Author: UllalaVani

Kannada News From Coastal Karnataka

ಉಳ್ಳಾಲ, ಜೂ. 2: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಉಳ್ಳಾಲ ಹಾಗೂ ಕೊಣಾಜೆ ಉಪವಿಭಾಗಗಳ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ. ಈ ಸಭೆಯು ಜೂನ್ 4ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಳ್ಳಾಲ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ.) ಅವರ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ವಿದ್ಯುತ್ ಸರಬರಾಜು, ಬಿಲ್ಲಿಂಗ್, ಹೊಸ ಸಂಪರ್ಕ, ನಿರ್ವಹಣೆ ಸೇರಿದಂತೆ ವಿವಿಧ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಗ್ರಾಹಕರು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದಾಗಿದೆ. ವಿದ್ಯುತ್ ಗ್ರಾಹಕರು ಈ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯುವ ಜೊತೆಗೆ ಇಲಾಖೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬಾಕ್ರಬೈಲು, ಜೂನ್ 2: ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇರಳದ 14 ಜಿಲ್ಲೆಗಳಿಗೆ ಬೈಕ್ ರೈಡ್ ಕೈಗೊಂಡಿದ್ದ ತುಳುನಾಡಿನ ಯುವಕ ವಿಷ್ಣು ಅವರು ತಮ್ಮ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಾಸರಗೋಡು ಜಿಲ್ಲೆ ತಲುಪಿದ ಹಿನ್ನೆಲೆಯಲ್ಲಿ ಬಾಕ್ರಬೈಲಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಬಾಕ್ರಬೈಲಿನ ಕಟೀಲೇಶ್ವರೀ ಆಟೋ ವರ್ಕ್ಸ್ ಹಾಗೂ ತುಳುನಾಡ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿಷ್ಣು ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಅವರ ಜಾಗೃತಿ ಅಭಿಯಾನಕ್ಕೆ ಸಹಕಾರ ನೀಡಿದ ಜೀವಿತ್ ಅವರನ್ನೂ ಗೌರವಿಸಲಾಯಿತು. “ಸೇವ್ ನೇಚರ್, ಸೇ ನೋ ಟು ಡ್ರಗ್ಸ್” ಎಂಬ ಸಂದೇಶದೊಂದಿಗೆ ಮೇ 28ರಂದು ಮಂಗಳೂರಿನಿಂದ ಬೈಕ್ ಯಾತ್ರೆ ಆರಂಭಿಸಿದ್ದ ವಿಷ್ಣು, ಕೇರಳದ ಎಲ್ಲಾ 14 ಜಿಲ್ಲೆಗಳಲ್ಲಿ ಸಂಚರಿಸಿ ಡ್ರಗ್ಸ್‌ನ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದ್ದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಷ್ಣು, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ಅನೇಕ ಯುವಕರು ಡ್ರಗ್ಸ್ ಹಾಗೂ ಗಾಂಜಾ ವ್ಯಸನಕ್ಕೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವುದನ್ನು ಕಂಡಿದ್ದಾಗಿ ಹೇಳಿದರು.…

