Author: UllalaVani

Kannada News From Coastal Karnataka

ಉಳ್ಳಾಲ: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ಸಹಕಾರ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಹಾಗೂ ಕಾರ್ಯದರ್ಶಿ ಇಸಾಕ್ ಮೇಲಂಗಡಿ ಬೆಂಗಳೂರುನಲ್ಲಿ ಭೇಟಿ ಮಾಡಿ ಅವರಿಗೆ ಹೂ ಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು. ಮುಂದೆ ಇದೇ ರೀತಿ ತಮ್ಮ ಸಹಕಾರ ಇರಲಿ ಎಂದು ಇದೇ ಸಂದರ್ಭದಲ್ಲಿ ವಿನಂತಿಸಿದರು

Read More

ಮಂಗಳೂರು: ರಾಜಕೀಯ ದುರುದ್ದೇಶವನ್ನಿಟ್ಟುಕೊಂಡು ವಿಧವೆ ಮಹಿಳೆಯಿಂದ ಸುಳ್ಳು ದೂರು ದಾಖಲಿಸಿ ಇಬ್ಬರ ರಾಜಕೀಯ ಜೀವನವನ್ನೇ ಮುಗಿಸಲು ತಂಡವೊಂದು ಷಡ್ಯಂತ್ರ ನಡೆಸಿದೆ ಎಂದು ಬಂಟ್ವಾಳ ಪುರಸಭಾ ಸದಸ್ಯರುಗಳಾದ ಶರೀಫ್ ಮತ್ತು ಹಸೈನಾರ್ ಆರೋಪ ಮಾಡಿದ್ದಾರೆ.ಬಂಟ್ವಾಳ ಠಾಣಾ ವ್ಯಾಪ್ತಿಯ ಕಾರಾಜೆ ಎಂಬಲ್ಲಿ ವಾಸವಿರುವ ಬಗ್ಗೆ ದೂರಿನಿಂದಲೇ ತಿಳಿದುಬಂದಿದೆ. ಈ ಹಿಂದೆ ಮಹಿಳೆ ದೂರು ನೀಡಲು ಠಾಣೆಗೆ ಬಂದಾಗಲೂ ಪ್ರಾಥಮಿಕ ತನಿಖೆಯಿಂದಲೇ ಸುಳ್ಳು ದೂರು ಎಂಬುದನ್ನು ಖಚಿತಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದರು. ಅದಕ್ಕಾಗಿ ನ್ಯಾಯಾಲಯದಿಂದ ಆದೇಶ ತಂದು ಪೊಲೀಸ್ ದೂರು ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರ ಮಾಲಕಿಯಾಗಿದ್ದ ಮಹಿಳೆ ಎರಡು ವರ್ಷಗಳ ಹಿಂದೆ ಜಾಗದ ಕಾಗದ ಪತ್ರ ಸರಿಪಡಿಸುವ ವಿಚಾರವಾಗಿ ಪರಿಚಯವಾಗಿದ್ದರು. ಅದರಂತೆ ಜಾಗದ ವಿಚಾರದ ಕುರಿತು ಶೇ.80 ರಷ್ಟು ದಾಖಲೆಗಳನ್ನು ಮುಗಿಸಲಾಗಿತ್ತು. ಅಷ್ಟರಲ್ಲಿ ತಗಾದೆ ತೆಗೆದ ಮಹಿಳೆ ಜಾಗದ ದಾಖಲೆಗಳ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ, ಹಣ ಪಡೆದುಕೊಂಡಿರುವ ವಿಚಾರದಲ್ಲಿ ಆರೋಪ ಮಾಡಲು ಆರಂಭಿಸಿದ್ದರು. ಆರಂಭದಲ್ಲಿ ಜಾಗದ…

Read More

ಉಳ್ಳಾಲ: ಕಳೆದ ವರ್ಷ ಶ್ರೀ ಕ್ಷೇತ್ರ ಕೊಂಡಾಣದಲ್ಲಿ ಶೇ.80 ರಷ್ಟು ಕಾಮಗಾರಿ ಮುಗಿದಿದ್ದ ಭಂಡಾರ ಮನೆಯನ್ನು ಒಡೆದುಹಾಕಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಗುರಿಕಾರ ಮುತ್ತಣ್ಣ ಶೆಟ್ಟಿ ಪ್ರಕರಣ ಇತ್ಯರ್ಥ ಆಗುವವರೆಗೂ  ಜಾತ್ರಾ ಸಂದರ್ಭ ಗುರಿಕಾರ ಸ್ಥಾನದಲ್ಲಿ ನಿಲ್ಲಬಾರದು ಎಂದು ಅಪರ ಜಿಲ್ಲಾಧಿಕಾರಿ, ಧಾರ್ಮಿಕ ಪರಿಷತ್ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೆ ಹರಕೆ ವಿಚಾರಕ್ಕೆ ಸಂಬಂಧಿಸಿ ಮುತ್ತಣ್ಣ ಅವರನ್ನು ಯಾರು ಕೂಡಾ ಸಂಪರ್ಕಿಸಬಾರದು ಎಂದು  ಶ್ರೀ ಕ್ಷೇತ್ರ ಕೊಂಡಾಣ ಇದರ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ , ಸನಾತನ ಧರ್ಮ ಜಾಗರಣಾ ಸಮಿತಿ ಅಧ್ಯಕ್ಷ  ಕೃಷ್ಣ ಶೆಟ್ಟಿ ತಾಮಾರ್ ಹೇಳಿದರು.ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷ ನೂತವಾಗಿ ರಚಿಸಿದ ಭಂಡಾರ ಮನೆಯನ್ನು ಮಾ.3 ರಂದು ಮುತ್ತಣ್ಣ ಶೆಟ್ಟಿ ಮತ್ತು ಬಳಗ ಒಡೆದು ಹಾಕಿದೆ.  2024ರ  ಫೆ.29 ತನ್ನ ಅಧಿಕಾರ ಅವಧಿ ಮುಗಿದಿದ್ದು, ಜಿಲ್ಲಾಧಿಕಾರಿಯವರ  ಆದೇಶದಂತೆ ಕೋಟೆಕಾರು ಮುಖ್ಯಾಧಿಕಾರಿಗಳಿಗೆ ಅಧಿಕಾರವನ್ನು ಹಸ್ತಾಂತರ ಮಾಡಲಾಗಿತ್ತು.  ಅಧಿಕಾರ ಹಸ್ತಾಂತರದ ಬೆನ್ನಲ್ಲೇ…

Read More

ಮುಡಿಪು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರೋರ್ವರಿಗೆ ತನ್ನ ಕಿಡ್ನಿಯನ್ನು ನೀಡಿ, ಮೇ.29 ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ. ಪೈಂಟರ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುಧೀರ್, ಇಂದು ನಸುಕಿನ ಜಾವ ಬೈಕ್ ನಲ್ಲಿ ಹಾಲು ತರಲೆಂದು ಮನೆಯಿಂದ ತೆರಳಿದ್ದವರು ವಾಪಸ್ಸಾಗಿರಲಿಲ್ಲ. ತಡವಾದರೂ ಮಗ ಬಾರದ ಹಿನ್ನೆಲೆಯಲ್ಲಿ ಬೆದರಿದ ತಾಯಿ ಸುಧೀರ್ ನನ್ನು ಹುಡುಕೊಂಡು ಹೋದಾಗ ಮನೆ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು. ಶಾಲೆಯೊಳಗಡೆ ಗಮನಿಸುವಾಗ ಸುಧೀರ್ ಶಾಲೆಯ ಮಹಡಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅವಿವಾಹಿತ ಸುಧೀರ್, ತನ್ನ ಸಂಬಂಧಿಕರೋರ್ವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನಗೈಯ್ಯುವಂತೆ…

Read More

ಉಳ್ಳಾಲ : ಮುಂದಿನ ಡಿಸೆಂಬರ್ ತಿಂಗಳೊಳಗಡೆ 24 ಗಂಟೆ ಕುಡಿಯುವ ನೀರನ್ನು ಉಳ್ಳಾಲ ತಾಲೂಕಿನ ಜನತೆಗೆ ಪುರೈಸಲಾಗುವುದು. ಈಗಾಗಲೇ ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ. ಹಾಗೆಯೇ ಪೈಪ್ ಲೈನ್ ಕಾಮಗಾರಿ ಕೈಗೊಳ್ಳುವಾಗ ಹಣ ಪಡೆದುಕೊಂಡಲ್ಲಿ ನೇರವಾಗಿ ದೂರು ನೀಡಿ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಅವರು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಲಾಲ್ ಬಾಗ್ ಪಾನೀರು ಸಂಪರ್ಕಿಸುವ ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿದರು ಕೋಟೆಕಾರು ಪ.ಪಂ ವ್ಯಾಪ್ತಿಯ ಜಲಾಲ್‌ಬಾಗ್ ನಿಂದ ಪನೀರ್ ಸೈಟ್ ಸಂಪರ್ಕಿಸುವ ರಸ್ತೆಗೆ ಬಹಳಷ್ಟು ಬೇಡಿಕೆಯಿತ್ತು. ತೊಕ್ಕೊಟ್ಟು, ದೇರಳಕಟ್ಟೆ, ಮೆಲ್ಕಾರ್, ನಾಟೆಕಲ್ ಸಂಪರ್ಕಿಸುವ ಲಿಂಕ್ ರಸ್ತೆಯೂ ಆಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಪಟ್ಟಣ ಪಂಚಾಯತ್ ನಲ್ಲಿ ಆಡಳಿತವಿಲ್ಲದ ಸಂದರ್ಭ ತಾನು ವಿಶೇಷ ಅನುದಾನವನ್ನು ಒದಗಿಸಿದ್ದೆನು. ಆದರೆ ಜಾಗದ ತಕರಾರಿನಿಂದ ಕಾಮಗಾರಿ ವಿಳಂಬವಾಯಿತು. ಆದರೆ ಕಣಚೂರು ಮೋನು ಹಾಗೂ ಲವೀನಾ ಕುಟುಂಬಸ್ಥರ ಸಹಕಾರದಿಂದಾಗಿ ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಅಲ್ಲದೆ ಹೆಚ್ಚುವರಿ ರೂ. 3ಲಕ್ಷ ಅನುದಾನವನ್ನು ಪೂರೈಸಲಾಗಿದೆ…

