Author: UllalaVani

Kannada News From Coastal Karnataka

ಸೋಮೋಶ್ವರ: ಜೊತೆಗೆ ಟೈಲ್ಸ್ ಕೆಲಸ ಮಾಡುತ್ತಿದ್ದವನೇ ಮನೆಯೊಳಗೆ ನಿಲ್ಲಿಸಿದ್ದ ಸ್ಕೂಟರ್‌ನ್ನು ಎಗರಿಸಿದ ಘಟನೆ ಸೋಮೋಶ್ವರ ದ್ವಾರಕಾನಗರದಲ್ಲಿ ನಡೆದಿದೆ. ಸ್ಕೂಟರ್ ಮಾಲೀಕ ಎಂದಿನ0ತೆ ಸಂಜೆ ಸುಮಾರು 6 ಗಂಟೆ ಅಸುಪಾಸಿನಲ್ಲಿ ವಾಹನವನ್ನು ನಿಲ್ಲಿಸಿದ್ದರು. 7 ಗಂಟೆ ವೇಳೆ ವಾಹನ ನಾಪತ್ತೆಯಾಗಿದೆ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಜೊತೆಗೆ ಕೆಲಸ ಮಾಡುತ್ತಿದ್ದ ಪರಿಚಿತನಾಗಿರುವ ಮುಕ್ಕಚ್ಚೇರಿ ನಿವಾಸಿ ಶಮೀಮ್ ಯಾನೆ ಶಮ್ಮಿ ಎಂಬಾತ ವಾಹನವನ್ನು ಕದ್ದಿರುವ ಬಗ್ಗೆ ತಿಳಿದುಬಂದಿದೆ. ಅದಲ್ಲದೇ ಇಂದು ವಾಹನವನ್ನು ಕದ್ದು ಕೊಂಡೊಯ್ಯುತ್ತಿದ್ದ ವೇಳೆ ಶಮೀನ್‌ನನ್ನು ಯುವಕರು ಹಿಂಬಾಲಿಸಿ,ಆತನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆತ ತಪ್ಪಿಸಿಕೊಂಡು ಹೋಗಿದ್ದಾನೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತ ತಪ್ಪಿಸಿಕೊಂಡು ಹೋಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

Read More

ಮಂಗಳೂರು, ಜ. 26: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪ ರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕೆ.ಪಿ. ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ…

Read More

ಉಳ್ಳಾಲ: ಕೋಟೆಕಾರ್ ಬದ್ರಿಯಾ ಜುಮಾ ಮಸೀದಿ ಮತ್ತು ಹಯಾತುಲ್ ಇಸ್ಲಾಮ್ ಮದರಸ ಅಜ್ಜಿನಡ್ಕ ವತಿಯಿಂದ ದೇಶದ 77ನೇ ಗಣ ರಾಜೋತ್ಸವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಸುಲ್ಯೆಮಾನ್ ಹಾಜಿ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಮಸೀದಿ ಖತೀಬರಾದ ಝುಬೈರ್ ಫ್ಯೆಝಿ,ಮಸೀದಿ ಕಾರ್ಯದರ್ಶಿ ಅಹಮ್ಮದ್ ಅಜ್ಜಿನಡ್ಟ ಮಾತನಾಡಿದರು. ದೇಶದ ಸಂವಿಧಾನದ ಪೀಠಿಕೆಯನ್ನು ಓದಲಾಯಿತು.ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷರಾದ ಬಶೀರ್ ಮೊಹಮ್ಮದ್,ಖಾಸಿಂ ಹಿತ್ತಿಲು,ಮಾಜಿ ಅದ್ಯಕ್ಷರಾದ ಕುಂಞ ಅಹಮ್ಮದ್ ಹಾಜಿ,ಕಮಿಟಿ ಸದಸ್ಯರಾದ ಅಬ್ದಲ್ ರಝಕ್,ಅಬ್ದಲ್ಲಾ, ಇಬ್ರಾಹಿಮ್ ಕೋಟೆಕಾರ್ ಗ್ಲೋಬಲ್ ಚಾರಿಟೇಬಲ್ ಟ್ರಸ್ಟಿನ ಸಂಚಾಲಕರಾದ ಇಸ್ಮಾಯಿಲ್ ಸಿ.ಎಚ್ ಮುಂತಾದವರ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳಿಗೆ ಮತ್ತು ಸೇರಿದವರಿಗೆ ಗ್ಲೋಬಲ್ ಅದ್ಯಕ್ಷರಾದ ಸಿ.ಎ ಮಹಮ್ಮದ್ ರವರ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.