Read More

ಉಳ್ಳಾಲ: ರಂಗ ಮಂದಿರವನ್ನು ಕೊಡುಗೆಯಾಗಿ ನೀಡಿರುವುದು ಅಂಬ್ಲಮೊಗರಿನ ಊರವರಿಗೆ ಶಾಲಾ ಮಕ್ಕಳಿಗೆ ಬಹುದೊಡ್ಡ ಸೊತ್ತಾಗಿದೆ. ವಿದ್ಯಾ ಕೇಂದ್ರಗಳಲ್ಲಿ ಅಭಿವೃದ್ಧಿ ಕೆಲಸಗಳಾದಲ್ಲಿ ಮಾತ್ರ ಗ್ರಾಮ ಅಭಿವೃದ್ಧಿಯಾಗುವುದು. ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿರುವ ಮುಖ್ಯೋಪಾಧ್ಯಾಯರು ಸೇರಿದಂತೆ ಶಿಕ್ಷಕರ ತಂಡದ ಕಾರ್ಯ ಶ್ಲಾಘನೀಯವಾದುದು. ಮುಖ್ಯೋಪಾಧ್ಯಾಯರ ಶ್ರಮ ಜೀವನದಿಂದಲೇ ಶಾಲೆ ಅಭಿವೃದ್ಧಿ ಮಟ್ಟವನ್ನು ಏರಿದೆ ಎಂದು ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಸುದರ್ಶನ್‌ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸ್ಥಳದಾನಿ ಪಡ್ಯಾರಮನೆ ರಾಮಕ್ಕ ಪಕೀರ ಶೆಟ್ಟಿ ಅವರ ಸ್ಮರಣಾರ್ಥ ಅವರ ಮಕ್ಕಳಾದ ಪಡ್ಯಾರಮನೆ ಆನಂದ ಶೆಟ್ಟಿ ಮುಂಬೈ, ಸದಾಶಿವ ಶೆಟ್ಟಿ ಕಡೆಂಜ ಹಾಗೂ ವಿಠಲ ಶೆಟ್ಟಿ ಬೆಂಗಳೂರು ಅವರ ಕೊಡುಗೆಯಾಗಿ ನಿರ್ಮಿಸಿದ ಶಾಲಾ ರಂಗಮಂದಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಳ್ಳಾಲ ತಾಲೂಕು ಅಧ್ಯಕ್ಷ ಮಹಮ್ಮದ್‌ ರಫೀಕ್‌ ಅಂಬ್ಲಮೊಗರು ಮಾತನಾಡಿ, ಅಂಬ್ಲಮೊಗರು ಶಾಲೆಗೂ ಬಂಟ ಸಮುದಾಯಕ್ಕೂ ಬಹಳಷ್ಟಿದೆ ನಂಟಿದೆ. ೧೦೦ ವರ್ಷಗಳ ಹಿಂದೆ ಸ್ಥಾಪನೆಯಾದ…

Read More

 ಉಳ್ಳಾಲ: ತೊಕ್ಕೊಟ್ಟು ಓವರ್‌ ಬ್ರಿಡ್ಜ್‌ ನಲ್ಲಿ ಕೆಲ ದಿನಗಳ ಹಿಂದೆ ಸಂಚಾರಿ ಅವ್ಯವಸ್ಥೆಯಿಂದ ಉಂಟಾದ ಗೊಂದಲಗಳಿಗೆ ಪರಿಹಾರ ಸಿಗುವಂತೆ ಸ್ಪೀಕರ್‌ ಯು.ಟಿ.ಖಾದರ್‌ ನೇತೃತ್ವದ  ನಿಯೋಗ ತೊಕ್ಕೊಟ್ಟು ಓವರ್‌ ಬ್ರಿಡ್ಜ್‌,  ಉಳ್ಳಾಲಬೈಲು, ತೊಕ್ಕೊಟ್ಟು ಜಂಕ್ಷನ್‌ ಗೆ  ಸಂಚಾರಿ ಪೊಲೀಸ್‌,   ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಅಧಿಕಾರಿಗಳ ನಿಯೋಗದೊಂದಿಗೆ ಭೇಟಿ ನೀಡಿ  ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ   ತಕ್ಷಣಕ್ಕೆ ಪರಿಹಾರ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತೊಕ್ಕೊಟ್ಟು  ಎರಡು ಬದಿಯ ಸರ್ವಿಸ್‌ ರಸ್ತೆಗಳಲ್ಲಿ ಏಕಮುಖ ಸಂಚಾರ ನಡೆಸಬೇಕು. ಉಳ್ಳಾಲ ಹೋಗುವ ಬಸ್ಸು, ಇತರೆ ವಾಹನಗಳು ಕಾಪಿಕಾಡು ಡಿವೈಡರ್‌ ದಾಟಿಯೇ ಉಳ್ಳಾಲದ ರಸ್ತೆಯಾಗಿ ತೆರಳಬೇಕು.  ತೊಕ್ಕೊಟ್ಟು ಒಳಪೇಟೆ ಸಂಚರಿಸುವ ವಾಹನಗಳು ಉಳ್ಳಾಲಬೈಲ್‌ ಡಿವೈಡರ್‌ ದಾಟಿ   ಬಳಿಕ ಓವರ್‌ಬ್ರಿಡ್ಜ್‌   ರಸ್ತೆಯಿಂದ ಇಳಿಯುವಂತೆ  ಮಾಡಿದಾಗ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಗಳು  ಆಗಲು ಸಾಧ್ಯವಿಲ್ಲ.  ತೊಕ್ಕೊಟ್ಟುವಿನಿಂದ ಉಳ್ಳಾಲ ವರೆಗಿನ ರಸ್ತೆಬದಿಯ ಅಂಗಡಿಗಳನ್ನು ತೆರವುಗೊಳಿಸಬೇಕು, ಗಿಡಗಂಟೆಗಳನ್ನು ಕಡಿದು ಎರಡು ಬದಿಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡುವಂತೆ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.   ತೊಕ್ಕೊಟ್ಟು ಓವರ್‌ಬ್ರಿಡ್ಜ್‌ -ಉಳ್ಳಾಲಬೈಲ್‌ ರಸ್ತೆ…

