ಬೆಂಗಳೂರು, ಜೂ. 04; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ ಆಶಿರ್ವಾದ ಪಡೆದು ತೆರಳಿದರು.ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.
Author: UllalaVani
ಉಡುಪಿ, ಜೂ. 04: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ. ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ತೊಕ್ಕೊಟ್ಟು ಶಕ್ತಿಭಾರತ್ ವ್ಯಾಯಾಮ ಶಾಲೆಯ ಸಕ್ರಿಯ ಸದಸ್ಯರು, ಪದಾಧಿಕಾರಿ, ರಾಷ್ಟ್ರಮಟ್ಟದ ಪವರ್ ಲಿಫ್ಟರ್ ಆಗಿರುವ ಉಳ್ಳಾಲಬೈಲ್ ನಿವಾಸಿ ಸಂತೋಷ್ ಪೂಜಾರಿ (45) ವೆಲ್ಡಿಂಗ್ ವೃತ್ತಿ ನಿರ್ವಹಿಸುತ್ತಿದ್ದ ಸಂದರ್ಭ ಕಟ್ಟಡದಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪದವಿನಂಗಡಿ ಸಮೀಪ ಇಂದು ಸಂಜೆ ವೇಳೆ ಸಂಭವಿಸಿದೆ. ದಿ| ಸುಂದರ್ ಪೂಜಾರಿ ಪುತ್ರನಾಗಿದ್ದ ಇವರು ಐದು ವರ್ಷಗಳ ಕಾಲ ಒಮಾನ್ ನ ಮಸ್ಕತ್ ನಲ್ಲಿ ವೆಲ್ಡಿಂಗ್ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಮದುವೆ ನಂತರ ಊರಿಗೆ ಬಂದವರು ವಾಪಸ್ಸು ತೆರಳಿರಲಿಲ್ಲ. ಮನೆ ಸಮೀಪವೇ ವರ್ಕ್ ಶಾಪ್ ಆರಂಭಿಸಿ ಕೆಲಸ ನಿರ್ವಹಿಸುತ್ತಿದ್ದರು. ಪದವಿನಂಗಡಿ ಸಮೀಪದ ಕಟ್ಟಡದಲ್ಲಿ ವೃತ್ತಿ ನಿರ್ವಹಿಸುತ್ತಿರುವ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮೃತದೇಹವನ್ನು ನಗರದ ತೇಜಸ್ವಿನಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಅನೇಕ ಸ್ಪರ್ಧಾಳುಗಳನ್ನು ತಯಾರಿಸಿದಂತಹ ತೊಕ್ಕೊಟ್ಟು ಭಟ್ನಗರದ ಶಕ್ತಿ ಭಾರತ್ ವ್ಯಾಯಾಮ ಶಾಲೆಯಲ್ಲಿ ಸಂತೋಷ್ ಅವರು ಸಕ್ರಿಯ ಸದಸ್ಯರಾಗಿದ್ದರು. ಅಲ್ಲದೇ ಶಾಲೆಯಿಂದ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್…
ಮುಡಿಪು : ಯಾವುದೇ ಧರ್ಮಕ್ಕೂ ಬೇಧಭಾವವಿಲ್ಲದೇ, ಸಿಕ್ಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಾ, ತನ್ನ ಕ್ಷೇತ್ರದ ಜನರೊಂದಿಗೇ ಸದಾ ಇದ್ದುಕೊಂಡು ಯಶಸ್ವಿ ರಾಜಕಾರಣಿಗೆ ಮತ್ತೆ ಸಚಿವ ಸ್ಥಾನ ಒಲಿದಿರುವುದು ಕ್ಷೇತ್ರದ ಜನತೆಗೆ ಹೆಮ್ಮೆಯ ವಿಚಾರ ಎಂದು ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರತಾಪ್ ಚಂದ್ರ ಕರ್ಕೇರ ಅಭಿಪ್ರಾಯಪಟ್ಟರು. ಅವರು ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮುಡಿಪು ಜಂಕ್ಷನ್ನಿನಲ್ಲಿ ಹಮ್ಮಿಕೊಳ್ಳಲಾದ ನೂತನ ಮುಖ್ಯಮಂತ್ರಿ ಡಿಕೆಶಿ ಹಾಗೂ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಯು.ಟಿ.ಖಾದರ್ ಅವರ ಸಂಭ್ರಮವನ್ನು ಆಚರಿಸಿ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಿ, ಪಟಾಕಿ ಸಿಡಿಸಿ ಆಚರಿಸಿದರು. ಕಳೆದ ಮೂರು ವರ್ಷಗಳಿಂದ ಸ್ಪೀಕರ್ ಸ್ಥಾನದಲ್ಲಿದ್ದುಕೊಂಡು ಪಕ್ಷದ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ಕೊಟ್ಟರೂ, ಕಾರ್ಯಕರ್ತರ ಕಷ್ಟ ಸುಖಗಳಿಗೆ ಸದಾ ಬೆನ್ನೆಲುಬಾಗಿ ನಿಂತವರು. ಪಕ್ಷದ ಮೇಲಿನ ಪ್ರೀತಿ ಹಾಗೂ ಗೌರವ ಅವರನ್ನು ಮತ್ತೆ ಜವಾಬ್ದಾರಿ ವಹಿಸುವಂತೆ ಮಾಡಿದೆ. ಪಕ್ಷಕ್ಕಾಗಿ ಸದಾ ತ್ಯಾಗ ಮಾಡಿದ ಕಾರ್ಯಕರ್ತರಿಗೆ ಸದಾ ಆತ್ಮಸ್ಥೈರ್ಯ ತುಂಬುವ ಡಿ.ಕೆ.ಶಿವಕುಮಾರ್…
ಬಹರೈನ್ ರಾಷ್ಟ್ರದಲ್ಲಿರುವ ಕನ್ನಡ ಸಂಘದ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವವು ಭಕ್ತಿ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ನೆರವೇರಿತು. ಈ ಶುಭ ಸಂದರ್ಭದಲ್ಲಿ ಮಂಗಳೂರಿನ ಯುವ ಪ್ರತಿಭಾವಂತ ಕಲಾವಿದೆ ಕುಮಾರಿ ಶ್ರೀರಕ್ಷಾ ಎಸ್. ಹೆಚ್. ಪೂಜಾರಿ (ಕೊಣಾಜೆ) ಅವರು ವೀಣಾ ವಾದನ ಹಾಗೂ ಭಕ್ತಿ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟು ನೆರೆದಿದ್ದ ಭಕ್ತರು ಮತ್ತು ಪ್ರೇಕ್ಷಕರನ್ನು ಭಕ್ತಿ ಪರವಶಗೊಳಿಸಿದರು. ತಮ್ಮ ಸುಮಧುರ ಗಾಯನ ಮತ್ತು ಮನಮೋಹಕ ವೀಣಾ ನಾದದ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದ ಶ್ರೀರಕ್ಷಾ ಅವರು, ಭಾರತೀಯ ಸಾಂಸ್ಕೃತಿಕ ಪರಂಪರೆಯ ಸೊಬಗನ್ನು ಅನಾವರಣಗೊಳಿಸಿದರು. ಅವರ ಭಾವಪೂರ್ಣ ಸಂಗೀತ ಪ್ರದರ್ಶನಕ್ಕೆ ಸಭಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಸಂಘ ಬಹರೇನ್ ಅಧ್ಯಕ್ಷ ಅಜಿತ್ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಮ್ ಪ್ರಸಾದ್ ಆಮೆನಡ್ಕ, ಕೋಶಾಧಿಕಾರಿ ಹರಿಣಿ ಉತ್ಕರ್ಷ ಶೆಟ್ಟಿ ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರು. ಧಾರ್ಮಿಕ…
ಬಂಟ್ವಾಳ, ಜೂ. 