ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ (SIR) ಮತಗಟ್ಟೆ BLA 2 ಕಾರ್ಯಾಗಾರ ಬಂಟರ ಭವನ ಅಸೈಗೋಳಿಯಲ್ಲಿ ನಡೆಯಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಕಾರ್ಯಗಾರದ ಮಹತ್ವವನ್ನು ತಿಳಿಸಿದರು.ಮಂಡಲ ಅಧ್ಯಕ್ಷ ಜಗಧೀಶ್ ಆಳ್ವಾ ಕುವೆತ್ತಬೈಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸೂಕ್ತ ಸಲಹೆ ಸೂಚನೆ ನೀಡಿ, ಮಂಡಲದ BLA -1 ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು BLA-2 ಗಳಾಗಿ ಜವಾಬ್ದಾರಿ ವಹಿಸಿದ ಎಲ್ಲರೂ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದರು. ಮಂಡಲದ ಪ್ರಭಾರಿ ದಿನೇಶ್ ಅಮ್ಮ್ಟೂರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ. ಆರ್ ಸ್ವಾಗತಿಸಿದರು, ಮಂಡಲದ ಉಪಾಧ್ಯಕ್ಷರಾದ ಯಶವಂತ ದೇರಾಜೆ ಧನ್ಯವಾದ ನೀಡಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು ಮತ್ತು…
Author: UllalaVani
ಉಳ್ಳಾಲ,ಅ.30: ಮಂಜೇಶ್ವರದಲ್ಲಿ ಕಾರ್ಯಾಚರಿಸುತ್ತಿರುವ ಮಳ್ಹರ್ ನೂರಿಲ್ ಇಸ್ಲಾಮಿತ್ತ ಅಲೀಮಿ ಇದರ ಅಧೀನದಲ್ಲಿ `ಅಲ್ ಖಲಂ ಮಳ್ಹರ್ ಫೆಸ್ಟ್’ ಕಾರ್ಯಕ್ರಮವು ನವೆಂಬರ್ 6 ರಿಂದ 9 ರವರೆಗೆ ಬುಖಾರಿ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಮಳ್ಹರ್ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಫಾಝಿಲ್ ಮಂಗಳೂರು ಹೇಳಿದರು. ಅವರು ತೊಕ್ಕೊಟ್ಟು ಪ್ರೆಸ್ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ನವೆಂಬರ್ 6ರಂದು ಸಂಜೆ 5 ಗಂಟೆಗೆ ಮಳ್ಹರ್ ದಅವಾ ಕಾಲೇಜಿನ ಪ್ರಾಧ್ಯಾಪಕ ಸಯ್ಯಿದ್ ಮುಸ್ತಫಾ ಸಿದ್ದೀಖಿ ಅಲ್ ಬುಖಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಳ್ಹರ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಯ್ಯಿದ್ ಅಹ್ಮದ್ ಜಲಾಲುದ್ದೀನ್ ಸಅದಿ ಅಲ್ ಬುಖಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಳ್ಹರ್ ದಅವಾ ಕಾಲೇಜು ಅಡ್ಮಿನಿಸ್ಟ್ರೇಟೇಟಿವ್ ಹಸನ್ ಸಅದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಎಕೆಎಂ ಅಶ್ರಫ್ ಮುಖ್ಯ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೇರಳದ ಖ್ಯಾತ ಗಾಯಕ ಹಾಫಿಲ್ ಮುಬಶ್ಶಿರ್ ಅದನಿ ಮತ್ತು ಅವರ ತಂಡ ಮದ್ಹ್ ಮಜ್ಲಿಸ್ಗೆ ನೇತೃತ್ವ ವಹಿಸಲಿದ್ದಾರೆ ಎಂದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ…
ಮಲ್ಪೆ ,ಅ.30: ಸುಮಾರು 20 ಅಡಿ ಆಳದ ಕೆರೆ ನೀರಿಗೆ ಬಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವಿರುವ ಚೀಲವನ್ನು ಮೇಲಕ್ಕೆತ್ತಿದ ಈಶ್ವರ್ ಮಲ್ಪೆ ಅವರ ತಂಡ ವಾರಸುದಾರರಿಗೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಚಿಕ್ಕಮಗಳೂರು ಮಾಗಡಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಬಿದ್ದಿತ್ತು. ಅದರಲ್ಲಿದ್ದ ಜ್ಯುವೆಲ್ಲರಿ ಅಂಗಡಿಯ ಮಾಲೀಕ ಈಜಿ ದಡ ಸೇರಿದ್ದರು. ಕಾರನ್ನು ಕ್ರೇನ್ ತರಿಸಿ ಮೇಲಕ್ಕೆತ್ತಲಾಯಿತು. ಆದರೆ ಕಾರಿನಲ್ಲಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಚೀಲ ನೀರಿನಲ್ಲಿ ಬಿದ್ದಿತ್ತು. ಕೂಡಲೇ ಉಡುಪಿಯ ಈಶ್ವರ್ ಮಲ್ಪೆಗೆ ಕರೆ ಮಾಡಿ ತಿಳಿಸಲಾಯಿತು. ಕೂಡಲೇ ಅಲ್ಲಿಗೆ ತೆರಳಿದ್ದ ಈಶ್ವರ್ ಮಲ್ಪೆ ಅವರ ತಂಡ ಕೇವಲ 15 ನಿಮಿಷದಲ್ಲಿ ಚಿನ್ನದ ಚೀಲವನ್ನು ನೀರಿನಿಂದ ಮೇಲಕ್ಕೆತ್ತಿದರು. ಈ ಕುರಿತು ಮಾತನಾಡಿದ ಈಶ್ವರ್ ಮಲ್ಪೆ, ‘ಈ ಮೊದಲು ಕೂಡ ಸಾಕಷ್ಟು ಬಾರಿ ನೀರಿಗೆ ಬಿದ್ದ ಚಿನ್ನಾಭರಣಗಳನ್ನು ಹುಡುಕಿ ಕೊಟ್ಟಿದ್ದೇನೆ. ಇದೇ ಮೊದಲ ಸಲ ಏನಲ್ಲ. ಆದರೆ, ಈ ಬಾರಿ ಲಕ್ಷಾಂತರ ಮೌಲ್ಯದ…
ಮಂಗಳೂರು, ಅ.30:ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು
ಬೀರಿ,ಅ.30: ಬೀರಿ ಜಂಕ್ಷನಿಗೆ ಕಳಸವಿದ್ದಂತೆ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ ಐಸ್ ಕೆಫೆ ಸದ್ಯ ವೆರೈಟಿಯಾದ ತಿನಿಸುಗಳನ್ನು ನೀಡುವಲ್ಲಿ ಹೆಸರುವಾಸಿಯಾಗುತ್ತಿದೆ. ಇಲ್ಲಿ ಹಾಟ್ ಆ್ಯಂಡ್ ಕೂಲ್ ಆಂಬಿಯೆನ್ಸ್ ಜೊತೆ ಆಕರ್ಷಕವಾದ ಸೋಫಾದಲ್ಲಿ ಕುಳಿತು ನಿಮಗೆ ಇಷ್ಟವಾದ ವೆರೈಟಿ ಫುಡ್ಗಳನ್ನು ನೀವು ಟೇಸ್ಟ್ ಮಾಡಬಹುದಾಗಿದೆ. ವಿಶಾಲವಾದ ಇನ್ಸೈಡ್ ಸೀಟಿಂಗ್ ಕೆಪ್ಯಾಸಿಟಿ ಜೊತೆಗೆ ಹೊರಗಡೆ ಕುಳಿತು ನಿಮಗೆ ಇಷ್ಟವಾದ ತಿನಿಸುಗಳನ್ನು