Read More

ಉಳ್ಳಾಲ: ದಾರುನ್ನಜಾತ್ ಎಜ್ಯುಕೇಶನ್ ಸೆಂಟರ್, ಸಿ.ಎಂ. ನಗರ, ಚಿನಾಲ ಚಿಗುರುಪಾದೆ ಇದರ ವತಿಯಿಂದ ಖಾಝಿ ಸಯ್ಯಿದ್ ಉಮರುಲ್ ಫಾರೂಖ್ ತಂಙಳ್ ಅಲ್ ಬುಖಾರಿ ಪೂಸೋಟು (ಖ.ಸಿ) ರವರ ಆಂಡ್ ನೇರ್ಚೆ ಹಾಗೂ ನಮ್ಮಿಂದ ಅಗಲಿದವರ ಹೆಸರಲ್ಲಿ ದುಆ ಮಜ್ಲಿಸ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮವು ಜೂನ್ 13ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮಕ್ಕೆ ಸಲೀಂ ಮದನಿ ಕುತ್ತಾರ್ ನೇತೃತ್ವ ವಹಿಸಲಿದ್ದು, ಚೇರೂರು ಉಸ್ತಾದ್, ಅಬ್ದುಲ್ ಖಾದರ್ ಸಖಾಫಿ ಉಸ್ತಾದ್, ಜಿ.ಎಸ್. ಉಸ್ತಾದ್, ಪಲ್ಲಪಾಡಿ ಉಸ್ತಾದ್, ಅಬ್ದುಲ್ ಲತೀಫ್ ಮದನಿ ಸಜಿಪ ಹಾಗೂ ಶಬೀರ್ ಅಶ್ಅರಿ ಕೆ.ಸಿ.ರೋಡ್ ಸೇರಿದಂತೆ ವಿವಿಧ ಸಾದಾತುಗಳು, ಉಲಮಾ ಹಾಗೂ ಉಮರಾ ನೇತಾರರು ಗಣ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ದಾರುನ್ನಜಾತ್ ಎಜ್ಯುಕೇಶನ್ ಸೆಂಟರ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ತೆಗೆದು ವಿಕೃತಿ ಮೆರೆದಿರುವ ಆಟೆಂಡರ್ ಮುನೀರ್ ಅಹಮದ್‌ನ ಅಮಾನುಷ ಕೃತ್ಯ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಗೌರವ ಮತ್ತು ಖಾಸಗಿತನವನ್ನು ಸಾವಿನ ನಂತರವೂ ಕಾಪಾಡಬೇಕಾದ ಜವಾಬ್ದಾರಿ ಆಸ್ಪತ್ರೆ ಆಡಳಿತ ಮತ್ತು ಆರೋಗ್ಯ ಇಲಾಖೆಯ ಮೇಲಿದೆ. ಆದರೆ ಶವಾಗಾರದಂತಹ ಸೂಕ್ಷ್ಮ ಸ್ಥಳದಲ್ಲಿಯೇ ಇಂತಹ ಕೃತ್ಯ ನಡೆದಿರುವುದು ಆರೋಗ್ಯ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ಈ ಘಟನೆ ಕೇವಲ ಒಬ್ಬ ವ್ಯಕ್ತಿಯ ವಿಕೃತ ಮನಸ್ಥಿತಿಯ ಪರಿಣಾಮ ಮಾತ್ರವಲ್ಲ, ಆಸ್ಪತ್ರೆಗಳಲ್ಲಿನ ಮೇಲ್ವಿಚಾರಣಾ ವ್ಯವಸ್ಥೆಯ ವೈಫಲ್ಯವನ್ನೂ ಬಹಿರಂಗಪಡಿಸಿದೆ. ಮೃತದೇಹಗಳ ನಿರ್ವಹಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದರೂ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ತಂದಿರುವ ಈ ಪ್ರಕರಣದ…