Read More

ಮಂಗಳೂರು: ಅನಾವಶ್ಯಕ ಖರ್ಚುಗಳಿಲ್ಲದೇ ಆಡಂಭರ ರಹಿತ ಸರಳ ಆರಾಧನೆ ಯೊಂದಿಗೆ, ಪ್ರಾಕೃತಿಕ ವಸ್ತುಗಳನ್ನೇ ಬಳಸಿ ದೈವಾರಾಧನೆಯ ಮೂಲ ನಿಯಮದಂತೆ ಇರುವೈಲು ಮೂಡಾಯಿಬೆಟ್ಟು ಬಂಗೇರ ಕುಟುಂಬಿಕರ ತರವಾಡು ಮನೆ `ಸಿರಿಮುಡಿ’ ಗೃಹಪ್ರವೇಶ ಅರ್ಥಪೂರ್ಣವಾಗಿ ಜರಗಿತು.ಬಂಗೇರ ಕುಟುಂಬಸ್ಥರ ತರವಾಡು ಮನೆ ಗತ ಕಾಲದ ವೈಭವ ದಂತೆ ವಾಸ್ತುಪ್ರಕಾರ ಆಯಬದ್ಧವಾಗಿ ನಿರ್ಮಾಣಗೊಂಡು ಮನೆಯ ಗೃಹಪ್ರವೇಶ ಅವೈದಿಕವಾಗಿ ನಡೆಯಿತು. ದೈವಗಳ ಚಾವಡಿ ಪ್ರವೇಶ, ದಾಸಯ್ಯರಿಂದ ಮುಡಿಪು, ಪ್ರೇತರಾಧನೆ ಇತ್ಯಾದಿ ಕುಟುಂಬ ಸಂಬಂಧಿತ ಕಾರ್ಯಕ್ರಮಗಳೆಲ್ಲವೂ ಪೂರ್ವನಿಯಮದ ಮೂಲ ಪದ್ದತಿಯಂತೆ ಜರಗಿತು. ಮುಂದಿನ ಪೀಳಿಗೆಗೆ ದೈವಾರಾಧನೆ ಮತ್ತು ಕುಟುಂಬ ಸಂಬಂಧಿತ ಆರಾಧನಾ ನಿಯಮಗಳ ಅನುಭವ ನೀಡುವ ಉದ್ದೇಶದಿಂದ ಮೂಲ ನಿಯಮಕ್ಕೆ ಒತ್ತು ನೀಡಲಾಯಿತು.ವಾಸ್ತು ಆರಾಧನೆ, ವಿಶ್ವಕರ್ಮ ಪೂಜೆ, ಹಾಲುಕ್ಕಿಸುವುದು, ಧರ್ಮ ದೈವ, ಕುಟುಂಬ ದೈವಗಳ ಹೊಸ ತರವಾಡು ಮನೆ ಪ್ರವೇಶ. ರಾತ್ರಿಯ ಅಗೆಲು ತಂಬಿಲ ಇತ್ಯಾದಿ ನಿಯಮಗಳೆಲ್ಲವೂ ಮೂಲ ನಿಯಮದಂತೆ ಕುಟುಂಬದ ಯಜಮಾನನ ಕೈ ಯಲ್ಲೇ ನಡೆಸಲಾಯಿತು.ಈ ಯಶಸ್ವಿ ಕಾರ್ಯಕ್ರಮದ ಹಿಂದೆ ಮುಂಬೈನ ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್( ಸಿ.ಎ) ಆಗಿರುವ…

Read More

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಇಂದು ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು.ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು ಜೆರಿ…

Read More

ಭಾರತ ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಆಯೋಜಿಲಾಗಿದ್ದ ಗ್ಯಾರಂಟಿ ಉತ್ಸವ ಮುಂದೂಡಿಕೆ – ರಮೇಶ್ ಶೆಟ್ಟಿ ಬೋಳಿಯಾರ್. ಮಂಗಳೂರು : ಉಳ್ಳಾಲ ಸಯ್ಯದ್ ಮದನಿ ದರ್ಗಾ ಊರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೇ 16 ರಂದು ಆಗಮಿಸಲಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಹೇಳಿದ್ದಾರೆ. ಅದೇ ದಿನ ಕ್ಷೇತ್ರದಲ್ಲಿ ಗ್ಯಾರಂಟಿ ಉತ್ಸವ ಕಾರ್ಯಕ್ರಮ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ, ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ನಾವು ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡುತ್ತಾ ಇಂತಹ ಸಂದರ್ಭದಲ್ಲಿ ಗ್ಯಾರಂಟಿ ಉತ್ಸವ ಬೇಡ ಎಂದು ಕ್ಷೇತ್ರದ ಶಾಸಕರೂ, ವಿಧಾನ ಸಭಾ ಸ್ಪೀಕರ್ ಯು. ಟಿ ಖಾದರ್ ಅವರ ಸೂಚನೆಯ ಹಿನ್ನಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ಮೇ 16 ರಂದು ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಉತ್ಸವ ಸಹಿತ ವಿವಿಧ…