ನೀವು ಆರ್ಡರ್ ಮಾಡಿದರೆ ಕೆಲವೇ ಕ್ಷಣಗಳಲ್ಲಿ ನೀವು ಕೇಳಿದ ತಿನಿಸುಗಳು ನಿಮಗೆ ಇಷ್ಟವಾದ ರೀತಿಯಲ್ಲಿ ನಿಮಗೆ ಸಿಗುವುದಂತು ಗ್ಯಾರಂಟಿ. ಎಗ್ ಮ್ಯಾಗಿ, ಚಿಕನ್ ಮ್ಯಾಗಿ, ಎಗ್ ರೋಲ್, ಚಿಕನ್ ರೋಲ್, ವೆಜ್ ಅಂಡ್ ನಾನ್ ವೆಜ್, ಪಾಸ್ತಾ, ಬ್ರೋಸ್ಟೆಡ್ ಚಿಕನ್, ಚಿಕನ್ ಪಾಪ್ಸ್, ಚಿಕನ್ ಬರ್ಗರ್, ಚಿಕನ್ ಲೋಡೆಡ್ ಫ್ರೆಂಚ್ ಫ್ರೆöÊಸ್, ವೆಜ್ ಬರ್ಗರ್, ಚಿಕನ್ ಪಿಜ್ಜಾ, ಸ್ಯಾಂಡ್ವಿಚ್ ಇದು ಇವರ ಸಿಗ್ನೇಚರ್ ಡಿಶ್ ಅಂತ ಹೇಳಬಹುದು. ಇಷ್ಟೆಲ್ಲಾ ತಿಂದು ಕುಡಿಯೋಕೆ ಏನು ಅಂತ ಯೋಚನೆ ಮಾಡುವವರಿಗೆ ಇಲ್ಲಿದೆ ಐಸ್ ಕೆಫೆ ಯ ವೆರೈಟಿ…
ಬೆಂಗಳೂರು, ಅ.30:ರಾಜ್ಯದಲ್ಲೀಗ ಸಿಎಂ ಬದಲಾಗ್ತಾರಾ? ಇಲ್ವಾ? ಅನ್ನೋದೇ ದೊಡ್ಡ ಚರ್ಚೆ. ಸಿದ್ದರಾಮಯ್ಯ ಮುಂದುವರೀತಾರೆ ಅನ್ನೋ ವಾದ ಒಂದು ಕಡೆ ಇದ್ರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಪಕ್ಕಾ ಅನ್ನೋದು ಮತ್ತೊಂದು ವಾದ. ಎರಡು ಕಡೆಯ ಬೆಂಬಲಿಗರಲ್ಲಿ ಇಂತಾದ್ದೊಂದು ಭಾವನೆ ಇದೆ. ಈ ಬೆಳವಣಿಗೆಯನ್ನ ಮತ್ತಷ್ಟು ರೋಚಕ ಮಾಡಿರೋದು ಮತ್ತೊಂದು ವಿಷಯ ಅದೇ ದಲಿತ ಸಿಎಂ ಅಸ್ತ್ರ, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಹೆಚ್.ಸಿ.ಮಹದೇವಪ್ಪ ಪದೇ ಪದೇ ಭೇಟಿ ಮಾಡ್ತಿರೋದು ಚರ್ಚೆ ಮಾಡ್ತಿರೋದು ಗೊತ್ತಿರೋ ವಿಚಾರವೇ. ಅದರ ನಡುವೆ ಆಹಾರ ಮತ್ತು ನಾಗರೀಕ ಸಚಿವ ಕೆ.ಎಚ್.ಮುನಿಯಪ್ಪ ಅವರೇ ಬೇಕಾದ್ರೆ ಸಿಎಂ ಆಗಲಿ ಅಂತಾ ಗೃಹ ಸಚಿವ ಪರಮೇಶ್ವರ್ ಅವರೂ ಹೇಳಿ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾದ್ರು. ಈ ಚರ್ಚೆಗಳೆಲ್ಲಾ ಒಂದು ಕಡೆಯಾದ್ರೆ ಇದುವರೆಗೂ ಕಾಂಗ್ರೆಸ್ನಲ್ಲಿ ಯಾವೆಲ್ಲಾ ಸಮುದಾಯದವರು ಮುಖ್ಯಮಂತ್ರಿಗಳಾಗಿದ್ದಾರೆ ಗೊತ್ತಾ?ಯಾವ್ಯಾವ ಸಮುದಾಯದವರು ಮುಖ್ಯಮಂತ್ರಿಗಳಾಗಿದ್ರು?1947 – 1952 ಕೆ.ಸಿ.ರೆಡ್ಡಿ …
ರಾಜ್ಯ ವಿಧಾನಸಭೆಯ ಹಾಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ನಡೆದ ಪುಸ್ತಕ ಮೇಳದಲ್ಲಿ ಭ್ರಷ್ಟಾಚಾರ ಎಸಗಲಾಗಿದೆ. ಬೆಂಗಳೂರಿನ ಶಾಸಕರ ಭವನದ ರೂಮುಗಳಿಗೆ ಕೇವಲ 11 ಸಾವಿರ ರೂಪಾಯಿ ಸ್ಮಾರ್ಟ್ ಲಾಕ್ ಹಾಕಿದ್ದು, ಅದರ ಮೂರು ಪಟ್ಟು ಬಿಲ್ ಮಾಡಿ ಹಣ ಪಡೆದಿದ್ದಾರೆ. ಅಧಿವೇಶನದ ವೇಳೆ ಶಾಸಕರಿಗೆ ಅಗತ್ಯ ಇಲ್ಲದಿದ್ದರೂ ಊಟ, ತಿಂಡಿ ವ್ಯವಸ್ಥೆ, ರೀಕ್ಲೇನರ್ ಚೇರ್ ವ್ಯವಸ್ಥೆ ಮಾಡಿ ಹಣ ಪೋಲು ಮಾಡಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರು ಕಡೆಯವರಿಗೆ, ತಮ್ಮ ಆಪ್ತರಿಗೆ ಬಹಳಷ್ಟು ಗುತ್ತಿಗೆಗಳನ್ನು ನೀಡಿ ಸ್ವಜನ ಪಕ್ಷಪಾತ ಎಸಗಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲ ಆರೋಪಗಳಿಗೆ ವಿದೇಶದಿಂದ ಬಂದ ಸ್ಪೀಕರ್ ಯು.ಟಿ. ಖಾದರ್ ಉತ್ತರ ನೀಡಿದ್ದಾರೆ. ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಲಿ ಸಂಸದರಾಗಿರುವ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಪತ್ರ ಬರೆದರೇ, ಉತ್ತರ ನೀಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಈ…
ಮಂಗಳೂರು, ಅ.30: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಪೆವರೆಗಿನ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಂದ ಕೂಡಿದ್ದು, ಡಾಂಬರು ಕಳಚಿ ಹೋಗಿ ತೀವ್ರ ಹದಗೆಟ್ಟಿದೆ. ಸಂಬಂಧಿಸಿದ ಇಲಾಖೆ ಮುಂದಿನ 15 ದಿನದ ಒಳಗೆ ಈ ರಸ್ತೆಯನ್ನು ದುರಸ್ತಿಗೊಳಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗುವಂತೆ ಮಾಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ ದ.ಕ. ಜಿಲ್ಲಾ ಸಮಿತಿ ಹಾಗೂ ಮಂಗಳೂರು ತಾಲೂಕು ಸಮಿತಿ ಎಚ್ಚರಿಸಿದೆ. ವಿಮಾನ ನಿಲ್ದಾಣದ ಪ್ರವೇಶ ದ್ವಾರದಿಂದ ಬಜ್ಪೆವರೆಗಿನ ರಸ್ತೆಯು ಇತ್ತೀಚಿನ ಭಾರೀ ಮಳೆಯಿಂದಾಗಿ ಡಾಂಬರು ಸಂಪೂರ್ಣವಾಗಿ ಕಳಚಿ ಹೋಗಿ ರಸ್ತೆಯಲ್ಲಿ ಅಪಾಯಕಾರಿ ಹೊಂಡ-ಗುಂಡಿಗಳು ನಿರ್ಮಾಣವಾಗಿದೆ. ಇದರಿಂದಾಗಿ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಪ್ರಯಾಣಿಸುವುದೇ ಕಷ್ಟಕರವಾಗಿದೆ.ಇತ್ತೀಚಿನ ದಿನಗಳಲ್ಲಿ ಕೆಲ ದ್ವಿಚಕ್ರ ವಾಹನ ಸವಾರರು ಈ ಭಾಗದಲ್ಲಿ ಅಪಾಯಕಾರಿ ಗುಂಡಿ ತಪ್ಪಿಸಲು ಹೋಗಿ ತಮ್ಮ ವಾಹನ ಸಮೇತ ರಸ್ತೆ ಗುಂಡಿಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲ ದ್ವಿಚಕ್ರ ವಾಹನ…
