ಕೊಣಾಜೆ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author: UllalaVani
ಮಂಗಳೂರು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆಗಳು ನಡೆಯಲಿವೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಈ ವರ್ಷದ ದಸರಾದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿವೆ ಎಂದು ಪದ್ಮರಾಜ್ ದೃಢಪಡಿಸಿದರು. ನವದುರ್ಗಾ ಮತ್ತು ಶಾರದಾ ದೇವಿಯ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗುವುದು, ದೇವಾಲಯದ ಆವರಣದೊಳಗೆ ಶಾರದಾ ದೇವಿಯ ವಿಗ್ರಹವನ್ನು ಸಾಧಾರಣ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು. ಗಮನಾರ್ಹ ನಡೆಯಲ್ಲಿ, ಈ ವರ್ಷ ಹೊಸ ಸಾಂಸ್ಕೃತಿಕ ತಂಡಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗಿದೆ. 700 ರಿಂದ 800 ಕಲಾವಿದರನ್ನು ಒಳಗೊಂಡ ಒಟ್ಟು 31 ತಂಡಗಳು ಭಾಗವಹಿಸಲಿವೆ. ಈ ಉತ್ಸವದಲ್ಲಿ ಸಮಾಜಕ್ಕೆ ಗಣನೀಯ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು ಸಂಸ್ಥೆಗಳಿಗೆ ಸನ್ಮಾನಗಳು ಸಹ ನಡೆಯಲಿವೆ. ಉತ್ಸವದ ಭಾಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿವೆ, ಅವುಗಳೆಂದರೆ : ಚಿತ್ರ ಬಿಡಿಸುವ ಸ್ಪರ್ಧೆ, ಕಿನ್ನಿ ಪಿಲಿ ಸ್ಪರ್ಧೆ (ಎರಡು ವಯೋಮಾನದವರಿಗೆ:…
ದೇರಳಕಟ್ಟೆ : ಮಹಿಳೆಯರ ಆರೋಗ್ಯ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯವಿಲ್ಲದೆ ದೇಹ ಸದೃಢವಾಗಲು ಸಾಧ್ಯವಿಲ್ಲ. ಮಹಿಳೆಯರಲ್ಲಿ ಪೌಷ್ಠಿಕಾಂಶದ ಕೊರತೆ ಉಂಟಾದರೆ, ಅದರ ಪರಿಣಾಮ ಸಂಪೂರ್ಣ ಕುಟುಂಬದ ಮೇಲೆ ಬೀಳುತ್ತದೆ ಎಂದು ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ಆಡಳಿತ ನಿರ್ದೇಶಕ ಫಾ.ಫಾಸ್ಟಿನ್ ಲೂಕಸ್ ಲೋಬೊ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಸ್ತ್ರೀ ಆಯೋಗ ಹಾಗೂ ಕೆಥೋಲಿಕಾ ಸ್ತ್ರೀ ಸಂಘಟನೆ , ದಕ್ಷಿಣ ವಲಯ , ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ದೇರಳಕಟ್ಟೆ , ಹಳೆಯ ವಿದ್ಯಾರ್ಥಿಗಳ ಅಸೋಸಿಯೇಶನ್ , ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ ಸಹಯೋಗದೊಂದಿಗೆ ದೇರಳಕಟ್ಟೆಯ ಫಾದರ್ ಮುಲ್ಲರ್ ಆಡಿಟೋರಿಯಂನಲ್ಲಿ ಜರಗಿದ ಬೃಹತ್ ಮಹಿಳಾ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಆರೋಗ್ಯಕ್ಕೆ ಗಮನಕೊಟ್ಟಾಗ ಮಾತ್ರ, ಇಡೀ ಸಮಾಜ ಆರೋಗ್ಯವಾಗಿರಲು ಸಾಧ್ಯ. ಆದುದರಿಂದ ಮಹಿಳೆಯರ ಆರೋಗ್ಯಕ್ಕೆ ಪ್ರಥಮ ಪ್ರಾಶಸ್ತ್ಯ ನೀಡೋಣ. ಈ ನಿಟ್ಟಿನಲ್ಲಿ ಸಂಸ್ಥೆ ಹಾಗೂ…
ಮಂಗಳೂರು : ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಅಥವಾ ತೆರೆದ ಪ್ರದೇಶ ದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿ ಯವರ ಕಚೇರಿಗೆ ಅಕ್ಟೋಬರ್ 10ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ನಿಗದಿತ ನಮೂನೆ ಎಇ-5 ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾವಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ ಸ್ಟಾಂಪ್ ಪೇಪರ್ ), ಸರಕಾರಿ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೂ.200ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ರೂ 500 ಲೈಸೆನ್ಸ್ ಶುಲ್ಕವನ್ನು ಪಾವತಿಸಬೇಕು. ಅರ್ಜಿದಾರರು ಈ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ…
ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿ.ಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಈತನನ್ನು, ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿಗಳು ಆ. 25 ಸೋಮವಾರ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ…
ಬೆಳ್ತಂಗಡಿ : ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್ಪೋಸ್ಟ್ ಮೂಲಕ ಸಾಗುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿದುಬಂದಿದೆ. ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹೊಸ ನಿಯಮ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್ಪೋಸ್ಟ್ ದಾಟಬೇಕಾದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ. ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಿ ರಾತ್ರಿ ವೇಳೆ ಓರ್ವ ಪಿಎಸ್ಐ ನೇತೃತ್ವದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಒಂದೂವರೆ ಕಿ.ಮೀ. ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರು ಎನ್ನುವ ದೂರುಗಳಿದ್ದವು. ಅಲ್ಲಿ ಕೆಲವು ಮನೆಗಳಿದ್ದು, ಸ್ಥಳೀಯರ…
ಸುಳ್ಯ : ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭಾರತೀಯ ಭದ್ರತಾ ಪಡೆಗೆ ಆಯ್ಕೆಗೊಂಡಿದ್ದಾರೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಪರೀಕ್ಷೆಯಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ. ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಗೌಡ ಎಂ.ಎಂ ಮತ್ತು ಜಾನಕಿ ದಂಪತಿಯ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮರ್ಕಂಜ, ಪಿ.ಯು.ಸಿಯನ್ನು ಎನ್.ಎಂ.ಪಿ.ಯು ಅರಂತೋಡಿನಲ್ಲಿ ಪೂರೈಸಿ , ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಪುತ್ತೂರಿನ ತರಬೇತಿ ಅಕಾಡೆಮಿಯೊಂದರಲ್ಲಿ ಬಿ.ಎಸ್.ಎಫ್ ಪರೀಕ್ಷೆಯ ಕೋಚಿಂಗ್ ಪಡೆದಿದ್ದಾರೆ.