Read More

ಬೀದರ್ : ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಶವಾಗಾರದ ಅಟೆಂಡರ್ ಆಗಿರುವ ಮುನೀರ್ ಅಹ್ಮದ್ ಎಂಬಾತ, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವೇಳೆ ಅನುಮತಿ ಇಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ಮೃತ ಮಹಿಳೆಯರ ಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದ ಎನ್ನಲಾಗಿದೆ. ಕೆಲ ಸಂದರ್ಭಗಳಲ್ಲಿ ಶವಗಳ ಮೇಲಿದ್ದ ಬಟ್ಟೆಗಳನ್ನು ತೆಗೆದು ಫೋಟೋ ಕ್ಲಿಕ್ಕಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.ಈ ವಿಷಯ ಬೆಳಕಿಗೆ ಬಂದ ಬಳಿಕ ಆಸ್ಪತ್ರೆ ಆಡಳಿತ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತರ ಗೌರವ, ಕುಟುಂಬದ ಭಾವನೆಗಳು ಹಾಗೂ ವೈದ್ಯಕೀಯ ಗೌಪ್ಯತೆಗೆ ಧಕ್ಕೆ ಉಂಟುಮಾಡುವಂತಹ ಕೃತ್ಯ ಇದಾಗಿದೆ ಎಂದು ಹಲವರು ಖಂಡಿಸಿದ್ದಾರೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದ ಮುಖ್ಯಸ್ಥ…

Read More

ಬೆಂಗಳೂರು, ಜೂ. 01 : ಬೇಸಿಗೆ ರಜೆ ಬಳಿಕ ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಶುಭಕೋರಿದ್ದಾರೆ. “ಭವ್ಯ ಕರ್ನಾಟಕದ ಭವಿಷ್ಯದ ಆಶಾಕಿರಣಗಳಾದ ನಮ್ಮ ನಾಡಿನ ಹೆಮ್ಮೆಯ ವಿದ್ಯಾರ್ಥಿ ಮಿತ್ರರಿಗೆ ಹೊಸ ಶೈಕ್ಷಣಿಕ ವರ್ಷದ ಹಾರ್ದಿಕ ಶುಭಾಶಯಗಳು. ಶಾಲೆ ಎಂಬ ಜ್ಞಾನ ದೇಗುಲದಲ್ಲಿ ನಿಮ್ಮ ಕನಸುಗಳು ಚಿಗುರಲಿ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದ ಮೂಲಕ ನೀವು ಅಂದುಕೊಂಡ ಗುರಿ ನಿಮ್ಮದಾಗಲಿ. ನಿಮ್ಮ ಸಾಧನೆಗಳು ನಮ್ಮ ಹೆಮ್ಮೆಯ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸುತ್ತೇನೆ” ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.2026-27ನೇ ಸಾಲಿನ ಶೈಕ್ಷಣಿಕ ತರಗತಿಗಳು ಇಂದಿನಿಂದ ಪ್ರಾರಂಭಗೊಂಡಿದ್ದು, ಮಕ್ಕಳಲ್ಲಿ ಶಾಲಾ ಪ್ರಾರಂಭದ ಸಂಭ್ರಮ ಜೋರಾಗಿದೆ. ಇನ್ನು ಶಿಕ್ಷಣ ಇಲಾಖೆ ಹಬ್ಬದ ವಾತಾವರಣ, ಸಂಭ್ರಮ, ಸಡಗರದಿಂದ ಮಕ್ಕಳನ್ನ ಸ್ವಾಗತ ಮಾಡಲು ಆದೇಶಿಸಿದ್ದು, ಮಧ್ಯಾಹ್ನ ಬಿಸಿಯೂಟದಲ್ಲಿ ಸಿಹಿ ಮಾಡಲು ಸೂಚನೆ ನೀಡಿತ್ತು. ಅದರಂತೆ ಶಾಲೆಯನ್ನ ತಳಿರು-ತೋರಣ, ರಂಗೋಲಿಯಿಂದ ಸಿಂಗಾರ ಮಾಡಿ, ಶಿಕ್ಷಕರು ಮಕ್ಕಳನ್ನು…