ಭಾರತದ 29 ವರ್ಷದ ಯುವಕನೊಬ್ಬ ಅಬುಧಾಬಿಯಲ್ಲಿ 240 ಕೋಟಿ ರೂಪಾಯಿ ಜಾಕ್ ಪಾಟ್ ಲಾಟರಿ ಗೆದ್ದಿದ್ದಾನೆ. ಭಾರತದ ಅನಿಲ್ ಕುಮಾರ್ ಬೊಲ್ಲಾ ಎಂಬಾತನೇ ಆ ಅದೃಷ್ಟಶಾಲಿ. ಇತ್ತೀಚೆಗೆ ಅಬುಧಾಬಿಯಲ್ಲಿ ನಡೆದ ಲಕ್ಕಿ ಡೇ ಡ್ರಾನಲ್ಲಿ ಅನಿಲ್ ಕುಮಾರ್ ಗ್ರ್ಯಾಂಡ್ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಲಾಟರಿ ವಿಜೇತ ಅನಿಲ್ ಕುಮಾರ್ ವಿಡಿಯೋವನ್ನು ಯುಎಇ ಲಾಟರಿ ಸಂಸ್ಥೆಯು ಟ್ವೀಟರ್ ನಲ್ಲಿ ಜನರ ಜೊತೆ ಹಂಚಿಕೊಂಡಿದೆ. ನಿರೀಕ್ಷೆಯಿಂದ ಆಚರಣೆವರೆಗೆ ಎಂದು ಕಾಪ್ಷನ್ ನೀಡಲಾಗಿದೆ. ಒಂದು ಅದೃಷ್ಟದ ದಿನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅನಿಲ್ಕುಮಾರ್ ಗೆ ಅಕ್ಟೋಬರ್ 18 ಬರೀ ಮತ್ತೊಂದು ದಿನವಲ್ಲ. ಆ ದಿನ ಎಲ್ಲವನ್ನೂ ಬದಲಾಯಿಸಿಬಿಟ್ಟಿತ್ತು. ಜೀವನ ಬದಲಾವಣೆ ಮತ್ತು ನೀವು ಧೈರ್ಯ ಮಾಡಿ ಊಹಿಸಿಕೊಳ್ಳುವುದರಿಂದ ಏನಾಗುತ್ತೆ ಎಂಬುದರ ನೆನಪು. ಕಂಗ್ರಾಜುಲೇಷನ್ ಅನಿಲ್ ಕುಮಾರ್ ಎಂದು ಯುಎಇ ಲಾಟರಿ ಸಂಸ್ಥೆ ಟ್ವೀಟ್ ಮಾಡಿದೆ. ವಿಡಿಯೋದಲ್ಲಿ ಅನಿಲ್ ಕುಮಾರ್ ತಮ್ಮ ಲಾಟರಿ ಗೆಲುವು ಅನ್ನು ಸಂಭ್ರಮಿಸುವುದನ್ನು ತೋರಿಸಲಾಗಿದೆ.ಅನಿಲ್ ಕುಮಾರ್ಗೆ ಲಾಟರಿ ಗೆದ್ದ ಹಣದ ಚೆಕ್ ನೀಡಲಾಗಿದೆ. ವಿಡಿಯೋದಲ್ಲಿ…
ಬೆಳ್ತಂಗಡಿ, ಅ. 30: ಕನ್ಯಾಡಿ ಸೇವಾ ಧಾಮದ ಸಮೀಪದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಅಸ್ಪತ್ರೆಯಲ್ಲಿ ಸಾವನ್ನಪ್ಪಿದ ದುರ್ಘಟನೆ ಅಕ್ಟೋಬರ್ 29ರಂದು ನಡೆದಿದೆ. ನಾವೂರು ಗ್ರಾಮದ ಹೊಡಿಕ್ಕಾರು ಗಂಗಯ್ಯ ಎಂಬವರ ಪುತ್ರ, ಬೈಕ್ ಸವಾರ ಚಂದ್ರಹಾಸ (28) ಮೃತರು ಎಂದು ಗುರುತಿಸಲಾಗಿದೆ. ಚಂದ್ರಹಾಸ ಅವರು ಸತೀಶ್ ಎಂಬವರ ಜತೆ ಸೇರಿ ಟೈಲ್ಸ್ ಹಾಕುವ ಕೆಲಸವನ್ನು ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಅ.29ರಂದು ಬೆಳಿಗ್ಗೆ ಧರ್ಮಸ್ಥಳ ಕಡೆ ಕೆಲಸಕ್ಕಾಗಿ ತನ್ನ ಬೈಕ್ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಇಲ್ಲಿಯ ಸೇವಾ ಧಾಮದ ಸಮೀಪ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ರಭಸಕ್ಕೆ ಬೈಕ್ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಹಾಸ್ ಅವರ ತಲೆ ಹಾಗೂ ಕಾಲಿಗೆ ಏಟು ತಗಲಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು…