Read More

ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ (EDP) – 2025 ಅನ್ನು ಮೇ 8, 2025ರಂದು ಮಂಗಳೂರಿನಲ್ಲಿರುವ ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್‌ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಎಂ.ಬಿ.ಎ) ವಿಭಾಗದ ವತಿಯಿಂದ ಈ ಪೂರ್ಣದಿನ ಕಾರ್ಯಕ್ರಮವನ್ನು ಬೆಳಗ್ಗೆ 9:00ರಿಂದ ಸಂಜೆ 4:15ರ ವರೆಗೆ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಪ್ರಖ್ಯಾತ ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಉಲ್ಲಾಸ್ ಕಾಮತ್ ಅವರು ಪಾಲ್ಗೊಂಡರು. ಇವರೊಂದಿಗೆ ರೆ। ಫಾ| ಕಿರಣ್ ಕೊತ್ ಎಸ್‌ಜೆ (AIMIT ನಿರ್ದೇಶಕ), ಡಾ. ರಜನಿ ಸುರೇಶ್ (ಅಕಾಡೆಮಿಕ್ಸ್ ಮತ್ತು ಸಂಶೋಧನಾ ಡೀನ್), ಮಿಸ್ ಬೀನಾ ಡಯಸ್ (ವಿಭಾಗದ ಮುಖ್ಯಸ್ಥೆ), ಕಾರ್ಯಕ್ರಮ ಸಂಯೋಜಕ ಡಾ. ಸ್ವಪ್ನಾ ರೋಸ್ ಮತ್ತು ಕಾರ್ಯಕ್ರಮ ಸಹ ಸಂಯೋಜಕರಾದ ಮಿಸ್ ಪ್ರಥ್ವಿ ಪ್ರಕಾಶ್ ಮತ್ತು ಮಿಸ್ ಲವೀನಾ ನೈಟಿಂಗೇಲ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭವನ್ನು ಪರಂಪರೆಯಂತೆ ದೀಪ ಬೆಳಗಿಸುವ…

Read More

ಉಳ್ಳಾಲ : ಇಸ್ಲಾಮ್ ಧರ್ಮವು ಒಂದು ಸಂಪೂರ್ಣ ಬದುಕು ಬಾಳುವ ಶಿಸ್ತುಬದ್ಧ ವ್ಯವಸ್ಥೆಯಾಗಿದ್ದು, ಅದರ ತತ್ವ ಹಾಗೂ ಮಾರ್ಗದರ್ಶನಗಳು ಮಾನವ ಜೀವನದ ಪ್ರತಿಯೊಂದು ಹಂತದಲ್ಲಿಯೂ ಮಾರ್ಗದರ್ಶಕವಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ, ಇಸ್ಲಾಮಿನ ತತ್ತ್ವಗಳನ್ನು ಅರಿತುಕೊಳ್ಳುವುದು, ಅಧ್ಯಯನ ಮಾಡುವುದು ಮತ್ತು ಅವುಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಮುಸ್ಲಿಮನ ಕರ್ತವ್ಯವಾಗಿದೆ ಎಂದು ಡಾ.ಹುಸೈನ್ ಸಖಾಫಿ ಚುಳ್ಳಿಕೋಡು ಹೇಳಿದರು.ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಮಂಗಳವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶಗಳು ಎಲ್ಲ ಮನುಕುಲಕ್ಕೂ ಶ್ರೇಷ್ಠ ಮಾದರಿಯಾಗಿದೆ. ಅವರು ಸಾರಿದ ಹಾದಿಯಲ್ಲಿ ನಡೆಯುವುದು ಶ್ರದ್ಧೆಯಿಂದ ಅನುಸರಿಸಬೇಕಾದ ದಾರಿಯಾಗಿದೆ. ಅವರ ನುಡಿಮುತ್ತುಗಳು ಧರ್ಮನಿಷ್ಠೆಯ ಜೊತೆಗೆ ನೈತಿಕತೆಯ, ಸಹಾನುಭೂತಿಯ ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುತ್ತವೆ. ಧಾರ್ಮಿಕ ಚಟುವಟಿಕೆಗಳನ್ನು ಏಕತೆಯಿಂದ ಮತ್ತು ಸಹಭಾಗಿತ್ವದಿಂದ ಆಯೋಜಿಸುವುದು, ಸಮಾಜದಲ್ಲಿ ಧರ್ಮದ ಮೌಲ್ಯಗಳನ್ನು ಪ್ರತಿಷ್ಠಾಪಿಸುವ ಮಾರ್ಗವಾಗಿದೆ. ಇಂತಹ ಕಾರ್ಯಕ್ರಮಗಳು ಸಾಮೂಹಿಕ ಜವಾಬ್ದಾರಿಯ…

Read More