ಬೆಂಗಳೂರು : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ಮುಖಂಡ, ಹೆಬ್ರಿ ತಾಲೂಕು ಮುದ್ರಾಡಿಯ ಮಂಜುನಾಥ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಕಳೆದ 3 ದಶಕಗಳಿಂದ ನಿರಂತರವಾಗಿ ಪಕ್ಷದ ಕಾರ್ಯ ಮಾಡಿಕೊಂಡು ಬಂದಿರುವ ಮಂಜುನಾಥ ಪೂಜಾರಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಡೀಮ್ಸ್ ಫಾರೆಸ್ಟ್ ಕುರಿತಾಗಿ ಜನಪರ ಹೋರಾಟ ಮಾಡಿರುವ ಅವರು ಗ್ರಾಮೀಣ ಭಾಗದ ಜನರ ಸಹಾಯಕ್ಕಾಗಿ ಸಹಕಾರಿ ಸಂಘ ಸ್ಥಾಪಿಸಿದವರು. ರಾಜಕೀಯ ಕ್ಷೇತ್ರ ಮಾತ್ರವಲ್ಲದೆ ಧಾರ್ಮಿಕ, ಸಾಮಾಜಿಕ ಕಾರ್ಯದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡ ಮಂಜುನಾಥ ಪೂಜಾರಿ ಅವರು ಎರಡು ಅವಧಿಗೆ ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಅನಂತರ ಅಧ್ಯಕ್ಷರಾಗಿ ಕಾರ್ಯನಿರ್ವಹಿದ್ದರು. ತಾಲೂಕು ಬೋರ್ಡ್, ಜಿ.ಪಂ. ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಅವರದ್ದು. ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಒದಗಿಸುವಲ್ಲಿ, ಹೆಬ್ರಿ ತಾಲೂಕು ರಚನೆಗಾಗಿ ನಡೆದ ಹೋರಾಟದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡ ಅವರು ಹೆಬ್ರಿ ತಾಲೂಕು…
Author: UllalaVani
ಮಂಗಳೂರು,:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ ರದ್ದಾಗಿದೆ. ರೈಲು ಸಂಖ್ಯೆ 16575 ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್ಪ್ರೆಸ್ ಡಿಸೆಂಬರ್ 14 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16576ರ ವಾರದಲ್ಲಿ ಮೂರು ದಿನ ಇರುವ ಮಂಗಳೂರು ಜಂಕ್ಷನ್-ಯಶವಂತಪುರದ ಗೋಮಟೇಶ್ವರ ಎಕ್ಸ್ಪ್ರೆಸ್ ಡಿಸೆಂಬರ್ 15 ರವರೆಗೆ ರದ್ದಾಗಿದೆ. ಅದೇ ರೀತಿ, ರೈಲು ಸಂಖ್ಯೆ 16515ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ – ಕಾರವಾರ ರೈಲು ಡಿಸೆಂಬರ್ 15 ರವರೆಗೆ ರದ್ದಾಗಲಿದ್ದು, ರೈಲು ಸಂಖ್ಯೆ…
ಮಂಗಳೂರು : ಸ್ಕ್ಯಾನಿಂಗ್ ಸೆಂಟರ್ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಎಚ್ ಆರ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಪ್ರಸವಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ (ನಿರ್ಬಂಧ ಕಾಯ್ದೆ), 1994 ರ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಗುರುತಿನ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಧಿಕಾರಿಗಳು ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿನ ವರದಿಗಳಿಗೆ ಸಿಬ್ಬಂದಿ ಸದಸ್ಯರಿಂದ ಸಹಿ ಮಾಡಿಸದೇ, ಆಯಾ ತಜ್ಞ ವೈದ್ಯರಿಂದ ಮಾತ್ರ ಸಹಿ ಮಾಡಿಸಬೇಕು” ಎಂದು ಅವರು ಹೇಳಿದರು. ಪ್ರಸ್ತುತ ಜಿಲ್ಲೆಯಲ್ಲಿ 189 ಸ್ಕ್ಯಾನಿಂಗ್ ಸೆಂಟರ್ಗಳಿವೆ. ಅದರಲ್ಲಿ 12 ಸರ್ಕಾರಿ ಸ್ವಾಮ್ಯದ ಮತ್ತು 177 ಖಾಸಗಿ ಕೇಂದ್ರಗಳಿವೆ. ವಿಶೇಷ ತಪಾಸಣಾ ತಂಡವನ್ನು ರಚಿಸಲಾಗಿದ್ದು, 2025 ರ ಏಪ್ರಿಲ್ನಿಂದ ಆಗಸ್ಟ್ ವರೆಗೆ 274 ಖಾಸಗಿ…
ಉಡುಪಿ : ಜಿಲ್ಲೆಯಲ್ಲಿ ಅಕ್ಟೋಬರ್ನಿಂದ ಮರಳು ತೆಗೆಯಲು ಅನುಮತಿ ನೀಡಲಾಗುವುದು ಮತ್ತು ಕೆಂಪು ಕಲ್ಲಿನ ಮೇಲಿನ ರಾಯಲ್ಟಿಯನ್ನು ಟನ್ಗೆ ಸುಮಾರು 175 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಭರವಸೆ ನೀಡಿದ್ದಾರೆ. ಸೆಪ್ಟೆಂಬರ್ 22 ರಂದು ಡಿಸಿ ಕಚೇರಿಯಲ್ಲಿ ನಡೆದ ಜಂಟಿ ಸಭೆಯಲ್ಲಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಈ ಸಭೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಶಾಸಕರಾದ ಕಿರಣ್ ಕೊಡ್ಗಿ, ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ ಮತ್ತು ಸಿಐಟಿಯು ಅಂಗಸಂಸ್ಥೆಯ ಮೂರು ಕಟ್ಟಡ ಕಾರ್ಮಿಕರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಆಗಸ್ಟ್ 18, 19 ಮತ್ತು 20 ರಂದು ಡಿಸಿ ಕಚೇರಿ ಮುಂದೆ ಮೂರು ದಿನಗಳ ಪ್ರತಿಭಟನೆ ನಡೆಸಿದಾಗ ನೀಡಿದ ಭರವಸೆಯಂತೆ ಈ ಸಭೆಯನ್ನು ಕರೆಯಲಾಗಿತ್ತು. ಕೆಂಪು ಕಲ್ಲು, ಮರಳು ಮತ್ತು ಮಣ್ಣಿನ ಲಭ್ಯತೆ ಮತ್ತು ಬೆಲೆಯ ಬಗ್ಗೆ ಕಟ್ಟಡ ಕಾರ್ಮಿಕರು ಎದುರಿಸುತ್ತಿರುವ ಸವಾಲುಗಳನ್ನು ಯೂನಿಯನ್ ನಾಯಕರು ಮಂಡಿಸಿದರು. ಶಾಸಕರು ಸಮಸ್ಯೆಗಳ ಗಂಭೀರತೆಯನ್ನು ಒಪ್ಪಿಕೊಂಡರು ಮತ್ತು…
ಉಡುಪಿ : ಮಳೆಗಾಲದ ನಿಷೇಧ ಅವಧಿ ಮುಗಿದ ನಂತರ, ಮಲ್ಪೆ ಬೀಚ್ ಮತ್ತೊಮ್ಮೆ ತನ್ನ ದ್ವಾರಗಳನ್ನು ತೆರೆದು ಪ್ರವಾಸಿಗರನ್ನು ತನ್ನ ತೀರಕ್ಕೆ ಸೆಳೆಯುತ್ತಿದೆ. ಸಮುದ್ರಕ್ಕೆ ಪ್ರವೇಶಿಸದಂತೆ ಕಡಲತೀರದ ಉದ್ದಕ್ಕೂ ನಿರ್ಮಿಸಲಾದ ಸುರಕ್ಷತಾ ಬ್ಯಾರಿಕೇಡ್ಗಳನ್ನು ಈಗ ತೆಗೆದುಹಾಕಲಾಗಿದೆ ಮತ್ತು ಜಲ ಕ್ರೀಡಾ ಚಟುವಟಿಕೆಗಳು ಅಧಿಕೃತವಾಗಿ ಪುನರಾರಂಭಗೊಂಡಿವೆ. ಜೆಟ್ ಸ್ಕೀಯಿಂಗ್, ಪ್ಯಾರಾಸೈಲಿಂಗ್, ಬನಾನಾ ರೈಡ್ಗಳು, ಬಂಪರ್ ರೈಡ್ಗಳು, ಜೋರ್ಬಿಂಗ್ ಮತ್ತು ದೋಣಿ ಸುತ್ತುಗಳಂತಹ ಜನಪ್ರಿಯ ಜಲ ಸಾಹಸ ಅನುಭವಗಳನ್ನು ಪುನರಾರಂಭಿಸಲಾಗಿದೆ. ಇದು ಆರಂಭಿಕ ಜನಸಂದಣಿಯನ್ನು ಆಕರ್ಷಿಸಿತು. ನವರಾತ್ರಿ ಹಬ್ಬದ ಋತುವಿನೊಂದಿಗೆ, ದಸಾರ ರಜೆಯಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ನಿರೀಕ್ಷಿಸಿದ್ದಾರೆ. ಬೆಳಗ್ಗೆಯಿಂದ, ಸಂದರ್ಶಕರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ಗೆ ಆಗಮಿಸುತ್ತಿದ್ದಾರೆ, ಕೆಲವರು ಅಲೆಗಳನ್ನು ಆನಂದಿಸಲು ನೇರವಾಗಿ ಸರ್ಫ್ಗೆ ಹೆಜ್ಜೆ ಹಾಕಿದರೆ, ಇನ್ನು ಕೆಲವರು ಅಡ್ರಿನಾಲಿನ್-ಪಂಪಿಂಗ್ ಜಲ ಕ್ರೀಡೆಗಳಿಗಾಗಿ ಕುತೂಹಲದಿಂದ ಸರತಿ ಸಾಲಿನಲ್ಲಿ ನಿಂತರು. ಪ್ರಕ್ಷುಬ್ಧ ಮಾನ್ಸೂನ್ ಉಬ್ಬರವಿಳಿತಗಳಿಂದ ಉಂಟಾಗುವ ಅಪಾಯಗಳ ಹೊರತಾಗಿಯೂ, ಮಳೆಗಾಲದಲ್ಲಿಯೂ ಸಹ ಕರ್ನಾಟಕ ಮತ್ತು ಅದರಾಚೆಗಿನ ಪ್ರವಾಸಿಗರಿಗೆ ಮಲ್ಪೆ ಒಂದು…
ಮಂಗಳೂರು : ನಗರದ ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನರ್ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಮಂಗಳವಾರ ಸಂಜೆ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಸ್ಥಳೀಯ ಮುಸ್ಲಿಮರು ಸ್ವಾಗತಿಸಿ ಗಮನ ಸೆಳೆದರು. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆಯು ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿಯ ಮುಂದೆ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ, ತಂಪು ಪಾನೀಯ, ಐಸ್ಕ್ರೀಮ್ ವಿತರಿಸಿದರು. ಈ ಸಂದರ್ಭ ಶ್ರೀ ಬ್ರಹ್ಮ ಭೈದರ್ಕಳ ಕ್ಷೇತ್ರ ಕಂಕನಾಡಿ ಗರೋಡಿಯ ಅಧ್ಯಕ್ಷ ಕೆ. ಚಿತ್ತರಂಜನ್, ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್, ಉಪಾಧ್ಯಕ್ಷರಾದ ಅಶ್ರಫ್ ಬಜಾಲ್, ಎಚ್.ಎಸ್. ಹನೀಫ್, ನಝೀರ್ ಬಜಾಲ್, ಆಮೇವು ಕ್ಷೇತ್ರ ಆದಿ ಶಕ್ತಿ ದೇವಿ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ, ಭರತೇಶ್ ಅಮೀನ್, ಹರಿಪ್ರಸಾದ್, ಹೇಮಂತ್ ಗರೋಡಿ, ಅಬೂಬಕ್ಕರ್, ಅಬ್ದುಲ್ ರಝಾಕ್, ಎಂಆರ್ ರಫೀಕ್, ಶೌಕತ್ ಇಬ್ರಾಹಿಂ, ಯೋಗೀಶ್…
ಕಾಸರಗೋಡು : ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಗಲ್ಪಾಡಿ ಜಿ. ಬಿ ಎಲ್. ಪಿ ಶಾಲೆಯ ವಿದ್ಯಾರ್ಥಿ ಹಸನ್ ರಾಝಾ (10)ಮೃತಪಟ್ಟ ಬಾಲಕ. ಆಟೋಟ ಕ್ರೀಡಾ ಚಟುವಟಿಕೆ ಮಧ್ಯೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಈತ ಉತ್ತರ ಪ್ರದೇಶದ ಮುರ್ಷಿದಾಬಾದ್ ನ ಇನ್ಸಾಫಾಲಿ ಎಂಬವರ ಪುತ್ರನಾಗಿದ್ದಾನೆ. ಉದ್ಯೋಗ ನಿಮಿತ್ತ ಆಗಮಿಸಿದ ವಲಸೆ ಕಾರ್ಮಿಕರ ಮಕ್ಕಳು ಕೇರಳದ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ.