Read More

ಬಂಟ್ವಾಳ, ಜೂನ್ 1: ಚಿಣ್ಣರ ಲೋಕ ಮೊಕೆದ ಕಲಾವಿದರ ಸೇವಾ ಟ್ರಸ್ಟ್ (ರಿ.), ಬಂಟ್ವಾಳ ಇದರ ಆಶ್ರಯದಲ್ಲಿ ಹಾಗೂ ತುಳು, ಬ್ಯಾರಿ, ಕೊಂಕಣಿ ಮತ್ತು ಅರೆಭಾಷೆ ಅಕಾಡೆಮಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆದ ಕರಾವಳಿ ಕಲೋತ್ಸವ-2026 ಹಾಗೂ ಬಹುಸಂಸ್ಕೃತಿ ಉತ್ಸವದ ಯಶಸ್ಸಿಗೆ ಕಾರಣಕರ್ತರಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಆತ್ಮೀಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಮತ್ತು ಔತಣಕೂಟವು ಮೇ 31ರಂದು ಸಂಜೆ ಸ್ವರ್ಶ ಕಲಾಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಟ್ರಸ್ಟಿ ತೇವ್ ತಾರನಾಥ ಕೊಟ್ಟಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್ ಜೈನ್, ಬ್ಯಾರಿ ಸಾಹಿತ್ಯ ಸಂಭ್ರಮದ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಗೌರವ ಸಲಹೆಗಾರ ಸರಪಾಡಿ ಅಶೋಕ್ ಶೆಟ್ಟಿ, ನಿರ್ದೇಶಕರಾದ ದೇವಪ್ಪ ಕುಲಾಲ್ ಪಂಜಿಕಲ್ಲು, ರಾಜ್ ಚಂತಿಮಾರ್, ಶೋಭಾ ಶೆಟ್ಟಿ ಪೌಜಿಯ, ಎಚ್.ಕೆ. ನಾಯನಾಡು, ವಿಜಯಕುಮಾರ್ ಅಡ್ಯಾರು, ಡಾ. ರೂಪಲತಾ, ಅನಿಲ್ ಪಂಡಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕರಾವಳಿ ಕಲೋತ್ಸವ-2026ರ ಯಶಸ್ಸಿಗೆ ಶ್ರಮಿಸಿದ ಸಂಘಟಕರು,…

Read More

ಕಳೆದ ಎರಡು ದಶಕಗಳಿಂದ ಜಗತ್ತಿನ ಕೋಟ್ಯಂತರ ಜನರಿಗೆ ಉಚಿತವಾಗಿ ಸಾಮಾಜಿಕ ಜಾಲತಾಣ ಸೇವೆಗಳನ್ನು ಒದಗಿಸುತ್ತ ಬಂದಿರುವ ಮೆಟಾ ಸಂಸ್ಥೆ ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇಟ್ಟಿದೆ. ಮೊಬೈಲ್ ರೀಚಾರ್ಜ್ ಮಾಡುವಂತೆ ಇನ್ನು ಮುಂದೆ ಕೆಲವು ವಿಶೇಷ ಸೌಲಭ್ಯಗಳನ್ನು ಪಡೆಯಲು ವಾಟ್ಸಾಪ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ಚಂದಾದಾರಿಕೆ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮೆಟಾ ಸಂಸ್ಥೆ ತನ್ನ ಆದಾಯದ ಮೂಲವನ್ನು ಕೇವಲ ಜಾಹೀರಾತುಗಳಿಗೆ ಸೀಮಿತಗೊಳಿಸದೆ, ಚಂದಾದಾರಿಕೆ ಆಧಾರಿತ ಸೇವೆಗಳತ್ತ ಸಾಗುತ್ತಿದೆ. ಇದರ ಭಾಗವಾಗಿ “ಮೆಟಾ ಒನ್” ಎಂಬ ಹೊಸ ಯೋಜನೆಯಡಿ ಇನ್‌ಸ್ಟಾಗ್ರಾಂ ಪ್ಲಸ್, ಫೇಸ್‌ಬುಕ್ ಪ್ಲಸ್ ಹಾಗೂ ವಾಟ್ಸಾಪ್ ಪ್ಲಸ್ ಸೇವೆಗಳನ್ನು ಪರಿಚಯಿಸಿದೆ. ಈ ಯೋಜನೆಯಡಿ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಪ್ಲಸ್ ಸೇವೆಗೆ ತಿಂಗಳಿಗೆ ಸುಮಾರು ₹330 ಹಾಗೂ ವಾಟ್ಸಾಪ್ ಪ್ಲಸ್‌ಗೆ ಸುಮಾರು ₹250 ಶುಲ್ಕ ನಿಗದಿಪಡಿಸಲಾಗಿದೆ. ಈ ಸೇವೆಗಳನ್ನು ಪಡೆಯುವವರಿಗೆ ಸಾಮಾನ್ಯ ಬಳಕೆದಾರರಿಗಿಂತ ಹೆಚ್ಚುವರಿ ಸೌಲಭ್ಯಗಳು ದೊರೆಯಲಿವೆ. ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಬಳಕೆದಾರರು ತಮ್ಮ ಸ್ಟೋರಿಯನ್ನು ಯಾರು ಮರು ವೀಕ್ಷಿಸಿದ್ದಾರೆ…

Read More