Read More

ಮುಡಿಪು: ಮುಡಿಪುವಿನ ಬಹುಮುಖ ಪ್ರತಿಭೆ, ಏಕಲವ್ಯನಂತೆ ಬದುಕು ಕಟ್ಟಿಕೊಂಡ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಚಿತ್ರಕಲಾವಿದ, ಕೋಬೋರ್ಡ್ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಡಿಪು ಗುಡ್ಡ ಪ್ರದೇಶದ ಪಾಂಡಿಕಟ್ಟ ಎಂಬಲ್ಲಿ ಹೆಂಡತಿ, ಮಗನೊಂದಿಗೆ ವಾಸವಾಗಿದ್ದರು. ತಮ್ಮ ಸ್ವಂತ ಪರಿಶ್ರಮದಿಂದ ಚಿತ್ರಕಲೆ, ಕೀಬೋರ್ಡ್ ಕಲಿತು, ಅನೇಕರಿಗೆ ಕಲೆಯನ್ನು ಧಾರೆ ಎರೆಯುತ್ತಿದ್ದರು. ಯಾವುದೇ ದುಷ್ಚಟಗಳಿಲ್ಲದೇ ಆರಾಮದಾಯಕ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಅನೇಕರ ಕಲಾಜೀವನಕ್ಕೆ ಸ್ಪೂರ್ತಿಯ ಚಿಲುಮೆಯಾಗಿದ್ದ ಸತೀಶ್, ಮುಡಿಪು ಭಾರತಿ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದರು. ಇದೀಗ ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.

Read More

ಉಳ್ಳಾಲ‌: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ‌ ಸ್ಥಳೀಯ ಸಂಸ್ಥೆಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸ್ಕೌಟ್ ಗೈಡ್ ಮೇಳ ಹಾಗೂ ಕಬ್ ಬುಲ್ ಬುಲ್ ಉತ್ಸವ ಶನಿವಾರ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ.ಕ.ಜಿಲ್ಲಾ ಮಾಜಿ ಮುಖ್ಯ ಆಯುಕ್ತ ಡಾ.ಎನ್.ಜಿ.ಮೋಹನ್ ಉದ್ಘಾಟಿಸಿ, ಸ್ಕೌಟ್-ಗೈಡ್ ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಲ್ಲಿ ಜೀವನದುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜಗದೀಶ್ ಶೆಟ್ಟಿ, ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಯನಾ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳಾದ ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ಸ್ವಸ್ತಿಕ್, ವಿದ್ಯಾರತ್ನ ಶಾಲೆಯ ಅನೀಶ್ ಕುಮಾರ್, ಡಾ.ವೈಷ್ಣವಿ ಶೆಟ್ಟಿ, ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಇವರನ್ನು ಸನ್ಮಾನಿಸಲಾಯಿತು. ವುಡ್ ಬ್ಯಾಡ್ಜ್ ಪುರಸ್ಕೃತೆ ಪಾನೀರ್ ಅಸ್ಸಿಸಿ ಕೇಂದ್ರೀಯ ಶಾಲೆಯ ಪ್ರಮೀಳಾ ಇವರನ್ನು ಅಭಿನಂದಿಸಲಾಯಿತು.ರೋಪ್ ಕ್ಲೈಮಿಂಗ್, ಬ್ಲೈಂಡ್ ವಾಕ್, ಚಿಮಿಣಿ, ಸ್ವಿಂಗ್, ಕಮಾಂಡೋ ಬ್ರಿಡ್ಜ್,…