03 : ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಗಲಾಟೆ ಸೃಷ್ಟಿಸಿ, ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ. ವರದಿಗಳ ಪ್ರಕಾರ, ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು ಬೋಗಿಯೊಳಗೆ ತೀವ್ರ ಗದ್ದಲ ಎಬ್ಬಿಸುತ್ತಿದ್ದರು ಎಂದು ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿತ್ತು. ರೈಲು ಬಂಟ್ವಾಳ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಜಾಗೃತರಾದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ, ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಬಂಟ್ವಾಳ ನಿಲ್ದಾಣದಲ್ಲಿ ಕೆಲವು ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಬಾರ್ಶಿಯಲ್ಲಿ ನಡೆದಿರುವ ದುರ್ಘಟನೆ ದೇಶದಾದ್ಯಂತ ಪೋಷಕರು, ಕ್ರೀಡಾ ತರಬೇತುದಾರರು ಹಾಗೂ ಕ್ರೀಡಾ ಸಂಸ್ಥೆಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರದಲ್ಲಿ 15 ವರ್ಷದ ಬಾಲಕ ಆರವ್ ಅಲಿಯಾಸ್ ವಿರೇನ್ ಚೌಧರಿ ಕ್ರಿಕೆಟ್ ಪಿಚ್ ಸಮತಟ್ಟು ಮಾಡಲು ಬಳಸುವ ಭಾರೀ ರೋಲರ್ ಅಡಿಗೆ ಸಿಲುಕಿ ಮೃತಪಟ್ಟಿರುವುದು ಅತ್ಯಂತ ದುಃಖಕರ ಮತ್ತು ಆತಂಕಕಾರಿ ಘಟನೆ. ಕ್ರೀಡೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದರೂ, ಸುರಕ್ಷತೆ ಅದಕ್ಕಿಂತಲೂ ಮುಖ್ಯವಾಗಿದೆ. ಯಾವುದೇ ತರಬೇತಿ ಶಿಬಿರದಲ್ಲಿ ಮಕ್ಕಳು ತಮ್ಮ ವಯಸ್ಸು ಮತ್ತು ಸಾಮರ್ಥ್ಯಕ್ಕೆ ಮೀರಿದ ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಬಾರದು. ಭಾರೀ ತೂಕದ ರೋಲರ್, ಯಂತ್ರೋಪಕರಣಗಳು ಅಥವಾ ಅಪಾಯಕಾರಿಯಾದ ಸಾಧನಗಳನ್ನು ನಿರ್ವಹಿಸುವ ಜವಾಬ್ದಾರಿ ಮಕ್ಕಳಿಗೆ ನೀಡುವುದು ಸುರಕ್ಷತಾ ನಿಯಮಗಳಿಗೆ ವಿರುದ್ಧವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಕ್ರೀಡಾ ಶಿಬಿರಕ್ಕೆ ಕಳುಹಿಸುವ ಮೊದಲು ಅಲ್ಲಿ ಸುರಕ್ಷತಾ ವ್ಯವಸ್ಥೆಗಳು, ತರಬೇತುದಾರರ ಜವಾಬ್ದಾರಿ ಮತ್ತು ತುರ್ತು ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬೇಕು. ಅದೇ ರೀತಿ ಕೋಚ್ಗಳು…
ಮುಡಿಪು, ಜೂನ್ 2: ಹೃದಯಾಘಾತದಿಂದ ಉದ್ಯಮಿ ಎಸ್ಕೆ ಅಬ್ದುಲ್ ಖಾದರ್ ಹಾಜಿ ಅವರ ಅಕ್ಕನ ಮಗ ಮೊಹಮ್ಮದ್ ಯಾನೆ ಪುತ್ತುಬಾವಾ (44) ಅವರು ನಿಧನ ಹೊಂದಿದ್ದಾರೆ. ಮೃತ ಮೊಹಮ್ಮದ್ ಅವರು ಮುಡಿಪುವಿನಲ್ಲಿ ಜವಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಳಿಕ ಎಸ್ಕೆ ದಿಂಬರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.