಿದೆ. ಬಾಲ ಗಂಗಾಧರ್ ತಿಲಕ್ ಸ್ಥಾಪಿಸಿರುವ ಗಣೇಶೋತ್ಸವ ನಿಜ ಅರ್ಥದಲ್ಲಿ ಇಡೀ ಸಮಾಜದ ಉತ್ಸವವಾಗಿದೆ. ಇದರಲ್ಲಿ ಎಲ್ಲಾ ಜಾತಿ ಧರ್ಮದ ಜನರು ಪಾಲ್ಗೊಳ್ಳುತ್ತಿರುವುದು…

Read More

ಪುತ್ತೂರು : ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್ ಅವರೊಂದಿಗೆ ಲೈಫ್ ಜಾಕೆಟ್‌ಗಳನ್ನು ತೆಗೆದುಕೊಂಡು ಸ್ಥಳಕ್ಕೆ ಧಾವಿಸಿ, ನಾಲ್ವರು ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. “ಮಲ್ಪೆಯಲ್ಲಿ ಸಮುದ್ರವು ಅತ್ಯಂತ ಅನಿರೀಕ್ಷಿತ ಮತ್ತು ಪ್ರಕ್ಷುಬ್ಧವಾಗಿದೆ. ಈಜಲು ತಿಳಿದಿದ್ದರೂ ಯಾರೂ ಕೂಡ ನೀರಿಗೆ ಇಳಿಯಬಾರದು. ಸಮುದ್ರದ ಅಲೆಗಳು ಯಾವುದೇ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಏರಬಹುದು. ಮೀನುಗಾರರು ಸಮುದ್ರಕ್ಕೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಧರಿಸಬೇಕು” ಎಂದು ಈಶ್ವರ್ ಮಲ್ಪೆ ತಿಳಿಸಿದರು.

Read More

ಮಂಗಳೂರು : ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಈ ಘಟನೆಗೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವ ಅವರು ಆಸ್ಪತ್ರೆಗೆ ಧಾವಿಸಿ ಬಂದು ಆಸ್ಪತ್ರೆಯ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿರವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

Read More

ಬಂಟ್ವಾಳ : ವಾಯುಭಾರ ಕುಸಿತ ದ.ಕ. ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು,ಹಲವೆಡೆ ಹಾನಿಯಾಗಿದೆ. ಈ ನಡುವೆ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಸದ್ಯ ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ರವಾನೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿವೀಕ್ಷಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ.

Read More

ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಗೋಪಿ (58) , ಪತ್ನಿ ಇಂದಿರಾ (54) ,ಪುತ್ರ ರಂಜೇಶ್ (34) ಮೃತಪಟ್ಟವರು. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ. ಸಂಬಂಧಿಕರೋರ್ವರ ಮೊಬೈಲ್‌ಗೆ ಕರೆ ಬಂದಿದ್ದು, ತಮ್ಮನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದನೆನ್ನಲಾಗಿದೆ ರಂಜೇಶ್ ಈ ಕರೆ ಮಾಡಿದ್ದನೆನ್ನಲಾಗಿದೆ. ಸಂಬಂಧಿಕರು ಹಾಗೂ ನಾಗರಿಕರು ತಲುಪಿ ಆಸ್ಪತ್ರೆಗೆ ತಲಪಿಸಿದರೂ ಮೂವರೂ ಮೃತಪಟ್ಟಿದ್ದರು. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ದುಬೈಯಲ್ಲಿದ್ದರು. ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದು, ಉದ್ಯಮ ನಡೆಸುತ್ತಿದ್ದರು. ಇದು ಯಶಸ್ವಿ ಯಾಗಲಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಿತ್ತು ಎನ್ನಲಾಗಿದೆ. ಉದ್ಯಮ ನಿಲ್ಲಿಸಿ ಕೂಲಿ ಕೆಲಸಕ್ಕೆ…