Read More

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ, ಮರಕ್ಕೆ ಕಟ್ಟಿ ಹಾಕಿ ಬಳಿಕ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಜನವರಿ 20 ರಂದು ಬೆಳಗಿನ ಜಾವ 2.10 ರಿಂದ 2.30 ರ ನಡುವೆ ಈ ಘಟನೆ ನಡೆದಿದೆ. ಆರೋಪಿಗಳನ್ನು ಮಂಗಳೂರು ನಗರದ ಕೂಳೂರು ನಿವಾಸಿಗಳಾದ ಮೊಯಿದ್ದೀನ್ ನಾಸಿರ್ ಮತ್ತು ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ.ದೂರಿನ ಪ್ರಕಾರ, ಈ ಜೋಡಿ ದೇವಿಪ್ರಸಾದ್ ಅವರ ಮನೆಯ ಬಳಿ ಕಾಣಿಸಿಕೊಂಡಿತ್ತು. ಆ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ನೆರೆಹೊರೆಯವರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.ಸಮೀಪದ ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವಿಪ್ರಸಾದ್ ಇತರರೊಂದಿಗೆ ಮನೆಗೆ ಧಾವಿಸಿ ಬಂದಾಗ ಆರೋಪಿ KA-19-W-407 ನೋಂದಣಿ ಸಂಖ್ಯೆಯ ಬೈಕ್‌ ಕದ್ದು ಪರಾರಿಯಾಗುತ್ತಿರುವುದನ್ನು ಕಂಡಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಬೆನ್ನಟ್ಟಿ ತಡೆದಾಗ, ಆರೋಪಿ ದೇವಿಪ್ರಸಾದ್ ಮೇಲೆ ಹಲ್ಲೆ ನಡೆಸಿ ಬೈಕ್‌ನೊಂದಿಗೆ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಾಹಿತಿ ಪಡೆದ ಸುಮಾರು 25…

Read More

ಮಂಗಳೂರು; ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಘಟಕಕ್ಕೆ ಸರಕಾರದ ವತಿಯಿಂದ ಗುರುಪುರದ ವಾಮಂಜೂರಿನ ತಿರುವೆಲ್ ಗ್ರಾಮದಲ್ಲಿ ಅರ್ಧ ಎಕರೆ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ ಮಂಜೂರಾಗಿದ್ದು, ಶೀಘ್ರದಲ್ಲೇ ಶಂಕು ನೆರೆವೇರಲಿದೆ ಎಂದು ಕಸಪಾ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರು ಡಾ.ಮಂಜುನಾಥ್ ಎಸ್ ರೇವಣಕರ್ ತಿಳಿಸಿದ್ದಾರೆ. ಇವರು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭವನವು ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ರಾರಾಜಿಸಲಿದೆ ಎಂದು ಹೇಳಿದ್ದಾರೆ. ಅಧ್ಯಕ್ಷರಾದ ಡಾ.ಮಂಜುನಾಥ ಎಸ್ ರೇವಣಕರ್ ಅವರ ಕಳೆದ ನಾಲ್ಕು ವರ್ಷಗಳ ನಿರಂತರ ಪರಿಶ್ರಮ ಮತ್ತು ಮುಂದಾಳತ್ವದಲ್ಲಿ ಈ ಜಾಗ ಮಂಜೂರಾಗಿದೆ. ತಾಲೂಕು ಮಟ್ಟದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಭವನವೊಂದರ ಅಗತ್ಯತೆಯನ್ನು ಮನಗಂಡು ಸರ್ಕಾರದ ಮಟ್ಟದಲ್ಲಿ ಸತತ ಹೋರಾಟವನ್ನು ನಡೆಸಿದ್ದರು. ಅದರ ಫಲವಾಗಿ ಇಂದು ಜಾಗ ಮಂಜೂರಾಗಿದೆ ಎಂದರೆ ತಪ್ಪಗಲಾರದು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