ಮಂಗಳೂರು : ಮೆರ್ಸಿನ್ ಮಾತೆಯ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಬೆಳಿಗ್ಗೆ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, ಹಣ್ಣು ಹಂಪಲು ಗಿಡಗಳನ್ನು ಹಂಚಿ ಸಂದೇಶ ನೀಡಿದರು. ಕ.ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಹಾಗೂ ಕ್ರೈಸ್ತ ಒಕ್ಕೂಟ ರಾಜಧ್ಯಕ್ಷ, ಅಲ್ವಿನ್ ಡಿಸೋಜರು ಗಿಡ ನೆಡುವ ಮಹತ್ವ ಹಾಗೂ ಅದರ ಪಾಲನೆ ಕುರಿತು ಮಾಹಿತಿ ನೀಡಿದರು. ವನಮಹೋತ್ಸವವನ್ನು ವಂ. ಫಾ. ವಿಕ್ಟರ್ ಡಿ ಮೆಲ್ಲೋ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಉಪಾಧ್ಯಕ್ಷ ಸರಿಟಾ ಡಿಸೋಜ, ಕಾರ್ಯದರ್ಶಿ ಗ್ರೆಟ್ಟ ಡಿಕುನ್ಹ, 21 ಆಯೋಗದ ಸಂಯೋಜಕ ರೊನಾಲ್ಡ್ ಡಿಸೋಜ, ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ, ಹಾಗೂ…
ಉಳ್ಳಾಲ : ಯಾವುದೇ ಉನ್ನತ ವ್ಯಾಸಾಂಗ ಮಾಡುವುದಾದರೂ ಊಟ ಅನಿವಾರ್ಯ. ಹಾಗಾಗಿ ಅಕ್ಕಿಯ ಬೆಳೆಸುವ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ತಳಮಟ್ಟದ ಕಾರ್ಯವಾದರೂ ಕೃಷಿ ಕಾಯಕದ ಕುರಿತು ಸ್ವಲ್ಪವಾದರೂ ತಿಳಿದಿರಬೇಕು. ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೃಷಿ ಹೇಗೆ ಆಗುತ್ತದೆ ಅನ್ನುವುದರ ಅರಿವು ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಸಬೇಕು ಎಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಂಜೀವ ಪಿಲಾರ್ ಹೇಳಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ, ಮಾಧ್ಯಮ ಕೇಂದ್ರ ಉಳ್ಳಾಲ, ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು, ದ. ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ವಿಧಾನಸಭಾಧ್ಯಕ್ಷರು ಹಾಗೂ ಕೃಷಿ ಸಚಿವರ ಭಾಗವಹಿಸುವಿಕೆಯಲ್ಲಿ ಆ. 30 ರಂದು ನಡೆಯುವ 4 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಗದ್ದೆಯಲ್ಲಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡ ಉಳ್ಳಾಲದ ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ…
ದೇರಳಕಟ್ಟೆ : ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ ಮದ್ರಸ ವಿದ್ಯಾರ್ಥಿನಿಯರ ಮೀಲಾದುನ್ನಬಿ ಪ್ರಯುಕ್ತ ಮೀಲಾದ್ ಫೆಸ್ಟ್ ಕಾರ್ಯಕ್ರಮ ಮದ್ರಸ ಹಾಲ್ ನಲ್ಲಿ ಸೋಮವಾರ ನಡೆಯಿತು. ಇಲ್ಯಾಸ್ ಜುಮಾ ಮಸೀದಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೋನು ಕಾರ್ಯಕ್ರಮ ಉದ್ಘಾಟಿಸಿ ಮೀಲಾದ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಕೂಡ ಮೇಲುಗೈ ಸಾಧಿಸಬೇಕು ಎಂದು ಕರೆ ನೀಡಿದರು. ಮದ್ರಸ ಉಸ್ತುವಾರಿ ಮೊಯ್ದಿನ್ ಮೋನು , ಪತ್ರಕರ್ತ ಬಶೀರ್ ಕಲ್ಕಟ್ಟ ಮಾತನಾಡಿದರು. ಸದ್ ರ್ ಉಸ್ತಾದ್ ಶರೀಫ್ ಸ ಅದಿ ಸ್ವಾಗತಿಸಿದರು. ಮುಅಲ್ಲಿಂ ರಝಾಕ್ ಸ ಅದಿ, ಹಸನ್ ಸ ಅದಿ ಕಾರ್ಯಕ್ರಮ ನಿರೂಪಿಸಿದರು. ಇಸಾಕ್ ಸಅದಿ ಧನ್ಯವಾದ ಸಮರ್ಪಿಸಿದರು.