ಮಂಗಳೂರು : ಬಸ್ ಸಿಬ್ಬಂದಿಗೆ ಒಗ್ಗಟ್ಟನ್ನು ಬೆಳೆಸುವ ನಿಟ್ಟಿನಲ್ಲಿ “ರಾಜಲಕ್ಷ್ಮೀ ಚಾಂಪಿಯನ್ಸ್ ಟ್ರೋಫಿ” ಎಂಬ ಕ್ರೀಡಾ ಕೂಟವನ್ನು ಎರಡು ದಿನಗಳ ಕಾಲ ಭವ್ಯವಾಗಿ ಆಯೋಜಿಸಿರುವ ರಾಜಲಕ್ಷ್ಮೀ ಟ್ರಾವೆಲ್ಸ್ ಬಸ್ ಮಾಲೀಕರ ವಿಭಿನ್ನ ಪ್ರಯತ್ನಕ್ಕೆ ಬಸ್ ಸಿಬ್ಬಂದಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನವನ್ನು ಸಾಗಿಸುವಲ್ಲಿ ಖಾಸಗಿ ಬಸ್ಸುಗಳ ಪಾತ್ರ ಅಪಾರ. ಪ್ರತಿಯೊಂದು ಹಳ್ಳಿಗೂ, ಪಟ್ಟಣಕ್ಕೂ, ಮಂಗಳೂರು ನಗರಕ್ಕೂ ಬಸ್ಗಳು ಜೀವನಾಡಿಯಂತಿವೆ. ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರ, ದಿನನಿತ್ಯದ ಸಂಚಾರ – ಎಲ್ಲವೂ ಬಹುಮಟ್ಟಿಗೆ ಈ ಬಸ್ಗಳ ಮೇಲೆ ಅವಲಂಬಿತವಾಗಿದೆ. ಬಸ್ಸಿನ ಚಕ್ರ ತಿರುಗದಿದ್ದರೆ ಅನೇಕರ ಬದುಕೇ ಅಸ್ತವ್ಯಸ್ತವಾಗುತ್ತದೆ ಎಂದು ಹೇಳುವುದು ಅತಿರಂಜಿತವಲ್ಲ.ಇಂತಹ ಬಸ್ ಸೇವೆಯ ಹಿಂದೆ ಸಾವಿರಾರು ಕುಟುಂಬಗಳ ಬೆವರಿನ ಕಷ್ಟ, ಶ್ರಮ ಮತ್ತು ತ್ಯಾಗ ಅಡಗಿದೆ. ನಿರಂತರ ಒತ್ತಡದ ಕೆಲಸ, ಬೆಳಗ್ಗೆಯಿಂದ ರಾತ್ರಿ ವರೆಗೆ ಹೊರೆ ತುಂಬಿದ ಸೇವೆ, ವಾಹನ ಸಂಚಾರದ ಜಟಿಲತೆ, ಪ್ರಯಾಣಿಕರ ನಿರೀಕ್ಷೆ – ಇವೆಲ್ಲದರ ನಡುವೆ ಬಸ್ ಚಾಲಕರು ಮತ್ತು ನಿರ್ವಾಹಕರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ.…
ದೇರಳಕಟ್ಟೆ : ಬ್ಯಾರಿ ಎಲ್ತ್ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ) ದೇರಳಕಟ್ಟೆ ಇದರ ದಶಮಾನೋತ್ಸವದ ಪ್ರಯುಕ್ತ ನೀಡಲಾಗುವ ಮೇಲ್ತೆನೆ ಪ್ರಶಸ್ತಿಗೆ ಹಿರಿಯ ಗಾಯಕ, ಕಲಾವಿದ ರಹೀಂ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಸೆಪ್ಟಂಬರ್ 30ರಂದು ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್ನಲ್ಲಿ ನಡೆಯುವ ಮೇಲ್ತೆನೆ ಪತ್ತನೆ ವರ್ಸತ್ತೆ ಜಲ್ಸ್-ಲೇಸ್ 2025 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪರಿಚಯ : ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಇನೋಳಿಯಲ್ಲಿ ಬೋಳಿಯಾರು ಅಬ್ದುಲ್ ಖಾದರ್-ಫರಂಗಿಪೇಟೆಯ ಉಮ್ಮಾತುಮ್ಮ ದಂಪತಿಯ ಪುತ್ರನಾಗಿ 