Read More

ತಲಪಾಡಿ; ತಲಪಾಡಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಡೆ ಹೋಗುವ ರಸ್ತೆಯ ಸಮೀಪವಿರುವ ನಾರ್ಲ ಪಡೀಲ್ ಪಶು ಆಸ್ಪತ್ರೆ ಬಳಿ ಘನ ತ್ಯಾಜ್ಯ ಘಟಕವನ್ನು ತಲಪಾಡಿ ಗ್ರಾಮ ಪಂಚಾಯತ್ ನಿರ್ಮಾಣ ಮಾಡುವ ಯೋಜನೆಗೆ ಮುಂದಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯ, ಪರಿಸರ ಮತ್ತು ಮಕ್ಕಳ ಭವಿಷ್ಯಕ್ಕೆ ಗಂಭೀರ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಸ್ಥಳೀಯರು ನಾರ್ಲ ಪಡೀಲ್ ಪಶು ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯರಾದ ಯಶು ಪಕ್ಕಳ ಮಾತನಾಡಿ, ಈ ಪ್ರದೇಶದಲ್ಲಿ ಕೇವಲ ಎರಡು ಮೂರು ಮನೆಗಳ ಸಹಿ ಹಾಕಿಸಿಕೊಂಡು ಕಾರ್ಖಾನೆಗಳು ತಲೆ ಎತ್ತಿನಿಂತಿದೆ. ಇದೀಗ ಕಸ ವಿಲೇವಾರಿ ಘಟಕ ನಿರ್ಮಾಣವಾದರೆ ಪರಿಸರದ ಜೊತೆಗೆ ಸಾರ್ವಜನಿಕರು ಸಂಕಷ್ಟವನ್ನು ಎದುರಿಸಬೇಕಾದೀತು. ಅದಲ್ಲದೇ ಘಟಕಕ್ಕೆ ಬೇಲಿ ನಿರ್ಮಿಸುವುದರ ಮೂಲಕ ಭದ್ರತೆ ಮಾಡಿದ್ರೂ, ಇದೇ ಪ್ರದೇಶದಲ್ಲಿ ಗಾಂಜಾ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ನಡೆಯುವ ಸಾಧ್ಯತೆ ಇದೆ. ಅಂಗನವಾಡಿ ಕೇಂದ್ರ, ಪಶು ಆಸ್ಪತ್ರೆ ವಿರುವ ತಾಣದಲ್ಲಿ ಕಸ ವಿಲೇವಾರಿ ಘಟಕ ಇರೋದಿಲ್ಲ.…

Read More

ಉಳ್ಳಾಲ: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಾಗತಿಕ ಬಿಲ್ಲವ ಕ್ರೀಡಾ ಕೂಟದಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಬ್ರಹ್ಮಶ್ರೀ ಉಳ್ಳಾಲ ತಂಡ ಪಡೆದುಕೊಂಡಿದೆ. ಬ್ರಹ್ಮಶ್ರೀ ಉಳ್ಳಾಲ ತಂಡವು ವಾಲಿಬಾಲ್ ಪ್ರಥಮ, ಹಗ್ಗ ಜಗ್ಗಾಟ ದ್ವಿತೀಯ , ತ್ರೋಬಾಲ್‌ನಲ್ಲಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಮಾಜಿ ಸಚಿವ ವಿ ಸುನೀಲ್ ಕುಮಾರ್, ಶಾಸಕರಾದ ಡಿ ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ನಿಗಮದ ಅಧ್ಯಕ್ಷರಾದ ಹರೀಶ್ ಕುಮಾರ್, ಅಖಿಲಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಸಂಘಟನಾ ಕಾರ್ಯದರ್ಶಿ ಉದಯಚಂದ್ರ ಸುವರ್ಣ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದುಕುಮಾರ್ ಇವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಉಳ್ಳಾಲ ಅಧ್ಯಕ್ಷ ಕೆ ಟಿ ಸುವರ್ಣ ಚಾಂಪಿಯನ್ಸ್ ಟ್ರೋಫಿ ಸ್ವೀಕರಿಸಿದರು. ಈ ಸಂದರ್ಭ ಕ್ರೀಡಾ ಕೂಟದ ಸಂಚಾಲಕ ಸದಾನಂದ ಪೂಜಾರಿ,ಸುಮಲತಾ ಸುವರ್ಣ, ಗಂಗಾಧರ ಪೂಜಾರಿ ಮುಂಬಯಿ, ಬ್ರಹ್ಮಶ್ರೀ ಬಿಲ್ಲವ ವೇದಿಕೆ ಗೌರವ ಸಲಹೆಗಾರ ಎ ಜೆ ಶೇಖರ್, ಕಾರ್ಯಧ್ಯಕ್ಷ ಸತೀಶ್ ಕರ್ಕೇರ, ಜೀವನ್…