ಮೃತರು ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಉಳ್ಳಾಲ, ಜೂನ್ 2: ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಸಿಬ್ಬಂದಿಗಳಾದ ವೆಂಕಟೇಶ್ (ಎಎಸ್ಐ), ಮನ್ಸೂರ್ (ಎಎಸ್ಐ), ಮಂಜುನಾಥ್ (ಹೆಡ್ ಕಾನ್ಸ್ಟೇಬಲ್), ಸುರೇಶ್ ಕುಮಾರ್ (ಹೆಡ್ ಕಾನ್ಸ್ಟೇಬಲ್), ಶಿವಪ್ರಸಾದ್ (ಹೆಡ್ ಕಾನ್ಸ್ಟೇಬಲ್), ಅಂದಾನ್ ಸ್ವಾಮಿ (ಹೆಡ್ ಕಾನ್ಸ್ಟೇಬಲ್), ಸುನಿತಾ (ಮಹಿಳಾ ಹೆಡ್ ಕಾನ್ಸ್ಟೇಬಲ್) ಹಾಗೂ ಕುಶಾಲ್ ಮಣಿಯಾಣಿ (ಎಎಸ್ಐ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದ ವೆಂಕಟೇಶ್, ಮನ್ಸೂರ್ ಹಾಗೂ ಮಂಜುನಾಥ್, ಊರ್ವ ಪೊಲೀಸ್ ಠಾಣೆಯ ಸುರೇಶ್ ಕುಮಾರ್, ಸುರತ್ಕಲ್ ಪೊಲೀಸ್ ಠಾಣೆಯ ಶಿವಪ್ರಸಾದ್, ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯ ಅಂದಾನ್ ಸ್ವಾಮಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸುನಿತಾ ಹಾಗೂ ಕುಶಾಲ್ ಮಣಿಯಾಣಿ ಅವರು ಇಲಾಖೆಯಿಂದ ವರ್ಗಾವಣೆಗೊಂಡಿದ್ದು, ಅವರ ಸೇವೆಯನ್ನು ಸ್ಮರಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ವಿಜಯ್…
ಕುಂಪಲ: ಕುಂಪಲ, ಪಿಲಾರ್, ಅಂಬಿಕಾರೋಡ್ ಹಾಗೂ ಕಾಪಿಕಾಡ್ ಭಾಗದ ವಾಹನ ಸವಾರರು ಇಂದಿನಿಂದ ಹೆಚ್ಚುವರಿ ಸಂಚಾರ ಸಮಸ್ಯೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಭೀತಿಯನ್ನು ಎದುರಿಸುವಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಎಸ್. ಕುಂಪಲ ಅಭಿಪ್ರಾಯಪಟ್ಟಿದ್ದಾರೆ. ಕುಂಪಲದಿಂದ ಓವರ್ಬ್ರಿಡ್ಜ್ ಕಡೆಗೆ ಸಂಚರಿಸುವ ವಾಹನ ಸವಾರರಿಗೆ ಸಮರ್ಪಕ ಸರ್ವಿಸ್ ರಸ್ತೆ ಇಲ್ಲದ ಕಾರಣ ಅನಗತ್ಯವಾಗಿ ಸುತ್ತುವ ಮಾರ್ಗ ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಂಪಲದಿಂದ ಕಾಪಿಕಾಡ್ ಸಂಪರ್ಕಿಸುವ ಕೇವಲ ಕಾಲು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಅವಕಾಶವಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಸಂಸ್ಥೆಗಳು ಹಾಗೂ ವ್ಯಾಪಾರ ಸಂಕೀರ್ಣಗಳ ಸುತ್ತ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದರೂ, ಸಾರ್ವಜನಿಕರ ಸಂಚಾರಕ್ಕೆ ಅಗತ್ಯವಾದ ಸರ್ವಿಸ್ ರಸ್ತೆ ನಿರ್ಮಾಣವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪ್ರಸ್ತುತ ಕುಂಪಲ, ಪಿಲಾರ್ ಹಾಗೂ ಕಾಪಿಕಾಡ್ ಭಾಗದ ವಾಹನ ಸವಾರರು ತೊಕ್ಕೊಟ್ಟಿಗೆ ತಲುಪಲು ಸಾಮಾನ್ಯವಾಗಿ ಅರ್ಧ ಕಿಲೋಮೀಟರ್ಗಿಂತ ಕಡಿಮೆ ದೂರ ಕ್ರಮಿಸಬೇಕಾದರೆ,…