Read More

ಮಂಗಳೂರು : ತುಳುನಾಡಿನ ಕೃಷಿ ಪರಂಪರೆ ಪ್ರಕೃತಿ ಆರಾಧನೆ, ಸೌಹಾರ್ದ ಹಾಗೂ ಸಮೃದ್ಧ ಬದುಕಿನ ಆಶಯವನ್ನು ಪೋಷಿಸಿಕೊಂಡಿದೆ. ಮನೆ ತುಂಬಿಸುವ ಹಿನ್ನೆಲೆಯಲ್ಲಿ ಭತ್ತದ ತೆನೆಯನ್ನು ಕಟ್ಟುವ ಸಂಪ್ರದಾಯ ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆಸುವ ಆಚರಣೆಯಾಗಿ ಮುಂದುವರಿದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಕುಲಶೇಖರದ ಕನ್ನಗುಡ್ಡೆಯ ಕೊರಗತನಿಯ ಕ್ಷೇತ್ರದಲ್ಲಿ ನಡೆದ ತೆನೆ ಹಾಗೂ ಕಬ್ಬು ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಶಾಸಕ ಜೆ.ಆರ್. ಲೋಬೋ ಅವರು, “ಕೃಷಿ ಬದುಕು ಎಲ್ಲರನ್ನು ಒಂದಾಗಿಸುವ ಪರಂಪರೆಯನ್ನು ಹೊಂದಿದೆ. ಕ್ರೈಸ್ತರು ಆಚರಿಸುವ ತೆನೆ ಹಬ್ಬವು ತುಳುನಾಡಿನಲ್ಲಿ ಕುರಲ್ ಪರ್ಬ ಎಂದು ಜನಾನುರಾಗಿಯಾಗಿದ್ದು, ಇದು ಸಾಮರಸ್ಯದ ಪ್ರತೀಕವಾಗಿದೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿ-ಫೋರ್ ಟಿವಿ ವಾಹಿನಿಯ ಮುಖ್ಯಸ್ಥ ಲಕ್ಷ್ಮಣ್ ಕುಂದರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಘಟಕ ಡೆನಿಸ್ ಡಿಸಿಲ್ವಾ, ಮಾಜಿ ಕಾರ್ಪೊರೇಟರ್ ಪ್ರಕಾಶ್, ಕೆಎಸ್ಆರ್‌ಟಿಸಿ ಮಾಜಿ ನಿರ್ದೇಶಕ ಟಿ.ಕೆ. ಸುಧೀರ್, ಶೇಖರ್…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಲ್ಲಾಪುವಿನ ಪೀಸ್ ಪಬ್ಲಿಕ್ ಸ್ಕೂಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯಾವಳಿಯಲ್ಲಿ ಮೊದಲ ಬಾರಿ ಸ್ಪರ್ಧಿಸಿದ ಪೀಸ್ ಪಬ್ಲಿಕ್ ಸ್ಕೂಲ್ ತಂಡ ಆರು ಪಂದ್ಯಗಳಲ್ಲಿ ಅತ್ಯುತ್ತಮವಾಗಿ ಆಡಿ ಪ್ರಶಸ್ತಿ ಪ್ರವೇಶಿಸಿತ್ತು. ಫೈನಲ್ ಪಂದ್ಯದಲ್ಲಿ ಮೂಡುಬಿದಿರೆಯ ಅಲ್ ಪುರ್ಖಾನ್ ಪ್ರಾಥಮಿಕ ಶಾಲಾ ತಂಡವನ್ನು 1-0 ಅಂತರದ ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಪೀಸ್ ಪಬ್ಲಿಕ್ ಸ್ಕೂಲ್ ತಂಡಕ್ಕೆ ಕೋಚ್ ಎನ್.ಉಸ್ಮಾನ್ ಮುಸ್ತಫ ತರಬೇತಿ ನೀಡಿದ್ದರೆ, ಸ್ಕೂಲ್ ಫಿಟ್ನೆಸ್ ಟ್ರೈನರ್ ಅಂತಾರಾಷ್ಟ್ರೀಯ ಖ್ಯಾತಿಯ ಅತ್ಲೀಟ್ ಅಬ್ದುಲ್ ರಹ್ಮಾನ್ ಫಿಟ್ನೆಸ್ ಸಲಹೆ ನೀಡಿದ್ದಾರೆ. ವಿಜೇತ ತಂಡವನ್ನು ಸ್ಕೂಲ್ ಆಡಳಿತ ಸಮಿತಿಯ ಮುಖ್ಯಸ್ಥ ಅಬ್ದುಲ್ ರಹಿಮಾನ್(ಬಾಶಾ) ಅಭಿನಂದಿಸಿದ್ದಾರೆ.

Read More