Read More

ಉಳ್ಳಾಲ: ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಮಾಡಿಕೊಡುವುದರಿಂದ ಸಂಸ್ಕಾರಯುತ ಸಮಾಜವನ್ನು ಸೃಷ್ಟಿಸಲು ಸಾಧ್ಯ ಎಂದು ಜೆ.ಸಿ ಇಂಟರ್ನ್ಯಾಷನಲ್ ಸ್ಕೂಲ್ ಕಾರ್ಕಳ ಇದರ ಉಪಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ ಅಭಿಪ್ರಾಯಪಟ್ಟರು. ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ 13ನೇ ವರ್ಷದ ಗುರುಕುಲ ಉತ್ಸವದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಂತ್ರ ನಾಟ್ಯಕಲಾ ಗುರುಕುಲವು ಮಕ್ಕಳಲ್ಲಿ ಸಂಸ್ಕಾರವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.ಬಾಲ್ಯದಲ್ಲೇ ಮಕ್ಕಳಿಗೆ ನಮ್ಮ ಭಾಷೆ, ಕಲೆ, ಸಾಹಿತ್ಯ, ಜನಪದ ಪರಂಪರೆ, ಧಾರ್ಮಿಕ ಸಹಿಷ್ಣುತೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಪರಿಚಯವಾಗುವುದರಿಂದ ಅವರ ಮನಸ್ಸಿನಲ್ಲಿ ಉತ್ತಮ ಗುಣಗಳು ಆಳವಾಗಿ ಬೇರೂರುತ್ತವೆ. ಸಂಸ್ಕೃತಿಯೊಂದಿಗೆ ಬೆಳೆದ ಮಗು ಸಮಾಜದೊಂದಿಗೆ ಹೊಂದಾಣಿಕೆಯಿಂದ ಬದುಕುವುದನ್ನು ಕಲಿಯುತ್ತದೆ. ಹಿರಿಯರಿಗೆ ಗೌರವ, ಕಿರಿಯರಿಗೆ ಪ್ರೀತಿ, ದುರ್ಬಲರಿಗೆ ಸಹಾನುಭೂತಿ ಎಂಬ ಮೌಲ್ಯಗಳು ಸಹಜವಾಗಿ ಅವರಲ್ಲಿ ಬೆಳೆಯುತ್ತವೆ ಎಂದರು.ಸಭಾಧ್ಯಕ್ಷತೆಯನ್ನು ರಾಜೇಶ್ ಅತ್ತಾವರ ವಹಿಸಿದ್ದರು, ಹರೀಶ್ ಮಾಸ್ಟರ್, ಆನಂದ ಕೆ ಅಸೈಗೋಳಿ, ನರೇಶ್ ಪಂಡಿತ್ ಹೌಸ್, ಗುರುಕುಲದ ಗೌರವಾಧ್ಯಕ್ಷೆ ಶಕೀಲಾ ಜನಾರ್ಧನ, ಟ್ರಸ್ಟಿಗಳು ಶೈನಾ ಶ್ರಾವಣ್, ಬಬಿತಾ ಕಿರಣ್ ಉಪಸ್ಥಿತರಿದ್ದರು.ಕನ್ನಡ…

Read More