1957ರಲ್ಲಿ ಜನಿಸಿದ ಅಬ್ದುಲ್ ರಹೀಂ ಯಾನೆ ಅದ್ದಾಮ ಇನೋಳಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6ನೇ ಮತ್ತು ಮಡಿಕೇರಿಯ ಸರಕಾರಿ ಶಾಲೆಯಲ್ಲಿ 10ನೇ ತರಗತಿವರೆಗೆ ಕಲಿತರು. ಎಳೆಯ ಪ್ರಾಯದಲ್ಲೇ ಹಾಡುವ ಅಭಿರುಚಿ ಹೊಂದಿದ್ದ ರಹೀಂ ಬಳಿಕ ಗಾಯನವನ್ನೇ ಬದುಕನ್ನಾಗಿಸಿಕೊಂಡರು. ಮದುವೆ, ಮುಂಜಿ ಸಹಿತ ಬೀಡಿ ಉದ್ಯಮದ ಪ್ರಚಾರಕ್ಕೆ ಸಂಬಂಧಿಸಿ ಬ್ಯಾರಿ, ತುಳು, ಕನ್ನಡದಲ್ಲಿ ಗೀತೆ ರಚಿಸಿದ್ದ ರಹೀಂ ಬಿ.ಸಿ.ರೋಡ್ ಸುಮಾರು 1 ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಹಾಡಿದ್ದಾರೆ. ಕವಿಗೋಷ್ಠಿಯಲ್ಲಿ ಕವನ ವಾಚಿಸಿದ್ದಾರೆ. ಕರ್ನಾಟಕ…
ಕೊಣಾಜೆ: ಪ್ರವಾದಿ ಪೈಗಂಬರರ 15೦೦ನೇ ಜನ್ಮ ಮಾಸಾಚರಣೆ ಪ್ರಯುಕ್ತ ಮುಡಿಪು ಮಜ್ಲಿಸ್ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಫರ್ಹೇ ಮೀಲಾದ್’ ಸಂಭ್ರಮ ಸಮಾವೇಶ ಮಜ್ಲಿಸ್ ಎಜು ಪಾರ್ಕ್ನಲ್ಲಿ ಶುಕ್ರವಾರ ನಡೆಯಿತು.ಇದೇ ಸಂದರ್ಭದಲ್ಲಿ ನಡೆದ ಬೃಹತ್ ಹುಬ್ಬುನ್ನಬೀ ಸಮ್ಮೇಳನದಲ್ಲಿ ನಾಗೂರು ದರ್ಗಾ ಶರೀಫ್ ಖಲೀಫಾ ಹಝ್ರತ್ ಸಯ್ಯಿದ್ ಮುಹಮ್ಮದ್ ಆಶೀರ್ವಚನ ನೀಡಿದರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ವಿಶ್ವಪ್ರವಾದಿಯವರ ಸಂದೇಶ, ತತ್ವವನ್ನು ಪಾಲಿಸಿಕೊಂಡು ಮುನ್ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ದೇವರು ನಮ್ಮನ್ನು ಪ್ರೀತಿಸಿಸಲು ಆರಂಭಿಸಿದರೆ ಅದನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ. ಯಾರಾದರೂ ಕಷ್ಟದಲ್ಲಿದ್ದಾಗ ಜಾತಿಬೇಧ ಮರೆತು ಸಹಾಯ ಮಾಡುವ ಮನೋಭಾವ ನಮ್ಮದಾಗಬೇಕು. ಆದೂರು ತಂಙಳ್ ಅವರ ಮೂಲಕ ಮುಡಿಪುವಿನ ಎಜ್ಯುಪಾರ್ಕ್ ನಲ್ಲಿ ಧಾರ್ಮಿಕ ಶಿಕ್ಷಣ, ಲೌಕಿಕ ಶಿಕ್ಷಣ ನೀಡುತ್ತಾ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ. ಇಂದು ವಿಕಲಚೇತನರಿಗೆ ಕೃತಕ ಕೈಕಾಲು ಉಚಿತವಾಗಿ ನೀಡುವ ಮೂಲಕ ಈ ಕಾರ್ಯಕ್ರಮವು ಮಾನವೀಯತೆಯ, ಸಮಾನತೆಯ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದರು.ಮಜ್ಲಿಸ್ ಎಜು…

